Homeಮುಖಪುಟಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

ಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಈಗ 29 ವರ್ಷದ ಆದಿತ್ಯ ಠಾಕ್ರೆ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ. ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಮೊಮ್ಮಗ. ಇದೇ ಮೊದಲ ಬಾರಿಗೆ ಬಾಳಾ ಠಾಕ್ರೆ ಮನೆತನದ ಕುಡಿ ಆದಿತ್ಯ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವಿನ ಡಂಗುರ ಬಾರಿಸಿದ್ದಾರೆ. ಮುಂಬೈನ ವರ್ಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಆದಿತ್ಯ ಠಾಕ್ರೆಯ ಗೆಲುವು ಶಿವಸೇನೆಯನ್ನು ಉತ್ತುಂಗಕ್ಕೇರಿಸಿದೆ. ಮಹಾರಾಷ್ಟ್ರದಲ್ಲಿ ಈಗ ಕೇಳಿ ಬರುತ್ತಿರುವ ಮಾತೆಂದರೆ ಆದಿತ್ಯ ಠಾಕ್ರೆ ಸಿಎಂ ಆಗ್ತಾರಾ..? ಶಿವಸೇನೆಗೆ ಸಿಎಂ ಸ್ಥಾನ ದಕ್ಕುತ್ತಾ ಎಂಬುದೇ ಬಿಗ್‍ ಪ್ರಶ್ನೆ.

ವರ್ಲಿ ಕ್ಷೇತ್ರದಲ್ಲಿ ಎನ್‍ಸಿಪಿ ಅಭ್ಯರ್ಥಿ ಸುರೇಶ್‍ ಮಾನೆ ಅವರನ್ನು 67,427 ಮತಗಳ ಅಂತರದಲ್ಲಿ ಸೋಲಿಸಿ, ಆದಿತ್ಯ ಠಾಕ್ರೆ ವಿಜಯಿಯಾದರು. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಶಿವಸೇನೆ, ಸಮಾನ ಅಧಿಕಾರ ಮತ್ತು ಸಮಪಾಲು ಎಂಬ ಷರತ್ತು ವಿಧಿಸಿ, ಘಟಬಂಧನ್ ಮಾಡಿಕೊಂಡು, ಕ್ಷೇತ್ರಗಳನ್ನು ಹಂಚಿಕೊಂಡಿದ್ದವು. ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56 ಸ್ಥಾನಗಳನ್ನು ಗೆದ್ದುಕೊಂಡಿವೆ. ಈಗ ರಾಜ್ಯದಲ್ಲಿ ಯಾವ ಪಕ್ಷದ ಅಭ್ಯರ್ಥಿ ಸಿಎಂ ಆಗುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. ಠಾಕ್ರೆ ವಂಶದ ಕುಡಿ ಸಿಎಂ ಆಗ್ತಾರಾ, ಇಲ್ಲವೇ ಈ ಬಾರಿಯೂ ಬಿಜೆಪಿಗೆ ಸಿಎಂ ಸ್ಥಾನವನ್ನು ಶಿವಸೇನೆ ಬಿಟ್ಟುಕೊಟ್ಟು ಉದಾರತ್ವ ಮೆರೆಯುತ್ತಾ ಎಂಬುದು ಕುತೂಹಲ ಕೆರಳಿಸಿದೆ.

ಈ ಮಧ್ಯೆ ಏನೇ ಆಗಲಿ 50:50 ಒಪ್ಪಂದ ಮಾಡಿಕೊಂಡಿದ್ದೇವೆ. ಸಮಾನ ಅಧಿಕಾರ ಮತ್ತು ಸಮಪಾಲು ನಿಯಮದ ಪ್ರಕಾರ ಬಿಜೆಪಿ ನಡೆದುಕೊಳ್ಳಲಿ ಎಂದು ಶಿವಸೇನೆ ಬಿಜೆಪಿಯನ್ನು ಎಚ್ಚರಿಸಿದೆ. ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶಿವಸೇನೆ ಅದಕ್ಕಾಗೇ ಆದಿತ್ಯ ಠಾಕ್ರೆಯನ್ನು ಸ್ಪರ್ಧೆಗಿಳಿಸಿದೆ ಎಂಬ ಚರ್ಚೆ ಸಾಮಾಜಿಕ ವಲಯದಲ್ಲಿ ನಡೆಯುತ್ತಿದೆ. ಈ ಬಗ್ಗೆ ಠಾಕ್ರೆ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನ ಮತ್ತು ಪಕ್ಷದ ಕೆಲ ವಿಷಯಗಳ ಬಗ್ಗೆ ಪಕ್ಷದ ಮುಖ್ಯಸ್ಥರ ತೀರ್ಮಾನವೇ ಅಂತಿಮ. ಪಕ್ಷದ ನಾಯಕರ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ.

ಆದಿತ್ಯ ಠಾಕ್ರೆ 20 ವರ್ಷದವರಿದ್ದಾಗಲೇ ಯುವ ಸೇನಾ ಘಟಕದ ನಾಯಕರಾಗಿದ್ದರು. ವಿದ್ಯಾರ್ಥಿ ವಿಂಗ್‍ನ ನಾಯಕನಾದ ಮೇಲೆ ಬುಕರ್ ಪ್ರಶಸ್ತಿ ವಿಜೇತ ರೋಹಿಂಟನ್ ಮಿಸ್ಟ್ರೀ ಅವರ ಪುಸ್ತಕವನ್ನು ಹರಿದು ಹಾಕಿದ್ದರು. ಆದಿತ್ಯ ಠಾಕ್ರೆ ಹಿಂದೂತ್ವದ ಗುರುತಾಗಿದ್ದಾರೆ. ಹಿಂದೂತ್ವದ ಅಜೆಂಡಾ ಮತ್ತು ಹಿಂದೂಗಳ ಪ್ರತಿನಿಧಿಯಂತೆ ಆದಿತ್ಯ ಕೆಲಸ ಮಾಡಲಿದ್ದಾರೆ ಎಂಬುದು ಪಕ್ಷದಲ್ಲಿ ಕೇಳಿ ಬರುತ್ತಿರುವ ಮಾತು.

ವರ್ಲಿ ಕ್ಷೇತ್ರದ ಅಭಿವೃದ್ಧಿ, ಎಲ್ಲಾ ಪಕ್ಷಗಳ ಜತೆ ಸಾಮರಸ್ಯದಿಂದ ಕೆಲಸ ಮಾಡುತ್ತೇನೆ. ಎಲ್ಲಾ ಸಂಸ್ಥೆಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುವುದು ಮತ್ತು ಮಹಾರಾಷ್ಟ್ರದ ಬೆಳವಣಿಗೆಗಾಗಿ ದುಡಿಯುವುದಾಗಿ ಹೇಳಿದರು. ಅದೇನೇ ಇದ್ದರೂ, ಬಿಜೆಪಿ ಜತೆಗೆ ಮೈತ್ರಿ ಸೂತ್ರ ಅನುಸರಿಸಿರುವ ಶಿವಸೇನೆ ಸಿಎಂ ಹುದ್ದೆ ಪಡೆದು, ಶತಾಯಗತಾಯ ಅಧಿಕಾರಕ್ಕೇರುವ ತವಕದಲ್ಲಿದೆ. ಇತ್ತ ಬಿಜೆಪಿಯ ದೇವೇಂದ್ರ ಫಡ್ನವೀಸ್ ಕೂಡ ಸಿಎಂ ರೇಸ್‍ ಲ್ಲಿದ್ದು, ನಾನೇ ಸಿಎಂ ಎನ್ನು ವಿಶ್ವಾಸದಲ್ಲಿದ್ದಾರೆ. ಒಟ್ನಲ್ಲಿ ಸಿಎಂ ಗಾದಿಯ ಕಚ್ಚಾಟದ ಕೆಸರೆರಚಾಟ ಮೈತ್ರಿ ಪಕ್ಷಗಳ ಮೇಲೆ ಯಾವ ಪರಿಣಾಮ ಬೀರಲಿದೆಯೋ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...