Homeಮುಖಪುಟಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

ಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಈಗ 29 ವರ್ಷದ ಆದಿತ್ಯ ಠಾಕ್ರೆ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ. ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಮೊಮ್ಮಗ. ಇದೇ ಮೊದಲ ಬಾರಿಗೆ ಬಾಳಾ ಠಾಕ್ರೆ ಮನೆತನದ ಕುಡಿ ಆದಿತ್ಯ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವಿನ ಡಂಗುರ ಬಾರಿಸಿದ್ದಾರೆ. ಮುಂಬೈನ ವರ್ಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಆದಿತ್ಯ ಠಾಕ್ರೆಯ ಗೆಲುವು ಶಿವಸೇನೆಯನ್ನು ಉತ್ತುಂಗಕ್ಕೇರಿಸಿದೆ. ಮಹಾರಾಷ್ಟ್ರದಲ್ಲಿ ಈಗ ಕೇಳಿ ಬರುತ್ತಿರುವ ಮಾತೆಂದರೆ ಆದಿತ್ಯ ಠಾಕ್ರೆ ಸಿಎಂ ಆಗ್ತಾರಾ..? ಶಿವಸೇನೆಗೆ ಸಿಎಂ ಸ್ಥಾನ ದಕ್ಕುತ್ತಾ ಎಂಬುದೇ ಬಿಗ್‍ ಪ್ರಶ್ನೆ.

ವರ್ಲಿ ಕ್ಷೇತ್ರದಲ್ಲಿ ಎನ್‍ಸಿಪಿ ಅಭ್ಯರ್ಥಿ ಸುರೇಶ್‍ ಮಾನೆ ಅವರನ್ನು 67,427 ಮತಗಳ ಅಂತರದಲ್ಲಿ ಸೋಲಿಸಿ, ಆದಿತ್ಯ ಠಾಕ್ರೆ ವಿಜಯಿಯಾದರು. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಶಿವಸೇನೆ, ಸಮಾನ ಅಧಿಕಾರ ಮತ್ತು ಸಮಪಾಲು ಎಂಬ ಷರತ್ತು ವಿಧಿಸಿ, ಘಟಬಂಧನ್ ಮಾಡಿಕೊಂಡು, ಕ್ಷೇತ್ರಗಳನ್ನು ಹಂಚಿಕೊಂಡಿದ್ದವು. ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56 ಸ್ಥಾನಗಳನ್ನು ಗೆದ್ದುಕೊಂಡಿವೆ. ಈಗ ರಾಜ್ಯದಲ್ಲಿ ಯಾವ ಪಕ್ಷದ ಅಭ್ಯರ್ಥಿ ಸಿಎಂ ಆಗುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. ಠಾಕ್ರೆ ವಂಶದ ಕುಡಿ ಸಿಎಂ ಆಗ್ತಾರಾ, ಇಲ್ಲವೇ ಈ ಬಾರಿಯೂ ಬಿಜೆಪಿಗೆ ಸಿಎಂ ಸ್ಥಾನವನ್ನು ಶಿವಸೇನೆ ಬಿಟ್ಟುಕೊಟ್ಟು ಉದಾರತ್ವ ಮೆರೆಯುತ್ತಾ ಎಂಬುದು ಕುತೂಹಲ ಕೆರಳಿಸಿದೆ.

ಈ ಮಧ್ಯೆ ಏನೇ ಆಗಲಿ 50:50 ಒಪ್ಪಂದ ಮಾಡಿಕೊಂಡಿದ್ದೇವೆ. ಸಮಾನ ಅಧಿಕಾರ ಮತ್ತು ಸಮಪಾಲು ನಿಯಮದ ಪ್ರಕಾರ ಬಿಜೆಪಿ ನಡೆದುಕೊಳ್ಳಲಿ ಎಂದು ಶಿವಸೇನೆ ಬಿಜೆಪಿಯನ್ನು ಎಚ್ಚರಿಸಿದೆ. ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶಿವಸೇನೆ ಅದಕ್ಕಾಗೇ ಆದಿತ್ಯ ಠಾಕ್ರೆಯನ್ನು ಸ್ಪರ್ಧೆಗಿಳಿಸಿದೆ ಎಂಬ ಚರ್ಚೆ ಸಾಮಾಜಿಕ ವಲಯದಲ್ಲಿ ನಡೆಯುತ್ತಿದೆ. ಈ ಬಗ್ಗೆ ಠಾಕ್ರೆ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನ ಮತ್ತು ಪಕ್ಷದ ಕೆಲ ವಿಷಯಗಳ ಬಗ್ಗೆ ಪಕ್ಷದ ಮುಖ್ಯಸ್ಥರ ತೀರ್ಮಾನವೇ ಅಂತಿಮ. ಪಕ್ಷದ ನಾಯಕರ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ.

ಆದಿತ್ಯ ಠಾಕ್ರೆ 20 ವರ್ಷದವರಿದ್ದಾಗಲೇ ಯುವ ಸೇನಾ ಘಟಕದ ನಾಯಕರಾಗಿದ್ದರು. ವಿದ್ಯಾರ್ಥಿ ವಿಂಗ್‍ನ ನಾಯಕನಾದ ಮೇಲೆ ಬುಕರ್ ಪ್ರಶಸ್ತಿ ವಿಜೇತ ರೋಹಿಂಟನ್ ಮಿಸ್ಟ್ರೀ ಅವರ ಪುಸ್ತಕವನ್ನು ಹರಿದು ಹಾಕಿದ್ದರು. ಆದಿತ್ಯ ಠಾಕ್ರೆ ಹಿಂದೂತ್ವದ ಗುರುತಾಗಿದ್ದಾರೆ. ಹಿಂದೂತ್ವದ ಅಜೆಂಡಾ ಮತ್ತು ಹಿಂದೂಗಳ ಪ್ರತಿನಿಧಿಯಂತೆ ಆದಿತ್ಯ ಕೆಲಸ ಮಾಡಲಿದ್ದಾರೆ ಎಂಬುದು ಪಕ್ಷದಲ್ಲಿ ಕೇಳಿ ಬರುತ್ತಿರುವ ಮಾತು.

ವರ್ಲಿ ಕ್ಷೇತ್ರದ ಅಭಿವೃದ್ಧಿ, ಎಲ್ಲಾ ಪಕ್ಷಗಳ ಜತೆ ಸಾಮರಸ್ಯದಿಂದ ಕೆಲಸ ಮಾಡುತ್ತೇನೆ. ಎಲ್ಲಾ ಸಂಸ್ಥೆಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುವುದು ಮತ್ತು ಮಹಾರಾಷ್ಟ್ರದ ಬೆಳವಣಿಗೆಗಾಗಿ ದುಡಿಯುವುದಾಗಿ ಹೇಳಿದರು. ಅದೇನೇ ಇದ್ದರೂ, ಬಿಜೆಪಿ ಜತೆಗೆ ಮೈತ್ರಿ ಸೂತ್ರ ಅನುಸರಿಸಿರುವ ಶಿವಸೇನೆ ಸಿಎಂ ಹುದ್ದೆ ಪಡೆದು, ಶತಾಯಗತಾಯ ಅಧಿಕಾರಕ್ಕೇರುವ ತವಕದಲ್ಲಿದೆ. ಇತ್ತ ಬಿಜೆಪಿಯ ದೇವೇಂದ್ರ ಫಡ್ನವೀಸ್ ಕೂಡ ಸಿಎಂ ರೇಸ್‍ ಲ್ಲಿದ್ದು, ನಾನೇ ಸಿಎಂ ಎನ್ನು ವಿಶ್ವಾಸದಲ್ಲಿದ್ದಾರೆ. ಒಟ್ನಲ್ಲಿ ಸಿಎಂ ಗಾದಿಯ ಕಚ್ಚಾಟದ ಕೆಸರೆರಚಾಟ ಮೈತ್ರಿ ಪಕ್ಷಗಳ ಮೇಲೆ ಯಾವ ಪರಿಣಾಮ ಬೀರಲಿದೆಯೋ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...