Homeಮುಖಪುಟಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

ಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಈಗ 29 ವರ್ಷದ ಆದಿತ್ಯ ಠಾಕ್ರೆ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ. ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಮೊಮ್ಮಗ. ಇದೇ ಮೊದಲ ಬಾರಿಗೆ ಬಾಳಾ ಠಾಕ್ರೆ ಮನೆತನದ ಕುಡಿ ಆದಿತ್ಯ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವಿನ ಡಂಗುರ ಬಾರಿಸಿದ್ದಾರೆ. ಮುಂಬೈನ ವರ್ಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಆದಿತ್ಯ ಠಾಕ್ರೆಯ ಗೆಲುವು ಶಿವಸೇನೆಯನ್ನು ಉತ್ತುಂಗಕ್ಕೇರಿಸಿದೆ. ಮಹಾರಾಷ್ಟ್ರದಲ್ಲಿ ಈಗ ಕೇಳಿ ಬರುತ್ತಿರುವ ಮಾತೆಂದರೆ ಆದಿತ್ಯ ಠಾಕ್ರೆ ಸಿಎಂ ಆಗ್ತಾರಾ..? ಶಿವಸೇನೆಗೆ ಸಿಎಂ ಸ್ಥಾನ ದಕ್ಕುತ್ತಾ ಎಂಬುದೇ ಬಿಗ್‍ ಪ್ರಶ್ನೆ.

ವರ್ಲಿ ಕ್ಷೇತ್ರದಲ್ಲಿ ಎನ್‍ಸಿಪಿ ಅಭ್ಯರ್ಥಿ ಸುರೇಶ್‍ ಮಾನೆ ಅವರನ್ನು 67,427 ಮತಗಳ ಅಂತರದಲ್ಲಿ ಸೋಲಿಸಿ, ಆದಿತ್ಯ ಠಾಕ್ರೆ ವಿಜಯಿಯಾದರು. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಶಿವಸೇನೆ, ಸಮಾನ ಅಧಿಕಾರ ಮತ್ತು ಸಮಪಾಲು ಎಂಬ ಷರತ್ತು ವಿಧಿಸಿ, ಘಟಬಂಧನ್ ಮಾಡಿಕೊಂಡು, ಕ್ಷೇತ್ರಗಳನ್ನು ಹಂಚಿಕೊಂಡಿದ್ದವು. ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56 ಸ್ಥಾನಗಳನ್ನು ಗೆದ್ದುಕೊಂಡಿವೆ. ಈಗ ರಾಜ್ಯದಲ್ಲಿ ಯಾವ ಪಕ್ಷದ ಅಭ್ಯರ್ಥಿ ಸಿಎಂ ಆಗುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. ಠಾಕ್ರೆ ವಂಶದ ಕುಡಿ ಸಿಎಂ ಆಗ್ತಾರಾ, ಇಲ್ಲವೇ ಈ ಬಾರಿಯೂ ಬಿಜೆಪಿಗೆ ಸಿಎಂ ಸ್ಥಾನವನ್ನು ಶಿವಸೇನೆ ಬಿಟ್ಟುಕೊಟ್ಟು ಉದಾರತ್ವ ಮೆರೆಯುತ್ತಾ ಎಂಬುದು ಕುತೂಹಲ ಕೆರಳಿಸಿದೆ.

ಈ ಮಧ್ಯೆ ಏನೇ ಆಗಲಿ 50:50 ಒಪ್ಪಂದ ಮಾಡಿಕೊಂಡಿದ್ದೇವೆ. ಸಮಾನ ಅಧಿಕಾರ ಮತ್ತು ಸಮಪಾಲು ನಿಯಮದ ಪ್ರಕಾರ ಬಿಜೆಪಿ ನಡೆದುಕೊಳ್ಳಲಿ ಎಂದು ಶಿವಸೇನೆ ಬಿಜೆಪಿಯನ್ನು ಎಚ್ಚರಿಸಿದೆ. ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶಿವಸೇನೆ ಅದಕ್ಕಾಗೇ ಆದಿತ್ಯ ಠಾಕ್ರೆಯನ್ನು ಸ್ಪರ್ಧೆಗಿಳಿಸಿದೆ ಎಂಬ ಚರ್ಚೆ ಸಾಮಾಜಿಕ ವಲಯದಲ್ಲಿ ನಡೆಯುತ್ತಿದೆ. ಈ ಬಗ್ಗೆ ಠಾಕ್ರೆ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನ ಮತ್ತು ಪಕ್ಷದ ಕೆಲ ವಿಷಯಗಳ ಬಗ್ಗೆ ಪಕ್ಷದ ಮುಖ್ಯಸ್ಥರ ತೀರ್ಮಾನವೇ ಅಂತಿಮ. ಪಕ್ಷದ ನಾಯಕರ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ.

ಆದಿತ್ಯ ಠಾಕ್ರೆ 20 ವರ್ಷದವರಿದ್ದಾಗಲೇ ಯುವ ಸೇನಾ ಘಟಕದ ನಾಯಕರಾಗಿದ್ದರು. ವಿದ್ಯಾರ್ಥಿ ವಿಂಗ್‍ನ ನಾಯಕನಾದ ಮೇಲೆ ಬುಕರ್ ಪ್ರಶಸ್ತಿ ವಿಜೇತ ರೋಹಿಂಟನ್ ಮಿಸ್ಟ್ರೀ ಅವರ ಪುಸ್ತಕವನ್ನು ಹರಿದು ಹಾಕಿದ್ದರು. ಆದಿತ್ಯ ಠಾಕ್ರೆ ಹಿಂದೂತ್ವದ ಗುರುತಾಗಿದ್ದಾರೆ. ಹಿಂದೂತ್ವದ ಅಜೆಂಡಾ ಮತ್ತು ಹಿಂದೂಗಳ ಪ್ರತಿನಿಧಿಯಂತೆ ಆದಿತ್ಯ ಕೆಲಸ ಮಾಡಲಿದ್ದಾರೆ ಎಂಬುದು ಪಕ್ಷದಲ್ಲಿ ಕೇಳಿ ಬರುತ್ತಿರುವ ಮಾತು.

ವರ್ಲಿ ಕ್ಷೇತ್ರದ ಅಭಿವೃದ್ಧಿ, ಎಲ್ಲಾ ಪಕ್ಷಗಳ ಜತೆ ಸಾಮರಸ್ಯದಿಂದ ಕೆಲಸ ಮಾಡುತ್ತೇನೆ. ಎಲ್ಲಾ ಸಂಸ್ಥೆಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುವುದು ಮತ್ತು ಮಹಾರಾಷ್ಟ್ರದ ಬೆಳವಣಿಗೆಗಾಗಿ ದುಡಿಯುವುದಾಗಿ ಹೇಳಿದರು. ಅದೇನೇ ಇದ್ದರೂ, ಬಿಜೆಪಿ ಜತೆಗೆ ಮೈತ್ರಿ ಸೂತ್ರ ಅನುಸರಿಸಿರುವ ಶಿವಸೇನೆ ಸಿಎಂ ಹುದ್ದೆ ಪಡೆದು, ಶತಾಯಗತಾಯ ಅಧಿಕಾರಕ್ಕೇರುವ ತವಕದಲ್ಲಿದೆ. ಇತ್ತ ಬಿಜೆಪಿಯ ದೇವೇಂದ್ರ ಫಡ್ನವೀಸ್ ಕೂಡ ಸಿಎಂ ರೇಸ್‍ ಲ್ಲಿದ್ದು, ನಾನೇ ಸಿಎಂ ಎನ್ನು ವಿಶ್ವಾಸದಲ್ಲಿದ್ದಾರೆ. ಒಟ್ನಲ್ಲಿ ಸಿಎಂ ಗಾದಿಯ ಕಚ್ಚಾಟದ ಕೆಸರೆರಚಾಟ ಮೈತ್ರಿ ಪಕ್ಷಗಳ ಮೇಲೆ ಯಾವ ಪರಿಣಾಮ ಬೀರಲಿದೆಯೋ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...