Homeಮುಖಪುಟಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

ಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಈಗ 29 ವರ್ಷದ ಆದಿತ್ಯ ಠಾಕ್ರೆ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ. ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಮೊಮ್ಮಗ. ಇದೇ ಮೊದಲ ಬಾರಿಗೆ ಬಾಳಾ ಠಾಕ್ರೆ ಮನೆತನದ ಕುಡಿ ಆದಿತ್ಯ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವಿನ ಡಂಗುರ ಬಾರಿಸಿದ್ದಾರೆ. ಮುಂಬೈನ ವರ್ಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಆದಿತ್ಯ ಠಾಕ್ರೆಯ ಗೆಲುವು ಶಿವಸೇನೆಯನ್ನು ಉತ್ತುಂಗಕ್ಕೇರಿಸಿದೆ. ಮಹಾರಾಷ್ಟ್ರದಲ್ಲಿ ಈಗ ಕೇಳಿ ಬರುತ್ತಿರುವ ಮಾತೆಂದರೆ ಆದಿತ್ಯ ಠಾಕ್ರೆ ಸಿಎಂ ಆಗ್ತಾರಾ..? ಶಿವಸೇನೆಗೆ ಸಿಎಂ ಸ್ಥಾನ ದಕ್ಕುತ್ತಾ ಎಂಬುದೇ ಬಿಗ್‍ ಪ್ರಶ್ನೆ.

ವರ್ಲಿ ಕ್ಷೇತ್ರದಲ್ಲಿ ಎನ್‍ಸಿಪಿ ಅಭ್ಯರ್ಥಿ ಸುರೇಶ್‍ ಮಾನೆ ಅವರನ್ನು 67,427 ಮತಗಳ ಅಂತರದಲ್ಲಿ ಸೋಲಿಸಿ, ಆದಿತ್ಯ ಠಾಕ್ರೆ ವಿಜಯಿಯಾದರು. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಶಿವಸೇನೆ, ಸಮಾನ ಅಧಿಕಾರ ಮತ್ತು ಸಮಪಾಲು ಎಂಬ ಷರತ್ತು ವಿಧಿಸಿ, ಘಟಬಂಧನ್ ಮಾಡಿಕೊಂಡು, ಕ್ಷೇತ್ರಗಳನ್ನು ಹಂಚಿಕೊಂಡಿದ್ದವು. ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56 ಸ್ಥಾನಗಳನ್ನು ಗೆದ್ದುಕೊಂಡಿವೆ. ಈಗ ರಾಜ್ಯದಲ್ಲಿ ಯಾವ ಪಕ್ಷದ ಅಭ್ಯರ್ಥಿ ಸಿಎಂ ಆಗುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. ಠಾಕ್ರೆ ವಂಶದ ಕುಡಿ ಸಿಎಂ ಆಗ್ತಾರಾ, ಇಲ್ಲವೇ ಈ ಬಾರಿಯೂ ಬಿಜೆಪಿಗೆ ಸಿಎಂ ಸ್ಥಾನವನ್ನು ಶಿವಸೇನೆ ಬಿಟ್ಟುಕೊಟ್ಟು ಉದಾರತ್ವ ಮೆರೆಯುತ್ತಾ ಎಂಬುದು ಕುತೂಹಲ ಕೆರಳಿಸಿದೆ.

ಈ ಮಧ್ಯೆ ಏನೇ ಆಗಲಿ 50:50 ಒಪ್ಪಂದ ಮಾಡಿಕೊಂಡಿದ್ದೇವೆ. ಸಮಾನ ಅಧಿಕಾರ ಮತ್ತು ಸಮಪಾಲು ನಿಯಮದ ಪ್ರಕಾರ ಬಿಜೆಪಿ ನಡೆದುಕೊಳ್ಳಲಿ ಎಂದು ಶಿವಸೇನೆ ಬಿಜೆಪಿಯನ್ನು ಎಚ್ಚರಿಸಿದೆ. ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶಿವಸೇನೆ ಅದಕ್ಕಾಗೇ ಆದಿತ್ಯ ಠಾಕ್ರೆಯನ್ನು ಸ್ಪರ್ಧೆಗಿಳಿಸಿದೆ ಎಂಬ ಚರ್ಚೆ ಸಾಮಾಜಿಕ ವಲಯದಲ್ಲಿ ನಡೆಯುತ್ತಿದೆ. ಈ ಬಗ್ಗೆ ಠಾಕ್ರೆ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನ ಮತ್ತು ಪಕ್ಷದ ಕೆಲ ವಿಷಯಗಳ ಬಗ್ಗೆ ಪಕ್ಷದ ಮುಖ್ಯಸ್ಥರ ತೀರ್ಮಾನವೇ ಅಂತಿಮ. ಪಕ್ಷದ ನಾಯಕರ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ.

ಆದಿತ್ಯ ಠಾಕ್ರೆ 20 ವರ್ಷದವರಿದ್ದಾಗಲೇ ಯುವ ಸೇನಾ ಘಟಕದ ನಾಯಕರಾಗಿದ್ದರು. ವಿದ್ಯಾರ್ಥಿ ವಿಂಗ್‍ನ ನಾಯಕನಾದ ಮೇಲೆ ಬುಕರ್ ಪ್ರಶಸ್ತಿ ವಿಜೇತ ರೋಹಿಂಟನ್ ಮಿಸ್ಟ್ರೀ ಅವರ ಪುಸ್ತಕವನ್ನು ಹರಿದು ಹಾಕಿದ್ದರು. ಆದಿತ್ಯ ಠಾಕ್ರೆ ಹಿಂದೂತ್ವದ ಗುರುತಾಗಿದ್ದಾರೆ. ಹಿಂದೂತ್ವದ ಅಜೆಂಡಾ ಮತ್ತು ಹಿಂದೂಗಳ ಪ್ರತಿನಿಧಿಯಂತೆ ಆದಿತ್ಯ ಕೆಲಸ ಮಾಡಲಿದ್ದಾರೆ ಎಂಬುದು ಪಕ್ಷದಲ್ಲಿ ಕೇಳಿ ಬರುತ್ತಿರುವ ಮಾತು.

ವರ್ಲಿ ಕ್ಷೇತ್ರದ ಅಭಿವೃದ್ಧಿ, ಎಲ್ಲಾ ಪಕ್ಷಗಳ ಜತೆ ಸಾಮರಸ್ಯದಿಂದ ಕೆಲಸ ಮಾಡುತ್ತೇನೆ. ಎಲ್ಲಾ ಸಂಸ್ಥೆಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುವುದು ಮತ್ತು ಮಹಾರಾಷ್ಟ್ರದ ಬೆಳವಣಿಗೆಗಾಗಿ ದುಡಿಯುವುದಾಗಿ ಹೇಳಿದರು. ಅದೇನೇ ಇದ್ದರೂ, ಬಿಜೆಪಿ ಜತೆಗೆ ಮೈತ್ರಿ ಸೂತ್ರ ಅನುಸರಿಸಿರುವ ಶಿವಸೇನೆ ಸಿಎಂ ಹುದ್ದೆ ಪಡೆದು, ಶತಾಯಗತಾಯ ಅಧಿಕಾರಕ್ಕೇರುವ ತವಕದಲ್ಲಿದೆ. ಇತ್ತ ಬಿಜೆಪಿಯ ದೇವೇಂದ್ರ ಫಡ್ನವೀಸ್ ಕೂಡ ಸಿಎಂ ರೇಸ್‍ ಲ್ಲಿದ್ದು, ನಾನೇ ಸಿಎಂ ಎನ್ನು ವಿಶ್ವಾಸದಲ್ಲಿದ್ದಾರೆ. ಒಟ್ನಲ್ಲಿ ಸಿಎಂ ಗಾದಿಯ ಕಚ್ಚಾಟದ ಕೆಸರೆರಚಾಟ ಮೈತ್ರಿ ಪಕ್ಷಗಳ ಮೇಲೆ ಯಾವ ಪರಿಣಾಮ ಬೀರಲಿದೆಯೋ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...