Homeಮುಖಪುಟಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

ಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಈಗ 29 ವರ್ಷದ ಆದಿತ್ಯ ಠಾಕ್ರೆ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ. ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಮೊಮ್ಮಗ. ಇದೇ ಮೊದಲ ಬಾರಿಗೆ ಬಾಳಾ ಠಾಕ್ರೆ ಮನೆತನದ ಕುಡಿ ಆದಿತ್ಯ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವಿನ ಡಂಗುರ ಬಾರಿಸಿದ್ದಾರೆ. ಮುಂಬೈನ ವರ್ಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಆದಿತ್ಯ ಠಾಕ್ರೆಯ ಗೆಲುವು ಶಿವಸೇನೆಯನ್ನು ಉತ್ತುಂಗಕ್ಕೇರಿಸಿದೆ. ಮಹಾರಾಷ್ಟ್ರದಲ್ಲಿ ಈಗ ಕೇಳಿ ಬರುತ್ತಿರುವ ಮಾತೆಂದರೆ ಆದಿತ್ಯ ಠಾಕ್ರೆ ಸಿಎಂ ಆಗ್ತಾರಾ..? ಶಿವಸೇನೆಗೆ ಸಿಎಂ ಸ್ಥಾನ ದಕ್ಕುತ್ತಾ ಎಂಬುದೇ ಬಿಗ್‍ ಪ್ರಶ್ನೆ.

ವರ್ಲಿ ಕ್ಷೇತ್ರದಲ್ಲಿ ಎನ್‍ಸಿಪಿ ಅಭ್ಯರ್ಥಿ ಸುರೇಶ್‍ ಮಾನೆ ಅವರನ್ನು 67,427 ಮತಗಳ ಅಂತರದಲ್ಲಿ ಸೋಲಿಸಿ, ಆದಿತ್ಯ ಠಾಕ್ರೆ ವಿಜಯಿಯಾದರು. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಶಿವಸೇನೆ, ಸಮಾನ ಅಧಿಕಾರ ಮತ್ತು ಸಮಪಾಲು ಎಂಬ ಷರತ್ತು ವಿಧಿಸಿ, ಘಟಬಂಧನ್ ಮಾಡಿಕೊಂಡು, ಕ್ಷೇತ್ರಗಳನ್ನು ಹಂಚಿಕೊಂಡಿದ್ದವು. ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56 ಸ್ಥಾನಗಳನ್ನು ಗೆದ್ದುಕೊಂಡಿವೆ. ಈಗ ರಾಜ್ಯದಲ್ಲಿ ಯಾವ ಪಕ್ಷದ ಅಭ್ಯರ್ಥಿ ಸಿಎಂ ಆಗುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. ಠಾಕ್ರೆ ವಂಶದ ಕುಡಿ ಸಿಎಂ ಆಗ್ತಾರಾ, ಇಲ್ಲವೇ ಈ ಬಾರಿಯೂ ಬಿಜೆಪಿಗೆ ಸಿಎಂ ಸ್ಥಾನವನ್ನು ಶಿವಸೇನೆ ಬಿಟ್ಟುಕೊಟ್ಟು ಉದಾರತ್ವ ಮೆರೆಯುತ್ತಾ ಎಂಬುದು ಕುತೂಹಲ ಕೆರಳಿಸಿದೆ.

ಈ ಮಧ್ಯೆ ಏನೇ ಆಗಲಿ 50:50 ಒಪ್ಪಂದ ಮಾಡಿಕೊಂಡಿದ್ದೇವೆ. ಸಮಾನ ಅಧಿಕಾರ ಮತ್ತು ಸಮಪಾಲು ನಿಯಮದ ಪ್ರಕಾರ ಬಿಜೆಪಿ ನಡೆದುಕೊಳ್ಳಲಿ ಎಂದು ಶಿವಸೇನೆ ಬಿಜೆಪಿಯನ್ನು ಎಚ್ಚರಿಸಿದೆ. ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶಿವಸೇನೆ ಅದಕ್ಕಾಗೇ ಆದಿತ್ಯ ಠಾಕ್ರೆಯನ್ನು ಸ್ಪರ್ಧೆಗಿಳಿಸಿದೆ ಎಂಬ ಚರ್ಚೆ ಸಾಮಾಜಿಕ ವಲಯದಲ್ಲಿ ನಡೆಯುತ್ತಿದೆ. ಈ ಬಗ್ಗೆ ಠಾಕ್ರೆ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನ ಮತ್ತು ಪಕ್ಷದ ಕೆಲ ವಿಷಯಗಳ ಬಗ್ಗೆ ಪಕ್ಷದ ಮುಖ್ಯಸ್ಥರ ತೀರ್ಮಾನವೇ ಅಂತಿಮ. ಪಕ್ಷದ ನಾಯಕರ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ.

ಆದಿತ್ಯ ಠಾಕ್ರೆ 20 ವರ್ಷದವರಿದ್ದಾಗಲೇ ಯುವ ಸೇನಾ ಘಟಕದ ನಾಯಕರಾಗಿದ್ದರು. ವಿದ್ಯಾರ್ಥಿ ವಿಂಗ್‍ನ ನಾಯಕನಾದ ಮೇಲೆ ಬುಕರ್ ಪ್ರಶಸ್ತಿ ವಿಜೇತ ರೋಹಿಂಟನ್ ಮಿಸ್ಟ್ರೀ ಅವರ ಪುಸ್ತಕವನ್ನು ಹರಿದು ಹಾಕಿದ್ದರು. ಆದಿತ್ಯ ಠಾಕ್ರೆ ಹಿಂದೂತ್ವದ ಗುರುತಾಗಿದ್ದಾರೆ. ಹಿಂದೂತ್ವದ ಅಜೆಂಡಾ ಮತ್ತು ಹಿಂದೂಗಳ ಪ್ರತಿನಿಧಿಯಂತೆ ಆದಿತ್ಯ ಕೆಲಸ ಮಾಡಲಿದ್ದಾರೆ ಎಂಬುದು ಪಕ್ಷದಲ್ಲಿ ಕೇಳಿ ಬರುತ್ತಿರುವ ಮಾತು.

ವರ್ಲಿ ಕ್ಷೇತ್ರದ ಅಭಿವೃದ್ಧಿ, ಎಲ್ಲಾ ಪಕ್ಷಗಳ ಜತೆ ಸಾಮರಸ್ಯದಿಂದ ಕೆಲಸ ಮಾಡುತ್ತೇನೆ. ಎಲ್ಲಾ ಸಂಸ್ಥೆಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುವುದು ಮತ್ತು ಮಹಾರಾಷ್ಟ್ರದ ಬೆಳವಣಿಗೆಗಾಗಿ ದುಡಿಯುವುದಾಗಿ ಹೇಳಿದರು. ಅದೇನೇ ಇದ್ದರೂ, ಬಿಜೆಪಿ ಜತೆಗೆ ಮೈತ್ರಿ ಸೂತ್ರ ಅನುಸರಿಸಿರುವ ಶಿವಸೇನೆ ಸಿಎಂ ಹುದ್ದೆ ಪಡೆದು, ಶತಾಯಗತಾಯ ಅಧಿಕಾರಕ್ಕೇರುವ ತವಕದಲ್ಲಿದೆ. ಇತ್ತ ಬಿಜೆಪಿಯ ದೇವೇಂದ್ರ ಫಡ್ನವೀಸ್ ಕೂಡ ಸಿಎಂ ರೇಸ್‍ ಲ್ಲಿದ್ದು, ನಾನೇ ಸಿಎಂ ಎನ್ನು ವಿಶ್ವಾಸದಲ್ಲಿದ್ದಾರೆ. ಒಟ್ನಲ್ಲಿ ಸಿಎಂ ಗಾದಿಯ ಕಚ್ಚಾಟದ ಕೆಸರೆರಚಾಟ ಮೈತ್ರಿ ಪಕ್ಷಗಳ ಮೇಲೆ ಯಾವ ಪರಿಣಾಮ ಬೀರಲಿದೆಯೋ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...