Homeಅಂಕಣಗಳುಯಾವ ಧರ್ಮವೂ ಸಂಕಟವನ್ನು ರೂಪಿಸುವುದಿಲ್ಲ

ಯಾವ ಧರ್ಮವೂ ಸಂಕಟವನ್ನು ರೂಪಿಸುವುದಿಲ್ಲ

- Advertisement -
- Advertisement -

ಸಾರ ಅಬೂಬಕ್ಕರ್ |

ಇದೇ ಡಿಸೆಂಬರ್ ತಿಂಗಳ ದಿನಾಂಕ 10ರಂದು ಮಂಗಳೂರಿನ ನೆಹರು ಮೈದಾನದಲ್ಲಿ ಮುಸ್ಲಿಮರ ‘ಶರಿಯತ್ ರಕ್ಷಣ್’ ಎಂಬ ವಿಷಯದ ಕುರಿತು ಸಾರ್ವಜನಿಕ ಸಭೆ ಕರೆಯಲಾಗಿದ್ದು ರಾಜ್ಯಾದ್ಯಂತದಿಂದ ಮುಸ್ಲಿಂ ಪುರುಷರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದನ್ನು ಅನುಸರಿಸಿ ರಾಜ್ಯದ ಹಲವು ಜಿಲ್ಲೆಗಳಿಂದ ಮುಸ್ಲಿಂ ಪುರುಷರು ಆಗಮಿಸಿ ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ಕೇರಳದ ಹಲವಾರು ಧರ್ಮ ಗುರುಗಳು ಬಂದು ಈ ಜನರಿಗೆ ಮಾರ್ಗದರ್ಶನ ನೀಡಿದರು.
1985ರ ಸಂದರ್ಭದಲ್ಲಿ ಶಾಬಾನು ಎಂಬ ಮಹಿಳೆ, ಐದು ಮಕ್ಕಳ ತಾಯಿಯು ವಕೀಲನಾಗಿದ್ದ ಆಕೆಯ ಗಂಡ ತ್ರಿವಳಿ ತಲಾಖ್ ನೀಡಿ ಹೊರ ಹಾಕಿದಾಗ ಆಕೆ ಜೀವನಾಂಶಕ್ಕಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದಳು. ನ್ಯಾಯಾಲಯ ಆಕೆ ಮತ್ತು ಮಕ್ಕಳಿಗೆ ತಿಂಗಳಿಗೆ 185ರೂ ಜೀವನಾಂಶ ನೀಡಬೇಕೆಂದು ತೀರ್ಪು ನೀಡಿದಾಗ ಆಗ ಆಕೆಯ ಗಂಡನು ದೇಶಾದ್ಯಂತ ಎಲ್ಲ ಮುಸ್ಲಿಮರನ್ನು ಈ ತೀರ್ಪಿನ ವಿರುದ್ಧ ಎತ್ತಿ ಕಟ್ಟಿ, ತಲಾಖ್ ನೀಡಿದ ಬಳಿಕ ಹೆಂಡತಿಗೆ ಜೀವನಾಂಶ ನೀಡುವುದು ಧರ್ಮ ವಿರುದ್ಧವೆಂದು ಹೋರಾಟವನ್ನಾರಂಭಿಸಿದರು. ಆಗ ಪ್ರಧಾನ ಮಂತ್ರಿಯಾಗಿದ್ದ ರಾಜೀವ್ ಗಾಂಧಿಯವರ ದಾರಿ ತಪ್ಪಿಸಿ ‘ತಲಾಖ್ ಪೀಡಿತ ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣಾ ಮಸೂದೆ’ ಎಂಬ ಹೊಸ ನಿಯಮವನ್ನು ಜಾರಿಗೊಳಿಸಿದರು. ಈ ನಿಯಮದಂತೆ ತಲಾಖ್ ಪೀಡಿತ ಮಹಿಳೆಯರನ್ನು ಅವಳ ಸಂಬಂಧಿಕರು ನೋಡಿಕೊಳ್ಳಬೇಕು ಯಾರೂ ಇಲ್ಲವಾದರೆ ವಕ್ಸ್ ಮಂಡಳಿಯನ್ನು ಆಕೆ ಕೇಳಿಕೊಳ್ಳಬೇಕು. ಈ ನಿಯಮ ತೀರಾ ಹಾಸ್ಯಾಸ್ಪದ ಎಂಬಂತಾಯಿತು. ಹಕ್ಕೇ ಇಲ್ಲದ ಮುಸ್ಲಿಂ ಮಹಿಳೆಯರ ಯಾವ ಹಕ್ಕುಗಳನ್ನು ಈ ನಿಯಮ ರಕ್ಷಿಸುತ್ತದೆ? ವಕ್ಪ್ ಮಂಡಳಿಯ ಅನ್ಯ ಪುರುಷರೊಡನೆ ಆಕೆ ತನಗೆ ಜೀವನಾಂಶ ಕೊಡಿ ಎಂದು ಕೇಳತೊಡಗಿದರೆ ಪರಿಣಾಮವೇನಾಗಬಹುದು ಎಂಬುದನ್ನು ನಾನು ವಿವರಿಸಬೇಕಾಗಿಲ್ಲ. ಇಷ್ಟಕ್ಕೂ ಖುರಾನಿನ 2ನೇ ಸೂರದ 241ನೇ ವಾಕ್ಯ ಸ್ಪಷ್ಟವಾಗಿ ತಲಾಖ್ ಪೀಡಿತ ಮಹಿಳೆಯ ಮುಂದಿನ ಬದುಕಿಗಾಗಿ ಆಕೆಗೆ ಜೀವನಾಂಶ ನೀಡಬೇಕೆಂದು ಬರೆದಿದೆ. ಮುಸ್ಲಿಂ ಪುರುಷರು ಈ ಖುರ್‍ಆನಿನ ಈ ವಾಕ್ಯವನ್ನೇ ಜನರ ಕಣ್ಣಿನಿಂದ ಮಶಿಮಾ ಡಿ, ತಲಾಖ್ ಪೀಡಿತೆಗೆ ಜೀವನಾಂಶ ಧರ್ಮ ವಿರುದ್ಧ. ತಮ್ಮ ಧರ್ಮದಲ್ಲಿ ಸರಕಾರದ ಹಸ್ತಕ್ಷೇಪ ಎಂದು ಘೋಷಣೆ ಕೂಗಿದರು. ತಲಾಖ್ ಪೀಡಿತ ಮುಸ್ಲಿಂ ಮಹಿಳೆಯರು ಬದುಕಿನ ಹಾದಿಯನ್ನು ಮುಂಬೈಯ ಕೆಂಪು ದೀಪದ ಅಡಿಯಲ್ಲಿ ಕಂಡುಕೊಂಡರು. ಧರ್ಮ ರಕ್ಷಕರೆಂಬ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಎಂಬ ಸಂಸ್ಥೆ ಧರ್ಮ ರಕ್ಷಣೆ ಆಯಿತೆಂದು ಸಂಭ್ರಮಾಚರಿಸಿದರು. ತಲಾಖ್ ಪೀಡಿತ ಮಹಿಳೆಯರ ಗತಿ ಏನಾಯಿತೆಂದು ಈ ಪುರುಷರು ಯೋಚಿಸುವ ಗೋಜಿಗೆ ಇಂದಿನವರೆಗೂ ಹೋಗಿಯೇ ಇಲ್ಲ. ಈ ಹೊಸ ನಿಯಮದ ವಿರುದ್ಧ ಹೋರಾಡಿದ ವಿದ್ಯಾವಂತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಈ ಜನರು ಜಾತಿ ಭ್ರಷ್ಟತೆಯ ಆರೋಪ ಹೊರಸಿದರು.
ಈಗಲೂ ತ್ರಿವಳಿ, ಬಾಯಿಮಾತಿನ ತಲಾಖನ್ನು ಕೇಂದ್ರ ಸರಕಾರ ನಿಷೇಧಿಸಿದ ಕಾರಣ ನೀಡಿ ಈ ಜನರು ಶರಿಯತ್ ರಕ್ಷಣೆಯ ನಾಟಕವಾಡುತ್ತಿದ್ದಾರೆ. ಕೇಂದ್ರ ಸರಕಾರ ತ್ರಿವಳಿ ತಲಾಖ್ ರದ್ಧತಿ ನಿಯಮದಿಂದ ಹಿಂದೆ ಸರಿಯಬಾರದೆಂದು ನನ್ನ ಕಳಕಳಿಯ ಮನವಿ.
ನಮ್ಮ ಸಂವಿಧಾನವು ಎಲ್ಲರಿಗೂ ತಮ್ಮ ಧಾರ್ಮಿಕ ನಿಯಮಗಳನ್ನು ಪಾಲಿಸುವ ಅಧಿಕಾರವನ್ನು ನೀಡಿದೆ. ಆದರೆ ಯಾವ ಧರ್ಮ ಕೂಡಾ ಮನುಷ್ಯರನ್ನು ಬದುಕಿನಲ್ಲಿ ಸಂಕಟ ಪಡುವಂತಹ ನಿಯಮಗಳನ್ನು ರೂಪಿಸುವುದಿಲ್ಲ. 1500 ವರ್ಷಗಳ ಹಿಂದೆ ಪ್ರವಾದಿಗಳು ಹೆಂಡತಿ ಬೇಡವಾದರೆ ಬೀದಿಗೆಸೆಯಿರಿ ಎಂದು ಹೇಳಿಯೂ ಇರಲಿಲ್ಲ. ಅವರು ಪುರುಷರಿಂದ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ದಬ್ಬಾಳಿಕೆಯನ್ನು ನೋಡಿಯೇ ಇಸ್ಲಾಂ(ಶಾಂತಿ) ಎಂಬ ಧರ್ಮ ಸ್ಥಾಪನೆ ಮಾಡಿದರು.
ಧರ್ಮದ ನಿಯಮಗಳು 1500 ವರ್ಷಗಳ ಹಿಂದೆ ನಡೆಯುತ್ತಿದ್ದಂತೆ ಈಗಲೂ ಇರಬೇಕೆನ್ನುವುದೇ ಮೂರ್ಖತನವಾಗುತ್ತದೆ. ಶರಿಯತ್ ರಕ್ಷಣೆಗೆ ಹೊರಟವರಿಗೆ ಶರಿಯತ್ ಎಂಬ ಕರ್ಮ ಶಾಸ್ತ್ರ ಯಾವಾಗ ಜಾರಿಯಾಯಿತೆಂದು ತಿಳಿದಿದೆಯೇ? ಪ್ರವಾದಿಗಳ ಮರಣಾನಂತರ 150 ವರ್ಷಗಳ ಬಳಿಕವಷ್ಟೆ ಧಾರ್ಮಿಕ ಗುರುಗಳು ಶರಿಯತ್‍ನ್ನು ಜಾರಿಗೊಳಿಸಿದರು. ಇಸ್ಲಾಂ ಧಾರ್ಮಿಕ ನಿಯಮಗಳು ಮಹಿಳೆಯರ ಮೇಲೆ ಅಧಿಕಾರ ಚಲಾಯಿಸಲು ಪುರುಷರಿಗೆ ಸಾಧ್ಯವಾಗುವಂತಹ ನಿಯಮಗಳನ್ನು ಶರಿಯತ್ ಎಂಬ ಹೆಸರಿನಲ್ಲಿ ಜಾರಿಗೊಳಿಸಿದರು.
ನಮ್ಮ ಸಂವಿಧಾನ ಸರ್ವರಿಗೂ ಸಮಾನತೆ ನೀಡಿದೆ. ವಿವಿಧ ಧಾರ್ಮಿಕ ನಿಯಮಗಳಿಂದಾಗಿ ಈ ಸಮಾನತೆ ಮುಸ್ಲಿಂ ಮಹಿಳೆಯರಿಗೆ ದೊರೆಯುತ್ತಿಲ್ಲ. ವಿವಾಹ, ವಿಚ್ಛೇದನ ಇವು ಯಾವುದು ಧಾರ್ಮಿಕ ನಿಯಮಗಳಲ್ಲ. ಇವೆಲ್ಲವೂ ಸಾಮಾಜಿಕ ನಿಯಮಗಳು ಇಂತಹ ಸಾಮಾಜಿಕ ನಿಯಮಗಳು ಮಹಿಳೆಯರಿಗೆ ಬದುಕಲು ಸಾಧ್ಯವಾಗದ ರೀತಿಯಲ್ಲಿ ಅವರಿಗೆ ಉಸಿರುಗಟ್ಟುವಂತಾದರೆ ಅವುಗಳನ್ನು ಕಾಲಕ್ಕನುಸಾರವಾಗಿ ಬದಲಾಯಿಸಬಹುದು. ನೀವು ಯಾವ ದೇಶದಲ್ಲಿ ಬದುಕುತಿದ್ದೀರೋ ಆ ದೇಶದ ಸಾಮಾಜಿಕ ನಿಯಮವನ್ನು ಅನುಸರಿಸಬಹುದು ಎಂಬುದು ಪ್ರವಾದಿಗಳ ಬೋಧನೆಯಾ.
ಇಂದು ನಮ್ಮ ಸುತ್ತಮುತ್ತಲಿನ ಸುಮಾರು ಹತ್ತಿಪ್ಪತ್ತು ದೇಶಗಳಲ್ಲಿ ತ್ರಿವಳಿ ತಲಾಖ್ ಪದ್ದತಿಯನ್ನು ರದ್ದುಪಡಿಸಲಾಗಿದೆ. ಅಲ್ಲಿ ಯಾರೂ ನಮ್ಮ ಧರ್ಮದಲ್ಲಿ ಹಸ್ತಕ್ಷೇಪವೆಂದು ಕಿರುಚಾಡಲಿಲ್ಲವಲ್ಲಾ? ಇತರ ಮುಸ್ಲಿಂ ರಾಷ್ಟ್ರಗಳು ಇಂತಹ ಅನ್ಯಾಯದ ನಿಯಮವನ್ನು ತಿದ್ದುಪಡಿ ಮಾಡಿದರೆ ಇಂಡಿಯಾ ಕೂಡಾ ಅದನ್ನು ಮಾಡಲು ಯಾರ ಅನುಮತಿಯನ್ನು ಪಡೆಯಬೇಕಾಗಿಲ್ಲ.
ನಾವೆಲ್ಲರೂ ನಮ್ಮ ಸಂವಿಧಾನಕ್ಕನುಸಾರವಾಗಿ ಬದುಕಬೇಕು. ನಮಗೆ ನಮ್ಮ ಧರ್ಮವೆನ್ನುವುದಾದರೆ ಮುಸ್ಲಿಮೇತರರೂ ಮನುಧರ್ಮಶಾಸ್ತ್ರ ನಮ್ಮ ಧರ್ಮವೆನ್ನುತ್ತಾರೆ. ಪೇಜಾವರ ಗುರುಗಳು ಹಾಗೂ ವಾರಣಾಸಿಯ ಧರ್ಮಗುರುಗಳೂ ನಮಗೆ ಸಂವಿಧಾನದಲ್ಲಿ ವಿಶ್ವಾಸವಿಲ್ಲ. ನಾವು ಮನುವಾದವನನುಸರಿಸುತ್ತೇವೆ ಎಂದು ಹೇಳತೊಡಗಿದ್ದಾರೆ. ನಮ್ಮ ದೇಶದಲ್ಲಿ ಅತ್ಯುತ್ತಮ ಸಂವಿಧಾನವಿದೆ. ನಾವೆಲ್ಲರೂ ಸೌಹಾರ್ದದಿಂದ ಈ ಸಂವಿಧಾನಕ್ಕನುಸಾರವಾಗಿ ವರ್ತಿಸತೊಡಗಿದರೆ ದೇಶದಲ್ಲಿ ಶಾಂತಿ ನೆಲೆಯೂರಬಹುದು. ಮುಸ್ಲಿಮರು ಎಷ್ಟು ಮಸೀದಿ ಕಟ್ಟಿಸಿಕೊಳ್ಳಲೂ ಅಭ್ಯಂತರವಿಲ್ಲ. ಒಂದೇ ಬೀದಿಯಲ್ಲಿ ಮೂರೋ ನಾಲ್ಕೋ ಮಸೀದಿಗಳಿರುವುದೂ ಇದೆ. ನಮ್ಮ ಧಾರ್ಮಿಕ ನಿಯಮಗಳನ್ನು ಯಾರೂ ತಡೆಯಲಾರರು. ನಮಗೆ ಎಲ್ಲರನ್ನು ಅರ್ಥ ಮಾಡಿಕೊಳ್ಳುವಂತಹ ಹೃದಯ ವಾತ್ಸಲ್ಯತೆ ಇರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇವನಹಳ್ಳಿ| ‘ಷರತ್ತುಗಳಿಲ್ಲದೆ ಭೂಸ್ವಾಧೀನ ಕೈಬಿಡಿ..’; ಚನ್ನರಾಯಪಟ್ಟಣ ರೈತರ ಆಗ್ರಹ

ದೇವನಹಳ್ಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ಪ್ರತಿರೋಧದ ನಂತರ ಸರ್ಕಾರವು ಜುಲೈ, 15, 2025 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಸ್ವಾಧೀನವನ್ನು ಸಂಪೂರ್ಣವಾಗಿ...

ಹೈದರಾಬಾದ್| ರದ್ದಾದ ನೋಟುಗಳ ದುರುಪಯೋಗ; ಅಂಚೆ ಸಿಬ್ಬಂದಿಗೆ 2 ವರ್ಷ ಜೈಲು ಶಿಕ್ಷೆ

ನೋಟು ರದ್ದತಿಯ ಸಂದರ್ಭದಲ್ಲಿ 27.27 ಲಕ್ಷ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ವಿಶೇಷ ಸಿಬಿಐ ನ್ಯಾಯಾಲಯವು ಅಂಚೆ ಇಲಾಖೆಯ ಇಬ್ಬರು ಅಧಿಕಾರಿಗಳಿಗೆ ತಲಾ 65,000 ರೂ.ಗಳ ದಂಡದೊಂದಿಗೆ ಎರಡು ವರ್ಷಗಳ ಕಠಿಣ ಜೈಲು...

ಮಹಿಳೆ ಮತ ಚಲಾಯಿಸುವಾಗ ಮತಗಟ್ಟೆ ಪ್ರವೇಶಿಸಿದ ಶಾಸಕ : ತನಿಖೆಗೆ ಆದೇಶ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಂಗಳವಾರ (ಡಿ.2) ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಮತ ಚಲಾಯಿಸುತ್ತಿದ್ದಾಗ ಶಿವಸೇನಾ ಶಾಸಕ ಸಂತೋಷ್ ಬಂಗಾರ್ ಮತಗಟ್ಟೆಗೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದ್ದು, ಈ ಕುರಿತು ಚುನಾವಣಾ...

ಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ ಇಮಾಮ್

ನೀರಿನಲ್ಲಿ ಮುಳುಗುತ್ತಿರುವ ವಾಹನದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಲು ಮುಂಜಾನೆ ಮಸೀದಿ ಮೈಕ್‌ ಬಳಸಿ ಇಡೀ ಗ್ರಾಮವನ್ನು ಎಚ್ಚರಿಸಿದ ಅಸ್ಸಾಂನ ಮುಸ್ಲಿಂ ಧರ್ಮಗುರು ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ...

ಪ್ರತಿಪಕ್ಷಗಳ ಪ್ರತಿಭಟನೆಗೆ ಮಣಿದ ಕೇಂದ್ರ : ಡಿ.9ರಂದು ಸಂಸತ್ತಿನಲ್ಲಿ ಎಸ್‌ಐಆರ್ ಚರ್ಚೆ

ಸಂಸತ್ತಿನ ಉಭಯ ಸದನಗಳಲ್ಲಿ ಎರಡು ದಿನಗಳಿಂದ ಪ್ರತಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಮಣಿದಿದೆ. ಡಿಸೆಂಬರ್ 9ರಂದು ಚುನಾವಣಾ ಸುಧಾರಣೆಗಳು ಎಂಬ ವಿಷಯದ ಅಡಿಯಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಲು ಒಪ್ಪಿಕೊಂಡಿದೆ. ವರದಿಗಳ...

‘ಸಂಚಾರ್ ಸಾಥಿ ಆ್ಯಪ್’ ಕಡ್ಡಾಯವಲ್ಲ, ಅಳಿಸಬಹುದು: ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ  

‘ಸಂಚಾರ್ ಸಾಥಿ’ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಕಡ್ಡಾಯವಲ್ಲ, ನಿಮಗೆ ಬೇಡವೆಂದಾಗ ಅದನ್ನು ಅಳಿಸಬಹುದು ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.  ನವೆಂಬರ್ 28 ರಂದು, ಟೆಲಿಕಾಂ ಇಲಾಖೆ ಭಾರತದಲ್ಲಿ...

ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ

ಉತ್ತರ ಪ್ರದೇಶದ ಅಲಿಘರ್‌ನ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹದ ಆರತಕ್ಷತೆಯಲ್ಲಿ ಇಬ್ಬರು ಅತಿಥಿಗಳು, ಆಹಾರ ಕೌಂಟರ್‌ನಲ್ಲಿ ಬರೆದಿದ್ದ 'ಬೀಫ್‌ ಕರಿ' ಎಂಬ ಲೇಬಲ್‌ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಮಾರಂಭ...

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ 'ಸಂಚಾರ್ ಸಾಥಿ' ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ...

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ...