Homeಅಂಕಣಗಳುಯಾವ ಧರ್ಮವೂ ಸಂಕಟವನ್ನು ರೂಪಿಸುವುದಿಲ್ಲ

ಯಾವ ಧರ್ಮವೂ ಸಂಕಟವನ್ನು ರೂಪಿಸುವುದಿಲ್ಲ

- Advertisement -
- Advertisement -

ಸಾರ ಅಬೂಬಕ್ಕರ್ |

ಇದೇ ಡಿಸೆಂಬರ್ ತಿಂಗಳ ದಿನಾಂಕ 10ರಂದು ಮಂಗಳೂರಿನ ನೆಹರು ಮೈದಾನದಲ್ಲಿ ಮುಸ್ಲಿಮರ ‘ಶರಿಯತ್ ರಕ್ಷಣ್’ ಎಂಬ ವಿಷಯದ ಕುರಿತು ಸಾರ್ವಜನಿಕ ಸಭೆ ಕರೆಯಲಾಗಿದ್ದು ರಾಜ್ಯಾದ್ಯಂತದಿಂದ ಮುಸ್ಲಿಂ ಪುರುಷರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದನ್ನು ಅನುಸರಿಸಿ ರಾಜ್ಯದ ಹಲವು ಜಿಲ್ಲೆಗಳಿಂದ ಮುಸ್ಲಿಂ ಪುರುಷರು ಆಗಮಿಸಿ ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ಕೇರಳದ ಹಲವಾರು ಧರ್ಮ ಗುರುಗಳು ಬಂದು ಈ ಜನರಿಗೆ ಮಾರ್ಗದರ್ಶನ ನೀಡಿದರು.
1985ರ ಸಂದರ್ಭದಲ್ಲಿ ಶಾಬಾನು ಎಂಬ ಮಹಿಳೆ, ಐದು ಮಕ್ಕಳ ತಾಯಿಯು ವಕೀಲನಾಗಿದ್ದ ಆಕೆಯ ಗಂಡ ತ್ರಿವಳಿ ತಲಾಖ್ ನೀಡಿ ಹೊರ ಹಾಕಿದಾಗ ಆಕೆ ಜೀವನಾಂಶಕ್ಕಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದಳು. ನ್ಯಾಯಾಲಯ ಆಕೆ ಮತ್ತು ಮಕ್ಕಳಿಗೆ ತಿಂಗಳಿಗೆ 185ರೂ ಜೀವನಾಂಶ ನೀಡಬೇಕೆಂದು ತೀರ್ಪು ನೀಡಿದಾಗ ಆಗ ಆಕೆಯ ಗಂಡನು ದೇಶಾದ್ಯಂತ ಎಲ್ಲ ಮುಸ್ಲಿಮರನ್ನು ಈ ತೀರ್ಪಿನ ವಿರುದ್ಧ ಎತ್ತಿ ಕಟ್ಟಿ, ತಲಾಖ್ ನೀಡಿದ ಬಳಿಕ ಹೆಂಡತಿಗೆ ಜೀವನಾಂಶ ನೀಡುವುದು ಧರ್ಮ ವಿರುದ್ಧವೆಂದು ಹೋರಾಟವನ್ನಾರಂಭಿಸಿದರು. ಆಗ ಪ್ರಧಾನ ಮಂತ್ರಿಯಾಗಿದ್ದ ರಾಜೀವ್ ಗಾಂಧಿಯವರ ದಾರಿ ತಪ್ಪಿಸಿ ‘ತಲಾಖ್ ಪೀಡಿತ ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣಾ ಮಸೂದೆ’ ಎಂಬ ಹೊಸ ನಿಯಮವನ್ನು ಜಾರಿಗೊಳಿಸಿದರು. ಈ ನಿಯಮದಂತೆ ತಲಾಖ್ ಪೀಡಿತ ಮಹಿಳೆಯರನ್ನು ಅವಳ ಸಂಬಂಧಿಕರು ನೋಡಿಕೊಳ್ಳಬೇಕು ಯಾರೂ ಇಲ್ಲವಾದರೆ ವಕ್ಸ್ ಮಂಡಳಿಯನ್ನು ಆಕೆ ಕೇಳಿಕೊಳ್ಳಬೇಕು. ಈ ನಿಯಮ ತೀರಾ ಹಾಸ್ಯಾಸ್ಪದ ಎಂಬಂತಾಯಿತು. ಹಕ್ಕೇ ಇಲ್ಲದ ಮುಸ್ಲಿಂ ಮಹಿಳೆಯರ ಯಾವ ಹಕ್ಕುಗಳನ್ನು ಈ ನಿಯಮ ರಕ್ಷಿಸುತ್ತದೆ? ವಕ್ಪ್ ಮಂಡಳಿಯ ಅನ್ಯ ಪುರುಷರೊಡನೆ ಆಕೆ ತನಗೆ ಜೀವನಾಂಶ ಕೊಡಿ ಎಂದು ಕೇಳತೊಡಗಿದರೆ ಪರಿಣಾಮವೇನಾಗಬಹುದು ಎಂಬುದನ್ನು ನಾನು ವಿವರಿಸಬೇಕಾಗಿಲ್ಲ. ಇಷ್ಟಕ್ಕೂ ಖುರಾನಿನ 2ನೇ ಸೂರದ 241ನೇ ವಾಕ್ಯ ಸ್ಪಷ್ಟವಾಗಿ ತಲಾಖ್ ಪೀಡಿತ ಮಹಿಳೆಯ ಮುಂದಿನ ಬದುಕಿಗಾಗಿ ಆಕೆಗೆ ಜೀವನಾಂಶ ನೀಡಬೇಕೆಂದು ಬರೆದಿದೆ. ಮುಸ್ಲಿಂ ಪುರುಷರು ಈ ಖುರ್‍ಆನಿನ ಈ ವಾಕ್ಯವನ್ನೇ ಜನರ ಕಣ್ಣಿನಿಂದ ಮಶಿಮಾ ಡಿ, ತಲಾಖ್ ಪೀಡಿತೆಗೆ ಜೀವನಾಂಶ ಧರ್ಮ ವಿರುದ್ಧ. ತಮ್ಮ ಧರ್ಮದಲ್ಲಿ ಸರಕಾರದ ಹಸ್ತಕ್ಷೇಪ ಎಂದು ಘೋಷಣೆ ಕೂಗಿದರು. ತಲಾಖ್ ಪೀಡಿತ ಮುಸ್ಲಿಂ ಮಹಿಳೆಯರು ಬದುಕಿನ ಹಾದಿಯನ್ನು ಮುಂಬೈಯ ಕೆಂಪು ದೀಪದ ಅಡಿಯಲ್ಲಿ ಕಂಡುಕೊಂಡರು. ಧರ್ಮ ರಕ್ಷಕರೆಂಬ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಎಂಬ ಸಂಸ್ಥೆ ಧರ್ಮ ರಕ್ಷಣೆ ಆಯಿತೆಂದು ಸಂಭ್ರಮಾಚರಿಸಿದರು. ತಲಾಖ್ ಪೀಡಿತ ಮಹಿಳೆಯರ ಗತಿ ಏನಾಯಿತೆಂದು ಈ ಪುರುಷರು ಯೋಚಿಸುವ ಗೋಜಿಗೆ ಇಂದಿನವರೆಗೂ ಹೋಗಿಯೇ ಇಲ್ಲ. ಈ ಹೊಸ ನಿಯಮದ ವಿರುದ್ಧ ಹೋರಾಡಿದ ವಿದ್ಯಾವಂತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಈ ಜನರು ಜಾತಿ ಭ್ರಷ್ಟತೆಯ ಆರೋಪ ಹೊರಸಿದರು.
ಈಗಲೂ ತ್ರಿವಳಿ, ಬಾಯಿಮಾತಿನ ತಲಾಖನ್ನು ಕೇಂದ್ರ ಸರಕಾರ ನಿಷೇಧಿಸಿದ ಕಾರಣ ನೀಡಿ ಈ ಜನರು ಶರಿಯತ್ ರಕ್ಷಣೆಯ ನಾಟಕವಾಡುತ್ತಿದ್ದಾರೆ. ಕೇಂದ್ರ ಸರಕಾರ ತ್ರಿವಳಿ ತಲಾಖ್ ರದ್ಧತಿ ನಿಯಮದಿಂದ ಹಿಂದೆ ಸರಿಯಬಾರದೆಂದು ನನ್ನ ಕಳಕಳಿಯ ಮನವಿ.
ನಮ್ಮ ಸಂವಿಧಾನವು ಎಲ್ಲರಿಗೂ ತಮ್ಮ ಧಾರ್ಮಿಕ ನಿಯಮಗಳನ್ನು ಪಾಲಿಸುವ ಅಧಿಕಾರವನ್ನು ನೀಡಿದೆ. ಆದರೆ ಯಾವ ಧರ್ಮ ಕೂಡಾ ಮನುಷ್ಯರನ್ನು ಬದುಕಿನಲ್ಲಿ ಸಂಕಟ ಪಡುವಂತಹ ನಿಯಮಗಳನ್ನು ರೂಪಿಸುವುದಿಲ್ಲ. 1500 ವರ್ಷಗಳ ಹಿಂದೆ ಪ್ರವಾದಿಗಳು ಹೆಂಡತಿ ಬೇಡವಾದರೆ ಬೀದಿಗೆಸೆಯಿರಿ ಎಂದು ಹೇಳಿಯೂ ಇರಲಿಲ್ಲ. ಅವರು ಪುರುಷರಿಂದ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ದಬ್ಬಾಳಿಕೆಯನ್ನು ನೋಡಿಯೇ ಇಸ್ಲಾಂ(ಶಾಂತಿ) ಎಂಬ ಧರ್ಮ ಸ್ಥಾಪನೆ ಮಾಡಿದರು.
ಧರ್ಮದ ನಿಯಮಗಳು 1500 ವರ್ಷಗಳ ಹಿಂದೆ ನಡೆಯುತ್ತಿದ್ದಂತೆ ಈಗಲೂ ಇರಬೇಕೆನ್ನುವುದೇ ಮೂರ್ಖತನವಾಗುತ್ತದೆ. ಶರಿಯತ್ ರಕ್ಷಣೆಗೆ ಹೊರಟವರಿಗೆ ಶರಿಯತ್ ಎಂಬ ಕರ್ಮ ಶಾಸ್ತ್ರ ಯಾವಾಗ ಜಾರಿಯಾಯಿತೆಂದು ತಿಳಿದಿದೆಯೇ? ಪ್ರವಾದಿಗಳ ಮರಣಾನಂತರ 150 ವರ್ಷಗಳ ಬಳಿಕವಷ್ಟೆ ಧಾರ್ಮಿಕ ಗುರುಗಳು ಶರಿಯತ್‍ನ್ನು ಜಾರಿಗೊಳಿಸಿದರು. ಇಸ್ಲಾಂ ಧಾರ್ಮಿಕ ನಿಯಮಗಳು ಮಹಿಳೆಯರ ಮೇಲೆ ಅಧಿಕಾರ ಚಲಾಯಿಸಲು ಪುರುಷರಿಗೆ ಸಾಧ್ಯವಾಗುವಂತಹ ನಿಯಮಗಳನ್ನು ಶರಿಯತ್ ಎಂಬ ಹೆಸರಿನಲ್ಲಿ ಜಾರಿಗೊಳಿಸಿದರು.
ನಮ್ಮ ಸಂವಿಧಾನ ಸರ್ವರಿಗೂ ಸಮಾನತೆ ನೀಡಿದೆ. ವಿವಿಧ ಧಾರ್ಮಿಕ ನಿಯಮಗಳಿಂದಾಗಿ ಈ ಸಮಾನತೆ ಮುಸ್ಲಿಂ ಮಹಿಳೆಯರಿಗೆ ದೊರೆಯುತ್ತಿಲ್ಲ. ವಿವಾಹ, ವಿಚ್ಛೇದನ ಇವು ಯಾವುದು ಧಾರ್ಮಿಕ ನಿಯಮಗಳಲ್ಲ. ಇವೆಲ್ಲವೂ ಸಾಮಾಜಿಕ ನಿಯಮಗಳು ಇಂತಹ ಸಾಮಾಜಿಕ ನಿಯಮಗಳು ಮಹಿಳೆಯರಿಗೆ ಬದುಕಲು ಸಾಧ್ಯವಾಗದ ರೀತಿಯಲ್ಲಿ ಅವರಿಗೆ ಉಸಿರುಗಟ್ಟುವಂತಾದರೆ ಅವುಗಳನ್ನು ಕಾಲಕ್ಕನುಸಾರವಾಗಿ ಬದಲಾಯಿಸಬಹುದು. ನೀವು ಯಾವ ದೇಶದಲ್ಲಿ ಬದುಕುತಿದ್ದೀರೋ ಆ ದೇಶದ ಸಾಮಾಜಿಕ ನಿಯಮವನ್ನು ಅನುಸರಿಸಬಹುದು ಎಂಬುದು ಪ್ರವಾದಿಗಳ ಬೋಧನೆಯಾ.
ಇಂದು ನಮ್ಮ ಸುತ್ತಮುತ್ತಲಿನ ಸುಮಾರು ಹತ್ತಿಪ್ಪತ್ತು ದೇಶಗಳಲ್ಲಿ ತ್ರಿವಳಿ ತಲಾಖ್ ಪದ್ದತಿಯನ್ನು ರದ್ದುಪಡಿಸಲಾಗಿದೆ. ಅಲ್ಲಿ ಯಾರೂ ನಮ್ಮ ಧರ್ಮದಲ್ಲಿ ಹಸ್ತಕ್ಷೇಪವೆಂದು ಕಿರುಚಾಡಲಿಲ್ಲವಲ್ಲಾ? ಇತರ ಮುಸ್ಲಿಂ ರಾಷ್ಟ್ರಗಳು ಇಂತಹ ಅನ್ಯಾಯದ ನಿಯಮವನ್ನು ತಿದ್ದುಪಡಿ ಮಾಡಿದರೆ ಇಂಡಿಯಾ ಕೂಡಾ ಅದನ್ನು ಮಾಡಲು ಯಾರ ಅನುಮತಿಯನ್ನು ಪಡೆಯಬೇಕಾಗಿಲ್ಲ.
ನಾವೆಲ್ಲರೂ ನಮ್ಮ ಸಂವಿಧಾನಕ್ಕನುಸಾರವಾಗಿ ಬದುಕಬೇಕು. ನಮಗೆ ನಮ್ಮ ಧರ್ಮವೆನ್ನುವುದಾದರೆ ಮುಸ್ಲಿಮೇತರರೂ ಮನುಧರ್ಮಶಾಸ್ತ್ರ ನಮ್ಮ ಧರ್ಮವೆನ್ನುತ್ತಾರೆ. ಪೇಜಾವರ ಗುರುಗಳು ಹಾಗೂ ವಾರಣಾಸಿಯ ಧರ್ಮಗುರುಗಳೂ ನಮಗೆ ಸಂವಿಧಾನದಲ್ಲಿ ವಿಶ್ವಾಸವಿಲ್ಲ. ನಾವು ಮನುವಾದವನನುಸರಿಸುತ್ತೇವೆ ಎಂದು ಹೇಳತೊಡಗಿದ್ದಾರೆ. ನಮ್ಮ ದೇಶದಲ್ಲಿ ಅತ್ಯುತ್ತಮ ಸಂವಿಧಾನವಿದೆ. ನಾವೆಲ್ಲರೂ ಸೌಹಾರ್ದದಿಂದ ಈ ಸಂವಿಧಾನಕ್ಕನುಸಾರವಾಗಿ ವರ್ತಿಸತೊಡಗಿದರೆ ದೇಶದಲ್ಲಿ ಶಾಂತಿ ನೆಲೆಯೂರಬಹುದು. ಮುಸ್ಲಿಮರು ಎಷ್ಟು ಮಸೀದಿ ಕಟ್ಟಿಸಿಕೊಳ್ಳಲೂ ಅಭ್ಯಂತರವಿಲ್ಲ. ಒಂದೇ ಬೀದಿಯಲ್ಲಿ ಮೂರೋ ನಾಲ್ಕೋ ಮಸೀದಿಗಳಿರುವುದೂ ಇದೆ. ನಮ್ಮ ಧಾರ್ಮಿಕ ನಿಯಮಗಳನ್ನು ಯಾರೂ ತಡೆಯಲಾರರು. ನಮಗೆ ಎಲ್ಲರನ್ನು ಅರ್ಥ ಮಾಡಿಕೊಳ್ಳುವಂತಹ ಹೃದಯ ವಾತ್ಸಲ್ಯತೆ ಇರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ...

ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

ದಲಿತ ಕುಟುಂಬವೊಂದರ ಹೊಲದಲ್ಲಿ ಪ್ರಬಲ ಜಾತಿ ಜನರ ಹಸುಗಳು ಮೇಯಿಸುವುದನ್ನು ವಿರೋಧಿಸದ್ದಕ್ಕೆ ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಕೋರರು ಮನಬಂದಂತೆ ಗುಂಡು ಹಾರಿಸಿ ನಂತರ ದಲಿತ...

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ...

ಮರ್ಯಾದೆಗೇಡು ಹತ್ಯೆ | ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆಗೆ ಚಿಂತನೆ : ಸಚಿವ ಹೆಚ್‌.ಸಿ ಮಹದೇವಪ್ಪ

ಮರ್ಯಾದೆಗೇಡು ಹತ್ಯೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದರು. ಮರ್ಯಾದೆಗೇಡು ಹತ್ಯೆ ನಡೆದ ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮಕ್ಕೆ...

ತಮಿಳುನಾಡು: ಪ್ರತಿಭಟನಾ ನಿರತ ಶಿಕ್ಷಕರು, ನೈರ್ಮಲ್ಯ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ ಪ್ರೇಮಲತಾ ವಿಜಯಕಾಂತ್

ತಮಿಳುನಾಡು ಸರ್ಕಾರವು ಪ್ರತಿಭಟನಾ ನಿರತ ಮಾಧ್ಯಮಿಕ ದರ್ಜೆಯ ಶಿಕ್ಷಕರು ಮತ್ತು ನೈರ್ಮಲ್ಯ ಕಾರ್ಮಿಕರ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ತುರ್ತಾಗಿ ಪರಿಹರಿಸಬೇಕು ಎಂದು ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಗುರುವಾರ ಹೇಳಿದ್ದಾರೆ.  ತಮ್ಮ...

ಸ್ವಿಟ್ಜರ್‌ಲ್ಯಾಂಡ್‌ನ ಸ್ಕೀ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 40 ಮಂದಿ ಸಾವನ್ನಪ್ಪಿರುವ ಶಂಕೆ, ಹಲವರಿಗೆ ಗಾಯ

ನೈಋತ್ಯ ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್-ಮೊಂಟಾನಾದ ಸ್ಕೀ ರೆಸಾರ್ಟ್‌ನಲ್ಲಿರುವ "ಲೆ ಕಾನ್ಸ್ಟೆಲೇಷನ್" ಎಂಬ ಬಾರ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಗುರುವಾರ ತಿಳಿಸಿರುವುದಾಗಿ...

ಭಾರತದ ನಾಲ್ವರು ಸೇರಿ 2025ರಲ್ಲಿ ಜಾಗತಿಕವಾಗಿ 128 ಪತ್ರಕರ್ತರ ಹತ್ಯೆ : ವರದಿ

ಜಾಗತಿಕವಾಗಿ 2025ರಲ್ಲಿ ನೂರಾ ಇಪ್ಪತ್ತೆಂಟು ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ಒಕ್ಕೂಟ ಬುಧವಾರ (ಡಿ.31) ತಿಳಿಸಿದೆ. ಪತ್ರಕರ್ತರ ಹತ್ಯೆಗಳಲ್ಲಿ ಅರ್ಧಕ್ಕಿಂತ ಹೆಚ್ಚು (74) ಪಶ್ಚಿಮ ಏಷ್ಯಾದಲ್ಲಿ ಸಂಭವಿಸಿವೆ ಎಂದು ಬೆಲ್ಜಿಯಂ ಮೂಲದ ಒಕ್ಕೂಟ...

ಸನಾತನ ರಾಷ್ಟ್ರ ಮಹೋತ್ಸವ : ಕೇಂದ್ರ ಸಂಸ್ಕೃತಿ ಸಚಿವಾಲಯ, ದೆಹಲಿ ಸರ್ಕಾರದ ಪ್ರಾಯೋಜಕತ್ವದಲ್ಲಿ ನಡೆದ ಇಸ್ಲಾಮೋಫೋಬಿಯಾ ಕಾರ್ಯಕ್ರಮ

ಹಿಂದುತ್ವ ಗುಂಪುಗಳು ಹಿಂದೂ ರಾಷ್ಟ್ರ ರಚನೆಗೆ ಕರೆ ನೀಡುವ ಮತ್ತು ಅಲ್ಪಸಂಖ್ಯಾತರಿಗೆ ನೇರ ಅಥವಾ ಪರೋಕ್ಷ ಬೆದರಿಕೆಗಳನ್ನು ಹಾಕುವ ಕಾರ್ಯಕ್ರಮಗಳನ್ನು ಆಯೋಜಿಸುವುದು ಭಾರತದಲ್ಲಿ ಸಾಮಾನ್ಯವಾಗಿದೆ. ಆದರೆ, ದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ 'ಸನಾತನ...

ಜಮ್ಮು-ಕಾಶ್ಮೀರ| 17 ಹಳ್ಳಿಗಳ 150 ಜನರಿಗೆ ‘ರಕ್ಷಣಾ ತರಬೇತಿ’ ನೀಡುತ್ತಿರುವ ಸೇನಾ ಪಡೆ

ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯ ಚೆನಾಬ್ ಕಣಿವೆಯ ಎತ್ತರದ ಪ್ರದೇಶಗಳಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಭಾಗವಾಗಿ, ಗ್ರಾಮ ಮಟ್ಟದ ಭದ್ರತೆಯನ್ನು ಬಲಪಡಿಸಲು ಸೇನೆಯು ತನ್ನ ಪ್ರಯತ್ನಗಳನ್ನು ಹೆಚ್ಚಿಸಿದೆ. ದೋಡಾ-ಚಂಬಾ ಗಡಿಯುದ್ದಕ್ಕೂ 17...

ಬೆಸ್ಕಾಂ ವ್ಯಾಪ್ತಿಯಲ್ಲಿ ಟ್ರಾನ್ಸ್‌ಫಾರ್ಮರ್‌ಗಳ ಸ್ಥಿತಿ ಮೇಲ್ವಿಚಾರಣೆಗೆ ಹೊಸ ಮೊಬೈಲ್ ಆ್ಯಪ್ 

ಬೆಂಗಳೂರು: ಬೆಸ್ಕಾಂ ತನ್ನ ವ್ಯಾಪ್ತಿಯಲ್ಲಿ ಬರುವ ಟ್ರಾನ್ಸ್‌ಫಾರ್ಮರ್‌ಗಳ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು 'ಡಿಸ್ಟ್ರಿಬ್ಯೂಷನ್ ಟ್ರಾನ್ಸ್‌ಫಾರ್ಮರ್ ಲೈಫ್ ಸೈಕಲ್ ಮ್ಯಾನೇಜ್‌ಮೆಂಟ್ ಸಿಸ್ಟಮ್' (DTLMS) ಎಂಬ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ. ಈ ಕ್ರಮವು...