Homeಅಂಕಣಗಳುಯಾವ ಧರ್ಮವೂ ಸಂಕಟವನ್ನು ರೂಪಿಸುವುದಿಲ್ಲ

ಯಾವ ಧರ್ಮವೂ ಸಂಕಟವನ್ನು ರೂಪಿಸುವುದಿಲ್ಲ

- Advertisement -
- Advertisement -

ಸಾರ ಅಬೂಬಕ್ಕರ್ |

ಇದೇ ಡಿಸೆಂಬರ್ ತಿಂಗಳ ದಿನಾಂಕ 10ರಂದು ಮಂಗಳೂರಿನ ನೆಹರು ಮೈದಾನದಲ್ಲಿ ಮುಸ್ಲಿಮರ ‘ಶರಿಯತ್ ರಕ್ಷಣ್’ ಎಂಬ ವಿಷಯದ ಕುರಿತು ಸಾರ್ವಜನಿಕ ಸಭೆ ಕರೆಯಲಾಗಿದ್ದು ರಾಜ್ಯಾದ್ಯಂತದಿಂದ ಮುಸ್ಲಿಂ ಪುರುಷರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದನ್ನು ಅನುಸರಿಸಿ ರಾಜ್ಯದ ಹಲವು ಜಿಲ್ಲೆಗಳಿಂದ ಮುಸ್ಲಿಂ ಪುರುಷರು ಆಗಮಿಸಿ ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ಕೇರಳದ ಹಲವಾರು ಧರ್ಮ ಗುರುಗಳು ಬಂದು ಈ ಜನರಿಗೆ ಮಾರ್ಗದರ್ಶನ ನೀಡಿದರು.
1985ರ ಸಂದರ್ಭದಲ್ಲಿ ಶಾಬಾನು ಎಂಬ ಮಹಿಳೆ, ಐದು ಮಕ್ಕಳ ತಾಯಿಯು ವಕೀಲನಾಗಿದ್ದ ಆಕೆಯ ಗಂಡ ತ್ರಿವಳಿ ತಲಾಖ್ ನೀಡಿ ಹೊರ ಹಾಕಿದಾಗ ಆಕೆ ಜೀವನಾಂಶಕ್ಕಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದಳು. ನ್ಯಾಯಾಲಯ ಆಕೆ ಮತ್ತು ಮಕ್ಕಳಿಗೆ ತಿಂಗಳಿಗೆ 185ರೂ ಜೀವನಾಂಶ ನೀಡಬೇಕೆಂದು ತೀರ್ಪು ನೀಡಿದಾಗ ಆಗ ಆಕೆಯ ಗಂಡನು ದೇಶಾದ್ಯಂತ ಎಲ್ಲ ಮುಸ್ಲಿಮರನ್ನು ಈ ತೀರ್ಪಿನ ವಿರುದ್ಧ ಎತ್ತಿ ಕಟ್ಟಿ, ತಲಾಖ್ ನೀಡಿದ ಬಳಿಕ ಹೆಂಡತಿಗೆ ಜೀವನಾಂಶ ನೀಡುವುದು ಧರ್ಮ ವಿರುದ್ಧವೆಂದು ಹೋರಾಟವನ್ನಾರಂಭಿಸಿದರು. ಆಗ ಪ್ರಧಾನ ಮಂತ್ರಿಯಾಗಿದ್ದ ರಾಜೀವ್ ಗಾಂಧಿಯವರ ದಾರಿ ತಪ್ಪಿಸಿ ‘ತಲಾಖ್ ಪೀಡಿತ ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣಾ ಮಸೂದೆ’ ಎಂಬ ಹೊಸ ನಿಯಮವನ್ನು ಜಾರಿಗೊಳಿಸಿದರು. ಈ ನಿಯಮದಂತೆ ತಲಾಖ್ ಪೀಡಿತ ಮಹಿಳೆಯರನ್ನು ಅವಳ ಸಂಬಂಧಿಕರು ನೋಡಿಕೊಳ್ಳಬೇಕು ಯಾರೂ ಇಲ್ಲವಾದರೆ ವಕ್ಸ್ ಮಂಡಳಿಯನ್ನು ಆಕೆ ಕೇಳಿಕೊಳ್ಳಬೇಕು. ಈ ನಿಯಮ ತೀರಾ ಹಾಸ್ಯಾಸ್ಪದ ಎಂಬಂತಾಯಿತು. ಹಕ್ಕೇ ಇಲ್ಲದ ಮುಸ್ಲಿಂ ಮಹಿಳೆಯರ ಯಾವ ಹಕ್ಕುಗಳನ್ನು ಈ ನಿಯಮ ರಕ್ಷಿಸುತ್ತದೆ? ವಕ್ಪ್ ಮಂಡಳಿಯ ಅನ್ಯ ಪುರುಷರೊಡನೆ ಆಕೆ ತನಗೆ ಜೀವನಾಂಶ ಕೊಡಿ ಎಂದು ಕೇಳತೊಡಗಿದರೆ ಪರಿಣಾಮವೇನಾಗಬಹುದು ಎಂಬುದನ್ನು ನಾನು ವಿವರಿಸಬೇಕಾಗಿಲ್ಲ. ಇಷ್ಟಕ್ಕೂ ಖುರಾನಿನ 2ನೇ ಸೂರದ 241ನೇ ವಾಕ್ಯ ಸ್ಪಷ್ಟವಾಗಿ ತಲಾಖ್ ಪೀಡಿತ ಮಹಿಳೆಯ ಮುಂದಿನ ಬದುಕಿಗಾಗಿ ಆಕೆಗೆ ಜೀವನಾಂಶ ನೀಡಬೇಕೆಂದು ಬರೆದಿದೆ. ಮುಸ್ಲಿಂ ಪುರುಷರು ಈ ಖುರ್‍ಆನಿನ ಈ ವಾಕ್ಯವನ್ನೇ ಜನರ ಕಣ್ಣಿನಿಂದ ಮಶಿಮಾ ಡಿ, ತಲಾಖ್ ಪೀಡಿತೆಗೆ ಜೀವನಾಂಶ ಧರ್ಮ ವಿರುದ್ಧ. ತಮ್ಮ ಧರ್ಮದಲ್ಲಿ ಸರಕಾರದ ಹಸ್ತಕ್ಷೇಪ ಎಂದು ಘೋಷಣೆ ಕೂಗಿದರು. ತಲಾಖ್ ಪೀಡಿತ ಮುಸ್ಲಿಂ ಮಹಿಳೆಯರು ಬದುಕಿನ ಹಾದಿಯನ್ನು ಮುಂಬೈಯ ಕೆಂಪು ದೀಪದ ಅಡಿಯಲ್ಲಿ ಕಂಡುಕೊಂಡರು. ಧರ್ಮ ರಕ್ಷಕರೆಂಬ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಎಂಬ ಸಂಸ್ಥೆ ಧರ್ಮ ರಕ್ಷಣೆ ಆಯಿತೆಂದು ಸಂಭ್ರಮಾಚರಿಸಿದರು. ತಲಾಖ್ ಪೀಡಿತ ಮಹಿಳೆಯರ ಗತಿ ಏನಾಯಿತೆಂದು ಈ ಪುರುಷರು ಯೋಚಿಸುವ ಗೋಜಿಗೆ ಇಂದಿನವರೆಗೂ ಹೋಗಿಯೇ ಇಲ್ಲ. ಈ ಹೊಸ ನಿಯಮದ ವಿರುದ್ಧ ಹೋರಾಡಿದ ವಿದ್ಯಾವಂತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಈ ಜನರು ಜಾತಿ ಭ್ರಷ್ಟತೆಯ ಆರೋಪ ಹೊರಸಿದರು.
ಈಗಲೂ ತ್ರಿವಳಿ, ಬಾಯಿಮಾತಿನ ತಲಾಖನ್ನು ಕೇಂದ್ರ ಸರಕಾರ ನಿಷೇಧಿಸಿದ ಕಾರಣ ನೀಡಿ ಈ ಜನರು ಶರಿಯತ್ ರಕ್ಷಣೆಯ ನಾಟಕವಾಡುತ್ತಿದ್ದಾರೆ. ಕೇಂದ್ರ ಸರಕಾರ ತ್ರಿವಳಿ ತಲಾಖ್ ರದ್ಧತಿ ನಿಯಮದಿಂದ ಹಿಂದೆ ಸರಿಯಬಾರದೆಂದು ನನ್ನ ಕಳಕಳಿಯ ಮನವಿ.
ನಮ್ಮ ಸಂವಿಧಾನವು ಎಲ್ಲರಿಗೂ ತಮ್ಮ ಧಾರ್ಮಿಕ ನಿಯಮಗಳನ್ನು ಪಾಲಿಸುವ ಅಧಿಕಾರವನ್ನು ನೀಡಿದೆ. ಆದರೆ ಯಾವ ಧರ್ಮ ಕೂಡಾ ಮನುಷ್ಯರನ್ನು ಬದುಕಿನಲ್ಲಿ ಸಂಕಟ ಪಡುವಂತಹ ನಿಯಮಗಳನ್ನು ರೂಪಿಸುವುದಿಲ್ಲ. 1500 ವರ್ಷಗಳ ಹಿಂದೆ ಪ್ರವಾದಿಗಳು ಹೆಂಡತಿ ಬೇಡವಾದರೆ ಬೀದಿಗೆಸೆಯಿರಿ ಎಂದು ಹೇಳಿಯೂ ಇರಲಿಲ್ಲ. ಅವರು ಪುರುಷರಿಂದ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ದಬ್ಬಾಳಿಕೆಯನ್ನು ನೋಡಿಯೇ ಇಸ್ಲಾಂ(ಶಾಂತಿ) ಎಂಬ ಧರ್ಮ ಸ್ಥಾಪನೆ ಮಾಡಿದರು.
ಧರ್ಮದ ನಿಯಮಗಳು 1500 ವರ್ಷಗಳ ಹಿಂದೆ ನಡೆಯುತ್ತಿದ್ದಂತೆ ಈಗಲೂ ಇರಬೇಕೆನ್ನುವುದೇ ಮೂರ್ಖತನವಾಗುತ್ತದೆ. ಶರಿಯತ್ ರಕ್ಷಣೆಗೆ ಹೊರಟವರಿಗೆ ಶರಿಯತ್ ಎಂಬ ಕರ್ಮ ಶಾಸ್ತ್ರ ಯಾವಾಗ ಜಾರಿಯಾಯಿತೆಂದು ತಿಳಿದಿದೆಯೇ? ಪ್ರವಾದಿಗಳ ಮರಣಾನಂತರ 150 ವರ್ಷಗಳ ಬಳಿಕವಷ್ಟೆ ಧಾರ್ಮಿಕ ಗುರುಗಳು ಶರಿಯತ್‍ನ್ನು ಜಾರಿಗೊಳಿಸಿದರು. ಇಸ್ಲಾಂ ಧಾರ್ಮಿಕ ನಿಯಮಗಳು ಮಹಿಳೆಯರ ಮೇಲೆ ಅಧಿಕಾರ ಚಲಾಯಿಸಲು ಪುರುಷರಿಗೆ ಸಾಧ್ಯವಾಗುವಂತಹ ನಿಯಮಗಳನ್ನು ಶರಿಯತ್ ಎಂಬ ಹೆಸರಿನಲ್ಲಿ ಜಾರಿಗೊಳಿಸಿದರು.
ನಮ್ಮ ಸಂವಿಧಾನ ಸರ್ವರಿಗೂ ಸಮಾನತೆ ನೀಡಿದೆ. ವಿವಿಧ ಧಾರ್ಮಿಕ ನಿಯಮಗಳಿಂದಾಗಿ ಈ ಸಮಾನತೆ ಮುಸ್ಲಿಂ ಮಹಿಳೆಯರಿಗೆ ದೊರೆಯುತ್ತಿಲ್ಲ. ವಿವಾಹ, ವಿಚ್ಛೇದನ ಇವು ಯಾವುದು ಧಾರ್ಮಿಕ ನಿಯಮಗಳಲ್ಲ. ಇವೆಲ್ಲವೂ ಸಾಮಾಜಿಕ ನಿಯಮಗಳು ಇಂತಹ ಸಾಮಾಜಿಕ ನಿಯಮಗಳು ಮಹಿಳೆಯರಿಗೆ ಬದುಕಲು ಸಾಧ್ಯವಾಗದ ರೀತಿಯಲ್ಲಿ ಅವರಿಗೆ ಉಸಿರುಗಟ್ಟುವಂತಾದರೆ ಅವುಗಳನ್ನು ಕಾಲಕ್ಕನುಸಾರವಾಗಿ ಬದಲಾಯಿಸಬಹುದು. ನೀವು ಯಾವ ದೇಶದಲ್ಲಿ ಬದುಕುತಿದ್ದೀರೋ ಆ ದೇಶದ ಸಾಮಾಜಿಕ ನಿಯಮವನ್ನು ಅನುಸರಿಸಬಹುದು ಎಂಬುದು ಪ್ರವಾದಿಗಳ ಬೋಧನೆಯಾ.
ಇಂದು ನಮ್ಮ ಸುತ್ತಮುತ್ತಲಿನ ಸುಮಾರು ಹತ್ತಿಪ್ಪತ್ತು ದೇಶಗಳಲ್ಲಿ ತ್ರಿವಳಿ ತಲಾಖ್ ಪದ್ದತಿಯನ್ನು ರದ್ದುಪಡಿಸಲಾಗಿದೆ. ಅಲ್ಲಿ ಯಾರೂ ನಮ್ಮ ಧರ್ಮದಲ್ಲಿ ಹಸ್ತಕ್ಷೇಪವೆಂದು ಕಿರುಚಾಡಲಿಲ್ಲವಲ್ಲಾ? ಇತರ ಮುಸ್ಲಿಂ ರಾಷ್ಟ್ರಗಳು ಇಂತಹ ಅನ್ಯಾಯದ ನಿಯಮವನ್ನು ತಿದ್ದುಪಡಿ ಮಾಡಿದರೆ ಇಂಡಿಯಾ ಕೂಡಾ ಅದನ್ನು ಮಾಡಲು ಯಾರ ಅನುಮತಿಯನ್ನು ಪಡೆಯಬೇಕಾಗಿಲ್ಲ.
ನಾವೆಲ್ಲರೂ ನಮ್ಮ ಸಂವಿಧಾನಕ್ಕನುಸಾರವಾಗಿ ಬದುಕಬೇಕು. ನಮಗೆ ನಮ್ಮ ಧರ್ಮವೆನ್ನುವುದಾದರೆ ಮುಸ್ಲಿಮೇತರರೂ ಮನುಧರ್ಮಶಾಸ್ತ್ರ ನಮ್ಮ ಧರ್ಮವೆನ್ನುತ್ತಾರೆ. ಪೇಜಾವರ ಗುರುಗಳು ಹಾಗೂ ವಾರಣಾಸಿಯ ಧರ್ಮಗುರುಗಳೂ ನಮಗೆ ಸಂವಿಧಾನದಲ್ಲಿ ವಿಶ್ವಾಸವಿಲ್ಲ. ನಾವು ಮನುವಾದವನನುಸರಿಸುತ್ತೇವೆ ಎಂದು ಹೇಳತೊಡಗಿದ್ದಾರೆ. ನಮ್ಮ ದೇಶದಲ್ಲಿ ಅತ್ಯುತ್ತಮ ಸಂವಿಧಾನವಿದೆ. ನಾವೆಲ್ಲರೂ ಸೌಹಾರ್ದದಿಂದ ಈ ಸಂವಿಧಾನಕ್ಕನುಸಾರವಾಗಿ ವರ್ತಿಸತೊಡಗಿದರೆ ದೇಶದಲ್ಲಿ ಶಾಂತಿ ನೆಲೆಯೂರಬಹುದು. ಮುಸ್ಲಿಮರು ಎಷ್ಟು ಮಸೀದಿ ಕಟ್ಟಿಸಿಕೊಳ್ಳಲೂ ಅಭ್ಯಂತರವಿಲ್ಲ. ಒಂದೇ ಬೀದಿಯಲ್ಲಿ ಮೂರೋ ನಾಲ್ಕೋ ಮಸೀದಿಗಳಿರುವುದೂ ಇದೆ. ನಮ್ಮ ಧಾರ್ಮಿಕ ನಿಯಮಗಳನ್ನು ಯಾರೂ ತಡೆಯಲಾರರು. ನಮಗೆ ಎಲ್ಲರನ್ನು ಅರ್ಥ ಮಾಡಿಕೊಳ್ಳುವಂತಹ ಹೃದಯ ವಾತ್ಸಲ್ಯತೆ ಇರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...