Homeಅಂಕಣಗಳುಯಾವ ಧರ್ಮವೂ ಸಂಕಟವನ್ನು ರೂಪಿಸುವುದಿಲ್ಲ

ಯಾವ ಧರ್ಮವೂ ಸಂಕಟವನ್ನು ರೂಪಿಸುವುದಿಲ್ಲ

- Advertisement -
- Advertisement -

ಸಾರ ಅಬೂಬಕ್ಕರ್ |

ಇದೇ ಡಿಸೆಂಬರ್ ತಿಂಗಳ ದಿನಾಂಕ 10ರಂದು ಮಂಗಳೂರಿನ ನೆಹರು ಮೈದಾನದಲ್ಲಿ ಮುಸ್ಲಿಮರ ‘ಶರಿಯತ್ ರಕ್ಷಣ್’ ಎಂಬ ವಿಷಯದ ಕುರಿತು ಸಾರ್ವಜನಿಕ ಸಭೆ ಕರೆಯಲಾಗಿದ್ದು ರಾಜ್ಯಾದ್ಯಂತದಿಂದ ಮುಸ್ಲಿಂ ಪುರುಷರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದನ್ನು ಅನುಸರಿಸಿ ರಾಜ್ಯದ ಹಲವು ಜಿಲ್ಲೆಗಳಿಂದ ಮುಸ್ಲಿಂ ಪುರುಷರು ಆಗಮಿಸಿ ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ಕೇರಳದ ಹಲವಾರು ಧರ್ಮ ಗುರುಗಳು ಬಂದು ಈ ಜನರಿಗೆ ಮಾರ್ಗದರ್ಶನ ನೀಡಿದರು.
1985ರ ಸಂದರ್ಭದಲ್ಲಿ ಶಾಬಾನು ಎಂಬ ಮಹಿಳೆ, ಐದು ಮಕ್ಕಳ ತಾಯಿಯು ವಕೀಲನಾಗಿದ್ದ ಆಕೆಯ ಗಂಡ ತ್ರಿವಳಿ ತಲಾಖ್ ನೀಡಿ ಹೊರ ಹಾಕಿದಾಗ ಆಕೆ ಜೀವನಾಂಶಕ್ಕಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದಳು. ನ್ಯಾಯಾಲಯ ಆಕೆ ಮತ್ತು ಮಕ್ಕಳಿಗೆ ತಿಂಗಳಿಗೆ 185ರೂ ಜೀವನಾಂಶ ನೀಡಬೇಕೆಂದು ತೀರ್ಪು ನೀಡಿದಾಗ ಆಗ ಆಕೆಯ ಗಂಡನು ದೇಶಾದ್ಯಂತ ಎಲ್ಲ ಮುಸ್ಲಿಮರನ್ನು ಈ ತೀರ್ಪಿನ ವಿರುದ್ಧ ಎತ್ತಿ ಕಟ್ಟಿ, ತಲಾಖ್ ನೀಡಿದ ಬಳಿಕ ಹೆಂಡತಿಗೆ ಜೀವನಾಂಶ ನೀಡುವುದು ಧರ್ಮ ವಿರುದ್ಧವೆಂದು ಹೋರಾಟವನ್ನಾರಂಭಿಸಿದರು. ಆಗ ಪ್ರಧಾನ ಮಂತ್ರಿಯಾಗಿದ್ದ ರಾಜೀವ್ ಗಾಂಧಿಯವರ ದಾರಿ ತಪ್ಪಿಸಿ ‘ತಲಾಖ್ ಪೀಡಿತ ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣಾ ಮಸೂದೆ’ ಎಂಬ ಹೊಸ ನಿಯಮವನ್ನು ಜಾರಿಗೊಳಿಸಿದರು. ಈ ನಿಯಮದಂತೆ ತಲಾಖ್ ಪೀಡಿತ ಮಹಿಳೆಯರನ್ನು ಅವಳ ಸಂಬಂಧಿಕರು ನೋಡಿಕೊಳ್ಳಬೇಕು ಯಾರೂ ಇಲ್ಲವಾದರೆ ವಕ್ಸ್ ಮಂಡಳಿಯನ್ನು ಆಕೆ ಕೇಳಿಕೊಳ್ಳಬೇಕು. ಈ ನಿಯಮ ತೀರಾ ಹಾಸ್ಯಾಸ್ಪದ ಎಂಬಂತಾಯಿತು. ಹಕ್ಕೇ ಇಲ್ಲದ ಮುಸ್ಲಿಂ ಮಹಿಳೆಯರ ಯಾವ ಹಕ್ಕುಗಳನ್ನು ಈ ನಿಯಮ ರಕ್ಷಿಸುತ್ತದೆ? ವಕ್ಪ್ ಮಂಡಳಿಯ ಅನ್ಯ ಪುರುಷರೊಡನೆ ಆಕೆ ತನಗೆ ಜೀವನಾಂಶ ಕೊಡಿ ಎಂದು ಕೇಳತೊಡಗಿದರೆ ಪರಿಣಾಮವೇನಾಗಬಹುದು ಎಂಬುದನ್ನು ನಾನು ವಿವರಿಸಬೇಕಾಗಿಲ್ಲ. ಇಷ್ಟಕ್ಕೂ ಖುರಾನಿನ 2ನೇ ಸೂರದ 241ನೇ ವಾಕ್ಯ ಸ್ಪಷ್ಟವಾಗಿ ತಲಾಖ್ ಪೀಡಿತ ಮಹಿಳೆಯ ಮುಂದಿನ ಬದುಕಿಗಾಗಿ ಆಕೆಗೆ ಜೀವನಾಂಶ ನೀಡಬೇಕೆಂದು ಬರೆದಿದೆ. ಮುಸ್ಲಿಂ ಪುರುಷರು ಈ ಖುರ್‍ಆನಿನ ಈ ವಾಕ್ಯವನ್ನೇ ಜನರ ಕಣ್ಣಿನಿಂದ ಮಶಿಮಾ ಡಿ, ತಲಾಖ್ ಪೀಡಿತೆಗೆ ಜೀವನಾಂಶ ಧರ್ಮ ವಿರುದ್ಧ. ತಮ್ಮ ಧರ್ಮದಲ್ಲಿ ಸರಕಾರದ ಹಸ್ತಕ್ಷೇಪ ಎಂದು ಘೋಷಣೆ ಕೂಗಿದರು. ತಲಾಖ್ ಪೀಡಿತ ಮುಸ್ಲಿಂ ಮಹಿಳೆಯರು ಬದುಕಿನ ಹಾದಿಯನ್ನು ಮುಂಬೈಯ ಕೆಂಪು ದೀಪದ ಅಡಿಯಲ್ಲಿ ಕಂಡುಕೊಂಡರು. ಧರ್ಮ ರಕ್ಷಕರೆಂಬ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಎಂಬ ಸಂಸ್ಥೆ ಧರ್ಮ ರಕ್ಷಣೆ ಆಯಿತೆಂದು ಸಂಭ್ರಮಾಚರಿಸಿದರು. ತಲಾಖ್ ಪೀಡಿತ ಮಹಿಳೆಯರ ಗತಿ ಏನಾಯಿತೆಂದು ಈ ಪುರುಷರು ಯೋಚಿಸುವ ಗೋಜಿಗೆ ಇಂದಿನವರೆಗೂ ಹೋಗಿಯೇ ಇಲ್ಲ. ಈ ಹೊಸ ನಿಯಮದ ವಿರುದ್ಧ ಹೋರಾಡಿದ ವಿದ್ಯಾವಂತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಈ ಜನರು ಜಾತಿ ಭ್ರಷ್ಟತೆಯ ಆರೋಪ ಹೊರಸಿದರು.
ಈಗಲೂ ತ್ರಿವಳಿ, ಬಾಯಿಮಾತಿನ ತಲಾಖನ್ನು ಕೇಂದ್ರ ಸರಕಾರ ನಿಷೇಧಿಸಿದ ಕಾರಣ ನೀಡಿ ಈ ಜನರು ಶರಿಯತ್ ರಕ್ಷಣೆಯ ನಾಟಕವಾಡುತ್ತಿದ್ದಾರೆ. ಕೇಂದ್ರ ಸರಕಾರ ತ್ರಿವಳಿ ತಲಾಖ್ ರದ್ಧತಿ ನಿಯಮದಿಂದ ಹಿಂದೆ ಸರಿಯಬಾರದೆಂದು ನನ್ನ ಕಳಕಳಿಯ ಮನವಿ.
ನಮ್ಮ ಸಂವಿಧಾನವು ಎಲ್ಲರಿಗೂ ತಮ್ಮ ಧಾರ್ಮಿಕ ನಿಯಮಗಳನ್ನು ಪಾಲಿಸುವ ಅಧಿಕಾರವನ್ನು ನೀಡಿದೆ. ಆದರೆ ಯಾವ ಧರ್ಮ ಕೂಡಾ ಮನುಷ್ಯರನ್ನು ಬದುಕಿನಲ್ಲಿ ಸಂಕಟ ಪಡುವಂತಹ ನಿಯಮಗಳನ್ನು ರೂಪಿಸುವುದಿಲ್ಲ. 1500 ವರ್ಷಗಳ ಹಿಂದೆ ಪ್ರವಾದಿಗಳು ಹೆಂಡತಿ ಬೇಡವಾದರೆ ಬೀದಿಗೆಸೆಯಿರಿ ಎಂದು ಹೇಳಿಯೂ ಇರಲಿಲ್ಲ. ಅವರು ಪುರುಷರಿಂದ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ದಬ್ಬಾಳಿಕೆಯನ್ನು ನೋಡಿಯೇ ಇಸ್ಲಾಂ(ಶಾಂತಿ) ಎಂಬ ಧರ್ಮ ಸ್ಥಾಪನೆ ಮಾಡಿದರು.
ಧರ್ಮದ ನಿಯಮಗಳು 1500 ವರ್ಷಗಳ ಹಿಂದೆ ನಡೆಯುತ್ತಿದ್ದಂತೆ ಈಗಲೂ ಇರಬೇಕೆನ್ನುವುದೇ ಮೂರ್ಖತನವಾಗುತ್ತದೆ. ಶರಿಯತ್ ರಕ್ಷಣೆಗೆ ಹೊರಟವರಿಗೆ ಶರಿಯತ್ ಎಂಬ ಕರ್ಮ ಶಾಸ್ತ್ರ ಯಾವಾಗ ಜಾರಿಯಾಯಿತೆಂದು ತಿಳಿದಿದೆಯೇ? ಪ್ರವಾದಿಗಳ ಮರಣಾನಂತರ 150 ವರ್ಷಗಳ ಬಳಿಕವಷ್ಟೆ ಧಾರ್ಮಿಕ ಗುರುಗಳು ಶರಿಯತ್‍ನ್ನು ಜಾರಿಗೊಳಿಸಿದರು. ಇಸ್ಲಾಂ ಧಾರ್ಮಿಕ ನಿಯಮಗಳು ಮಹಿಳೆಯರ ಮೇಲೆ ಅಧಿಕಾರ ಚಲಾಯಿಸಲು ಪುರುಷರಿಗೆ ಸಾಧ್ಯವಾಗುವಂತಹ ನಿಯಮಗಳನ್ನು ಶರಿಯತ್ ಎಂಬ ಹೆಸರಿನಲ್ಲಿ ಜಾರಿಗೊಳಿಸಿದರು.
ನಮ್ಮ ಸಂವಿಧಾನ ಸರ್ವರಿಗೂ ಸಮಾನತೆ ನೀಡಿದೆ. ವಿವಿಧ ಧಾರ್ಮಿಕ ನಿಯಮಗಳಿಂದಾಗಿ ಈ ಸಮಾನತೆ ಮುಸ್ಲಿಂ ಮಹಿಳೆಯರಿಗೆ ದೊರೆಯುತ್ತಿಲ್ಲ. ವಿವಾಹ, ವಿಚ್ಛೇದನ ಇವು ಯಾವುದು ಧಾರ್ಮಿಕ ನಿಯಮಗಳಲ್ಲ. ಇವೆಲ್ಲವೂ ಸಾಮಾಜಿಕ ನಿಯಮಗಳು ಇಂತಹ ಸಾಮಾಜಿಕ ನಿಯಮಗಳು ಮಹಿಳೆಯರಿಗೆ ಬದುಕಲು ಸಾಧ್ಯವಾಗದ ರೀತಿಯಲ್ಲಿ ಅವರಿಗೆ ಉಸಿರುಗಟ್ಟುವಂತಾದರೆ ಅವುಗಳನ್ನು ಕಾಲಕ್ಕನುಸಾರವಾಗಿ ಬದಲಾಯಿಸಬಹುದು. ನೀವು ಯಾವ ದೇಶದಲ್ಲಿ ಬದುಕುತಿದ್ದೀರೋ ಆ ದೇಶದ ಸಾಮಾಜಿಕ ನಿಯಮವನ್ನು ಅನುಸರಿಸಬಹುದು ಎಂಬುದು ಪ್ರವಾದಿಗಳ ಬೋಧನೆಯಾ.
ಇಂದು ನಮ್ಮ ಸುತ್ತಮುತ್ತಲಿನ ಸುಮಾರು ಹತ್ತಿಪ್ಪತ್ತು ದೇಶಗಳಲ್ಲಿ ತ್ರಿವಳಿ ತಲಾಖ್ ಪದ್ದತಿಯನ್ನು ರದ್ದುಪಡಿಸಲಾಗಿದೆ. ಅಲ್ಲಿ ಯಾರೂ ನಮ್ಮ ಧರ್ಮದಲ್ಲಿ ಹಸ್ತಕ್ಷೇಪವೆಂದು ಕಿರುಚಾಡಲಿಲ್ಲವಲ್ಲಾ? ಇತರ ಮುಸ್ಲಿಂ ರಾಷ್ಟ್ರಗಳು ಇಂತಹ ಅನ್ಯಾಯದ ನಿಯಮವನ್ನು ತಿದ್ದುಪಡಿ ಮಾಡಿದರೆ ಇಂಡಿಯಾ ಕೂಡಾ ಅದನ್ನು ಮಾಡಲು ಯಾರ ಅನುಮತಿಯನ್ನು ಪಡೆಯಬೇಕಾಗಿಲ್ಲ.
ನಾವೆಲ್ಲರೂ ನಮ್ಮ ಸಂವಿಧಾನಕ್ಕನುಸಾರವಾಗಿ ಬದುಕಬೇಕು. ನಮಗೆ ನಮ್ಮ ಧರ್ಮವೆನ್ನುವುದಾದರೆ ಮುಸ್ಲಿಮೇತರರೂ ಮನುಧರ್ಮಶಾಸ್ತ್ರ ನಮ್ಮ ಧರ್ಮವೆನ್ನುತ್ತಾರೆ. ಪೇಜಾವರ ಗುರುಗಳು ಹಾಗೂ ವಾರಣಾಸಿಯ ಧರ್ಮಗುರುಗಳೂ ನಮಗೆ ಸಂವಿಧಾನದಲ್ಲಿ ವಿಶ್ವಾಸವಿಲ್ಲ. ನಾವು ಮನುವಾದವನನುಸರಿಸುತ್ತೇವೆ ಎಂದು ಹೇಳತೊಡಗಿದ್ದಾರೆ. ನಮ್ಮ ದೇಶದಲ್ಲಿ ಅತ್ಯುತ್ತಮ ಸಂವಿಧಾನವಿದೆ. ನಾವೆಲ್ಲರೂ ಸೌಹಾರ್ದದಿಂದ ಈ ಸಂವಿಧಾನಕ್ಕನುಸಾರವಾಗಿ ವರ್ತಿಸತೊಡಗಿದರೆ ದೇಶದಲ್ಲಿ ಶಾಂತಿ ನೆಲೆಯೂರಬಹುದು. ಮುಸ್ಲಿಮರು ಎಷ್ಟು ಮಸೀದಿ ಕಟ್ಟಿಸಿಕೊಳ್ಳಲೂ ಅಭ್ಯಂತರವಿಲ್ಲ. ಒಂದೇ ಬೀದಿಯಲ್ಲಿ ಮೂರೋ ನಾಲ್ಕೋ ಮಸೀದಿಗಳಿರುವುದೂ ಇದೆ. ನಮ್ಮ ಧಾರ್ಮಿಕ ನಿಯಮಗಳನ್ನು ಯಾರೂ ತಡೆಯಲಾರರು. ನಮಗೆ ಎಲ್ಲರನ್ನು ಅರ್ಥ ಮಾಡಿಕೊಳ್ಳುವಂತಹ ಹೃದಯ ವಾತ್ಸಲ್ಯತೆ ಇರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...