Homeಅಂಕಣಗಳುಯಾವ ಧರ್ಮವೂ ಸಂಕಟವನ್ನು ರೂಪಿಸುವುದಿಲ್ಲ

ಯಾವ ಧರ್ಮವೂ ಸಂಕಟವನ್ನು ರೂಪಿಸುವುದಿಲ್ಲ

- Advertisement -
- Advertisement -

ಸಾರ ಅಬೂಬಕ್ಕರ್ |

ಇದೇ ಡಿಸೆಂಬರ್ ತಿಂಗಳ ದಿನಾಂಕ 10ರಂದು ಮಂಗಳೂರಿನ ನೆಹರು ಮೈದಾನದಲ್ಲಿ ಮುಸ್ಲಿಮರ ‘ಶರಿಯತ್ ರಕ್ಷಣ್’ ಎಂಬ ವಿಷಯದ ಕುರಿತು ಸಾರ್ವಜನಿಕ ಸಭೆ ಕರೆಯಲಾಗಿದ್ದು ರಾಜ್ಯಾದ್ಯಂತದಿಂದ ಮುಸ್ಲಿಂ ಪುರುಷರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದನ್ನು ಅನುಸರಿಸಿ ರಾಜ್ಯದ ಹಲವು ಜಿಲ್ಲೆಗಳಿಂದ ಮುಸ್ಲಿಂ ಪುರುಷರು ಆಗಮಿಸಿ ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ಕೇರಳದ ಹಲವಾರು ಧರ್ಮ ಗುರುಗಳು ಬಂದು ಈ ಜನರಿಗೆ ಮಾರ್ಗದರ್ಶನ ನೀಡಿದರು.
1985ರ ಸಂದರ್ಭದಲ್ಲಿ ಶಾಬಾನು ಎಂಬ ಮಹಿಳೆ, ಐದು ಮಕ್ಕಳ ತಾಯಿಯು ವಕೀಲನಾಗಿದ್ದ ಆಕೆಯ ಗಂಡ ತ್ರಿವಳಿ ತಲಾಖ್ ನೀಡಿ ಹೊರ ಹಾಕಿದಾಗ ಆಕೆ ಜೀವನಾಂಶಕ್ಕಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದಳು. ನ್ಯಾಯಾಲಯ ಆಕೆ ಮತ್ತು ಮಕ್ಕಳಿಗೆ ತಿಂಗಳಿಗೆ 185ರೂ ಜೀವನಾಂಶ ನೀಡಬೇಕೆಂದು ತೀರ್ಪು ನೀಡಿದಾಗ ಆಗ ಆಕೆಯ ಗಂಡನು ದೇಶಾದ್ಯಂತ ಎಲ್ಲ ಮುಸ್ಲಿಮರನ್ನು ಈ ತೀರ್ಪಿನ ವಿರುದ್ಧ ಎತ್ತಿ ಕಟ್ಟಿ, ತಲಾಖ್ ನೀಡಿದ ಬಳಿಕ ಹೆಂಡತಿಗೆ ಜೀವನಾಂಶ ನೀಡುವುದು ಧರ್ಮ ವಿರುದ್ಧವೆಂದು ಹೋರಾಟವನ್ನಾರಂಭಿಸಿದರು. ಆಗ ಪ್ರಧಾನ ಮಂತ್ರಿಯಾಗಿದ್ದ ರಾಜೀವ್ ಗಾಂಧಿಯವರ ದಾರಿ ತಪ್ಪಿಸಿ ‘ತಲಾಖ್ ಪೀಡಿತ ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣಾ ಮಸೂದೆ’ ಎಂಬ ಹೊಸ ನಿಯಮವನ್ನು ಜಾರಿಗೊಳಿಸಿದರು. ಈ ನಿಯಮದಂತೆ ತಲಾಖ್ ಪೀಡಿತ ಮಹಿಳೆಯರನ್ನು ಅವಳ ಸಂಬಂಧಿಕರು ನೋಡಿಕೊಳ್ಳಬೇಕು ಯಾರೂ ಇಲ್ಲವಾದರೆ ವಕ್ಸ್ ಮಂಡಳಿಯನ್ನು ಆಕೆ ಕೇಳಿಕೊಳ್ಳಬೇಕು. ಈ ನಿಯಮ ತೀರಾ ಹಾಸ್ಯಾಸ್ಪದ ಎಂಬಂತಾಯಿತು. ಹಕ್ಕೇ ಇಲ್ಲದ ಮುಸ್ಲಿಂ ಮಹಿಳೆಯರ ಯಾವ ಹಕ್ಕುಗಳನ್ನು ಈ ನಿಯಮ ರಕ್ಷಿಸುತ್ತದೆ? ವಕ್ಪ್ ಮಂಡಳಿಯ ಅನ್ಯ ಪುರುಷರೊಡನೆ ಆಕೆ ತನಗೆ ಜೀವನಾಂಶ ಕೊಡಿ ಎಂದು ಕೇಳತೊಡಗಿದರೆ ಪರಿಣಾಮವೇನಾಗಬಹುದು ಎಂಬುದನ್ನು ನಾನು ವಿವರಿಸಬೇಕಾಗಿಲ್ಲ. ಇಷ್ಟಕ್ಕೂ ಖುರಾನಿನ 2ನೇ ಸೂರದ 241ನೇ ವಾಕ್ಯ ಸ್ಪಷ್ಟವಾಗಿ ತಲಾಖ್ ಪೀಡಿತ ಮಹಿಳೆಯ ಮುಂದಿನ ಬದುಕಿಗಾಗಿ ಆಕೆಗೆ ಜೀವನಾಂಶ ನೀಡಬೇಕೆಂದು ಬರೆದಿದೆ. ಮುಸ್ಲಿಂ ಪುರುಷರು ಈ ಖುರ್‍ಆನಿನ ಈ ವಾಕ್ಯವನ್ನೇ ಜನರ ಕಣ್ಣಿನಿಂದ ಮಶಿಮಾ ಡಿ, ತಲಾಖ್ ಪೀಡಿತೆಗೆ ಜೀವನಾಂಶ ಧರ್ಮ ವಿರುದ್ಧ. ತಮ್ಮ ಧರ್ಮದಲ್ಲಿ ಸರಕಾರದ ಹಸ್ತಕ್ಷೇಪ ಎಂದು ಘೋಷಣೆ ಕೂಗಿದರು. ತಲಾಖ್ ಪೀಡಿತ ಮುಸ್ಲಿಂ ಮಹಿಳೆಯರು ಬದುಕಿನ ಹಾದಿಯನ್ನು ಮುಂಬೈಯ ಕೆಂಪು ದೀಪದ ಅಡಿಯಲ್ಲಿ ಕಂಡುಕೊಂಡರು. ಧರ್ಮ ರಕ್ಷಕರೆಂಬ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಎಂಬ ಸಂಸ್ಥೆ ಧರ್ಮ ರಕ್ಷಣೆ ಆಯಿತೆಂದು ಸಂಭ್ರಮಾಚರಿಸಿದರು. ತಲಾಖ್ ಪೀಡಿತ ಮಹಿಳೆಯರ ಗತಿ ಏನಾಯಿತೆಂದು ಈ ಪುರುಷರು ಯೋಚಿಸುವ ಗೋಜಿಗೆ ಇಂದಿನವರೆಗೂ ಹೋಗಿಯೇ ಇಲ್ಲ. ಈ ಹೊಸ ನಿಯಮದ ವಿರುದ್ಧ ಹೋರಾಡಿದ ವಿದ್ಯಾವಂತ ಮುಸ್ಲಿಂ ಮಹಿಳೆಯರ ಮೇಲೆ ಕೂಡಾ ಈ ಜನರು ಜಾತಿ ಭ್ರಷ್ಟತೆಯ ಆರೋಪ ಹೊರಸಿದರು.
ಈಗಲೂ ತ್ರಿವಳಿ, ಬಾಯಿಮಾತಿನ ತಲಾಖನ್ನು ಕೇಂದ್ರ ಸರಕಾರ ನಿಷೇಧಿಸಿದ ಕಾರಣ ನೀಡಿ ಈ ಜನರು ಶರಿಯತ್ ರಕ್ಷಣೆಯ ನಾಟಕವಾಡುತ್ತಿದ್ದಾರೆ. ಕೇಂದ್ರ ಸರಕಾರ ತ್ರಿವಳಿ ತಲಾಖ್ ರದ್ಧತಿ ನಿಯಮದಿಂದ ಹಿಂದೆ ಸರಿಯಬಾರದೆಂದು ನನ್ನ ಕಳಕಳಿಯ ಮನವಿ.
ನಮ್ಮ ಸಂವಿಧಾನವು ಎಲ್ಲರಿಗೂ ತಮ್ಮ ಧಾರ್ಮಿಕ ನಿಯಮಗಳನ್ನು ಪಾಲಿಸುವ ಅಧಿಕಾರವನ್ನು ನೀಡಿದೆ. ಆದರೆ ಯಾವ ಧರ್ಮ ಕೂಡಾ ಮನುಷ್ಯರನ್ನು ಬದುಕಿನಲ್ಲಿ ಸಂಕಟ ಪಡುವಂತಹ ನಿಯಮಗಳನ್ನು ರೂಪಿಸುವುದಿಲ್ಲ. 1500 ವರ್ಷಗಳ ಹಿಂದೆ ಪ್ರವಾದಿಗಳು ಹೆಂಡತಿ ಬೇಡವಾದರೆ ಬೀದಿಗೆಸೆಯಿರಿ ಎಂದು ಹೇಳಿಯೂ ಇರಲಿಲ್ಲ. ಅವರು ಪುರುಷರಿಂದ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ದಬ್ಬಾಳಿಕೆಯನ್ನು ನೋಡಿಯೇ ಇಸ್ಲಾಂ(ಶಾಂತಿ) ಎಂಬ ಧರ್ಮ ಸ್ಥಾಪನೆ ಮಾಡಿದರು.
ಧರ್ಮದ ನಿಯಮಗಳು 1500 ವರ್ಷಗಳ ಹಿಂದೆ ನಡೆಯುತ್ತಿದ್ದಂತೆ ಈಗಲೂ ಇರಬೇಕೆನ್ನುವುದೇ ಮೂರ್ಖತನವಾಗುತ್ತದೆ. ಶರಿಯತ್ ರಕ್ಷಣೆಗೆ ಹೊರಟವರಿಗೆ ಶರಿಯತ್ ಎಂಬ ಕರ್ಮ ಶಾಸ್ತ್ರ ಯಾವಾಗ ಜಾರಿಯಾಯಿತೆಂದು ತಿಳಿದಿದೆಯೇ? ಪ್ರವಾದಿಗಳ ಮರಣಾನಂತರ 150 ವರ್ಷಗಳ ಬಳಿಕವಷ್ಟೆ ಧಾರ್ಮಿಕ ಗುರುಗಳು ಶರಿಯತ್‍ನ್ನು ಜಾರಿಗೊಳಿಸಿದರು. ಇಸ್ಲಾಂ ಧಾರ್ಮಿಕ ನಿಯಮಗಳು ಮಹಿಳೆಯರ ಮೇಲೆ ಅಧಿಕಾರ ಚಲಾಯಿಸಲು ಪುರುಷರಿಗೆ ಸಾಧ್ಯವಾಗುವಂತಹ ನಿಯಮಗಳನ್ನು ಶರಿಯತ್ ಎಂಬ ಹೆಸರಿನಲ್ಲಿ ಜಾರಿಗೊಳಿಸಿದರು.
ನಮ್ಮ ಸಂವಿಧಾನ ಸರ್ವರಿಗೂ ಸಮಾನತೆ ನೀಡಿದೆ. ವಿವಿಧ ಧಾರ್ಮಿಕ ನಿಯಮಗಳಿಂದಾಗಿ ಈ ಸಮಾನತೆ ಮುಸ್ಲಿಂ ಮಹಿಳೆಯರಿಗೆ ದೊರೆಯುತ್ತಿಲ್ಲ. ವಿವಾಹ, ವಿಚ್ಛೇದನ ಇವು ಯಾವುದು ಧಾರ್ಮಿಕ ನಿಯಮಗಳಲ್ಲ. ಇವೆಲ್ಲವೂ ಸಾಮಾಜಿಕ ನಿಯಮಗಳು ಇಂತಹ ಸಾಮಾಜಿಕ ನಿಯಮಗಳು ಮಹಿಳೆಯರಿಗೆ ಬದುಕಲು ಸಾಧ್ಯವಾಗದ ರೀತಿಯಲ್ಲಿ ಅವರಿಗೆ ಉಸಿರುಗಟ್ಟುವಂತಾದರೆ ಅವುಗಳನ್ನು ಕಾಲಕ್ಕನುಸಾರವಾಗಿ ಬದಲಾಯಿಸಬಹುದು. ನೀವು ಯಾವ ದೇಶದಲ್ಲಿ ಬದುಕುತಿದ್ದೀರೋ ಆ ದೇಶದ ಸಾಮಾಜಿಕ ನಿಯಮವನ್ನು ಅನುಸರಿಸಬಹುದು ಎಂಬುದು ಪ್ರವಾದಿಗಳ ಬೋಧನೆಯಾ.
ಇಂದು ನಮ್ಮ ಸುತ್ತಮುತ್ತಲಿನ ಸುಮಾರು ಹತ್ತಿಪ್ಪತ್ತು ದೇಶಗಳಲ್ಲಿ ತ್ರಿವಳಿ ತಲಾಖ್ ಪದ್ದತಿಯನ್ನು ರದ್ದುಪಡಿಸಲಾಗಿದೆ. ಅಲ್ಲಿ ಯಾರೂ ನಮ್ಮ ಧರ್ಮದಲ್ಲಿ ಹಸ್ತಕ್ಷೇಪವೆಂದು ಕಿರುಚಾಡಲಿಲ್ಲವಲ್ಲಾ? ಇತರ ಮುಸ್ಲಿಂ ರಾಷ್ಟ್ರಗಳು ಇಂತಹ ಅನ್ಯಾಯದ ನಿಯಮವನ್ನು ತಿದ್ದುಪಡಿ ಮಾಡಿದರೆ ಇಂಡಿಯಾ ಕೂಡಾ ಅದನ್ನು ಮಾಡಲು ಯಾರ ಅನುಮತಿಯನ್ನು ಪಡೆಯಬೇಕಾಗಿಲ್ಲ.
ನಾವೆಲ್ಲರೂ ನಮ್ಮ ಸಂವಿಧಾನಕ್ಕನುಸಾರವಾಗಿ ಬದುಕಬೇಕು. ನಮಗೆ ನಮ್ಮ ಧರ್ಮವೆನ್ನುವುದಾದರೆ ಮುಸ್ಲಿಮೇತರರೂ ಮನುಧರ್ಮಶಾಸ್ತ್ರ ನಮ್ಮ ಧರ್ಮವೆನ್ನುತ್ತಾರೆ. ಪೇಜಾವರ ಗುರುಗಳು ಹಾಗೂ ವಾರಣಾಸಿಯ ಧರ್ಮಗುರುಗಳೂ ನಮಗೆ ಸಂವಿಧಾನದಲ್ಲಿ ವಿಶ್ವಾಸವಿಲ್ಲ. ನಾವು ಮನುವಾದವನನುಸರಿಸುತ್ತೇವೆ ಎಂದು ಹೇಳತೊಡಗಿದ್ದಾರೆ. ನಮ್ಮ ದೇಶದಲ್ಲಿ ಅತ್ಯುತ್ತಮ ಸಂವಿಧಾನವಿದೆ. ನಾವೆಲ್ಲರೂ ಸೌಹಾರ್ದದಿಂದ ಈ ಸಂವಿಧಾನಕ್ಕನುಸಾರವಾಗಿ ವರ್ತಿಸತೊಡಗಿದರೆ ದೇಶದಲ್ಲಿ ಶಾಂತಿ ನೆಲೆಯೂರಬಹುದು. ಮುಸ್ಲಿಮರು ಎಷ್ಟು ಮಸೀದಿ ಕಟ್ಟಿಸಿಕೊಳ್ಳಲೂ ಅಭ್ಯಂತರವಿಲ್ಲ. ಒಂದೇ ಬೀದಿಯಲ್ಲಿ ಮೂರೋ ನಾಲ್ಕೋ ಮಸೀದಿಗಳಿರುವುದೂ ಇದೆ. ನಮ್ಮ ಧಾರ್ಮಿಕ ನಿಯಮಗಳನ್ನು ಯಾರೂ ತಡೆಯಲಾರರು. ನಮಗೆ ಎಲ್ಲರನ್ನು ಅರ್ಥ ಮಾಡಿಕೊಳ್ಳುವಂತಹ ಹೃದಯ ವಾತ್ಸಲ್ಯತೆ ಇರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...