Homeಮುಖಪುಟ‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ಕೋಯಮುತ್ತೂರಿನ ಖ್ಯಾತ ರೆಸ್ಟೋರೆಂಟ್ ನೀಡಿದ‌‌ ಹೇಳಿಕೆಯಿಂದ ಮುಜುಗರಕ್ಕೊಳಗಾದ ಸಂಸದ ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್‌ಗೆ ಒಳಗಾಗಿದ್ದಾರೆ

- Advertisement -
- Advertisement -

ಪಂಚರಾಜ್ಯ ಚುನಾವಣೆ ಪ್ರಾರಂಭವಾಗಿದ್ದು ಎಲ್ಲಾ ಪಕ್ಷಗಳು ತಮ್ಮ ಚುನಾವಣಾ ಭರವಸೆ ನೀಡುತ್ತಾ, ತಂತ್ರಗಳನ್ನು ಹೆಣೆಯುತ್ತಾ ಮತದಾರರನ್ನು ಸೆಳೆಯುತ್ತಿದೆ. ಆದರೆ ತಮಿಳುನಾಡಿಗೆ ತೆರಳಿದ್ದ ಬೆಂಗಳೂರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಪ್ರತಿಪಕ್ಷಗಳನ್ನು ದೂರಲು ಹೋಗಿ ತಾವೇ ಮುಜುಗರಕ್ಕೊಳಗಾಗಿದ್ದಾರೆ.

ಶುಕ್ರವಾರ ತಮಿಳುನಾಡಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಂಸದ ತೇಜಸ್ವಿ ಸೂರ್ಯ ಕೊಯಮತ್ತೂರಿನ ಖ್ಯಾತ ರೆಸ್ಟೋರೆಂಟ್‌ ‘‘ಶ್ರೀ ಅನ್ನಪೂರ್ಣ” ಕ್ಕೆ ತೆರಳಿ ಉಪಹಾರ ಸೇವಿಸಿದ್ದರು. ಇದನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಅವರು ಅದರ ಜೊತೆಗೆ ಹೇಳಿಕೆಯೊಂದನ್ನು ಬರೆದಿದ್ದರು. ಆದರೆ ಆ ನಂತರ ಅದಕ್ಕೆ ಅನ್ನಪೂರ್ಣ ರೆಸ್ಟೋರೆಂಟ್ ನೀಡಿದ ಪ್ರತಿಕ್ರಿಯೆಗೆ ಸಂಸದ ಮುಜುಗರಕ್ಕೊಳಗಾಗುವಂತಾಗಿದೆ.

ಇದನ್ನೂ ಓದಿ: ಅಸ್ಸಾಂ: ಬಿಜೆಪಿ ಮುಖಂಡನ ಮೇಲಿನ ಪ್ರಚಾರ ನಿಷೇಧ ಅರ್ಧ ತೆರವುಗೊಳಿಸಿದ ಚುನಾವಣಾ ಆಯೋಗ!

ಉಪಹಾರ ಸೇವಿಸಿದ ಬಗ್ಗೆ ಅವರು ತಮ್ಮ ಟ್ವೀಟ್‌ನಲ್ಲಿ, “ಇಂದು ರೆಸ್ಟೋರೆಂಟ್‌ನಲ್ಲಿ ಬೆಳಗಿನ ಉಪಾಹಾರದ ನಂತರ, ನಾನು ಸಹಜವಾಗಿ ಬಿಲ್ ಪಾವತಿಸಲು ಹೋದೆ. ಕ್ಯಾಷಿಯರ್ ಹಣವನ್ನು ಸ್ವೀಕರಿಸಲು ಹಿಂಜರಿದರು. ಒತ್ತಾಯದ ನಂತರ ಬಹಳ ಹಿಂಜರಿಕೆಯಿಂದಲೇ ಹಣ ಸ್ವೀಕರಿಸಲು ಒಪ್ಪಿಕೊಂಡರು. ಆಗ ನಾನು ಅವರಿಗೆ “ನಾವು ಬಿಜೆಪಿಯವರು. ನಮ್ಮದು ಎಲ್ಲರನ್ನು ಗೌರವಿಸುವ ಮತ್ತು ಎಲ್ಲರನ್ನೂ ರಕ್ಷಿಸುವ ಪಕ್ಷ. ಸಣ್ಣ ವ್ಯಾಪಾರಿಗಳಿಂದಲೂ ರೋಲ್-ಕಾಲ್ ಮಾಡಲು ಡಿಎಂಕೆಯಂತೆ ನಾವಲ್ಲ” ಎಂದು ಬರೆದಿದ್ದರು.

ಇದನ್ನೂ ಓದಿ: ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಆದರೆ ಇದಕ್ಕೆ ಶನಿವಾರ ಸಂಜೆ ಪ್ರತಿಕ್ರಿಯಿಸಿರುವ ಶ್ರೀ ಅನ್ನಪೂರ್ಣ ರೆಸ್ಟೋರೆಂಟ್, “ಆತ್ಮೀಯ ತೇಜಸ್ವಿ ಸೂರ್ಯ ನಮ್ಮ ರೆಸ್ಟೋರೆಂಟ್‌ನಲ್ಲಿ ನಿಮಗೆ ಸೇವೆ ಸಲ್ಲಿಸಿದ್ದಕ್ಕೆ ನಮಗೆ ಸಂತೋಷವಾಗಿದೆ. ಅನ್ನಪೂರ್ಣದಲ್ಲಿ ನಾವು ಎಲ್ಲರನ್ನೂ ಒಂದೇ ರೀತಿಯ ಪ್ರೀತಿ ಮತ್ತು ಕೃತಜ್ಞತೆಯಿಂದ ಸ್ವಾಗತಿಸುತ್ತೇವೆ. ವಾಸ್ತವವಾಗಿ ಪ್ರತಿಯೊಬ್ಬರೂ ತಮ್ಮ ಬಿಲ್‌ಗಳನ್ನು ಪಾವತಿಸಲು ಮುಂದೆ ಬರುತ್ತಾರೆ. ಯಾರೂ ನಮ್ಮನ್ನು ಉಚಿತವಾಗಿ ನೀಡುವಂತೆ ಒತ್ತಾಯಿಸಲಿಲ್ಲ. ಪ್ರೀತಿ ಮತ್ತು ಗೌರವದ ಸಂಕೇತವಾಗಿ ನಾವು ಕೆಲವೊಮ್ಮೆ ನಮ್ಮ ಸಮಾಜಕ್ಕಾಗಿ ಕೆಲಸ ಮಾಡುವ ಜನರಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಅಷ್ಟೇ” ಎಂದು ರೆಸ್ಟೋರೆಂಟ್ ತಮ್ಮ ಫೇಸ್‌ಬುಕ್ ‌ಪೇಜ್‌ ಮೂಲಕ ತಿಳಿಸಿದೆ.

ಇದನ್ನೂ ಓದಿ: ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ರೆಸ್ಟೋರೆಂಟ್ ತನ್ನ ಫೇಸ್‌ಬುಕ್ ಮೂಲಕ ನೀಡಿರುವ ಹೇಳಿಕೆಯ ನಂತರ ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್‌ಗೆ ಒಳಗಾಗಿದ್ದಾರೆ.

ಲಕ್ಷ್ಮಿ ರಾಮಚಂದ್ರನ್ ಅವರು, “ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು. ನಿಮ್ಮ ನಾಟಕಗಳನ್ನು ಬೆಂಗಳೂರಲ್ಲೇ ಬಿಟ್ಟು ಬನ್ನಿ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ಸರಣ್ ಆರ್‌. ಕೆ. ಅವರು, “ಈ ರೀತಿಯ ಬಿಗಿಯಾದ ಹೊಡೆತ ಪಡೆದ ನಂತರ ತೇಜಸ್ವಿ ಸೂರ್ಯ ನೋವು ಅನುಭವಿಸುತ್ತಿದ್ದಾರೆ’’ ಎಂದು ಹೇಳಿದ್ದಾರೆ.

ಮಣಿ ಅವರು, “ಕೆಲವು ಏಟು ತುಂಬಾ ಸದ್ದು ಮಾಡುವುದಿಲ್ಲ. ಆದರೆ ಅವು ವ್ಯಕ್ತಿಯ ಮೇಲೆ ಶಾಶ್ವತವಾದ ಮುದ್ರೆಯನ್ನು ಬಿಟ್ಟು ಬಿಡುತ್ತವೆ. ಇದು ಅಂತಹ ಅದ್ಭುತ ಮತ್ತು ವಿನಮ್ರ ಕಪಾಳಮೋಕ್ಷ ಆಗಿದೆ. ಏನಂತೀರಿ ತೇಜಸ್ವಿ ಸೂರ್ಯ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಕಾರಲ್ಲಿ ಇವಿಎಂ: ಅಸ್ಸಾಂ ಕಾಂಗ್ರೆಸ್‌ನಿಂದ ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...