Homeಮುಖಪುಟ‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ಕೋಯಮುತ್ತೂರಿನ ಖ್ಯಾತ ರೆಸ್ಟೋರೆಂಟ್ ನೀಡಿದ‌‌ ಹೇಳಿಕೆಯಿಂದ ಮುಜುಗರಕ್ಕೊಳಗಾದ ಸಂಸದ ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್‌ಗೆ ಒಳಗಾಗಿದ್ದಾರೆ

- Advertisement -
- Advertisement -

ಪಂಚರಾಜ್ಯ ಚುನಾವಣೆ ಪ್ರಾರಂಭವಾಗಿದ್ದು ಎಲ್ಲಾ ಪಕ್ಷಗಳು ತಮ್ಮ ಚುನಾವಣಾ ಭರವಸೆ ನೀಡುತ್ತಾ, ತಂತ್ರಗಳನ್ನು ಹೆಣೆಯುತ್ತಾ ಮತದಾರರನ್ನು ಸೆಳೆಯುತ್ತಿದೆ. ಆದರೆ ತಮಿಳುನಾಡಿಗೆ ತೆರಳಿದ್ದ ಬೆಂಗಳೂರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಪ್ರತಿಪಕ್ಷಗಳನ್ನು ದೂರಲು ಹೋಗಿ ತಾವೇ ಮುಜುಗರಕ್ಕೊಳಗಾಗಿದ್ದಾರೆ.

ಶುಕ್ರವಾರ ತಮಿಳುನಾಡಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಂಸದ ತೇಜಸ್ವಿ ಸೂರ್ಯ ಕೊಯಮತ್ತೂರಿನ ಖ್ಯಾತ ರೆಸ್ಟೋರೆಂಟ್‌ ‘‘ಶ್ರೀ ಅನ್ನಪೂರ್ಣ” ಕ್ಕೆ ತೆರಳಿ ಉಪಹಾರ ಸೇವಿಸಿದ್ದರು. ಇದನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಅವರು ಅದರ ಜೊತೆಗೆ ಹೇಳಿಕೆಯೊಂದನ್ನು ಬರೆದಿದ್ದರು. ಆದರೆ ಆ ನಂತರ ಅದಕ್ಕೆ ಅನ್ನಪೂರ್ಣ ರೆಸ್ಟೋರೆಂಟ್ ನೀಡಿದ ಪ್ರತಿಕ್ರಿಯೆಗೆ ಸಂಸದ ಮುಜುಗರಕ್ಕೊಳಗಾಗುವಂತಾಗಿದೆ.

ಇದನ್ನೂ ಓದಿ: ಅಸ್ಸಾಂ: ಬಿಜೆಪಿ ಮುಖಂಡನ ಮೇಲಿನ ಪ್ರಚಾರ ನಿಷೇಧ ಅರ್ಧ ತೆರವುಗೊಳಿಸಿದ ಚುನಾವಣಾ ಆಯೋಗ!

ಉಪಹಾರ ಸೇವಿಸಿದ ಬಗ್ಗೆ ಅವರು ತಮ್ಮ ಟ್ವೀಟ್‌ನಲ್ಲಿ, “ಇಂದು ರೆಸ್ಟೋರೆಂಟ್‌ನಲ್ಲಿ ಬೆಳಗಿನ ಉಪಾಹಾರದ ನಂತರ, ನಾನು ಸಹಜವಾಗಿ ಬಿಲ್ ಪಾವತಿಸಲು ಹೋದೆ. ಕ್ಯಾಷಿಯರ್ ಹಣವನ್ನು ಸ್ವೀಕರಿಸಲು ಹಿಂಜರಿದರು. ಒತ್ತಾಯದ ನಂತರ ಬಹಳ ಹಿಂಜರಿಕೆಯಿಂದಲೇ ಹಣ ಸ್ವೀಕರಿಸಲು ಒಪ್ಪಿಕೊಂಡರು. ಆಗ ನಾನು ಅವರಿಗೆ “ನಾವು ಬಿಜೆಪಿಯವರು. ನಮ್ಮದು ಎಲ್ಲರನ್ನು ಗೌರವಿಸುವ ಮತ್ತು ಎಲ್ಲರನ್ನೂ ರಕ್ಷಿಸುವ ಪಕ್ಷ. ಸಣ್ಣ ವ್ಯಾಪಾರಿಗಳಿಂದಲೂ ರೋಲ್-ಕಾಲ್ ಮಾಡಲು ಡಿಎಂಕೆಯಂತೆ ನಾವಲ್ಲ” ಎಂದು ಬರೆದಿದ್ದರು.

ಇದನ್ನೂ ಓದಿ: ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಆದರೆ ಇದಕ್ಕೆ ಶನಿವಾರ ಸಂಜೆ ಪ್ರತಿಕ್ರಿಯಿಸಿರುವ ಶ್ರೀ ಅನ್ನಪೂರ್ಣ ರೆಸ್ಟೋರೆಂಟ್, “ಆತ್ಮೀಯ ತೇಜಸ್ವಿ ಸೂರ್ಯ ನಮ್ಮ ರೆಸ್ಟೋರೆಂಟ್‌ನಲ್ಲಿ ನಿಮಗೆ ಸೇವೆ ಸಲ್ಲಿಸಿದ್ದಕ್ಕೆ ನಮಗೆ ಸಂತೋಷವಾಗಿದೆ. ಅನ್ನಪೂರ್ಣದಲ್ಲಿ ನಾವು ಎಲ್ಲರನ್ನೂ ಒಂದೇ ರೀತಿಯ ಪ್ರೀತಿ ಮತ್ತು ಕೃತಜ್ಞತೆಯಿಂದ ಸ್ವಾಗತಿಸುತ್ತೇವೆ. ವಾಸ್ತವವಾಗಿ ಪ್ರತಿಯೊಬ್ಬರೂ ತಮ್ಮ ಬಿಲ್‌ಗಳನ್ನು ಪಾವತಿಸಲು ಮುಂದೆ ಬರುತ್ತಾರೆ. ಯಾರೂ ನಮ್ಮನ್ನು ಉಚಿತವಾಗಿ ನೀಡುವಂತೆ ಒತ್ತಾಯಿಸಲಿಲ್ಲ. ಪ್ರೀತಿ ಮತ್ತು ಗೌರವದ ಸಂಕೇತವಾಗಿ ನಾವು ಕೆಲವೊಮ್ಮೆ ನಮ್ಮ ಸಮಾಜಕ್ಕಾಗಿ ಕೆಲಸ ಮಾಡುವ ಜನರಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಅಷ್ಟೇ” ಎಂದು ರೆಸ್ಟೋರೆಂಟ್ ತಮ್ಮ ಫೇಸ್‌ಬುಕ್ ‌ಪೇಜ್‌ ಮೂಲಕ ತಿಳಿಸಿದೆ.

ಇದನ್ನೂ ಓದಿ: ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ರೆಸ್ಟೋರೆಂಟ್ ತನ್ನ ಫೇಸ್‌ಬುಕ್ ಮೂಲಕ ನೀಡಿರುವ ಹೇಳಿಕೆಯ ನಂತರ ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್‌ಗೆ ಒಳಗಾಗಿದ್ದಾರೆ.

ಲಕ್ಷ್ಮಿ ರಾಮಚಂದ್ರನ್ ಅವರು, “ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು. ನಿಮ್ಮ ನಾಟಕಗಳನ್ನು ಬೆಂಗಳೂರಲ್ಲೇ ಬಿಟ್ಟು ಬನ್ನಿ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ಸರಣ್ ಆರ್‌. ಕೆ. ಅವರು, “ಈ ರೀತಿಯ ಬಿಗಿಯಾದ ಹೊಡೆತ ಪಡೆದ ನಂತರ ತೇಜಸ್ವಿ ಸೂರ್ಯ ನೋವು ಅನುಭವಿಸುತ್ತಿದ್ದಾರೆ’’ ಎಂದು ಹೇಳಿದ್ದಾರೆ.

ಮಣಿ ಅವರು, “ಕೆಲವು ಏಟು ತುಂಬಾ ಸದ್ದು ಮಾಡುವುದಿಲ್ಲ. ಆದರೆ ಅವು ವ್ಯಕ್ತಿಯ ಮೇಲೆ ಶಾಶ್ವತವಾದ ಮುದ್ರೆಯನ್ನು ಬಿಟ್ಟು ಬಿಡುತ್ತವೆ. ಇದು ಅಂತಹ ಅದ್ಭುತ ಮತ್ತು ವಿನಮ್ರ ಕಪಾಳಮೋಕ್ಷ ಆಗಿದೆ. ಏನಂತೀರಿ ತೇಜಸ್ವಿ ಸೂರ್ಯ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಕಾರಲ್ಲಿ ಇವಿಎಂ: ಅಸ್ಸಾಂ ಕಾಂಗ್ರೆಸ್‌ನಿಂದ ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...