Homeಮುಖಪುಟ‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ಕೋಯಮುತ್ತೂರಿನ ಖ್ಯಾತ ರೆಸ್ಟೋರೆಂಟ್ ನೀಡಿದ‌‌ ಹೇಳಿಕೆಯಿಂದ ಮುಜುಗರಕ್ಕೊಳಗಾದ ಸಂಸದ ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್‌ಗೆ ಒಳಗಾಗಿದ್ದಾರೆ

- Advertisement -
- Advertisement -

ಪಂಚರಾಜ್ಯ ಚುನಾವಣೆ ಪ್ರಾರಂಭವಾಗಿದ್ದು ಎಲ್ಲಾ ಪಕ್ಷಗಳು ತಮ್ಮ ಚುನಾವಣಾ ಭರವಸೆ ನೀಡುತ್ತಾ, ತಂತ್ರಗಳನ್ನು ಹೆಣೆಯುತ್ತಾ ಮತದಾರರನ್ನು ಸೆಳೆಯುತ್ತಿದೆ. ಆದರೆ ತಮಿಳುನಾಡಿಗೆ ತೆರಳಿದ್ದ ಬೆಂಗಳೂರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಪ್ರತಿಪಕ್ಷಗಳನ್ನು ದೂರಲು ಹೋಗಿ ತಾವೇ ಮುಜುಗರಕ್ಕೊಳಗಾಗಿದ್ದಾರೆ.

ಶುಕ್ರವಾರ ತಮಿಳುನಾಡಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಂಸದ ತೇಜಸ್ವಿ ಸೂರ್ಯ ಕೊಯಮತ್ತೂರಿನ ಖ್ಯಾತ ರೆಸ್ಟೋರೆಂಟ್‌ ‘‘ಶ್ರೀ ಅನ್ನಪೂರ್ಣ” ಕ್ಕೆ ತೆರಳಿ ಉಪಹಾರ ಸೇವಿಸಿದ್ದರು. ಇದನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಅವರು ಅದರ ಜೊತೆಗೆ ಹೇಳಿಕೆಯೊಂದನ್ನು ಬರೆದಿದ್ದರು. ಆದರೆ ಆ ನಂತರ ಅದಕ್ಕೆ ಅನ್ನಪೂರ್ಣ ರೆಸ್ಟೋರೆಂಟ್ ನೀಡಿದ ಪ್ರತಿಕ್ರಿಯೆಗೆ ಸಂಸದ ಮುಜುಗರಕ್ಕೊಳಗಾಗುವಂತಾಗಿದೆ.

ಇದನ್ನೂ ಓದಿ: ಅಸ್ಸಾಂ: ಬಿಜೆಪಿ ಮುಖಂಡನ ಮೇಲಿನ ಪ್ರಚಾರ ನಿಷೇಧ ಅರ್ಧ ತೆರವುಗೊಳಿಸಿದ ಚುನಾವಣಾ ಆಯೋಗ!

ಉಪಹಾರ ಸೇವಿಸಿದ ಬಗ್ಗೆ ಅವರು ತಮ್ಮ ಟ್ವೀಟ್‌ನಲ್ಲಿ, “ಇಂದು ರೆಸ್ಟೋರೆಂಟ್‌ನಲ್ಲಿ ಬೆಳಗಿನ ಉಪಾಹಾರದ ನಂತರ, ನಾನು ಸಹಜವಾಗಿ ಬಿಲ್ ಪಾವತಿಸಲು ಹೋದೆ. ಕ್ಯಾಷಿಯರ್ ಹಣವನ್ನು ಸ್ವೀಕರಿಸಲು ಹಿಂಜರಿದರು. ಒತ್ತಾಯದ ನಂತರ ಬಹಳ ಹಿಂಜರಿಕೆಯಿಂದಲೇ ಹಣ ಸ್ವೀಕರಿಸಲು ಒಪ್ಪಿಕೊಂಡರು. ಆಗ ನಾನು ಅವರಿಗೆ “ನಾವು ಬಿಜೆಪಿಯವರು. ನಮ್ಮದು ಎಲ್ಲರನ್ನು ಗೌರವಿಸುವ ಮತ್ತು ಎಲ್ಲರನ್ನೂ ರಕ್ಷಿಸುವ ಪಕ್ಷ. ಸಣ್ಣ ವ್ಯಾಪಾರಿಗಳಿಂದಲೂ ರೋಲ್-ಕಾಲ್ ಮಾಡಲು ಡಿಎಂಕೆಯಂತೆ ನಾವಲ್ಲ” ಎಂದು ಬರೆದಿದ್ದರು.

ಇದನ್ನೂ ಓದಿ: ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಆದರೆ ಇದಕ್ಕೆ ಶನಿವಾರ ಸಂಜೆ ಪ್ರತಿಕ್ರಿಯಿಸಿರುವ ಶ್ರೀ ಅನ್ನಪೂರ್ಣ ರೆಸ್ಟೋರೆಂಟ್, “ಆತ್ಮೀಯ ತೇಜಸ್ವಿ ಸೂರ್ಯ ನಮ್ಮ ರೆಸ್ಟೋರೆಂಟ್‌ನಲ್ಲಿ ನಿಮಗೆ ಸೇವೆ ಸಲ್ಲಿಸಿದ್ದಕ್ಕೆ ನಮಗೆ ಸಂತೋಷವಾಗಿದೆ. ಅನ್ನಪೂರ್ಣದಲ್ಲಿ ನಾವು ಎಲ್ಲರನ್ನೂ ಒಂದೇ ರೀತಿಯ ಪ್ರೀತಿ ಮತ್ತು ಕೃತಜ್ಞತೆಯಿಂದ ಸ್ವಾಗತಿಸುತ್ತೇವೆ. ವಾಸ್ತವವಾಗಿ ಪ್ರತಿಯೊಬ್ಬರೂ ತಮ್ಮ ಬಿಲ್‌ಗಳನ್ನು ಪಾವತಿಸಲು ಮುಂದೆ ಬರುತ್ತಾರೆ. ಯಾರೂ ನಮ್ಮನ್ನು ಉಚಿತವಾಗಿ ನೀಡುವಂತೆ ಒತ್ತಾಯಿಸಲಿಲ್ಲ. ಪ್ರೀತಿ ಮತ್ತು ಗೌರವದ ಸಂಕೇತವಾಗಿ ನಾವು ಕೆಲವೊಮ್ಮೆ ನಮ್ಮ ಸಮಾಜಕ್ಕಾಗಿ ಕೆಲಸ ಮಾಡುವ ಜನರಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಅಷ್ಟೇ” ಎಂದು ರೆಸ್ಟೋರೆಂಟ್ ತಮ್ಮ ಫೇಸ್‌ಬುಕ್ ‌ಪೇಜ್‌ ಮೂಲಕ ತಿಳಿಸಿದೆ.

ಇದನ್ನೂ ಓದಿ: ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ರೆಸ್ಟೋರೆಂಟ್ ತನ್ನ ಫೇಸ್‌ಬುಕ್ ಮೂಲಕ ನೀಡಿರುವ ಹೇಳಿಕೆಯ ನಂತರ ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್‌ಗೆ ಒಳಗಾಗಿದ್ದಾರೆ.

ಲಕ್ಷ್ಮಿ ರಾಮಚಂದ್ರನ್ ಅವರು, “ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು. ನಿಮ್ಮ ನಾಟಕಗಳನ್ನು ಬೆಂಗಳೂರಲ್ಲೇ ಬಿಟ್ಟು ಬನ್ನಿ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ಸರಣ್ ಆರ್‌. ಕೆ. ಅವರು, “ಈ ರೀತಿಯ ಬಿಗಿಯಾದ ಹೊಡೆತ ಪಡೆದ ನಂತರ ತೇಜಸ್ವಿ ಸೂರ್ಯ ನೋವು ಅನುಭವಿಸುತ್ತಿದ್ದಾರೆ’’ ಎಂದು ಹೇಳಿದ್ದಾರೆ.

ಮಣಿ ಅವರು, “ಕೆಲವು ಏಟು ತುಂಬಾ ಸದ್ದು ಮಾಡುವುದಿಲ್ಲ. ಆದರೆ ಅವು ವ್ಯಕ್ತಿಯ ಮೇಲೆ ಶಾಶ್ವತವಾದ ಮುದ್ರೆಯನ್ನು ಬಿಟ್ಟು ಬಿಡುತ್ತವೆ. ಇದು ಅಂತಹ ಅದ್ಭುತ ಮತ್ತು ವಿನಮ್ರ ಕಪಾಳಮೋಕ್ಷ ಆಗಿದೆ. ಏನಂತೀರಿ ತೇಜಸ್ವಿ ಸೂರ್ಯ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಕಾರಲ್ಲಿ ಇವಿಎಂ: ಅಸ್ಸಾಂ ಕಾಂಗ್ರೆಸ್‌ನಿಂದ ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...