Homeಮುಖಪುಟ‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ಕೋಯಮುತ್ತೂರಿನ ಖ್ಯಾತ ರೆಸ್ಟೋರೆಂಟ್ ನೀಡಿದ‌‌ ಹೇಳಿಕೆಯಿಂದ ಮುಜುಗರಕ್ಕೊಳಗಾದ ಸಂಸದ ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್‌ಗೆ ಒಳಗಾಗಿದ್ದಾರೆ

- Advertisement -
- Advertisement -

ಪಂಚರಾಜ್ಯ ಚುನಾವಣೆ ಪ್ರಾರಂಭವಾಗಿದ್ದು ಎಲ್ಲಾ ಪಕ್ಷಗಳು ತಮ್ಮ ಚುನಾವಣಾ ಭರವಸೆ ನೀಡುತ್ತಾ, ತಂತ್ರಗಳನ್ನು ಹೆಣೆಯುತ್ತಾ ಮತದಾರರನ್ನು ಸೆಳೆಯುತ್ತಿದೆ. ಆದರೆ ತಮಿಳುನಾಡಿಗೆ ತೆರಳಿದ್ದ ಬೆಂಗಳೂರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಪ್ರತಿಪಕ್ಷಗಳನ್ನು ದೂರಲು ಹೋಗಿ ತಾವೇ ಮುಜುಗರಕ್ಕೊಳಗಾಗಿದ್ದಾರೆ.

ಶುಕ್ರವಾರ ತಮಿಳುನಾಡಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಂಸದ ತೇಜಸ್ವಿ ಸೂರ್ಯ ಕೊಯಮತ್ತೂರಿನ ಖ್ಯಾತ ರೆಸ್ಟೋರೆಂಟ್‌ ‘‘ಶ್ರೀ ಅನ್ನಪೂರ್ಣ” ಕ್ಕೆ ತೆರಳಿ ಉಪಹಾರ ಸೇವಿಸಿದ್ದರು. ಇದನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಅವರು ಅದರ ಜೊತೆಗೆ ಹೇಳಿಕೆಯೊಂದನ್ನು ಬರೆದಿದ್ದರು. ಆದರೆ ಆ ನಂತರ ಅದಕ್ಕೆ ಅನ್ನಪೂರ್ಣ ರೆಸ್ಟೋರೆಂಟ್ ನೀಡಿದ ಪ್ರತಿಕ್ರಿಯೆಗೆ ಸಂಸದ ಮುಜುಗರಕ್ಕೊಳಗಾಗುವಂತಾಗಿದೆ.

ಇದನ್ನೂ ಓದಿ: ಅಸ್ಸಾಂ: ಬಿಜೆಪಿ ಮುಖಂಡನ ಮೇಲಿನ ಪ್ರಚಾರ ನಿಷೇಧ ಅರ್ಧ ತೆರವುಗೊಳಿಸಿದ ಚುನಾವಣಾ ಆಯೋಗ!

ಉಪಹಾರ ಸೇವಿಸಿದ ಬಗ್ಗೆ ಅವರು ತಮ್ಮ ಟ್ವೀಟ್‌ನಲ್ಲಿ, “ಇಂದು ರೆಸ್ಟೋರೆಂಟ್‌ನಲ್ಲಿ ಬೆಳಗಿನ ಉಪಾಹಾರದ ನಂತರ, ನಾನು ಸಹಜವಾಗಿ ಬಿಲ್ ಪಾವತಿಸಲು ಹೋದೆ. ಕ್ಯಾಷಿಯರ್ ಹಣವನ್ನು ಸ್ವೀಕರಿಸಲು ಹಿಂಜರಿದರು. ಒತ್ತಾಯದ ನಂತರ ಬಹಳ ಹಿಂಜರಿಕೆಯಿಂದಲೇ ಹಣ ಸ್ವೀಕರಿಸಲು ಒಪ್ಪಿಕೊಂಡರು. ಆಗ ನಾನು ಅವರಿಗೆ “ನಾವು ಬಿಜೆಪಿಯವರು. ನಮ್ಮದು ಎಲ್ಲರನ್ನು ಗೌರವಿಸುವ ಮತ್ತು ಎಲ್ಲರನ್ನೂ ರಕ್ಷಿಸುವ ಪಕ್ಷ. ಸಣ್ಣ ವ್ಯಾಪಾರಿಗಳಿಂದಲೂ ರೋಲ್-ಕಾಲ್ ಮಾಡಲು ಡಿಎಂಕೆಯಂತೆ ನಾವಲ್ಲ” ಎಂದು ಬರೆದಿದ್ದರು.

ಇದನ್ನೂ ಓದಿ: ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಆದರೆ ಇದಕ್ಕೆ ಶನಿವಾರ ಸಂಜೆ ಪ್ರತಿಕ್ರಿಯಿಸಿರುವ ಶ್ರೀ ಅನ್ನಪೂರ್ಣ ರೆಸ್ಟೋರೆಂಟ್, “ಆತ್ಮೀಯ ತೇಜಸ್ವಿ ಸೂರ್ಯ ನಮ್ಮ ರೆಸ್ಟೋರೆಂಟ್‌ನಲ್ಲಿ ನಿಮಗೆ ಸೇವೆ ಸಲ್ಲಿಸಿದ್ದಕ್ಕೆ ನಮಗೆ ಸಂತೋಷವಾಗಿದೆ. ಅನ್ನಪೂರ್ಣದಲ್ಲಿ ನಾವು ಎಲ್ಲರನ್ನೂ ಒಂದೇ ರೀತಿಯ ಪ್ರೀತಿ ಮತ್ತು ಕೃತಜ್ಞತೆಯಿಂದ ಸ್ವಾಗತಿಸುತ್ತೇವೆ. ವಾಸ್ತವವಾಗಿ ಪ್ರತಿಯೊಬ್ಬರೂ ತಮ್ಮ ಬಿಲ್‌ಗಳನ್ನು ಪಾವತಿಸಲು ಮುಂದೆ ಬರುತ್ತಾರೆ. ಯಾರೂ ನಮ್ಮನ್ನು ಉಚಿತವಾಗಿ ನೀಡುವಂತೆ ಒತ್ತಾಯಿಸಲಿಲ್ಲ. ಪ್ರೀತಿ ಮತ್ತು ಗೌರವದ ಸಂಕೇತವಾಗಿ ನಾವು ಕೆಲವೊಮ್ಮೆ ನಮ್ಮ ಸಮಾಜಕ್ಕಾಗಿ ಕೆಲಸ ಮಾಡುವ ಜನರಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಅಷ್ಟೇ” ಎಂದು ರೆಸ್ಟೋರೆಂಟ್ ತಮ್ಮ ಫೇಸ್‌ಬುಕ್ ‌ಪೇಜ್‌ ಮೂಲಕ ತಿಳಿಸಿದೆ.

ಇದನ್ನೂ ಓದಿ: ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ರೆಸ್ಟೋರೆಂಟ್ ತನ್ನ ಫೇಸ್‌ಬುಕ್ ಮೂಲಕ ನೀಡಿರುವ ಹೇಳಿಕೆಯ ನಂತರ ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್‌ಗೆ ಒಳಗಾಗಿದ್ದಾರೆ.

ಲಕ್ಷ್ಮಿ ರಾಮಚಂದ್ರನ್ ಅವರು, “ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು. ನಿಮ್ಮ ನಾಟಕಗಳನ್ನು ಬೆಂಗಳೂರಲ್ಲೇ ಬಿಟ್ಟು ಬನ್ನಿ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ಸರಣ್ ಆರ್‌. ಕೆ. ಅವರು, “ಈ ರೀತಿಯ ಬಿಗಿಯಾದ ಹೊಡೆತ ಪಡೆದ ನಂತರ ತೇಜಸ್ವಿ ಸೂರ್ಯ ನೋವು ಅನುಭವಿಸುತ್ತಿದ್ದಾರೆ’’ ಎಂದು ಹೇಳಿದ್ದಾರೆ.

ಮಣಿ ಅವರು, “ಕೆಲವು ಏಟು ತುಂಬಾ ಸದ್ದು ಮಾಡುವುದಿಲ್ಲ. ಆದರೆ ಅವು ವ್ಯಕ್ತಿಯ ಮೇಲೆ ಶಾಶ್ವತವಾದ ಮುದ್ರೆಯನ್ನು ಬಿಟ್ಟು ಬಿಡುತ್ತವೆ. ಇದು ಅಂತಹ ಅದ್ಭುತ ಮತ್ತು ವಿನಮ್ರ ಕಪಾಳಮೋಕ್ಷ ಆಗಿದೆ. ಏನಂತೀರಿ ತೇಜಸ್ವಿ ಸೂರ್ಯ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಕಾರಲ್ಲಿ ಇವಿಎಂ: ಅಸ್ಸಾಂ ಕಾಂಗ್ರೆಸ್‌ನಿಂದ ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...