Homeಮುಖಪುಟ‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ಕೋಯಮುತ್ತೂರಿನ ಖ್ಯಾತ ರೆಸ್ಟೋರೆಂಟ್ ನೀಡಿದ‌‌ ಹೇಳಿಕೆಯಿಂದ ಮುಜುಗರಕ್ಕೊಳಗಾದ ಸಂಸದ ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್‌ಗೆ ಒಳಗಾಗಿದ್ದಾರೆ

- Advertisement -
- Advertisement -

ಪಂಚರಾಜ್ಯ ಚುನಾವಣೆ ಪ್ರಾರಂಭವಾಗಿದ್ದು ಎಲ್ಲಾ ಪಕ್ಷಗಳು ತಮ್ಮ ಚುನಾವಣಾ ಭರವಸೆ ನೀಡುತ್ತಾ, ತಂತ್ರಗಳನ್ನು ಹೆಣೆಯುತ್ತಾ ಮತದಾರರನ್ನು ಸೆಳೆಯುತ್ತಿದೆ. ಆದರೆ ತಮಿಳುನಾಡಿಗೆ ತೆರಳಿದ್ದ ಬೆಂಗಳೂರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಪ್ರತಿಪಕ್ಷಗಳನ್ನು ದೂರಲು ಹೋಗಿ ತಾವೇ ಮುಜುಗರಕ್ಕೊಳಗಾಗಿದ್ದಾರೆ.

ಶುಕ್ರವಾರ ತಮಿಳುನಾಡಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಂಸದ ತೇಜಸ್ವಿ ಸೂರ್ಯ ಕೊಯಮತ್ತೂರಿನ ಖ್ಯಾತ ರೆಸ್ಟೋರೆಂಟ್‌ ‘‘ಶ್ರೀ ಅನ್ನಪೂರ್ಣ” ಕ್ಕೆ ತೆರಳಿ ಉಪಹಾರ ಸೇವಿಸಿದ್ದರು. ಇದನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಅವರು ಅದರ ಜೊತೆಗೆ ಹೇಳಿಕೆಯೊಂದನ್ನು ಬರೆದಿದ್ದರು. ಆದರೆ ಆ ನಂತರ ಅದಕ್ಕೆ ಅನ್ನಪೂರ್ಣ ರೆಸ್ಟೋರೆಂಟ್ ನೀಡಿದ ಪ್ರತಿಕ್ರಿಯೆಗೆ ಸಂಸದ ಮುಜುಗರಕ್ಕೊಳಗಾಗುವಂತಾಗಿದೆ.

ಇದನ್ನೂ ಓದಿ: ಅಸ್ಸಾಂ: ಬಿಜೆಪಿ ಮುಖಂಡನ ಮೇಲಿನ ಪ್ರಚಾರ ನಿಷೇಧ ಅರ್ಧ ತೆರವುಗೊಳಿಸಿದ ಚುನಾವಣಾ ಆಯೋಗ!

ಉಪಹಾರ ಸೇವಿಸಿದ ಬಗ್ಗೆ ಅವರು ತಮ್ಮ ಟ್ವೀಟ್‌ನಲ್ಲಿ, “ಇಂದು ರೆಸ್ಟೋರೆಂಟ್‌ನಲ್ಲಿ ಬೆಳಗಿನ ಉಪಾಹಾರದ ನಂತರ, ನಾನು ಸಹಜವಾಗಿ ಬಿಲ್ ಪಾವತಿಸಲು ಹೋದೆ. ಕ್ಯಾಷಿಯರ್ ಹಣವನ್ನು ಸ್ವೀಕರಿಸಲು ಹಿಂಜರಿದರು. ಒತ್ತಾಯದ ನಂತರ ಬಹಳ ಹಿಂಜರಿಕೆಯಿಂದಲೇ ಹಣ ಸ್ವೀಕರಿಸಲು ಒಪ್ಪಿಕೊಂಡರು. ಆಗ ನಾನು ಅವರಿಗೆ “ನಾವು ಬಿಜೆಪಿಯವರು. ನಮ್ಮದು ಎಲ್ಲರನ್ನು ಗೌರವಿಸುವ ಮತ್ತು ಎಲ್ಲರನ್ನೂ ರಕ್ಷಿಸುವ ಪಕ್ಷ. ಸಣ್ಣ ವ್ಯಾಪಾರಿಗಳಿಂದಲೂ ರೋಲ್-ಕಾಲ್ ಮಾಡಲು ಡಿಎಂಕೆಯಂತೆ ನಾವಲ್ಲ” ಎಂದು ಬರೆದಿದ್ದರು.

ಇದನ್ನೂ ಓದಿ: ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ: ದಾಳಿ ಕುರಿತು ರಾಕೇಶ್ ಟಿಕಾಯತ್ ಪ್ರತಿಕ್ರಿಯೆ

ಆದರೆ ಇದಕ್ಕೆ ಶನಿವಾರ ಸಂಜೆ ಪ್ರತಿಕ್ರಿಯಿಸಿರುವ ಶ್ರೀ ಅನ್ನಪೂರ್ಣ ರೆಸ್ಟೋರೆಂಟ್, “ಆತ್ಮೀಯ ತೇಜಸ್ವಿ ಸೂರ್ಯ ನಮ್ಮ ರೆಸ್ಟೋರೆಂಟ್‌ನಲ್ಲಿ ನಿಮಗೆ ಸೇವೆ ಸಲ್ಲಿಸಿದ್ದಕ್ಕೆ ನಮಗೆ ಸಂತೋಷವಾಗಿದೆ. ಅನ್ನಪೂರ್ಣದಲ್ಲಿ ನಾವು ಎಲ್ಲರನ್ನೂ ಒಂದೇ ರೀತಿಯ ಪ್ರೀತಿ ಮತ್ತು ಕೃತಜ್ಞತೆಯಿಂದ ಸ್ವಾಗತಿಸುತ್ತೇವೆ. ವಾಸ್ತವವಾಗಿ ಪ್ರತಿಯೊಬ್ಬರೂ ತಮ್ಮ ಬಿಲ್‌ಗಳನ್ನು ಪಾವತಿಸಲು ಮುಂದೆ ಬರುತ್ತಾರೆ. ಯಾರೂ ನಮ್ಮನ್ನು ಉಚಿತವಾಗಿ ನೀಡುವಂತೆ ಒತ್ತಾಯಿಸಲಿಲ್ಲ. ಪ್ರೀತಿ ಮತ್ತು ಗೌರವದ ಸಂಕೇತವಾಗಿ ನಾವು ಕೆಲವೊಮ್ಮೆ ನಮ್ಮ ಸಮಾಜಕ್ಕಾಗಿ ಕೆಲಸ ಮಾಡುವ ಜನರಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಅಷ್ಟೇ” ಎಂದು ರೆಸ್ಟೋರೆಂಟ್ ತಮ್ಮ ಫೇಸ್‌ಬುಕ್ ‌ಪೇಜ್‌ ಮೂಲಕ ತಿಳಿಸಿದೆ.

ಇದನ್ನೂ ಓದಿ: ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ರೆಸ್ಟೋರೆಂಟ್ ತನ್ನ ಫೇಸ್‌ಬುಕ್ ಮೂಲಕ ನೀಡಿರುವ ಹೇಳಿಕೆಯ ನಂತರ ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಟ್ರಾಲ್‌ಗೆ ಒಳಗಾಗಿದ್ದಾರೆ.

ಲಕ್ಷ್ಮಿ ರಾಮಚಂದ್ರನ್ ಅವರು, “ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು. ನಿಮ್ಮ ನಾಟಕಗಳನ್ನು ಬೆಂಗಳೂರಲ್ಲೇ ಬಿಟ್ಟು ಬನ್ನಿ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಹಿಂದೂ ಮುಸ್ಲಿಮರನ್ನು ವಿಭಜಿಸಲು AIMIM ಪಕ್ಷಕ್ಕೆ ಬಿಜೆಪಿ ಹಣ ನೀಡಿದೆ: ಮಮತಾ ಬ್ಯಾನರ್ಜಿ

ಸರಣ್ ಆರ್‌. ಕೆ. ಅವರು, “ಈ ರೀತಿಯ ಬಿಗಿಯಾದ ಹೊಡೆತ ಪಡೆದ ನಂತರ ತೇಜಸ್ವಿ ಸೂರ್ಯ ನೋವು ಅನುಭವಿಸುತ್ತಿದ್ದಾರೆ’’ ಎಂದು ಹೇಳಿದ್ದಾರೆ.

ಮಣಿ ಅವರು, “ಕೆಲವು ಏಟು ತುಂಬಾ ಸದ್ದು ಮಾಡುವುದಿಲ್ಲ. ಆದರೆ ಅವು ವ್ಯಕ್ತಿಯ ಮೇಲೆ ಶಾಶ್ವತವಾದ ಮುದ್ರೆಯನ್ನು ಬಿಟ್ಟು ಬಿಡುತ್ತವೆ. ಇದು ಅಂತಹ ಅದ್ಭುತ ಮತ್ತು ವಿನಮ್ರ ಕಪಾಳಮೋಕ್ಷ ಆಗಿದೆ. ಏನಂತೀರಿ ತೇಜಸ್ವಿ ಸೂರ್ಯ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಕಾರಲ್ಲಿ ಇವಿಎಂ: ಅಸ್ಸಾಂ ಕಾಂಗ್ರೆಸ್‌ನಿಂದ ಪ್ರತಿಭಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...