Homeಮುಖಪುಟನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್

ನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್

ಪೊಲಿಸರು ನನ್ನ ಫೋನ್ ತೆಗೆದುಕೊಂಡ 12 ದಿನ ಆದರೂ ಫೋನ್ ವಾಪಸ್ ಕೊಟ್ಟಿಲ್ಲ. ನಾನು ಸಾಮಾಜಿಕ ಜಾಲತಾಣಗಳನ್ನು ಬಳಸಲು ಆಗುತ್ತಿಲ್ಲ.

- Advertisement -
- Advertisement -

ಸಿನಿಮಾ ರಂಗದ ಯಾರೂ ಮಾತನಾಡದಿದ್ದಾಗ ಅನ್ಯಾಯದ ವಿರುದ್ಧ ದನಿಯೆತ್ತಿದ ನಟಿ ರಮ್ಯಾ, ವಿಡಿಯೊ ಮಾಡಿದ ನಟ ಕಿರಣ್ ಶ್ರೀನಿವಾಸ್ ಸೇರಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ನಟ ಚೇತನ್ ತಿಳಿಸಿದ್ದಾರೆ.

ಜೈಲಿನಿಂದ ಜಾಮೀನನ ಮೇಲೆ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿದ ಅವರು, “ಒಂದು ಟ್ವೀಟ್ ಕಾರಣಕ್ಕೆ ನನ್ನನ್ನು ಸುಮಾರು ಒಂದು ವಾರಗಳ ಕಾಲ ಜೈಲಿನಲ್ಲಿಟ್ಟಿದ್ದರು. ಆ ಟ್ವೀಟ್‌ನಲ್ಲಿ ಯಾರನ್ನೂ ಅವಹೇಳನ ಮಾಡಿರಲಿಲ್ಲ, ಅದರಲ್ಲಿ ಅವಾಚ್ಯ ಶಬ್ದ ಇರಲಿಲ್ಲ, ಯಾರನ್ನೂ ಪ್ರಚೋದಿಸಿರಲಿಲ್ಲ. ಆದರೂ ಆ ಒಂದು ಟ್ವೀಟ್‌ ಇಟ್ಟುಕೊಂಡು ಕೋಮು ಪ್ರಚೋದನೆ ಮಾಡಿದ್ದೇನೆ ಎಂದು ಆರೋಪ ಹೊರಿಸಿ 504,  505(2) ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದರು” ಎಂದಿದ್ದಾರೆ.

ಕಾಣದ ಕೈಗಳು ಬಂಧನದ ಹಿಂದಿವೆ. ಅಕ್ರಮವಾಗಿ ನನ್ನನ್ನು ಬಂಧಿಸಿ 8-10 ಗಂಟೆಗಳ ಕಾಲ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಇಟ್ಟಿದ್ದರು. ಯಾವ ಕೇಸ್, ಯಾರು ದೂರುದಾರರು ಎಂದು ಸಾಕಷ್ಟು ಕೇಳಿದರೂ ನನಗೆ ಮಾಹಿತಿ ಕೊಟ್ಟಿರಲಿಲ್ಲ. ದೂರು ಕೊಟ್ಟವರು ರವಿ ಎಂಬ ವ್ಯಕ್ತಿ ಮಾತ್ರವಿಲ್ಲ ಹಲವರಿದ್ದಾರೆ ಎಂಬುದು ಗೊತ್ತಾಯಿತು. ಈ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ರವಿ ಕೂಡ ಬಲಿಪಶು ಎಂದು ಅವರು ತಿಳಿಸಿದ್ದಾರೆ.

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಯಾರೂ ಕೂಡ ಪ್ರಶ್ನಾತೀತರಲ್ಲ. ಪ್ರಶ್ನೆ ಮಾಡುವುದು ನಮ್ಮ ಹಕ್ಕು ಮಾತ್ರವಲ್ಲ ಕರ್ತವ್ಯ ಕೂಡ. ಈ ಬಂಧನದಿಂದ ನನಗೆ ಬೇಸರವಾಗಿಲ್ಲ, ಬದಲಿಗೆ ಹೋರಾಟ ಮಾರ್ಗದಲ್ಲಿ ಮತ್ತಷ್ಟು ವಿಶ್ವಾಸ ಬಂದಿದೆ. ನಮ್ಮ ವಿಚಾರದಲ್ಲಿ ಸ್ಪಷ್ಟತೆ, ಅಪಾರ ಶಕ್ತಿ ಮತ್ತು ಗಟ್ಟಿತನ ಇದೆ. ಹಾಗಾಗಿ ನಮ್ಮ ಸತ್ಯ ಕಂಡರೆ ಅವರಿಗೆ ಭಯ. ಅದಕ್ಕೆ ನನ್ನನ್ನು ಬಂಧಿಸಿದ್ದು ಎಂದು ಚೇತನ್ ಹೇಳಿದರು.

ಪುರು‍ಷಪ್ರಧಾನ ವ್ಯವಸ್ಥೆಯಿಂದ ಮಹಿಳೆಯರಿಗೆ ಆಗಿರುವ ಅನ್ಯಾಯ, ಶೂದ್ರರಿಗೆ ಆಗಿರುವ ಅನ್ಯಾಯ, ಬಂಡವಾಳಶಾಹಿಯಿಂದ ಬಡಜನರಿಗೆ ಆಗಿರುವ ಅನ್ಯಾಯ ಮತ್ತು ಕೋಮುವಾದ, ಅತಿ ಬ್ರಾಹ್ಮಣ್ಯ ಬಂದಿರುವುದರಿಂದ ಅಲ್ಪಸಂಖ್ಯಾತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮುಂದುವರೆಸೋಣ. ಯಾವುದೇ ಕಾರಣಕ್ಕೆ ಕುಗ್ಗುವುದು ಬೇಡ ಎಂದರು.

ಜೈಲಿನಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತರರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸ್ಥಾಪಿತ ಶಕ್ತಿಗಳು ಅವರನ್ನು ಗುರಿ ಮಾಡಿದ್ದಾರೆ. ಅವರಿಗೆ ವಕೀಲರು ಸಿಗುತ್ತಿಲ್ಲ. ನಾನು ಶ್ರೀಮಂತ ಕುಟುಂಬದಿಂದ, ಪ್ರಭಾವಿ ಜಾತಿಯಿಂದ ಮತ್ತು ಚಿತ್ರರಂಗದಿಂದ ಬಂದಿದ್ದೇನೆ. ನನ್ನ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಹಾಕಿದರೆ ಇನ್ನು ಜನಸಾಮಾನ್ಯರನ್ನು ಈ ವ್ಯವಸ್ಥೆ ಎಷ್ಟು ಕೆಟ್ಟದಾಗಿ ನಡೆಸಿಕೊಳ್ಳಬಹುದು ಯೋಚಿಸಿ ಎಂದು ಚೇತನ್ ಹೇಳಿದರು.

ನಾನು ಜೈಲಿನಲ್ಲಿ ಅಂಬೇಡ್ಕರ್‌ರವರ ಅನಿಲೇಶನ್ ಆಫ್ ಕಾಸ್ಟ್ ಮತ್ತು ಹು ಆರ್ ಶೂದ್ರಾಶ್ ಎಂಬ ಕೃತಿಗಳನ್ನು ಓದಿದೆ. ವಕೀಲ ಜಗದೀಶ್‌ರವರನ್ನು ಭೇಟಿ ಮಾಡಿದೆ. ಜಗದೀಶ್ ರವರು ಕುಗ್ಗಿಲ್ಲ.. ಅವರ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದೇನೆ.

ಪೆರಿಯಾರ್‌ರವರನ್ನು 80 ಬಾರಿ ಜೈಲಿಗೆ ಹಾಕಲಾಗಿತ್ತು. ಜೈಲು ಎಂದರೆ ನನಗೆ ಭಯವಿಲ್ಲ. ನಾನು ಸತ್ಯಕ್ಕಾಗಿ ಮತ್ತೆ ಜೈಲಿಗೆ ಹೋಗಲು ಸಿದ್ದನಿದ್ದೇನೆ. ನಾವು ಯಾವುದೇ ಜಾತಿ, ಮತ, ಭಾಷೆಯ ವಿರುದ್ಧ ಇಲ್ಲ. ನಾವು ಅಸಮಾನತೆಯ ವಿರುದ್ಧ ಇದ್ದೇವೆ. ಬ್ರಾಹ್ಮಣ್ಯ ಎನ್ನುವುದು ಒಂದು ಮನಸ್ಥಿತಿ. ಎಲ್ಲಾ ಬ್ರಾಹ್ಮಣ್ಯರು ಸವಲತ್ತು ಪಡೆದಿರಬಹುದು. ಆದರೆ ಎಲ್ಲರೂ ಬ್ರಾಹ್ಮಣ್ಯ ಅನುಸರಿಸುವುದಿಲ್ಲ. ಅವರು ಹುಟ್ಟಿನಿಂದಲೇ ಸವಲತ್ತು ಪಡೆದಿರುವುದು ನಿಜ. ಆದರೆ ಮುಂದಕ್ಕೆ ನಾನು ಸಮಾಜಕ್ಕೆ ಜಾಸ್ತಿ ಕೊಡಬೇಕು, ಇಷ್ಟು ವಂಚಿತರಾದವರು ಜಾಸ್ತಿ ಪಡೆಯಬೇಕು. ಹಾಗಾಗಿ ನಮ್ಮ ಹೋರಾಟ ಬ್ರಾಹ್ಮಣ್ಯದ ವಿರುದ್ಧವಿರುತ್ತದೆ ಎಂದರು.

ಒಂದು ಟ್ವೀಟ್ ಗಾಗಿ ನನ್ನನ್ನು ಉದ್ದೇಶಪೂರ್ವಕವಾಗಿ ಬಂಧಿಸಿದ್ದೀರಿ. ಆದರೆ ಕೋಟ್ಯಾಂತರ ಜನ ಟ್ವೀಟ್ ಮಾಡಿದರೆ ಅವರನ್ನು ಜೈಲಿಗೆ ಹಾಕುತ್ತೀರಾ? ಭ್ರಷ್ಟಾಚಾರಿಗಳು, ಕ್ರಿಮಿನಲ್‌ಗಳು ವಿಧಾನಸೌಧದಲ್ಲಿದ್ದಾರೆ. ಅವರನ್ನು ಮುಟ್ಟುವ ಧೈರ್ಯ ಇಲ್ಲ. ನಮ್ಮನ್ನು ಮಾತ್ರ ಬಂಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಫೆಬ್ರವರಿ 19 ರಂದು ನಾವು ಬೆಂಗಳೂರಿನಲ್ಲಿ ನೀಲಿ ಸಾಗರ ನಿರ್ಮಿಸಿದ್ದೇವೆ. ಹಾಗಾಗಿ ಪ್ರಭುತ್ವ ಹೆದರಿದೆ. ಆ ಹೋರಾಟವನ್ನು ಮುಖ್ಯವಾಹಿನಿ ಮಾಧ್ಯಮಗಳು ಪ್ರಸಾರ ಮಾಡಲಿಲ್ಲ. ಹಾಗಾಗಿ ನಾವು ಸೋಷಿಯಲ್ ಮೀಡಿಯಾ ಮಾತ್ರವಲ್ಲದೆ ಪರ್ಯಾಯ ಮಾಧ್ಯಮ ಕಟ್ಟೋಣ ಎಂದರು.

ಪೊಲಿಸರು ನನ್ನ ಫೋನ್ ತೆಗೆದುಕೊಂಡ 12 ದಿನ ಆದರೂ ಫೋನ್ ವಾಪಸ್ ಕೊಟ್ಟಿಲ್ಲ. ನಾನು ಸಾಮಾಜಿಕ ಜಾಲತಾಣಗಳನ್ನು ಬಳಸಲು ಆಗುತ್ತಿಲ್ಲ. ಬೇರೆಯವರ ಫೋನ್‌ನಲ್ಲಿ ಲಾಗಿನ್ ಆಗಿದ್ದೇನೆ ಎಂದರು.

ಶಾಂತಪ್ಪ ಎಂಬ ಗಾಯಕರು ಡಯಾಲಿಸಿಸ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸುಳ್ಳು ಪ್ರಕರಣದಲ್ಲಿ ಅವರನ್ನು ಸಿಕ್ಕಿಸಲಾಗಿದೆ. 10 ವರ್ಷದಿಂದ ಅವರು ಜೈಲಿನಲ್ಲಿದ್ದಾರೆ. ಒಳ್ಳೆಯ ಗಾಯಕರಾದ ಅವರನ್ನು ಹೊರಗೆ ತರಲು ಪ್ರಯತ್ನ ಮಾಡುತ್ತೇನೆ. ಈ ಕುರಿತು ಹಂಸಲೇಖ ಸರ್ ಜೊತೆ ಮಾತಾಡುತ್ತೇನೆ ಎಂದರು.

ಅವರ ಫೇಸ್‌ಬುಲ್ ಲೈವ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....