Homeಮುಖಪುಟನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್

ನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್

ಪೊಲಿಸರು ನನ್ನ ಫೋನ್ ತೆಗೆದುಕೊಂಡ 12 ದಿನ ಆದರೂ ಫೋನ್ ವಾಪಸ್ ಕೊಟ್ಟಿಲ್ಲ. ನಾನು ಸಾಮಾಜಿಕ ಜಾಲತಾಣಗಳನ್ನು ಬಳಸಲು ಆಗುತ್ತಿಲ್ಲ.

- Advertisement -
- Advertisement -

ಸಿನಿಮಾ ರಂಗದ ಯಾರೂ ಮಾತನಾಡದಿದ್ದಾಗ ಅನ್ಯಾಯದ ವಿರುದ್ಧ ದನಿಯೆತ್ತಿದ ನಟಿ ರಮ್ಯಾ, ವಿಡಿಯೊ ಮಾಡಿದ ನಟ ಕಿರಣ್ ಶ್ರೀನಿವಾಸ್ ಸೇರಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ನಟ ಚೇತನ್ ತಿಳಿಸಿದ್ದಾರೆ.

ಜೈಲಿನಿಂದ ಜಾಮೀನನ ಮೇಲೆ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿದ ಅವರು, “ಒಂದು ಟ್ವೀಟ್ ಕಾರಣಕ್ಕೆ ನನ್ನನ್ನು ಸುಮಾರು ಒಂದು ವಾರಗಳ ಕಾಲ ಜೈಲಿನಲ್ಲಿಟ್ಟಿದ್ದರು. ಆ ಟ್ವೀಟ್‌ನಲ್ಲಿ ಯಾರನ್ನೂ ಅವಹೇಳನ ಮಾಡಿರಲಿಲ್ಲ, ಅದರಲ್ಲಿ ಅವಾಚ್ಯ ಶಬ್ದ ಇರಲಿಲ್ಲ, ಯಾರನ್ನೂ ಪ್ರಚೋದಿಸಿರಲಿಲ್ಲ. ಆದರೂ ಆ ಒಂದು ಟ್ವೀಟ್‌ ಇಟ್ಟುಕೊಂಡು ಕೋಮು ಪ್ರಚೋದನೆ ಮಾಡಿದ್ದೇನೆ ಎಂದು ಆರೋಪ ಹೊರಿಸಿ 504,  505(2) ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದರು” ಎಂದಿದ್ದಾರೆ.

ಕಾಣದ ಕೈಗಳು ಬಂಧನದ ಹಿಂದಿವೆ. ಅಕ್ರಮವಾಗಿ ನನ್ನನ್ನು ಬಂಧಿಸಿ 8-10 ಗಂಟೆಗಳ ಕಾಲ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಇಟ್ಟಿದ್ದರು. ಯಾವ ಕೇಸ್, ಯಾರು ದೂರುದಾರರು ಎಂದು ಸಾಕಷ್ಟು ಕೇಳಿದರೂ ನನಗೆ ಮಾಹಿತಿ ಕೊಟ್ಟಿರಲಿಲ್ಲ. ದೂರು ಕೊಟ್ಟವರು ರವಿ ಎಂಬ ವ್ಯಕ್ತಿ ಮಾತ್ರವಿಲ್ಲ ಹಲವರಿದ್ದಾರೆ ಎಂಬುದು ಗೊತ್ತಾಯಿತು. ಈ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ರವಿ ಕೂಡ ಬಲಿಪಶು ಎಂದು ಅವರು ತಿಳಿಸಿದ್ದಾರೆ.

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಯಾರೂ ಕೂಡ ಪ್ರಶ್ನಾತೀತರಲ್ಲ. ಪ್ರಶ್ನೆ ಮಾಡುವುದು ನಮ್ಮ ಹಕ್ಕು ಮಾತ್ರವಲ್ಲ ಕರ್ತವ್ಯ ಕೂಡ. ಈ ಬಂಧನದಿಂದ ನನಗೆ ಬೇಸರವಾಗಿಲ್ಲ, ಬದಲಿಗೆ ಹೋರಾಟ ಮಾರ್ಗದಲ್ಲಿ ಮತ್ತಷ್ಟು ವಿಶ್ವಾಸ ಬಂದಿದೆ. ನಮ್ಮ ವಿಚಾರದಲ್ಲಿ ಸ್ಪಷ್ಟತೆ, ಅಪಾರ ಶಕ್ತಿ ಮತ್ತು ಗಟ್ಟಿತನ ಇದೆ. ಹಾಗಾಗಿ ನಮ್ಮ ಸತ್ಯ ಕಂಡರೆ ಅವರಿಗೆ ಭಯ. ಅದಕ್ಕೆ ನನ್ನನ್ನು ಬಂಧಿಸಿದ್ದು ಎಂದು ಚೇತನ್ ಹೇಳಿದರು.

ಪುರು‍ಷಪ್ರಧಾನ ವ್ಯವಸ್ಥೆಯಿಂದ ಮಹಿಳೆಯರಿಗೆ ಆಗಿರುವ ಅನ್ಯಾಯ, ಶೂದ್ರರಿಗೆ ಆಗಿರುವ ಅನ್ಯಾಯ, ಬಂಡವಾಳಶಾಹಿಯಿಂದ ಬಡಜನರಿಗೆ ಆಗಿರುವ ಅನ್ಯಾಯ ಮತ್ತು ಕೋಮುವಾದ, ಅತಿ ಬ್ರಾಹ್ಮಣ್ಯ ಬಂದಿರುವುದರಿಂದ ಅಲ್ಪಸಂಖ್ಯಾತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮುಂದುವರೆಸೋಣ. ಯಾವುದೇ ಕಾರಣಕ್ಕೆ ಕುಗ್ಗುವುದು ಬೇಡ ಎಂದರು.

ಜೈಲಿನಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತರರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸ್ಥಾಪಿತ ಶಕ್ತಿಗಳು ಅವರನ್ನು ಗುರಿ ಮಾಡಿದ್ದಾರೆ. ಅವರಿಗೆ ವಕೀಲರು ಸಿಗುತ್ತಿಲ್ಲ. ನಾನು ಶ್ರೀಮಂತ ಕುಟುಂಬದಿಂದ, ಪ್ರಭಾವಿ ಜಾತಿಯಿಂದ ಮತ್ತು ಚಿತ್ರರಂಗದಿಂದ ಬಂದಿದ್ದೇನೆ. ನನ್ನ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಹಾಕಿದರೆ ಇನ್ನು ಜನಸಾಮಾನ್ಯರನ್ನು ಈ ವ್ಯವಸ್ಥೆ ಎಷ್ಟು ಕೆಟ್ಟದಾಗಿ ನಡೆಸಿಕೊಳ್ಳಬಹುದು ಯೋಚಿಸಿ ಎಂದು ಚೇತನ್ ಹೇಳಿದರು.

ನಾನು ಜೈಲಿನಲ್ಲಿ ಅಂಬೇಡ್ಕರ್‌ರವರ ಅನಿಲೇಶನ್ ಆಫ್ ಕಾಸ್ಟ್ ಮತ್ತು ಹು ಆರ್ ಶೂದ್ರಾಶ್ ಎಂಬ ಕೃತಿಗಳನ್ನು ಓದಿದೆ. ವಕೀಲ ಜಗದೀಶ್‌ರವರನ್ನು ಭೇಟಿ ಮಾಡಿದೆ. ಜಗದೀಶ್ ರವರು ಕುಗ್ಗಿಲ್ಲ.. ಅವರ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದೇನೆ.

ಪೆರಿಯಾರ್‌ರವರನ್ನು 80 ಬಾರಿ ಜೈಲಿಗೆ ಹಾಕಲಾಗಿತ್ತು. ಜೈಲು ಎಂದರೆ ನನಗೆ ಭಯವಿಲ್ಲ. ನಾನು ಸತ್ಯಕ್ಕಾಗಿ ಮತ್ತೆ ಜೈಲಿಗೆ ಹೋಗಲು ಸಿದ್ದನಿದ್ದೇನೆ. ನಾವು ಯಾವುದೇ ಜಾತಿ, ಮತ, ಭಾಷೆಯ ವಿರುದ್ಧ ಇಲ್ಲ. ನಾವು ಅಸಮಾನತೆಯ ವಿರುದ್ಧ ಇದ್ದೇವೆ. ಬ್ರಾಹ್ಮಣ್ಯ ಎನ್ನುವುದು ಒಂದು ಮನಸ್ಥಿತಿ. ಎಲ್ಲಾ ಬ್ರಾಹ್ಮಣ್ಯರು ಸವಲತ್ತು ಪಡೆದಿರಬಹುದು. ಆದರೆ ಎಲ್ಲರೂ ಬ್ರಾಹ್ಮಣ್ಯ ಅನುಸರಿಸುವುದಿಲ್ಲ. ಅವರು ಹುಟ್ಟಿನಿಂದಲೇ ಸವಲತ್ತು ಪಡೆದಿರುವುದು ನಿಜ. ಆದರೆ ಮುಂದಕ್ಕೆ ನಾನು ಸಮಾಜಕ್ಕೆ ಜಾಸ್ತಿ ಕೊಡಬೇಕು, ಇಷ್ಟು ವಂಚಿತರಾದವರು ಜಾಸ್ತಿ ಪಡೆಯಬೇಕು. ಹಾಗಾಗಿ ನಮ್ಮ ಹೋರಾಟ ಬ್ರಾಹ್ಮಣ್ಯದ ವಿರುದ್ಧವಿರುತ್ತದೆ ಎಂದರು.

ಒಂದು ಟ್ವೀಟ್ ಗಾಗಿ ನನ್ನನ್ನು ಉದ್ದೇಶಪೂರ್ವಕವಾಗಿ ಬಂಧಿಸಿದ್ದೀರಿ. ಆದರೆ ಕೋಟ್ಯಾಂತರ ಜನ ಟ್ವೀಟ್ ಮಾಡಿದರೆ ಅವರನ್ನು ಜೈಲಿಗೆ ಹಾಕುತ್ತೀರಾ? ಭ್ರಷ್ಟಾಚಾರಿಗಳು, ಕ್ರಿಮಿನಲ್‌ಗಳು ವಿಧಾನಸೌಧದಲ್ಲಿದ್ದಾರೆ. ಅವರನ್ನು ಮುಟ್ಟುವ ಧೈರ್ಯ ಇಲ್ಲ. ನಮ್ಮನ್ನು ಮಾತ್ರ ಬಂಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಫೆಬ್ರವರಿ 19 ರಂದು ನಾವು ಬೆಂಗಳೂರಿನಲ್ಲಿ ನೀಲಿ ಸಾಗರ ನಿರ್ಮಿಸಿದ್ದೇವೆ. ಹಾಗಾಗಿ ಪ್ರಭುತ್ವ ಹೆದರಿದೆ. ಆ ಹೋರಾಟವನ್ನು ಮುಖ್ಯವಾಹಿನಿ ಮಾಧ್ಯಮಗಳು ಪ್ರಸಾರ ಮಾಡಲಿಲ್ಲ. ಹಾಗಾಗಿ ನಾವು ಸೋಷಿಯಲ್ ಮೀಡಿಯಾ ಮಾತ್ರವಲ್ಲದೆ ಪರ್ಯಾಯ ಮಾಧ್ಯಮ ಕಟ್ಟೋಣ ಎಂದರು.

ಪೊಲಿಸರು ನನ್ನ ಫೋನ್ ತೆಗೆದುಕೊಂಡ 12 ದಿನ ಆದರೂ ಫೋನ್ ವಾಪಸ್ ಕೊಟ್ಟಿಲ್ಲ. ನಾನು ಸಾಮಾಜಿಕ ಜಾಲತಾಣಗಳನ್ನು ಬಳಸಲು ಆಗುತ್ತಿಲ್ಲ. ಬೇರೆಯವರ ಫೋನ್‌ನಲ್ಲಿ ಲಾಗಿನ್ ಆಗಿದ್ದೇನೆ ಎಂದರು.

ಶಾಂತಪ್ಪ ಎಂಬ ಗಾಯಕರು ಡಯಾಲಿಸಿಸ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸುಳ್ಳು ಪ್ರಕರಣದಲ್ಲಿ ಅವರನ್ನು ಸಿಕ್ಕಿಸಲಾಗಿದೆ. 10 ವರ್ಷದಿಂದ ಅವರು ಜೈಲಿನಲ್ಲಿದ್ದಾರೆ. ಒಳ್ಳೆಯ ಗಾಯಕರಾದ ಅವರನ್ನು ಹೊರಗೆ ತರಲು ಪ್ರಯತ್ನ ಮಾಡುತ್ತೇನೆ. ಈ ಕುರಿತು ಹಂಸಲೇಖ ಸರ್ ಜೊತೆ ಮಾತಾಡುತ್ತೇನೆ ಎಂದರು.

ಅವರ ಫೇಸ್‌ಬುಲ್ ಲೈವ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...