Homeಮುಖಪುಟನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್

ನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್

ಪೊಲಿಸರು ನನ್ನ ಫೋನ್ ತೆಗೆದುಕೊಂಡ 12 ದಿನ ಆದರೂ ಫೋನ್ ವಾಪಸ್ ಕೊಟ್ಟಿಲ್ಲ. ನಾನು ಸಾಮಾಜಿಕ ಜಾಲತಾಣಗಳನ್ನು ಬಳಸಲು ಆಗುತ್ತಿಲ್ಲ.

- Advertisement -
- Advertisement -

ಸಿನಿಮಾ ರಂಗದ ಯಾರೂ ಮಾತನಾಡದಿದ್ದಾಗ ಅನ್ಯಾಯದ ವಿರುದ್ಧ ದನಿಯೆತ್ತಿದ ನಟಿ ರಮ್ಯಾ, ವಿಡಿಯೊ ಮಾಡಿದ ನಟ ಕಿರಣ್ ಶ್ರೀನಿವಾಸ್ ಸೇರಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ನಟ ಚೇತನ್ ತಿಳಿಸಿದ್ದಾರೆ.

ಜೈಲಿನಿಂದ ಜಾಮೀನನ ಮೇಲೆ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿದ ಅವರು, “ಒಂದು ಟ್ವೀಟ್ ಕಾರಣಕ್ಕೆ ನನ್ನನ್ನು ಸುಮಾರು ಒಂದು ವಾರಗಳ ಕಾಲ ಜೈಲಿನಲ್ಲಿಟ್ಟಿದ್ದರು. ಆ ಟ್ವೀಟ್‌ನಲ್ಲಿ ಯಾರನ್ನೂ ಅವಹೇಳನ ಮಾಡಿರಲಿಲ್ಲ, ಅದರಲ್ಲಿ ಅವಾಚ್ಯ ಶಬ್ದ ಇರಲಿಲ್ಲ, ಯಾರನ್ನೂ ಪ್ರಚೋದಿಸಿರಲಿಲ್ಲ. ಆದರೂ ಆ ಒಂದು ಟ್ವೀಟ್‌ ಇಟ್ಟುಕೊಂಡು ಕೋಮು ಪ್ರಚೋದನೆ ಮಾಡಿದ್ದೇನೆ ಎಂದು ಆರೋಪ ಹೊರಿಸಿ 504,  505(2) ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದರು” ಎಂದಿದ್ದಾರೆ.

ಕಾಣದ ಕೈಗಳು ಬಂಧನದ ಹಿಂದಿವೆ. ಅಕ್ರಮವಾಗಿ ನನ್ನನ್ನು ಬಂಧಿಸಿ 8-10 ಗಂಟೆಗಳ ಕಾಲ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಇಟ್ಟಿದ್ದರು. ಯಾವ ಕೇಸ್, ಯಾರು ದೂರುದಾರರು ಎಂದು ಸಾಕಷ್ಟು ಕೇಳಿದರೂ ನನಗೆ ಮಾಹಿತಿ ಕೊಟ್ಟಿರಲಿಲ್ಲ. ದೂರು ಕೊಟ್ಟವರು ರವಿ ಎಂಬ ವ್ಯಕ್ತಿ ಮಾತ್ರವಿಲ್ಲ ಹಲವರಿದ್ದಾರೆ ಎಂಬುದು ಗೊತ್ತಾಯಿತು. ಈ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ರವಿ ಕೂಡ ಬಲಿಪಶು ಎಂದು ಅವರು ತಿಳಿಸಿದ್ದಾರೆ.

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಯಾರೂ ಕೂಡ ಪ್ರಶ್ನಾತೀತರಲ್ಲ. ಪ್ರಶ್ನೆ ಮಾಡುವುದು ನಮ್ಮ ಹಕ್ಕು ಮಾತ್ರವಲ್ಲ ಕರ್ತವ್ಯ ಕೂಡ. ಈ ಬಂಧನದಿಂದ ನನಗೆ ಬೇಸರವಾಗಿಲ್ಲ, ಬದಲಿಗೆ ಹೋರಾಟ ಮಾರ್ಗದಲ್ಲಿ ಮತ್ತಷ್ಟು ವಿಶ್ವಾಸ ಬಂದಿದೆ. ನಮ್ಮ ವಿಚಾರದಲ್ಲಿ ಸ್ಪಷ್ಟತೆ, ಅಪಾರ ಶಕ್ತಿ ಮತ್ತು ಗಟ್ಟಿತನ ಇದೆ. ಹಾಗಾಗಿ ನಮ್ಮ ಸತ್ಯ ಕಂಡರೆ ಅವರಿಗೆ ಭಯ. ಅದಕ್ಕೆ ನನ್ನನ್ನು ಬಂಧಿಸಿದ್ದು ಎಂದು ಚೇತನ್ ಹೇಳಿದರು.

ಪುರು‍ಷಪ್ರಧಾನ ವ್ಯವಸ್ಥೆಯಿಂದ ಮಹಿಳೆಯರಿಗೆ ಆಗಿರುವ ಅನ್ಯಾಯ, ಶೂದ್ರರಿಗೆ ಆಗಿರುವ ಅನ್ಯಾಯ, ಬಂಡವಾಳಶಾಹಿಯಿಂದ ಬಡಜನರಿಗೆ ಆಗಿರುವ ಅನ್ಯಾಯ ಮತ್ತು ಕೋಮುವಾದ, ಅತಿ ಬ್ರಾಹ್ಮಣ್ಯ ಬಂದಿರುವುದರಿಂದ ಅಲ್ಪಸಂಖ್ಯಾತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮುಂದುವರೆಸೋಣ. ಯಾವುದೇ ಕಾರಣಕ್ಕೆ ಕುಗ್ಗುವುದು ಬೇಡ ಎಂದರು.

ಜೈಲಿನಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತರರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸ್ಥಾಪಿತ ಶಕ್ತಿಗಳು ಅವರನ್ನು ಗುರಿ ಮಾಡಿದ್ದಾರೆ. ಅವರಿಗೆ ವಕೀಲರು ಸಿಗುತ್ತಿಲ್ಲ. ನಾನು ಶ್ರೀಮಂತ ಕುಟುಂಬದಿಂದ, ಪ್ರಭಾವಿ ಜಾತಿಯಿಂದ ಮತ್ತು ಚಿತ್ರರಂಗದಿಂದ ಬಂದಿದ್ದೇನೆ. ನನ್ನ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಹಾಕಿದರೆ ಇನ್ನು ಜನಸಾಮಾನ್ಯರನ್ನು ಈ ವ್ಯವಸ್ಥೆ ಎಷ್ಟು ಕೆಟ್ಟದಾಗಿ ನಡೆಸಿಕೊಳ್ಳಬಹುದು ಯೋಚಿಸಿ ಎಂದು ಚೇತನ್ ಹೇಳಿದರು.

ನಾನು ಜೈಲಿನಲ್ಲಿ ಅಂಬೇಡ್ಕರ್‌ರವರ ಅನಿಲೇಶನ್ ಆಫ್ ಕಾಸ್ಟ್ ಮತ್ತು ಹು ಆರ್ ಶೂದ್ರಾಶ್ ಎಂಬ ಕೃತಿಗಳನ್ನು ಓದಿದೆ. ವಕೀಲ ಜಗದೀಶ್‌ರವರನ್ನು ಭೇಟಿ ಮಾಡಿದೆ. ಜಗದೀಶ್ ರವರು ಕುಗ್ಗಿಲ್ಲ.. ಅವರ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದೇನೆ.

ಪೆರಿಯಾರ್‌ರವರನ್ನು 80 ಬಾರಿ ಜೈಲಿಗೆ ಹಾಕಲಾಗಿತ್ತು. ಜೈಲು ಎಂದರೆ ನನಗೆ ಭಯವಿಲ್ಲ. ನಾನು ಸತ್ಯಕ್ಕಾಗಿ ಮತ್ತೆ ಜೈಲಿಗೆ ಹೋಗಲು ಸಿದ್ದನಿದ್ದೇನೆ. ನಾವು ಯಾವುದೇ ಜಾತಿ, ಮತ, ಭಾಷೆಯ ವಿರುದ್ಧ ಇಲ್ಲ. ನಾವು ಅಸಮಾನತೆಯ ವಿರುದ್ಧ ಇದ್ದೇವೆ. ಬ್ರಾಹ್ಮಣ್ಯ ಎನ್ನುವುದು ಒಂದು ಮನಸ್ಥಿತಿ. ಎಲ್ಲಾ ಬ್ರಾಹ್ಮಣ್ಯರು ಸವಲತ್ತು ಪಡೆದಿರಬಹುದು. ಆದರೆ ಎಲ್ಲರೂ ಬ್ರಾಹ್ಮಣ್ಯ ಅನುಸರಿಸುವುದಿಲ್ಲ. ಅವರು ಹುಟ್ಟಿನಿಂದಲೇ ಸವಲತ್ತು ಪಡೆದಿರುವುದು ನಿಜ. ಆದರೆ ಮುಂದಕ್ಕೆ ನಾನು ಸಮಾಜಕ್ಕೆ ಜಾಸ್ತಿ ಕೊಡಬೇಕು, ಇಷ್ಟು ವಂಚಿತರಾದವರು ಜಾಸ್ತಿ ಪಡೆಯಬೇಕು. ಹಾಗಾಗಿ ನಮ್ಮ ಹೋರಾಟ ಬ್ರಾಹ್ಮಣ್ಯದ ವಿರುದ್ಧವಿರುತ್ತದೆ ಎಂದರು.

ಒಂದು ಟ್ವೀಟ್ ಗಾಗಿ ನನ್ನನ್ನು ಉದ್ದೇಶಪೂರ್ವಕವಾಗಿ ಬಂಧಿಸಿದ್ದೀರಿ. ಆದರೆ ಕೋಟ್ಯಾಂತರ ಜನ ಟ್ವೀಟ್ ಮಾಡಿದರೆ ಅವರನ್ನು ಜೈಲಿಗೆ ಹಾಕುತ್ತೀರಾ? ಭ್ರಷ್ಟಾಚಾರಿಗಳು, ಕ್ರಿಮಿನಲ್‌ಗಳು ವಿಧಾನಸೌಧದಲ್ಲಿದ್ದಾರೆ. ಅವರನ್ನು ಮುಟ್ಟುವ ಧೈರ್ಯ ಇಲ್ಲ. ನಮ್ಮನ್ನು ಮಾತ್ರ ಬಂಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಫೆಬ್ರವರಿ 19 ರಂದು ನಾವು ಬೆಂಗಳೂರಿನಲ್ಲಿ ನೀಲಿ ಸಾಗರ ನಿರ್ಮಿಸಿದ್ದೇವೆ. ಹಾಗಾಗಿ ಪ್ರಭುತ್ವ ಹೆದರಿದೆ. ಆ ಹೋರಾಟವನ್ನು ಮುಖ್ಯವಾಹಿನಿ ಮಾಧ್ಯಮಗಳು ಪ್ರಸಾರ ಮಾಡಲಿಲ್ಲ. ಹಾಗಾಗಿ ನಾವು ಸೋಷಿಯಲ್ ಮೀಡಿಯಾ ಮಾತ್ರವಲ್ಲದೆ ಪರ್ಯಾಯ ಮಾಧ್ಯಮ ಕಟ್ಟೋಣ ಎಂದರು.

ಪೊಲಿಸರು ನನ್ನ ಫೋನ್ ತೆಗೆದುಕೊಂಡ 12 ದಿನ ಆದರೂ ಫೋನ್ ವಾಪಸ್ ಕೊಟ್ಟಿಲ್ಲ. ನಾನು ಸಾಮಾಜಿಕ ಜಾಲತಾಣಗಳನ್ನು ಬಳಸಲು ಆಗುತ್ತಿಲ್ಲ. ಬೇರೆಯವರ ಫೋನ್‌ನಲ್ಲಿ ಲಾಗಿನ್ ಆಗಿದ್ದೇನೆ ಎಂದರು.

ಶಾಂತಪ್ಪ ಎಂಬ ಗಾಯಕರು ಡಯಾಲಿಸಿಸ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸುಳ್ಳು ಪ್ರಕರಣದಲ್ಲಿ ಅವರನ್ನು ಸಿಕ್ಕಿಸಲಾಗಿದೆ. 10 ವರ್ಷದಿಂದ ಅವರು ಜೈಲಿನಲ್ಲಿದ್ದಾರೆ. ಒಳ್ಳೆಯ ಗಾಯಕರಾದ ಅವರನ್ನು ಹೊರಗೆ ತರಲು ಪ್ರಯತ್ನ ಮಾಡುತ್ತೇನೆ. ಈ ಕುರಿತು ಹಂಸಲೇಖ ಸರ್ ಜೊತೆ ಮಾತಾಡುತ್ತೇನೆ ಎಂದರು.

ಅವರ ಫೇಸ್‌ಬುಲ್ ಲೈವ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...