Homeಮುಖಪುಟನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್

ನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್

ಪೊಲಿಸರು ನನ್ನ ಫೋನ್ ತೆಗೆದುಕೊಂಡ 12 ದಿನ ಆದರೂ ಫೋನ್ ವಾಪಸ್ ಕೊಟ್ಟಿಲ್ಲ. ನಾನು ಸಾಮಾಜಿಕ ಜಾಲತಾಣಗಳನ್ನು ಬಳಸಲು ಆಗುತ್ತಿಲ್ಲ.

- Advertisement -
- Advertisement -

ಸಿನಿಮಾ ರಂಗದ ಯಾರೂ ಮಾತನಾಡದಿದ್ದಾಗ ಅನ್ಯಾಯದ ವಿರುದ್ಧ ದನಿಯೆತ್ತಿದ ನಟಿ ರಮ್ಯಾ, ವಿಡಿಯೊ ಮಾಡಿದ ನಟ ಕಿರಣ್ ಶ್ರೀನಿವಾಸ್ ಸೇರಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ನಟ ಚೇತನ್ ತಿಳಿಸಿದ್ದಾರೆ.

ಜೈಲಿನಿಂದ ಜಾಮೀನನ ಮೇಲೆ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿದ ಅವರು, “ಒಂದು ಟ್ವೀಟ್ ಕಾರಣಕ್ಕೆ ನನ್ನನ್ನು ಸುಮಾರು ಒಂದು ವಾರಗಳ ಕಾಲ ಜೈಲಿನಲ್ಲಿಟ್ಟಿದ್ದರು. ಆ ಟ್ವೀಟ್‌ನಲ್ಲಿ ಯಾರನ್ನೂ ಅವಹೇಳನ ಮಾಡಿರಲಿಲ್ಲ, ಅದರಲ್ಲಿ ಅವಾಚ್ಯ ಶಬ್ದ ಇರಲಿಲ್ಲ, ಯಾರನ್ನೂ ಪ್ರಚೋದಿಸಿರಲಿಲ್ಲ. ಆದರೂ ಆ ಒಂದು ಟ್ವೀಟ್‌ ಇಟ್ಟುಕೊಂಡು ಕೋಮು ಪ್ರಚೋದನೆ ಮಾಡಿದ್ದೇನೆ ಎಂದು ಆರೋಪ ಹೊರಿಸಿ 504,  505(2) ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದರು” ಎಂದಿದ್ದಾರೆ.

ಕಾಣದ ಕೈಗಳು ಬಂಧನದ ಹಿಂದಿವೆ. ಅಕ್ರಮವಾಗಿ ನನ್ನನ್ನು ಬಂಧಿಸಿ 8-10 ಗಂಟೆಗಳ ಕಾಲ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಇಟ್ಟಿದ್ದರು. ಯಾವ ಕೇಸ್, ಯಾರು ದೂರುದಾರರು ಎಂದು ಸಾಕಷ್ಟು ಕೇಳಿದರೂ ನನಗೆ ಮಾಹಿತಿ ಕೊಟ್ಟಿರಲಿಲ್ಲ. ದೂರು ಕೊಟ್ಟವರು ರವಿ ಎಂಬ ವ್ಯಕ್ತಿ ಮಾತ್ರವಿಲ್ಲ ಹಲವರಿದ್ದಾರೆ ಎಂಬುದು ಗೊತ್ತಾಯಿತು. ಈ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ರವಿ ಕೂಡ ಬಲಿಪಶು ಎಂದು ಅವರು ತಿಳಿಸಿದ್ದಾರೆ.

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಯಾರೂ ಕೂಡ ಪ್ರಶ್ನಾತೀತರಲ್ಲ. ಪ್ರಶ್ನೆ ಮಾಡುವುದು ನಮ್ಮ ಹಕ್ಕು ಮಾತ್ರವಲ್ಲ ಕರ್ತವ್ಯ ಕೂಡ. ಈ ಬಂಧನದಿಂದ ನನಗೆ ಬೇಸರವಾಗಿಲ್ಲ, ಬದಲಿಗೆ ಹೋರಾಟ ಮಾರ್ಗದಲ್ಲಿ ಮತ್ತಷ್ಟು ವಿಶ್ವಾಸ ಬಂದಿದೆ. ನಮ್ಮ ವಿಚಾರದಲ್ಲಿ ಸ್ಪಷ್ಟತೆ, ಅಪಾರ ಶಕ್ತಿ ಮತ್ತು ಗಟ್ಟಿತನ ಇದೆ. ಹಾಗಾಗಿ ನಮ್ಮ ಸತ್ಯ ಕಂಡರೆ ಅವರಿಗೆ ಭಯ. ಅದಕ್ಕೆ ನನ್ನನ್ನು ಬಂಧಿಸಿದ್ದು ಎಂದು ಚೇತನ್ ಹೇಳಿದರು.

ಪುರು‍ಷಪ್ರಧಾನ ವ್ಯವಸ್ಥೆಯಿಂದ ಮಹಿಳೆಯರಿಗೆ ಆಗಿರುವ ಅನ್ಯಾಯ, ಶೂದ್ರರಿಗೆ ಆಗಿರುವ ಅನ್ಯಾಯ, ಬಂಡವಾಳಶಾಹಿಯಿಂದ ಬಡಜನರಿಗೆ ಆಗಿರುವ ಅನ್ಯಾಯ ಮತ್ತು ಕೋಮುವಾದ, ಅತಿ ಬ್ರಾಹ್ಮಣ್ಯ ಬಂದಿರುವುದರಿಂದ ಅಲ್ಪಸಂಖ್ಯಾತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮುಂದುವರೆಸೋಣ. ಯಾವುದೇ ಕಾರಣಕ್ಕೆ ಕುಗ್ಗುವುದು ಬೇಡ ಎಂದರು.

ಜೈಲಿನಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತರರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸ್ಥಾಪಿತ ಶಕ್ತಿಗಳು ಅವರನ್ನು ಗುರಿ ಮಾಡಿದ್ದಾರೆ. ಅವರಿಗೆ ವಕೀಲರು ಸಿಗುತ್ತಿಲ್ಲ. ನಾನು ಶ್ರೀಮಂತ ಕುಟುಂಬದಿಂದ, ಪ್ರಭಾವಿ ಜಾತಿಯಿಂದ ಮತ್ತು ಚಿತ್ರರಂಗದಿಂದ ಬಂದಿದ್ದೇನೆ. ನನ್ನ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಹಾಕಿದರೆ ಇನ್ನು ಜನಸಾಮಾನ್ಯರನ್ನು ಈ ವ್ಯವಸ್ಥೆ ಎಷ್ಟು ಕೆಟ್ಟದಾಗಿ ನಡೆಸಿಕೊಳ್ಳಬಹುದು ಯೋಚಿಸಿ ಎಂದು ಚೇತನ್ ಹೇಳಿದರು.

ನಾನು ಜೈಲಿನಲ್ಲಿ ಅಂಬೇಡ್ಕರ್‌ರವರ ಅನಿಲೇಶನ್ ಆಫ್ ಕಾಸ್ಟ್ ಮತ್ತು ಹು ಆರ್ ಶೂದ್ರಾಶ್ ಎಂಬ ಕೃತಿಗಳನ್ನು ಓದಿದೆ. ವಕೀಲ ಜಗದೀಶ್‌ರವರನ್ನು ಭೇಟಿ ಮಾಡಿದೆ. ಜಗದೀಶ್ ರವರು ಕುಗ್ಗಿಲ್ಲ.. ಅವರ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದೇನೆ.

ಪೆರಿಯಾರ್‌ರವರನ್ನು 80 ಬಾರಿ ಜೈಲಿಗೆ ಹಾಕಲಾಗಿತ್ತು. ಜೈಲು ಎಂದರೆ ನನಗೆ ಭಯವಿಲ್ಲ. ನಾನು ಸತ್ಯಕ್ಕಾಗಿ ಮತ್ತೆ ಜೈಲಿಗೆ ಹೋಗಲು ಸಿದ್ದನಿದ್ದೇನೆ. ನಾವು ಯಾವುದೇ ಜಾತಿ, ಮತ, ಭಾಷೆಯ ವಿರುದ್ಧ ಇಲ್ಲ. ನಾವು ಅಸಮಾನತೆಯ ವಿರುದ್ಧ ಇದ್ದೇವೆ. ಬ್ರಾಹ್ಮಣ್ಯ ಎನ್ನುವುದು ಒಂದು ಮನಸ್ಥಿತಿ. ಎಲ್ಲಾ ಬ್ರಾಹ್ಮಣ್ಯರು ಸವಲತ್ತು ಪಡೆದಿರಬಹುದು. ಆದರೆ ಎಲ್ಲರೂ ಬ್ರಾಹ್ಮಣ್ಯ ಅನುಸರಿಸುವುದಿಲ್ಲ. ಅವರು ಹುಟ್ಟಿನಿಂದಲೇ ಸವಲತ್ತು ಪಡೆದಿರುವುದು ನಿಜ. ಆದರೆ ಮುಂದಕ್ಕೆ ನಾನು ಸಮಾಜಕ್ಕೆ ಜಾಸ್ತಿ ಕೊಡಬೇಕು, ಇಷ್ಟು ವಂಚಿತರಾದವರು ಜಾಸ್ತಿ ಪಡೆಯಬೇಕು. ಹಾಗಾಗಿ ನಮ್ಮ ಹೋರಾಟ ಬ್ರಾಹ್ಮಣ್ಯದ ವಿರುದ್ಧವಿರುತ್ತದೆ ಎಂದರು.

ಒಂದು ಟ್ವೀಟ್ ಗಾಗಿ ನನ್ನನ್ನು ಉದ್ದೇಶಪೂರ್ವಕವಾಗಿ ಬಂಧಿಸಿದ್ದೀರಿ. ಆದರೆ ಕೋಟ್ಯಾಂತರ ಜನ ಟ್ವೀಟ್ ಮಾಡಿದರೆ ಅವರನ್ನು ಜೈಲಿಗೆ ಹಾಕುತ್ತೀರಾ? ಭ್ರಷ್ಟಾಚಾರಿಗಳು, ಕ್ರಿಮಿನಲ್‌ಗಳು ವಿಧಾನಸೌಧದಲ್ಲಿದ್ದಾರೆ. ಅವರನ್ನು ಮುಟ್ಟುವ ಧೈರ್ಯ ಇಲ್ಲ. ನಮ್ಮನ್ನು ಮಾತ್ರ ಬಂಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಫೆಬ್ರವರಿ 19 ರಂದು ನಾವು ಬೆಂಗಳೂರಿನಲ್ಲಿ ನೀಲಿ ಸಾಗರ ನಿರ್ಮಿಸಿದ್ದೇವೆ. ಹಾಗಾಗಿ ಪ್ರಭುತ್ವ ಹೆದರಿದೆ. ಆ ಹೋರಾಟವನ್ನು ಮುಖ್ಯವಾಹಿನಿ ಮಾಧ್ಯಮಗಳು ಪ್ರಸಾರ ಮಾಡಲಿಲ್ಲ. ಹಾಗಾಗಿ ನಾವು ಸೋಷಿಯಲ್ ಮೀಡಿಯಾ ಮಾತ್ರವಲ್ಲದೆ ಪರ್ಯಾಯ ಮಾಧ್ಯಮ ಕಟ್ಟೋಣ ಎಂದರು.

ಪೊಲಿಸರು ನನ್ನ ಫೋನ್ ತೆಗೆದುಕೊಂಡ 12 ದಿನ ಆದರೂ ಫೋನ್ ವಾಪಸ್ ಕೊಟ್ಟಿಲ್ಲ. ನಾನು ಸಾಮಾಜಿಕ ಜಾಲತಾಣಗಳನ್ನು ಬಳಸಲು ಆಗುತ್ತಿಲ್ಲ. ಬೇರೆಯವರ ಫೋನ್‌ನಲ್ಲಿ ಲಾಗಿನ್ ಆಗಿದ್ದೇನೆ ಎಂದರು.

ಶಾಂತಪ್ಪ ಎಂಬ ಗಾಯಕರು ಡಯಾಲಿಸಿಸ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸುಳ್ಳು ಪ್ರಕರಣದಲ್ಲಿ ಅವರನ್ನು ಸಿಕ್ಕಿಸಲಾಗಿದೆ. 10 ವರ್ಷದಿಂದ ಅವರು ಜೈಲಿನಲ್ಲಿದ್ದಾರೆ. ಒಳ್ಳೆಯ ಗಾಯಕರಾದ ಅವರನ್ನು ಹೊರಗೆ ತರಲು ಪ್ರಯತ್ನ ಮಾಡುತ್ತೇನೆ. ಈ ಕುರಿತು ಹಂಸಲೇಖ ಸರ್ ಜೊತೆ ಮಾತಾಡುತ್ತೇನೆ ಎಂದರು.

ಅವರ ಫೇಸ್‌ಬುಲ್ ಲೈವ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...