Homeಮುಖಪುಟನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್

ನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್

ಪೊಲಿಸರು ನನ್ನ ಫೋನ್ ತೆಗೆದುಕೊಂಡ 12 ದಿನ ಆದರೂ ಫೋನ್ ವಾಪಸ್ ಕೊಟ್ಟಿಲ್ಲ. ನಾನು ಸಾಮಾಜಿಕ ಜಾಲತಾಣಗಳನ್ನು ಬಳಸಲು ಆಗುತ್ತಿಲ್ಲ.

- Advertisement -
- Advertisement -

ಸಿನಿಮಾ ರಂಗದ ಯಾರೂ ಮಾತನಾಡದಿದ್ದಾಗ ಅನ್ಯಾಯದ ವಿರುದ್ಧ ದನಿಯೆತ್ತಿದ ನಟಿ ರಮ್ಯಾ, ವಿಡಿಯೊ ಮಾಡಿದ ನಟ ಕಿರಣ್ ಶ್ರೀನಿವಾಸ್ ಸೇರಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ನಟ ಚೇತನ್ ತಿಳಿಸಿದ್ದಾರೆ.

ಜೈಲಿನಿಂದ ಜಾಮೀನನ ಮೇಲೆ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿದ ಅವರು, “ಒಂದು ಟ್ವೀಟ್ ಕಾರಣಕ್ಕೆ ನನ್ನನ್ನು ಸುಮಾರು ಒಂದು ವಾರಗಳ ಕಾಲ ಜೈಲಿನಲ್ಲಿಟ್ಟಿದ್ದರು. ಆ ಟ್ವೀಟ್‌ನಲ್ಲಿ ಯಾರನ್ನೂ ಅವಹೇಳನ ಮಾಡಿರಲಿಲ್ಲ, ಅದರಲ್ಲಿ ಅವಾಚ್ಯ ಶಬ್ದ ಇರಲಿಲ್ಲ, ಯಾರನ್ನೂ ಪ್ರಚೋದಿಸಿರಲಿಲ್ಲ. ಆದರೂ ಆ ಒಂದು ಟ್ವೀಟ್‌ ಇಟ್ಟುಕೊಂಡು ಕೋಮು ಪ್ರಚೋದನೆ ಮಾಡಿದ್ದೇನೆ ಎಂದು ಆರೋಪ ಹೊರಿಸಿ 504,  505(2) ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದರು” ಎಂದಿದ್ದಾರೆ.

ಕಾಣದ ಕೈಗಳು ಬಂಧನದ ಹಿಂದಿವೆ. ಅಕ್ರಮವಾಗಿ ನನ್ನನ್ನು ಬಂಧಿಸಿ 8-10 ಗಂಟೆಗಳ ಕಾಲ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಇಟ್ಟಿದ್ದರು. ಯಾವ ಕೇಸ್, ಯಾರು ದೂರುದಾರರು ಎಂದು ಸಾಕಷ್ಟು ಕೇಳಿದರೂ ನನಗೆ ಮಾಹಿತಿ ಕೊಟ್ಟಿರಲಿಲ್ಲ. ದೂರು ಕೊಟ್ಟವರು ರವಿ ಎಂಬ ವ್ಯಕ್ತಿ ಮಾತ್ರವಿಲ್ಲ ಹಲವರಿದ್ದಾರೆ ಎಂಬುದು ಗೊತ್ತಾಯಿತು. ಈ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ರವಿ ಕೂಡ ಬಲಿಪಶು ಎಂದು ಅವರು ತಿಳಿಸಿದ್ದಾರೆ.

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಯಾರೂ ಕೂಡ ಪ್ರಶ್ನಾತೀತರಲ್ಲ. ಪ್ರಶ್ನೆ ಮಾಡುವುದು ನಮ್ಮ ಹಕ್ಕು ಮಾತ್ರವಲ್ಲ ಕರ್ತವ್ಯ ಕೂಡ. ಈ ಬಂಧನದಿಂದ ನನಗೆ ಬೇಸರವಾಗಿಲ್ಲ, ಬದಲಿಗೆ ಹೋರಾಟ ಮಾರ್ಗದಲ್ಲಿ ಮತ್ತಷ್ಟು ವಿಶ್ವಾಸ ಬಂದಿದೆ. ನಮ್ಮ ವಿಚಾರದಲ್ಲಿ ಸ್ಪಷ್ಟತೆ, ಅಪಾರ ಶಕ್ತಿ ಮತ್ತು ಗಟ್ಟಿತನ ಇದೆ. ಹಾಗಾಗಿ ನಮ್ಮ ಸತ್ಯ ಕಂಡರೆ ಅವರಿಗೆ ಭಯ. ಅದಕ್ಕೆ ನನ್ನನ್ನು ಬಂಧಿಸಿದ್ದು ಎಂದು ಚೇತನ್ ಹೇಳಿದರು.

ಪುರು‍ಷಪ್ರಧಾನ ವ್ಯವಸ್ಥೆಯಿಂದ ಮಹಿಳೆಯರಿಗೆ ಆಗಿರುವ ಅನ್ಯಾಯ, ಶೂದ್ರರಿಗೆ ಆಗಿರುವ ಅನ್ಯಾಯ, ಬಂಡವಾಳಶಾಹಿಯಿಂದ ಬಡಜನರಿಗೆ ಆಗಿರುವ ಅನ್ಯಾಯ ಮತ್ತು ಕೋಮುವಾದ, ಅತಿ ಬ್ರಾಹ್ಮಣ್ಯ ಬಂದಿರುವುದರಿಂದ ಅಲ್ಪಸಂಖ್ಯಾತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮುಂದುವರೆಸೋಣ. ಯಾವುದೇ ಕಾರಣಕ್ಕೆ ಕುಗ್ಗುವುದು ಬೇಡ ಎಂದರು.

ಜೈಲಿನಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತರರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸ್ಥಾಪಿತ ಶಕ್ತಿಗಳು ಅವರನ್ನು ಗುರಿ ಮಾಡಿದ್ದಾರೆ. ಅವರಿಗೆ ವಕೀಲರು ಸಿಗುತ್ತಿಲ್ಲ. ನಾನು ಶ್ರೀಮಂತ ಕುಟುಂಬದಿಂದ, ಪ್ರಭಾವಿ ಜಾತಿಯಿಂದ ಮತ್ತು ಚಿತ್ರರಂಗದಿಂದ ಬಂದಿದ್ದೇನೆ. ನನ್ನ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಹಾಕಿದರೆ ಇನ್ನು ಜನಸಾಮಾನ್ಯರನ್ನು ಈ ವ್ಯವಸ್ಥೆ ಎಷ್ಟು ಕೆಟ್ಟದಾಗಿ ನಡೆಸಿಕೊಳ್ಳಬಹುದು ಯೋಚಿಸಿ ಎಂದು ಚೇತನ್ ಹೇಳಿದರು.

ನಾನು ಜೈಲಿನಲ್ಲಿ ಅಂಬೇಡ್ಕರ್‌ರವರ ಅನಿಲೇಶನ್ ಆಫ್ ಕಾಸ್ಟ್ ಮತ್ತು ಹು ಆರ್ ಶೂದ್ರಾಶ್ ಎಂಬ ಕೃತಿಗಳನ್ನು ಓದಿದೆ. ವಕೀಲ ಜಗದೀಶ್‌ರವರನ್ನು ಭೇಟಿ ಮಾಡಿದೆ. ಜಗದೀಶ್ ರವರು ಕುಗ್ಗಿಲ್ಲ.. ಅವರ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದೇನೆ.

ಪೆರಿಯಾರ್‌ರವರನ್ನು 80 ಬಾರಿ ಜೈಲಿಗೆ ಹಾಕಲಾಗಿತ್ತು. ಜೈಲು ಎಂದರೆ ನನಗೆ ಭಯವಿಲ್ಲ. ನಾನು ಸತ್ಯಕ್ಕಾಗಿ ಮತ್ತೆ ಜೈಲಿಗೆ ಹೋಗಲು ಸಿದ್ದನಿದ್ದೇನೆ. ನಾವು ಯಾವುದೇ ಜಾತಿ, ಮತ, ಭಾಷೆಯ ವಿರುದ್ಧ ಇಲ್ಲ. ನಾವು ಅಸಮಾನತೆಯ ವಿರುದ್ಧ ಇದ್ದೇವೆ. ಬ್ರಾಹ್ಮಣ್ಯ ಎನ್ನುವುದು ಒಂದು ಮನಸ್ಥಿತಿ. ಎಲ್ಲಾ ಬ್ರಾಹ್ಮಣ್ಯರು ಸವಲತ್ತು ಪಡೆದಿರಬಹುದು. ಆದರೆ ಎಲ್ಲರೂ ಬ್ರಾಹ್ಮಣ್ಯ ಅನುಸರಿಸುವುದಿಲ್ಲ. ಅವರು ಹುಟ್ಟಿನಿಂದಲೇ ಸವಲತ್ತು ಪಡೆದಿರುವುದು ನಿಜ. ಆದರೆ ಮುಂದಕ್ಕೆ ನಾನು ಸಮಾಜಕ್ಕೆ ಜಾಸ್ತಿ ಕೊಡಬೇಕು, ಇಷ್ಟು ವಂಚಿತರಾದವರು ಜಾಸ್ತಿ ಪಡೆಯಬೇಕು. ಹಾಗಾಗಿ ನಮ್ಮ ಹೋರಾಟ ಬ್ರಾಹ್ಮಣ್ಯದ ವಿರುದ್ಧವಿರುತ್ತದೆ ಎಂದರು.

ಒಂದು ಟ್ವೀಟ್ ಗಾಗಿ ನನ್ನನ್ನು ಉದ್ದೇಶಪೂರ್ವಕವಾಗಿ ಬಂಧಿಸಿದ್ದೀರಿ. ಆದರೆ ಕೋಟ್ಯಾಂತರ ಜನ ಟ್ವೀಟ್ ಮಾಡಿದರೆ ಅವರನ್ನು ಜೈಲಿಗೆ ಹಾಕುತ್ತೀರಾ? ಭ್ರಷ್ಟಾಚಾರಿಗಳು, ಕ್ರಿಮಿನಲ್‌ಗಳು ವಿಧಾನಸೌಧದಲ್ಲಿದ್ದಾರೆ. ಅವರನ್ನು ಮುಟ್ಟುವ ಧೈರ್ಯ ಇಲ್ಲ. ನಮ್ಮನ್ನು ಮಾತ್ರ ಬಂಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಫೆಬ್ರವರಿ 19 ರಂದು ನಾವು ಬೆಂಗಳೂರಿನಲ್ಲಿ ನೀಲಿ ಸಾಗರ ನಿರ್ಮಿಸಿದ್ದೇವೆ. ಹಾಗಾಗಿ ಪ್ರಭುತ್ವ ಹೆದರಿದೆ. ಆ ಹೋರಾಟವನ್ನು ಮುಖ್ಯವಾಹಿನಿ ಮಾಧ್ಯಮಗಳು ಪ್ರಸಾರ ಮಾಡಲಿಲ್ಲ. ಹಾಗಾಗಿ ನಾವು ಸೋಷಿಯಲ್ ಮೀಡಿಯಾ ಮಾತ್ರವಲ್ಲದೆ ಪರ್ಯಾಯ ಮಾಧ್ಯಮ ಕಟ್ಟೋಣ ಎಂದರು.

ಪೊಲಿಸರು ನನ್ನ ಫೋನ್ ತೆಗೆದುಕೊಂಡ 12 ದಿನ ಆದರೂ ಫೋನ್ ವಾಪಸ್ ಕೊಟ್ಟಿಲ್ಲ. ನಾನು ಸಾಮಾಜಿಕ ಜಾಲತಾಣಗಳನ್ನು ಬಳಸಲು ಆಗುತ್ತಿಲ್ಲ. ಬೇರೆಯವರ ಫೋನ್‌ನಲ್ಲಿ ಲಾಗಿನ್ ಆಗಿದ್ದೇನೆ ಎಂದರು.

ಶಾಂತಪ್ಪ ಎಂಬ ಗಾಯಕರು ಡಯಾಲಿಸಿಸ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸುಳ್ಳು ಪ್ರಕರಣದಲ್ಲಿ ಅವರನ್ನು ಸಿಕ್ಕಿಸಲಾಗಿದೆ. 10 ವರ್ಷದಿಂದ ಅವರು ಜೈಲಿನಲ್ಲಿದ್ದಾರೆ. ಒಳ್ಳೆಯ ಗಾಯಕರಾದ ಅವರನ್ನು ಹೊರಗೆ ತರಲು ಪ್ರಯತ್ನ ಮಾಡುತ್ತೇನೆ. ಈ ಕುರಿತು ಹಂಸಲೇಖ ಸರ್ ಜೊತೆ ಮಾತಾಡುತ್ತೇನೆ ಎಂದರು.

ಅವರ ಫೇಸ್‌ಬುಲ್ ಲೈವ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...