Homeಕರ್ನಾಟಕ‘ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು’ - ಹಿರಿಯೂರು ಬಿಜೆಪಿ ಶಾಸಕಿ

‘ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು’ – ಹಿರಿಯೂರು ಬಿಜೆಪಿ ಶಾಸಕಿ

40 ಲಕ್ಷಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿದ್ದು, ಒಂದು ಸ್ಥಾನ ನೀಡದೇ ಇರುವುದು ತುಂಬಾ ನೋವುಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ರಾಜ್ಯದ ಮಂತ್ರಿ ಮಂಡಲ ಕೊನೆಗೂ ರಚನೆಯಾಗಿದೆ. ಇದರ ಮಧ್ಯೆ ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಅವರು ಬಹಿರಂಗವಾಗಿ ಪಕ್ಷದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಜೆಪಿಯು ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ನೀಡಿದೆ. ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು. ಪಕ್ಷ ಚಿತ್ರದುರ್ಗ ಜಿಲ್ಲೆಗೂ ಅವಮಾನ ಮಾಡಿದೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ರಾಜ್ಯದ ಗೊಲ್ಲ ಸಮುದಾಯ 80% ದಷ್ಟು ಭಾಗ ಬಿಜೆಪಿಗೆ ಮತ ನೀಡಿದ್ದು ಪಕ್ಷ ಮರೆಯಬಾರದು ಇತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟು 29 ಶಾಸಕರು ರಾಜಭವನದಲ್ಲಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೊಸ ಸಂಪುಟದಲ್ಲಿ ರಾಜ್ಯದ ಒಟ್ಟು 13 ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ನಡುವೆ ಹಲವು ಶಾಸಕರ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಪಟ್ಟಿಯಲ್ಲಿ ಹೆಸರಿಲ್ಲದ ಕೆಲ ಶಾಸಕರು ಬಂಡಾಯವೆದ್ದಿದ್ದಾರೆ. ಹಾವೇರಿಯಲ್ಲಿ ಶಾಸಕ ನೆಹರು ಓಲೇಕಾರ್ ಬೆಂಬಲಿಗರು ಪ್ರತಿಭಟನೆ ನಡೆಸಿದರೆ, ಯಡಿಯೂರಪ್ಪ ಆಪ್ತ ರೇಣುಕಾಚಾರ್ಯ ಕಣ್ಣೀರು ಹರಿಸಿದ್ದಾರೆ.

ಇದನ್ನೂ ಓದಿ: 12 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಇಲ್ಲ ಪ್ರಾತಿನಿಧ್ಯ: ಹಲವೆಡೆ ಬಂಡಾಯ ಆರಂಭ

ಕೆ. ಪೂರ್ಣಿಮಾ ಅವರು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರಿಗೆ ಸಚಿವ ಸ್ಥಾನ ನೀಡಿರುವುದಕ್ಕೂ ಕಿಡಿ ಕಾರಿದ್ದಾರೆ. ಜೊಲ್ಲೆ ಅವರು ಪ್ರಸ್ತುತ ಸಂಪುಟದಲ್ಲಿರುವ ಏಕೈಕ ಮಹಿಳಾ ಮಂತ್ರಿಯಾಗಿದ್ದಾರೆ, ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು.

ತನ್ನ ಫೇಸ್‌ಬುಕ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಪೂರ್ಣಿಮಾ, “ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಮನೆಯವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾಗಲೂ ನಾನು ಪಕ್ಷದ ಸಿದ್ಧಾಂತದ ಅಡಿಯಲ್ಲಿ ಕೆಲಸ ಮಾಡಿ ಶಿರಾ ಬೈ ಎಲೆಕ್ಷನ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಕ್ಷಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೆ. ಎಂಎಲ್ಸಿ ಚುನಾವಣೆಯಲ್ಲಿ ಕೂಡಾ ನನ್ನ ಯಜಮಾನರ ಪರವಾಗಿ ಪ್ರಚಾರ ಮಾಡಿರಲಿಲ್ಲ” ಎಂದು ಹೇಳಿದ್ದಾರೆ.

“ಕಳೆದ ಬಸವಕಲ್ಯಾಣ ಉಪಚುನಾವಣೆಯಲ್ಲಿ ಮುಖ್ಯಮಂತ್ರಿಗಳ ಆದೇಶದಂತೆ ಕ್ಷೇತ್ರದಲ್ಲಿ ಓಡಾಡಿ ಗೊಲ್ಲ ಸಮುದಾಯದ ಹೆಚ್ಚು ಮತಗಳನ್ನು ಕೂಡ ಕ್ಷೇತ್ರದಲ್ಲಿ ಪಕ್ಷಕ್ಕೆ ತಂದಿದ್ದೆ. ಮುಖ್ಯವಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಪ್ರಧಾನಿಗಳನ್ನು ಸೋಲಿಸಲು ನಮ್ಮ ಸಮುದಾಯದ ಮತಗಳು ಹೆಚ್ಚು ನಿರ್ಣಯವಾಗಿದ್ದವು, ಪಕ್ಷವು ಅದನ್ನೆಲ್ಲ ಮರೆತಿದೆ” ಎಂದು ತಿಳಿಸಿದ್ದಾರೆ.

“ಹಲವು ಜಿಲ್ಲೆಯ ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಸಮುದಾಯದ ಹಾಗೂ ಇತರೆ ಹಿಂದುಳಿದ ಸಮಾಜಗಳನ್ನು ಸಂಘಟನೆ ಮಾಡಿ ಪಕ್ಷಕ್ಕೆ ಹೆಚ್ಚು ಮತಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಎಲ್ಲವನ್ನು ಮರೆತು ಪಕ್ಷ ಈಗ ಜಾಣ ಕುರುಡರಂತೆ ವರ್ತಿಸುತ್ತಿರುವುದು ನೋವುಂಟು ಮಾಡಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಹೊತ್ತಿರುವ ಶಶಿಕಲಾ ಜೊಲ್ಲೆಗೆ ಮತ್ತೆ ಸಚಿವ ಸ್ಥಾನ!

“ರಾಜ್ಯದಲ್ಲಿ ಗೊಲ್ಲ ಸಮುದಾಯದಿಂದ ಏಕೈಕ ವಿಧಾನಸಭಾ ಜನಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸಿದ್ದ ನಾನು ಎಂದು ಪಕ್ಷ ಬಾಹಿರ ಚಟುವಟಿಕೆಯಲ್ಲಿ ಇರಲಿಲ್ಲ. ಯಾವುದೇ ಹಗರಣ ನನ್ನ ಸುತ್ತಿ ಕೊಂಡಿರಲಿಲ್ಲ. ಇಂದು ಪಕ್ಷ ತೆಗೆದುಕೊಂಡಿರುವ ನಿರ್ಧಾರ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ನೀಡಿ, ಒಂದೇ ಮನೆಯಲ್ಲಿ ಎರಡು ಮೂರು ಅಧಿಕಾರ ನೀಡಿದೆ. ಯಾವುದೇ ಹಗರಣ ಇಲ್ಲದೆ ಇರುವ ಇನ್ನೊಬ್ಬ ಮಹಿಳೆಗೂ ಸಚಿವ ಸ್ಥಾನ ನೀಡಿದರೆ ಸಂತೋಷದಿಂದ ಸ್ವಾಗತಿಸುತ್ತಿದೆ” ಎಂದು ಶಶಿಕಲಾ ಜೊಲ್ಲೆ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸ್ವಂತ ಬಲದಿಂದ ಗೆದ್ದಿರುವ ನನಗೂ ಹಾಗೂ ಇನ್ನೊಬ್ಬ ಮಹಿಳಾ ಶಾಸಕಿಯವರಿಗೂ ಇದು ಪಕ್ಷ ಮಾಡುತ್ತಿರುವ ದೊಡ್ಡ ಅವಮಾನ. ಚಿತ್ರದುರ್ಗ ಜಿಲ್ಲೆಯಲ್ಲಿ ಗೂಳಿಹಟ್ಟಿ ಶೇಖರ್‌‌, ಚಂದ್ರಪ್ಪರಂತಹ ಹಿರಿಯ ನಾಯಕರು ಮತ್ತು ಆರು ಬಾರಿ ಗೆದ್ದಂತಹ ತಿಪ್ಪಾರೆಡ್ಡಿ ಅವರಿಗಾದರೂ ಸಚಿವ ಸ್ಥಾನ ನೀಡಬಹುದಿತ್ತು” ಎಂದು ಅವರು ಹೇಳಿದ್ದಾರೆ.

“ಇದು ಪಕ್ಷವು ನಮ್ಮ ಜಿಲ್ಲೆಗೆ ಮಾಡುತ್ತಿರುವ ಅವಮಾನ. ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ರಾಜ್ಯದ ಗೊಲ್ಲ ಸಮುದಾಯದ 80 ರಷ್ಟು ಭಾಗವು ಬಿಜೆಪಿಗೆ ಮತ ನೀಡಿದೆ, ಇದನ್ನು ಪಕ್ಷ ಮರೆಯಬಾರದು ಇತ್ತು. ರಾಜ್ಯದಲ್ಲಿ 40 ಲಕ್ಷಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿದ್ದು, ಒಂದು ಸ್ಥಾನ ನೀಡದೇ ಇರುವುದು ತುಂಬಾ ನೋವುಂಟು ಮಾಡಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದ 5 ನೂತನ ಸಚಿವರಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...