Homeಕರ್ನಾಟಕ‘ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು’ - ಹಿರಿಯೂರು ಬಿಜೆಪಿ ಶಾಸಕಿ

‘ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು’ – ಹಿರಿಯೂರು ಬಿಜೆಪಿ ಶಾಸಕಿ

40 ಲಕ್ಷಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿದ್ದು, ಒಂದು ಸ್ಥಾನ ನೀಡದೇ ಇರುವುದು ತುಂಬಾ ನೋವುಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ರಾಜ್ಯದ ಮಂತ್ರಿ ಮಂಡಲ ಕೊನೆಗೂ ರಚನೆಯಾಗಿದೆ. ಇದರ ಮಧ್ಯೆ ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಅವರು ಬಹಿರಂಗವಾಗಿ ಪಕ್ಷದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಜೆಪಿಯು ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ನೀಡಿದೆ. ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು. ಪಕ್ಷ ಚಿತ್ರದುರ್ಗ ಜಿಲ್ಲೆಗೂ ಅವಮಾನ ಮಾಡಿದೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ರಾಜ್ಯದ ಗೊಲ್ಲ ಸಮುದಾಯ 80% ದಷ್ಟು ಭಾಗ ಬಿಜೆಪಿಗೆ ಮತ ನೀಡಿದ್ದು ಪಕ್ಷ ಮರೆಯಬಾರದು ಇತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟು 29 ಶಾಸಕರು ರಾಜಭವನದಲ್ಲಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೊಸ ಸಂಪುಟದಲ್ಲಿ ರಾಜ್ಯದ ಒಟ್ಟು 13 ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ನಡುವೆ ಹಲವು ಶಾಸಕರ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಪಟ್ಟಿಯಲ್ಲಿ ಹೆಸರಿಲ್ಲದ ಕೆಲ ಶಾಸಕರು ಬಂಡಾಯವೆದ್ದಿದ್ದಾರೆ. ಹಾವೇರಿಯಲ್ಲಿ ಶಾಸಕ ನೆಹರು ಓಲೇಕಾರ್ ಬೆಂಬಲಿಗರು ಪ್ರತಿಭಟನೆ ನಡೆಸಿದರೆ, ಯಡಿಯೂರಪ್ಪ ಆಪ್ತ ರೇಣುಕಾಚಾರ್ಯ ಕಣ್ಣೀರು ಹರಿಸಿದ್ದಾರೆ.

ಇದನ್ನೂ ಓದಿ: 12 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಇಲ್ಲ ಪ್ರಾತಿನಿಧ್ಯ: ಹಲವೆಡೆ ಬಂಡಾಯ ಆರಂಭ

ಕೆ. ಪೂರ್ಣಿಮಾ ಅವರು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರಿಗೆ ಸಚಿವ ಸ್ಥಾನ ನೀಡಿರುವುದಕ್ಕೂ ಕಿಡಿ ಕಾರಿದ್ದಾರೆ. ಜೊಲ್ಲೆ ಅವರು ಪ್ರಸ್ತುತ ಸಂಪುಟದಲ್ಲಿರುವ ಏಕೈಕ ಮಹಿಳಾ ಮಂತ್ರಿಯಾಗಿದ್ದಾರೆ, ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು.

ತನ್ನ ಫೇಸ್‌ಬುಕ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಪೂರ್ಣಿಮಾ, “ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಮನೆಯವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾಗಲೂ ನಾನು ಪಕ್ಷದ ಸಿದ್ಧಾಂತದ ಅಡಿಯಲ್ಲಿ ಕೆಲಸ ಮಾಡಿ ಶಿರಾ ಬೈ ಎಲೆಕ್ಷನ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಕ್ಷಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೆ. ಎಂಎಲ್ಸಿ ಚುನಾವಣೆಯಲ್ಲಿ ಕೂಡಾ ನನ್ನ ಯಜಮಾನರ ಪರವಾಗಿ ಪ್ರಚಾರ ಮಾಡಿರಲಿಲ್ಲ” ಎಂದು ಹೇಳಿದ್ದಾರೆ.

“ಕಳೆದ ಬಸವಕಲ್ಯಾಣ ಉಪಚುನಾವಣೆಯಲ್ಲಿ ಮುಖ್ಯಮಂತ್ರಿಗಳ ಆದೇಶದಂತೆ ಕ್ಷೇತ್ರದಲ್ಲಿ ಓಡಾಡಿ ಗೊಲ್ಲ ಸಮುದಾಯದ ಹೆಚ್ಚು ಮತಗಳನ್ನು ಕೂಡ ಕ್ಷೇತ್ರದಲ್ಲಿ ಪಕ್ಷಕ್ಕೆ ತಂದಿದ್ದೆ. ಮುಖ್ಯವಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಪ್ರಧಾನಿಗಳನ್ನು ಸೋಲಿಸಲು ನಮ್ಮ ಸಮುದಾಯದ ಮತಗಳು ಹೆಚ್ಚು ನಿರ್ಣಯವಾಗಿದ್ದವು, ಪಕ್ಷವು ಅದನ್ನೆಲ್ಲ ಮರೆತಿದೆ” ಎಂದು ತಿಳಿಸಿದ್ದಾರೆ.

“ಹಲವು ಜಿಲ್ಲೆಯ ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಸಮುದಾಯದ ಹಾಗೂ ಇತರೆ ಹಿಂದುಳಿದ ಸಮಾಜಗಳನ್ನು ಸಂಘಟನೆ ಮಾಡಿ ಪಕ್ಷಕ್ಕೆ ಹೆಚ್ಚು ಮತಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಎಲ್ಲವನ್ನು ಮರೆತು ಪಕ್ಷ ಈಗ ಜಾಣ ಕುರುಡರಂತೆ ವರ್ತಿಸುತ್ತಿರುವುದು ನೋವುಂಟು ಮಾಡಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಹೊತ್ತಿರುವ ಶಶಿಕಲಾ ಜೊಲ್ಲೆಗೆ ಮತ್ತೆ ಸಚಿವ ಸ್ಥಾನ!

“ರಾಜ್ಯದಲ್ಲಿ ಗೊಲ್ಲ ಸಮುದಾಯದಿಂದ ಏಕೈಕ ವಿಧಾನಸಭಾ ಜನಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸಿದ್ದ ನಾನು ಎಂದು ಪಕ್ಷ ಬಾಹಿರ ಚಟುವಟಿಕೆಯಲ್ಲಿ ಇರಲಿಲ್ಲ. ಯಾವುದೇ ಹಗರಣ ನನ್ನ ಸುತ್ತಿ ಕೊಂಡಿರಲಿಲ್ಲ. ಇಂದು ಪಕ್ಷ ತೆಗೆದುಕೊಂಡಿರುವ ನಿರ್ಧಾರ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ನೀಡಿ, ಒಂದೇ ಮನೆಯಲ್ಲಿ ಎರಡು ಮೂರು ಅಧಿಕಾರ ನೀಡಿದೆ. ಯಾವುದೇ ಹಗರಣ ಇಲ್ಲದೆ ಇರುವ ಇನ್ನೊಬ್ಬ ಮಹಿಳೆಗೂ ಸಚಿವ ಸ್ಥಾನ ನೀಡಿದರೆ ಸಂತೋಷದಿಂದ ಸ್ವಾಗತಿಸುತ್ತಿದೆ” ಎಂದು ಶಶಿಕಲಾ ಜೊಲ್ಲೆ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸ್ವಂತ ಬಲದಿಂದ ಗೆದ್ದಿರುವ ನನಗೂ ಹಾಗೂ ಇನ್ನೊಬ್ಬ ಮಹಿಳಾ ಶಾಸಕಿಯವರಿಗೂ ಇದು ಪಕ್ಷ ಮಾಡುತ್ತಿರುವ ದೊಡ್ಡ ಅವಮಾನ. ಚಿತ್ರದುರ್ಗ ಜಿಲ್ಲೆಯಲ್ಲಿ ಗೂಳಿಹಟ್ಟಿ ಶೇಖರ್‌‌, ಚಂದ್ರಪ್ಪರಂತಹ ಹಿರಿಯ ನಾಯಕರು ಮತ್ತು ಆರು ಬಾರಿ ಗೆದ್ದಂತಹ ತಿಪ್ಪಾರೆಡ್ಡಿ ಅವರಿಗಾದರೂ ಸಚಿವ ಸ್ಥಾನ ನೀಡಬಹುದಿತ್ತು” ಎಂದು ಅವರು ಹೇಳಿದ್ದಾರೆ.

“ಇದು ಪಕ್ಷವು ನಮ್ಮ ಜಿಲ್ಲೆಗೆ ಮಾಡುತ್ತಿರುವ ಅವಮಾನ. ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ರಾಜ್ಯದ ಗೊಲ್ಲ ಸಮುದಾಯದ 80 ರಷ್ಟು ಭಾಗವು ಬಿಜೆಪಿಗೆ ಮತ ನೀಡಿದೆ, ಇದನ್ನು ಪಕ್ಷ ಮರೆಯಬಾರದು ಇತ್ತು. ರಾಜ್ಯದಲ್ಲಿ 40 ಲಕ್ಷಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿದ್ದು, ಒಂದು ಸ್ಥಾನ ನೀಡದೇ ಇರುವುದು ತುಂಬಾ ನೋವುಂಟು ಮಾಡಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದ 5 ನೂತನ ಸಚಿವರಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...