Homeಮುಖಪುಟ2024ರ ಚುನಾವಣೆಯಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ; ರಾಹುಲ್ ಗಾಂಧಿ

2024ರ ಚುನಾವಣೆಯಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ; ರಾಹುಲ್ ಗಾಂಧಿ

- Advertisement -
- Advertisement -

ಮುಂಬರುವ 2024ರ ಚುನಾವಣೆಯಲ್ಲಿ ಎಲ್ಲರನ್ನೂ ಚಕಿತಗೊಳಿಸುವ ಫಲಿತಾಂಶ ಬರಲಿದೆ. ಏಕೆಂದರೆ ಮೋದಿ ಸರ್ಕಾರದ ವಿರುದ್ಧ ಅಗೋಚರ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಅಮೆರಿಕದ ವಾಷಿಂಗ್ಟನ್‌ನಲ್ಲಿ ನ್ಯಾಷನಲ್ ಪ್ರೆಸ್ ಕ್ಲಬ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ವಿರೋಧ ಪಕ್ಷಗಳು ಒಂದಾಗುತ್ತಿವೆ. ತಳಮಟ್ಟದಲ್ಲಿ ಕಾರ್ಯಾಚರಣೆ ರೂಪಿಸಲಾಗುತ್ತಿದೆ. ವಿರೋಧ ಪಕ್ಷಗಳು ಒಂದಾದರೆ ಬಿಜೆಪಿ ಆರ್‌ಎಸ್‌ಎಸ್‌ ಮಣಿಸುವುದು ಕಷ್ಟವೇನಲ್ಲ” ಎಂದು ರಾಹುಲ್ ಹೇಳಿದ್ದಾರೆ.

ಬಿಜೆಪಿ ಸೋಲಿಸುವುದು ಕಷ್ಟ ಎಂದು ಬಹುತೇಕರು ಹೇಳುತ್ತಾರೆ. ಆದರೆ ಇತ್ತೀಚೆಗೆ ಕರ್ನಾಟಕದಲ್ಲಿ ಭಾರೀ ಅಂತರದಲ್ಲಿ ಬಿಜೆಪಿ ಸೋತಿದೆ. ಅಷ್ಟು ಮಾತ್ರವಲ್ಲದೇ ಮುಂಬರುವ ಮೂರು ನಾಲ್ಕು ರಾಜ್ಯಗಳ ಚುನಾವಣೆಗಳಲ್ಲಿಯೂ ಬಿಜೆಪಿ ಸೋಲಲಿದೆ. ಅವರ ಜನವಿರೋಧಿ ಆಡಳಿತಕ್ಕೆ ಜನ ಬೇಸೆತ್ತಿದ್ದಾರೆ. ಅದು 2024ರ ಚುನಾವಣೆಯಲ್ಲಿ ಪುನಾರಾವರ್ತನೆಯಾಗಲಿದೆ ಎಂದಿದ್ದಾರೆ.

ನಾವು ಇದೀಗ ವಿವರವಾದ ಸಭೆಯನ್ನು ನಡೆಸಿದ್ದೇವೆ ಮತ್ತು ನಮ್ಮ ಆಂತರಿಕ ಮೌಲ್ಯಮಾಪನವು ಕರ್ನಾಟಕದಲ್ಲಿ 136 ಸ್ಥಾನಗಳನ್ನು ಗಳಿಸಿದ ನಂತರ, ನಾವು ಈಗ ಮಧ್ಯಪ್ರದೇಶದಲ್ಲಿ 150 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಸೂಚಿಸುತ್ತದೆ” ಎಂದು ಹೇಳಿದ್ದರು.

ಭಾರತದ ಮಾಧ್ಯಮದವರಿಗೆ ಬಿಜೆಪಿ ಸೋಲಿಸುವುದು ಕಷ್ಟ ಅನಿಸಬಹುದು. ಆದರೆ ನಮಗಲ್ಲ. ಏಕೆಂದರೆ ನರೇಂದ್ರ ಮೋದಿಯವರಿಗೆ ದೇಶದ 60% ಜನ ಎಂದೂ ಮತ ಹಾಕಿಲ್ಲ. ಆದರೆ ಬಿಜೆಪಿ ಯಾವಾಗಲೂ ಜನ ನಮ್ಮ ಜೊತೆಗಿದ್ದಾರೆ ಎಂದು ಕೂಗಿ ಕೂಗಿ ಹೇಳುತ್ತಿದೆ. ಅದನ್ನೆ ಮಾಧ್ಯಮಗಳು ದೊಡ್ಡದಾಗಿ ತೋರಿಸುತ್ತಿವೆ. ಆದರೆ ವಾಸ್ತವ ಅದಲ್ಲ. ಜನ ನಿರುದ್ಯೋಗ, ಬೆಲೆ ಏರಿಕೆಯಿಂದ ಬಸವಳಿದಿದ್ದಾರೆ. ಅವರು ಪರ್ಯಾಯ ಬಯಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಒಗ್ಗಟ್ಟಾಗಿ ಒಂದು ಶಕ್ತಿಯಾಗಿ ರೂಪುಗೊಳ್ಳುತ್ತಿದ್ದೇವೆ ಎಂದು ರಾಹುಲ್ ಹೇಳಿದ್ದಾರೆ.

ಇದನ್ನೂ ಓದಿ; ಕರ್ನಾಟಕ ಚುನಾವಣಾ ಫಲಿತಾಂಶ, ಮಧ್ಯಪ್ರದೇಶದಲ್ಲೂ ಪುನರಾವರ್ತನೆ: 150 ಸ್ಥಾನ ಗೆಲ್ಲುತ್ತೇವೆ ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...