Homeಅಂತರಾಷ್ಟ್ರೀಯಸೋಮವಾರ ಟ್ರಂಪ್‌ ವಿರುದ್ಧ 2ನೇ ದೋಷಾರೋಪಣೆ?: ಭವಿಷ್ಯದಲ್ಲಿ ಸ್ಪರ್ಧೆಯಿಂದ ಅನರ್ಹಗೊಳಿಸುವ ಸಾಧ್ಯತೆ!

ಸೋಮವಾರ ಟ್ರಂಪ್‌ ವಿರುದ್ಧ 2ನೇ ದೋಷಾರೋಪಣೆ?: ಭವಿಷ್ಯದಲ್ಲಿ ಸ್ಪರ್ಧೆಯಿಂದ ಅನರ್ಹಗೊಳಿಸುವ ಸಾಧ್ಯತೆ!

ಸೋಮವಾರ ಟ್ರಂಪ್ ಎರಡನೇ ದೋಷಾರೋಪಣೆ (Impeachment) ಎದುರಿಸಬೇಕಾಗಬಹುದು ಎನ್ನಲಾಗಿದೆ. ಇದರ ಸ್ವರೂಪ ಹೇಗಿರಲಿದೆ?

- Advertisement -
- Advertisement -

ಕಾಂಗ್ರೆಸ್‌ನಲ್ಲಿನ ಡೆಮೋಕ್ರಾಟ್‌ಗಳು ಸೋಮವಾರ ಟ್ರಂಪ್ ಅವರ ದುರ್ನಡತೆ ಆರೋಪಗಳನ್ನು ಪ್ರಸ್ತಾಪಿಸಲು ಯೋಜಿಸಿದ್ದಾರೆ. ಇದು ಟ್ರಂಪ್ ಎರಡನೆ ಬಾರಿಗೆ ದೋಷಾರೋಪಣೆ ಎದುರಿಸುವ ಸಾಧ್ಯತೆಯನ್ನು ಸೂಚಿಸುತ್ತಿದೆ. ಟ್ರಂಪ್ ಅವರ ಚುನಾವಣಾ ವಂಚನೆಯ ಸುಳ್ಳು ಹೇಳಿಕೆಗಳು ಮತ್ತು ಕಾಂಗ್ರೆಸ್ ಮೇಲೆ (ಕ್ಯಾಪಿಟಲ್ ಮೇಲೆ) ದಾಳಿ ನಡೆಸಲು ಬೆಂಬಲಿಗರಿಗೆ ಪ್ರಚೋದನೆ ನೀಡಿದರು ಎಂಬ ಅಂಶಗಳ ಆಧಾರದಲ್ಲಿ ಈ ದೋಷಾರೋಪಣೆ ನಡೆಯಬಹುದು ಎನ್ನಲಾಗಿದೆ.

ದೋಷಾರೋಪಣೆ (Impeachment) ಹೇಗಿರುತ್ತದೆ?

ಇಂಪೀಚ್‌ಮೆಂಟ್ ಬಗ್ಗೆ ಇರುವ ಒಂದು ತಪ್ಪು ತಿಳುವಳಿಕೆ ಎಂದರೆ, ಅದು ಅಧ್ಯಕ್ಷ ಪದವಿಯಿಂದ ಕಿತ್ತು ಹಾಕುತ್ತದೆ ಎಂಬುದು. ಆದರೆ ಇದು ಹೌಸ್ ಆಫ್ ರೆಪ್ರೆಸೆಂಟೆಟಿವ್ಸ್ ಅಂದರೆ ಕಾಂಗ್ರೆಸ್‌ನ ಕೆಳಮನೆಯು, ಗುರುತರ ಅಪರಾಧ ಅಥವಾ ದುಷ್ಕೃತ್ಯದ ಅಪಾದನೆಗಳನ್ನು ಮಾಡುವ ಪ್ರಕ್ರಿಯೆ. ಒಂಥರಾ ಕ್ರಿಮಿನಲ್ ಪ್ರಕರಣದಲ್ಲಿ ದೋಷಾರೋಪಣೆ ಮಾಡಿದಂತೆ.

435 ಸದಸ್ಯರ ಕೆಳಮನೆಯು ಸರಳ ಬಹುಮತದಲ್ಲಿ ಅಪಾದನೆಗಳನ್ನು ಪ್ರಸ್ತಾಪಿಸಲು ಯಶಸ್ವಿಯಾದರೆ, ಇದು ಸೆನೆಟ್ (ಮೇಲ್ಮನೆ)ಗೆ ವರ್ಗಾಯಿಸಲ್ಪಡುತ್ತದೆ. ಸೆನೆಟ್ ವಿಚಾರಣೆ ನಡೆಸುವ ಅಧಿಕಾರ ಹೊಂದಿದೆ.

ಅಮೆರಿಕದ ಸಂವಿಧಾನದ ಪ್ರಕಾರ, ಅಧ್ಯಕ್ಷನನ್ನು ಶಿಕ್ಷೆಗೆ ಒಳಪಡಿಸಲು ಮತ್ತು ಹುದ್ದೆಯಿಂದ ತೆಗೆಯಲು ಸೆನೆಟ್‌ನ 2/3 (ಮೂರನೇ ಎರಡು ಭಾಗ) ಬಹುಮತ ಅಗತ್ಯ.

ಆದರೆ ಹಳೆಯ ಎರಡು ಐತಿಹಾಸಿಕ ಪ್ರಕರಣಗಳನ್ನು ಗಮನಿಸಿದರೆ, ಟ್ರಂಪ್ ಪದಚ್ಯುತಿಗೆ ಸೆನೆಟ್‌ನಲ್ಲಿ ಸರಳ ಬಹುಮತವು ಸಾಕು ಎನಿಸುತ್ತದೆ, ಇದು ಭವಿಷ್ಯದಲ್ಲಿ ಟ್ರಂಪ್ ಆ ಹುದ್ದೆ ಏರುವುದನ್ನೂ ತಡೆಗಟ್ಟಬಹುದು.

ಈ ಜನವರಿಯಲ್ಲಿ ಸೆನೆಟ್ ಮೇಲೆ ನಿಯಂತ್ರಣ ಹೊಂದಲಿರುವ ಡೆಮಾಕ್ರಟ್ಸ್, 2024ರ ಚುನಾವಣೆಯಲ್ಲಿ ಟ್ರಂಪ್ ಸ್ಪರ್ಧಿಸಿದಂತೆ ನಿರ್ಣಯಿಸುವ ಅವಕಾಶವನ್ನೂ ಪಡೆಯಲಿದ್ದಾರೆ.

ಆದರೆ ಇಲ್ಲಿ ಒಂದು ತೊಡಕಿದೆ. ಚುನಾವಣೆಯ ಸ್ಪರ್ಧೆಯಿಂದ ಅನರ್ಹತೆಗೊಳಿಸುವ ಮತದಾನಕ್ಕೂ ಮೊದಲು, ಶಿಕ್ಷಿಸಬೇಕು ಮತ್ತು ಪದವಿಯಿಂದ ಪದಚ್ಯುತಿಗೊಳಿಸಬೇಕೇ ಎಂಬ ವಿಷಯದ ಮೇಲೆ ಮತದಾನ ನಡೆಯಲಿದೆ. ಮೊದಲನೆಯದು ಯಶಸ್ವಿಯಾದರಷ್ಟೇ ಎರಡನೆ ಪ್ರಕ್ರಿಯೆ ನಡೆಯಲಿದೆ.

ಯುನಿವರ್ಸಿಟಿ ಆಫ್ ಕ್ಯಾಲಿರೋಡಾದ ಕಾನೂನು ಪ್ರೊಫೆಸರ್ ಪೌಲ್ ಕ್ಯಾಂಪೋಸ್, ‘ಸೆನೆಟ್‌ಗೆ ಭವಿಷ್ಯದ ಚುನಾವಣೆಯಲ್ಲಿ ಸ್ಪರ್ಧಿಸಲಾರದಂತೆ ಅನರ್ಹಗೊಳಿಸುವ ವೋಟಿಂಗ್ ಅಧಿಕಾರ ಮಾತ್ರವಿದೆ. ಜನೆವರಿ 20ರಂದು ಟ್ರಂಪ್ ನಿರ್ಗಮಿಸಲಿರುವ ದಿನದವರೆಗೂ ಇಂಪೀಚ್‌ಮೆಂಟ್ ವಿಚಾರಣೆ ಚಾಲ್ತಿಯಲ್ಲಿದ್ದರೆ ಈ ವಿದ್ಯಮಾನ ಸಂಭವಿಸಬಹುದು’ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ನಿರ್ಗಮನದ ನಂತರ ಇಂಪ್ರೀಚ್‌ಮೆಂಟ್ ಸಾಧ್ಯವೇ?

ಈ ಕುರಿತು ಯಾವ ನ್ಯಾಯಾಲಯವೂ ಸ್ಪಷ್ಟವಾಗಿ ತಿಳಿಸಿಲ್ಲವಾದರೂ, ತಜ್ಞರ ಪ್ರಕಾರ, ಟ್ರಂಪ್ ನಿರ್ಗಮನದ ನಂತರವೂ ಭವಿಷ್ಯದಲ್ಲಿ ಈ ಹುದ್ದೆಗೇರದಂತೆ ಅನರ್ಹಗೊಳಿಸುವ ವಿಷಯ ಜೀವಂತವಿರುತ್ತದೆ.

ಎರಡು ಸಲ ದೋಷಾರೋಪಣೆ

ಈ ಹಿಂದಿನ ಯಾವುದಾದರೂ ಅಮೆರಿಕ ಅಧ್ಯಕ್ಷ ಎರಡು ಬಾರಿ ಇಂಪೀಚ್‌ಮೆಂಟ್ ಎದುರಿಸಿದ್ದಾರೆಯೇ? ಇಲ್ಲಿವರೆಗೆ ಇದು ಸಂಭವಿಸಿಲ್ಲ. ಈ ಕುರಿತು ಕಾಂಗ್ರೆಸ್ ಅಷ್ಟೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯ.
2019ರಲ್ಲಿ ಟ್ರಂಪ್ ವಿರುದ್ಧ ಅಧಿಕಾರ ದುರ್ಬಳಕೆಯ ಕಾರಣದಲ್ಲಿ ಇಂಪೀಚ್‌ಮೆಂಟ್ ಮಾಡಲಾಗಿತ್ತು. ಆದರೆ ಮುಂದೆ ಫೆಬ್ರುವರಿ 2020ರಲ್ಲಿ ರಿಪಬ್ಲಿಕನ್‌ಗಳೇ ಹೆಚ್ಚಿದ್ದ ಸೆನೆಟ್ ಅವರನ್ನು ಆರೋಪಮುಕ್ತ ಮಾಡಿತ್ತು.
ಟ್ರಂಪ್ ಇಂಪೀಚ್‌ಮೆಂಟ್‌ಗೆ ಜೋ ಬೈಡೆನ್ ಅಷ್ಟಾಗಿ ಆಸಕ್ತಿ ಹೊಂದಿಲ್ಲ ಎನ್ನಲಾಗಿದೆ. ಆದರೆ ಸೋಮವಾರ ಕಾಂಗ್ರೆಸ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಷ್ಟೇ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...