Homeಅಂತರಾಷ್ಟ್ರೀಯಸೋಮವಾರ ಟ್ರಂಪ್‌ ವಿರುದ್ಧ 2ನೇ ದೋಷಾರೋಪಣೆ?: ಭವಿಷ್ಯದಲ್ಲಿ ಸ್ಪರ್ಧೆಯಿಂದ ಅನರ್ಹಗೊಳಿಸುವ ಸಾಧ್ಯತೆ!

ಸೋಮವಾರ ಟ್ರಂಪ್‌ ವಿರುದ್ಧ 2ನೇ ದೋಷಾರೋಪಣೆ?: ಭವಿಷ್ಯದಲ್ಲಿ ಸ್ಪರ್ಧೆಯಿಂದ ಅನರ್ಹಗೊಳಿಸುವ ಸಾಧ್ಯತೆ!

ಸೋಮವಾರ ಟ್ರಂಪ್ ಎರಡನೇ ದೋಷಾರೋಪಣೆ (Impeachment) ಎದುರಿಸಬೇಕಾಗಬಹುದು ಎನ್ನಲಾಗಿದೆ. ಇದರ ಸ್ವರೂಪ ಹೇಗಿರಲಿದೆ?

- Advertisement -
- Advertisement -

ಕಾಂಗ್ರೆಸ್‌ನಲ್ಲಿನ ಡೆಮೋಕ್ರಾಟ್‌ಗಳು ಸೋಮವಾರ ಟ್ರಂಪ್ ಅವರ ದುರ್ನಡತೆ ಆರೋಪಗಳನ್ನು ಪ್ರಸ್ತಾಪಿಸಲು ಯೋಜಿಸಿದ್ದಾರೆ. ಇದು ಟ್ರಂಪ್ ಎರಡನೆ ಬಾರಿಗೆ ದೋಷಾರೋಪಣೆ ಎದುರಿಸುವ ಸಾಧ್ಯತೆಯನ್ನು ಸೂಚಿಸುತ್ತಿದೆ. ಟ್ರಂಪ್ ಅವರ ಚುನಾವಣಾ ವಂಚನೆಯ ಸುಳ್ಳು ಹೇಳಿಕೆಗಳು ಮತ್ತು ಕಾಂಗ್ರೆಸ್ ಮೇಲೆ (ಕ್ಯಾಪಿಟಲ್ ಮೇಲೆ) ದಾಳಿ ನಡೆಸಲು ಬೆಂಬಲಿಗರಿಗೆ ಪ್ರಚೋದನೆ ನೀಡಿದರು ಎಂಬ ಅಂಶಗಳ ಆಧಾರದಲ್ಲಿ ಈ ದೋಷಾರೋಪಣೆ ನಡೆಯಬಹುದು ಎನ್ನಲಾಗಿದೆ.

ದೋಷಾರೋಪಣೆ (Impeachment) ಹೇಗಿರುತ್ತದೆ?

ಇಂಪೀಚ್‌ಮೆಂಟ್ ಬಗ್ಗೆ ಇರುವ ಒಂದು ತಪ್ಪು ತಿಳುವಳಿಕೆ ಎಂದರೆ, ಅದು ಅಧ್ಯಕ್ಷ ಪದವಿಯಿಂದ ಕಿತ್ತು ಹಾಕುತ್ತದೆ ಎಂಬುದು. ಆದರೆ ಇದು ಹೌಸ್ ಆಫ್ ರೆಪ್ರೆಸೆಂಟೆಟಿವ್ಸ್ ಅಂದರೆ ಕಾಂಗ್ರೆಸ್‌ನ ಕೆಳಮನೆಯು, ಗುರುತರ ಅಪರಾಧ ಅಥವಾ ದುಷ್ಕೃತ್ಯದ ಅಪಾದನೆಗಳನ್ನು ಮಾಡುವ ಪ್ರಕ್ರಿಯೆ. ಒಂಥರಾ ಕ್ರಿಮಿನಲ್ ಪ್ರಕರಣದಲ್ಲಿ ದೋಷಾರೋಪಣೆ ಮಾಡಿದಂತೆ.

435 ಸದಸ್ಯರ ಕೆಳಮನೆಯು ಸರಳ ಬಹುಮತದಲ್ಲಿ ಅಪಾದನೆಗಳನ್ನು ಪ್ರಸ್ತಾಪಿಸಲು ಯಶಸ್ವಿಯಾದರೆ, ಇದು ಸೆನೆಟ್ (ಮೇಲ್ಮನೆ)ಗೆ ವರ್ಗಾಯಿಸಲ್ಪಡುತ್ತದೆ. ಸೆನೆಟ್ ವಿಚಾರಣೆ ನಡೆಸುವ ಅಧಿಕಾರ ಹೊಂದಿದೆ.

ಅಮೆರಿಕದ ಸಂವಿಧಾನದ ಪ್ರಕಾರ, ಅಧ್ಯಕ್ಷನನ್ನು ಶಿಕ್ಷೆಗೆ ಒಳಪಡಿಸಲು ಮತ್ತು ಹುದ್ದೆಯಿಂದ ತೆಗೆಯಲು ಸೆನೆಟ್‌ನ 2/3 (ಮೂರನೇ ಎರಡು ಭಾಗ) ಬಹುಮತ ಅಗತ್ಯ.

ಆದರೆ ಹಳೆಯ ಎರಡು ಐತಿಹಾಸಿಕ ಪ್ರಕರಣಗಳನ್ನು ಗಮನಿಸಿದರೆ, ಟ್ರಂಪ್ ಪದಚ್ಯುತಿಗೆ ಸೆನೆಟ್‌ನಲ್ಲಿ ಸರಳ ಬಹುಮತವು ಸಾಕು ಎನಿಸುತ್ತದೆ, ಇದು ಭವಿಷ್ಯದಲ್ಲಿ ಟ್ರಂಪ್ ಆ ಹುದ್ದೆ ಏರುವುದನ್ನೂ ತಡೆಗಟ್ಟಬಹುದು.

ಈ ಜನವರಿಯಲ್ಲಿ ಸೆನೆಟ್ ಮೇಲೆ ನಿಯಂತ್ರಣ ಹೊಂದಲಿರುವ ಡೆಮಾಕ್ರಟ್ಸ್, 2024ರ ಚುನಾವಣೆಯಲ್ಲಿ ಟ್ರಂಪ್ ಸ್ಪರ್ಧಿಸಿದಂತೆ ನಿರ್ಣಯಿಸುವ ಅವಕಾಶವನ್ನೂ ಪಡೆಯಲಿದ್ದಾರೆ.

ಆದರೆ ಇಲ್ಲಿ ಒಂದು ತೊಡಕಿದೆ. ಚುನಾವಣೆಯ ಸ್ಪರ್ಧೆಯಿಂದ ಅನರ್ಹತೆಗೊಳಿಸುವ ಮತದಾನಕ್ಕೂ ಮೊದಲು, ಶಿಕ್ಷಿಸಬೇಕು ಮತ್ತು ಪದವಿಯಿಂದ ಪದಚ್ಯುತಿಗೊಳಿಸಬೇಕೇ ಎಂಬ ವಿಷಯದ ಮೇಲೆ ಮತದಾನ ನಡೆಯಲಿದೆ. ಮೊದಲನೆಯದು ಯಶಸ್ವಿಯಾದರಷ್ಟೇ ಎರಡನೆ ಪ್ರಕ್ರಿಯೆ ನಡೆಯಲಿದೆ.

ಯುನಿವರ್ಸಿಟಿ ಆಫ್ ಕ್ಯಾಲಿರೋಡಾದ ಕಾನೂನು ಪ್ರೊಫೆಸರ್ ಪೌಲ್ ಕ್ಯಾಂಪೋಸ್, ‘ಸೆನೆಟ್‌ಗೆ ಭವಿಷ್ಯದ ಚುನಾವಣೆಯಲ್ಲಿ ಸ್ಪರ್ಧಿಸಲಾರದಂತೆ ಅನರ್ಹಗೊಳಿಸುವ ವೋಟಿಂಗ್ ಅಧಿಕಾರ ಮಾತ್ರವಿದೆ. ಜನೆವರಿ 20ರಂದು ಟ್ರಂಪ್ ನಿರ್ಗಮಿಸಲಿರುವ ದಿನದವರೆಗೂ ಇಂಪೀಚ್‌ಮೆಂಟ್ ವಿಚಾರಣೆ ಚಾಲ್ತಿಯಲ್ಲಿದ್ದರೆ ಈ ವಿದ್ಯಮಾನ ಸಂಭವಿಸಬಹುದು’ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ನಿರ್ಗಮನದ ನಂತರ ಇಂಪ್ರೀಚ್‌ಮೆಂಟ್ ಸಾಧ್ಯವೇ?

ಈ ಕುರಿತು ಯಾವ ನ್ಯಾಯಾಲಯವೂ ಸ್ಪಷ್ಟವಾಗಿ ತಿಳಿಸಿಲ್ಲವಾದರೂ, ತಜ್ಞರ ಪ್ರಕಾರ, ಟ್ರಂಪ್ ನಿರ್ಗಮನದ ನಂತರವೂ ಭವಿಷ್ಯದಲ್ಲಿ ಈ ಹುದ್ದೆಗೇರದಂತೆ ಅನರ್ಹಗೊಳಿಸುವ ವಿಷಯ ಜೀವಂತವಿರುತ್ತದೆ.

ಎರಡು ಸಲ ದೋಷಾರೋಪಣೆ

ಈ ಹಿಂದಿನ ಯಾವುದಾದರೂ ಅಮೆರಿಕ ಅಧ್ಯಕ್ಷ ಎರಡು ಬಾರಿ ಇಂಪೀಚ್‌ಮೆಂಟ್ ಎದುರಿಸಿದ್ದಾರೆಯೇ? ಇಲ್ಲಿವರೆಗೆ ಇದು ಸಂಭವಿಸಿಲ್ಲ. ಈ ಕುರಿತು ಕಾಂಗ್ರೆಸ್ ಅಷ್ಟೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯ.
2019ರಲ್ಲಿ ಟ್ರಂಪ್ ವಿರುದ್ಧ ಅಧಿಕಾರ ದುರ್ಬಳಕೆಯ ಕಾರಣದಲ್ಲಿ ಇಂಪೀಚ್‌ಮೆಂಟ್ ಮಾಡಲಾಗಿತ್ತು. ಆದರೆ ಮುಂದೆ ಫೆಬ್ರುವರಿ 2020ರಲ್ಲಿ ರಿಪಬ್ಲಿಕನ್‌ಗಳೇ ಹೆಚ್ಚಿದ್ದ ಸೆನೆಟ್ ಅವರನ್ನು ಆರೋಪಮುಕ್ತ ಮಾಡಿತ್ತು.
ಟ್ರಂಪ್ ಇಂಪೀಚ್‌ಮೆಂಟ್‌ಗೆ ಜೋ ಬೈಡೆನ್ ಅಷ್ಟಾಗಿ ಆಸಕ್ತಿ ಹೊಂದಿಲ್ಲ ಎನ್ನಲಾಗಿದೆ. ಆದರೆ ಸೋಮವಾರ ಕಾಂಗ್ರೆಸ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಷ್ಟೇ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...