Homeಅಂತರಾಷ್ಟ್ರೀಯಸೋಮವಾರ ಟ್ರಂಪ್‌ ವಿರುದ್ಧ 2ನೇ ದೋಷಾರೋಪಣೆ?: ಭವಿಷ್ಯದಲ್ಲಿ ಸ್ಪರ್ಧೆಯಿಂದ ಅನರ್ಹಗೊಳಿಸುವ ಸಾಧ್ಯತೆ!

ಸೋಮವಾರ ಟ್ರಂಪ್‌ ವಿರುದ್ಧ 2ನೇ ದೋಷಾರೋಪಣೆ?: ಭವಿಷ್ಯದಲ್ಲಿ ಸ್ಪರ್ಧೆಯಿಂದ ಅನರ್ಹಗೊಳಿಸುವ ಸಾಧ್ಯತೆ!

ಸೋಮವಾರ ಟ್ರಂಪ್ ಎರಡನೇ ದೋಷಾರೋಪಣೆ (Impeachment) ಎದುರಿಸಬೇಕಾಗಬಹುದು ಎನ್ನಲಾಗಿದೆ. ಇದರ ಸ್ವರೂಪ ಹೇಗಿರಲಿದೆ?

- Advertisement -
- Advertisement -

ಕಾಂಗ್ರೆಸ್‌ನಲ್ಲಿನ ಡೆಮೋಕ್ರಾಟ್‌ಗಳು ಸೋಮವಾರ ಟ್ರಂಪ್ ಅವರ ದುರ್ನಡತೆ ಆರೋಪಗಳನ್ನು ಪ್ರಸ್ತಾಪಿಸಲು ಯೋಜಿಸಿದ್ದಾರೆ. ಇದು ಟ್ರಂಪ್ ಎರಡನೆ ಬಾರಿಗೆ ದೋಷಾರೋಪಣೆ ಎದುರಿಸುವ ಸಾಧ್ಯತೆಯನ್ನು ಸೂಚಿಸುತ್ತಿದೆ. ಟ್ರಂಪ್ ಅವರ ಚುನಾವಣಾ ವಂಚನೆಯ ಸುಳ್ಳು ಹೇಳಿಕೆಗಳು ಮತ್ತು ಕಾಂಗ್ರೆಸ್ ಮೇಲೆ (ಕ್ಯಾಪಿಟಲ್ ಮೇಲೆ) ದಾಳಿ ನಡೆಸಲು ಬೆಂಬಲಿಗರಿಗೆ ಪ್ರಚೋದನೆ ನೀಡಿದರು ಎಂಬ ಅಂಶಗಳ ಆಧಾರದಲ್ಲಿ ಈ ದೋಷಾರೋಪಣೆ ನಡೆಯಬಹುದು ಎನ್ನಲಾಗಿದೆ.

ದೋಷಾರೋಪಣೆ (Impeachment) ಹೇಗಿರುತ್ತದೆ?

ಇಂಪೀಚ್‌ಮೆಂಟ್ ಬಗ್ಗೆ ಇರುವ ಒಂದು ತಪ್ಪು ತಿಳುವಳಿಕೆ ಎಂದರೆ, ಅದು ಅಧ್ಯಕ್ಷ ಪದವಿಯಿಂದ ಕಿತ್ತು ಹಾಕುತ್ತದೆ ಎಂಬುದು. ಆದರೆ ಇದು ಹೌಸ್ ಆಫ್ ರೆಪ್ರೆಸೆಂಟೆಟಿವ್ಸ್ ಅಂದರೆ ಕಾಂಗ್ರೆಸ್‌ನ ಕೆಳಮನೆಯು, ಗುರುತರ ಅಪರಾಧ ಅಥವಾ ದುಷ್ಕೃತ್ಯದ ಅಪಾದನೆಗಳನ್ನು ಮಾಡುವ ಪ್ರಕ್ರಿಯೆ. ಒಂಥರಾ ಕ್ರಿಮಿನಲ್ ಪ್ರಕರಣದಲ್ಲಿ ದೋಷಾರೋಪಣೆ ಮಾಡಿದಂತೆ.

435 ಸದಸ್ಯರ ಕೆಳಮನೆಯು ಸರಳ ಬಹುಮತದಲ್ಲಿ ಅಪಾದನೆಗಳನ್ನು ಪ್ರಸ್ತಾಪಿಸಲು ಯಶಸ್ವಿಯಾದರೆ, ಇದು ಸೆನೆಟ್ (ಮೇಲ್ಮನೆ)ಗೆ ವರ್ಗಾಯಿಸಲ್ಪಡುತ್ತದೆ. ಸೆನೆಟ್ ವಿಚಾರಣೆ ನಡೆಸುವ ಅಧಿಕಾರ ಹೊಂದಿದೆ.

ಅಮೆರಿಕದ ಸಂವಿಧಾನದ ಪ್ರಕಾರ, ಅಧ್ಯಕ್ಷನನ್ನು ಶಿಕ್ಷೆಗೆ ಒಳಪಡಿಸಲು ಮತ್ತು ಹುದ್ದೆಯಿಂದ ತೆಗೆಯಲು ಸೆನೆಟ್‌ನ 2/3 (ಮೂರನೇ ಎರಡು ಭಾಗ) ಬಹುಮತ ಅಗತ್ಯ.

ಆದರೆ ಹಳೆಯ ಎರಡು ಐತಿಹಾಸಿಕ ಪ್ರಕರಣಗಳನ್ನು ಗಮನಿಸಿದರೆ, ಟ್ರಂಪ್ ಪದಚ್ಯುತಿಗೆ ಸೆನೆಟ್‌ನಲ್ಲಿ ಸರಳ ಬಹುಮತವು ಸಾಕು ಎನಿಸುತ್ತದೆ, ಇದು ಭವಿಷ್ಯದಲ್ಲಿ ಟ್ರಂಪ್ ಆ ಹುದ್ದೆ ಏರುವುದನ್ನೂ ತಡೆಗಟ್ಟಬಹುದು.

ಈ ಜನವರಿಯಲ್ಲಿ ಸೆನೆಟ್ ಮೇಲೆ ನಿಯಂತ್ರಣ ಹೊಂದಲಿರುವ ಡೆಮಾಕ್ರಟ್ಸ್, 2024ರ ಚುನಾವಣೆಯಲ್ಲಿ ಟ್ರಂಪ್ ಸ್ಪರ್ಧಿಸಿದಂತೆ ನಿರ್ಣಯಿಸುವ ಅವಕಾಶವನ್ನೂ ಪಡೆಯಲಿದ್ದಾರೆ.

ಆದರೆ ಇಲ್ಲಿ ಒಂದು ತೊಡಕಿದೆ. ಚುನಾವಣೆಯ ಸ್ಪರ್ಧೆಯಿಂದ ಅನರ್ಹತೆಗೊಳಿಸುವ ಮತದಾನಕ್ಕೂ ಮೊದಲು, ಶಿಕ್ಷಿಸಬೇಕು ಮತ್ತು ಪದವಿಯಿಂದ ಪದಚ್ಯುತಿಗೊಳಿಸಬೇಕೇ ಎಂಬ ವಿಷಯದ ಮೇಲೆ ಮತದಾನ ನಡೆಯಲಿದೆ. ಮೊದಲನೆಯದು ಯಶಸ್ವಿಯಾದರಷ್ಟೇ ಎರಡನೆ ಪ್ರಕ್ರಿಯೆ ನಡೆಯಲಿದೆ.

ಯುನಿವರ್ಸಿಟಿ ಆಫ್ ಕ್ಯಾಲಿರೋಡಾದ ಕಾನೂನು ಪ್ರೊಫೆಸರ್ ಪೌಲ್ ಕ್ಯಾಂಪೋಸ್, ‘ಸೆನೆಟ್‌ಗೆ ಭವಿಷ್ಯದ ಚುನಾವಣೆಯಲ್ಲಿ ಸ್ಪರ್ಧಿಸಲಾರದಂತೆ ಅನರ್ಹಗೊಳಿಸುವ ವೋಟಿಂಗ್ ಅಧಿಕಾರ ಮಾತ್ರವಿದೆ. ಜನೆವರಿ 20ರಂದು ಟ್ರಂಪ್ ನಿರ್ಗಮಿಸಲಿರುವ ದಿನದವರೆಗೂ ಇಂಪೀಚ್‌ಮೆಂಟ್ ವಿಚಾರಣೆ ಚಾಲ್ತಿಯಲ್ಲಿದ್ದರೆ ಈ ವಿದ್ಯಮಾನ ಸಂಭವಿಸಬಹುದು’ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ನಿರ್ಗಮನದ ನಂತರ ಇಂಪ್ರೀಚ್‌ಮೆಂಟ್ ಸಾಧ್ಯವೇ?

ಈ ಕುರಿತು ಯಾವ ನ್ಯಾಯಾಲಯವೂ ಸ್ಪಷ್ಟವಾಗಿ ತಿಳಿಸಿಲ್ಲವಾದರೂ, ತಜ್ಞರ ಪ್ರಕಾರ, ಟ್ರಂಪ್ ನಿರ್ಗಮನದ ನಂತರವೂ ಭವಿಷ್ಯದಲ್ಲಿ ಈ ಹುದ್ದೆಗೇರದಂತೆ ಅನರ್ಹಗೊಳಿಸುವ ವಿಷಯ ಜೀವಂತವಿರುತ್ತದೆ.

ಎರಡು ಸಲ ದೋಷಾರೋಪಣೆ

ಈ ಹಿಂದಿನ ಯಾವುದಾದರೂ ಅಮೆರಿಕ ಅಧ್ಯಕ್ಷ ಎರಡು ಬಾರಿ ಇಂಪೀಚ್‌ಮೆಂಟ್ ಎದುರಿಸಿದ್ದಾರೆಯೇ? ಇಲ್ಲಿವರೆಗೆ ಇದು ಸಂಭವಿಸಿಲ್ಲ. ಈ ಕುರಿತು ಕಾಂಗ್ರೆಸ್ ಅಷ್ಟೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯ.
2019ರಲ್ಲಿ ಟ್ರಂಪ್ ವಿರುದ್ಧ ಅಧಿಕಾರ ದುರ್ಬಳಕೆಯ ಕಾರಣದಲ್ಲಿ ಇಂಪೀಚ್‌ಮೆಂಟ್ ಮಾಡಲಾಗಿತ್ತು. ಆದರೆ ಮುಂದೆ ಫೆಬ್ರುವರಿ 2020ರಲ್ಲಿ ರಿಪಬ್ಲಿಕನ್‌ಗಳೇ ಹೆಚ್ಚಿದ್ದ ಸೆನೆಟ್ ಅವರನ್ನು ಆರೋಪಮುಕ್ತ ಮಾಡಿತ್ತು.
ಟ್ರಂಪ್ ಇಂಪೀಚ್‌ಮೆಂಟ್‌ಗೆ ಜೋ ಬೈಡೆನ್ ಅಷ್ಟಾಗಿ ಆಸಕ್ತಿ ಹೊಂದಿಲ್ಲ ಎನ್ನಲಾಗಿದೆ. ಆದರೆ ಸೋಮವಾರ ಕಾಂಗ್ರೆಸ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಷ್ಟೇ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...