Homeಅಂತರಾಷ್ಟ್ರೀಯಸೋಮವಾರ ಟ್ರಂಪ್‌ ವಿರುದ್ಧ 2ನೇ ದೋಷಾರೋಪಣೆ?: ಭವಿಷ್ಯದಲ್ಲಿ ಸ್ಪರ್ಧೆಯಿಂದ ಅನರ್ಹಗೊಳಿಸುವ ಸಾಧ್ಯತೆ!

ಸೋಮವಾರ ಟ್ರಂಪ್‌ ವಿರುದ್ಧ 2ನೇ ದೋಷಾರೋಪಣೆ?: ಭವಿಷ್ಯದಲ್ಲಿ ಸ್ಪರ್ಧೆಯಿಂದ ಅನರ್ಹಗೊಳಿಸುವ ಸಾಧ್ಯತೆ!

ಸೋಮವಾರ ಟ್ರಂಪ್ ಎರಡನೇ ದೋಷಾರೋಪಣೆ (Impeachment) ಎದುರಿಸಬೇಕಾಗಬಹುದು ಎನ್ನಲಾಗಿದೆ. ಇದರ ಸ್ವರೂಪ ಹೇಗಿರಲಿದೆ?

- Advertisement -
- Advertisement -

ಕಾಂಗ್ರೆಸ್‌ನಲ್ಲಿನ ಡೆಮೋಕ್ರಾಟ್‌ಗಳು ಸೋಮವಾರ ಟ್ರಂಪ್ ಅವರ ದುರ್ನಡತೆ ಆರೋಪಗಳನ್ನು ಪ್ರಸ್ತಾಪಿಸಲು ಯೋಜಿಸಿದ್ದಾರೆ. ಇದು ಟ್ರಂಪ್ ಎರಡನೆ ಬಾರಿಗೆ ದೋಷಾರೋಪಣೆ ಎದುರಿಸುವ ಸಾಧ್ಯತೆಯನ್ನು ಸೂಚಿಸುತ್ತಿದೆ. ಟ್ರಂಪ್ ಅವರ ಚುನಾವಣಾ ವಂಚನೆಯ ಸುಳ್ಳು ಹೇಳಿಕೆಗಳು ಮತ್ತು ಕಾಂಗ್ರೆಸ್ ಮೇಲೆ (ಕ್ಯಾಪಿಟಲ್ ಮೇಲೆ) ದಾಳಿ ನಡೆಸಲು ಬೆಂಬಲಿಗರಿಗೆ ಪ್ರಚೋದನೆ ನೀಡಿದರು ಎಂಬ ಅಂಶಗಳ ಆಧಾರದಲ್ಲಿ ಈ ದೋಷಾರೋಪಣೆ ನಡೆಯಬಹುದು ಎನ್ನಲಾಗಿದೆ.

ದೋಷಾರೋಪಣೆ (Impeachment) ಹೇಗಿರುತ್ತದೆ?

ಇಂಪೀಚ್‌ಮೆಂಟ್ ಬಗ್ಗೆ ಇರುವ ಒಂದು ತಪ್ಪು ತಿಳುವಳಿಕೆ ಎಂದರೆ, ಅದು ಅಧ್ಯಕ್ಷ ಪದವಿಯಿಂದ ಕಿತ್ತು ಹಾಕುತ್ತದೆ ಎಂಬುದು. ಆದರೆ ಇದು ಹೌಸ್ ಆಫ್ ರೆಪ್ರೆಸೆಂಟೆಟಿವ್ಸ್ ಅಂದರೆ ಕಾಂಗ್ರೆಸ್‌ನ ಕೆಳಮನೆಯು, ಗುರುತರ ಅಪರಾಧ ಅಥವಾ ದುಷ್ಕೃತ್ಯದ ಅಪಾದನೆಗಳನ್ನು ಮಾಡುವ ಪ್ರಕ್ರಿಯೆ. ಒಂಥರಾ ಕ್ರಿಮಿನಲ್ ಪ್ರಕರಣದಲ್ಲಿ ದೋಷಾರೋಪಣೆ ಮಾಡಿದಂತೆ.

435 ಸದಸ್ಯರ ಕೆಳಮನೆಯು ಸರಳ ಬಹುಮತದಲ್ಲಿ ಅಪಾದನೆಗಳನ್ನು ಪ್ರಸ್ತಾಪಿಸಲು ಯಶಸ್ವಿಯಾದರೆ, ಇದು ಸೆನೆಟ್ (ಮೇಲ್ಮನೆ)ಗೆ ವರ್ಗಾಯಿಸಲ್ಪಡುತ್ತದೆ. ಸೆನೆಟ್ ವಿಚಾರಣೆ ನಡೆಸುವ ಅಧಿಕಾರ ಹೊಂದಿದೆ.

ಅಮೆರಿಕದ ಸಂವಿಧಾನದ ಪ್ರಕಾರ, ಅಧ್ಯಕ್ಷನನ್ನು ಶಿಕ್ಷೆಗೆ ಒಳಪಡಿಸಲು ಮತ್ತು ಹುದ್ದೆಯಿಂದ ತೆಗೆಯಲು ಸೆನೆಟ್‌ನ 2/3 (ಮೂರನೇ ಎರಡು ಭಾಗ) ಬಹುಮತ ಅಗತ್ಯ.

ಆದರೆ ಹಳೆಯ ಎರಡು ಐತಿಹಾಸಿಕ ಪ್ರಕರಣಗಳನ್ನು ಗಮನಿಸಿದರೆ, ಟ್ರಂಪ್ ಪದಚ್ಯುತಿಗೆ ಸೆನೆಟ್‌ನಲ್ಲಿ ಸರಳ ಬಹುಮತವು ಸಾಕು ಎನಿಸುತ್ತದೆ, ಇದು ಭವಿಷ್ಯದಲ್ಲಿ ಟ್ರಂಪ್ ಆ ಹುದ್ದೆ ಏರುವುದನ್ನೂ ತಡೆಗಟ್ಟಬಹುದು.

ಈ ಜನವರಿಯಲ್ಲಿ ಸೆನೆಟ್ ಮೇಲೆ ನಿಯಂತ್ರಣ ಹೊಂದಲಿರುವ ಡೆಮಾಕ್ರಟ್ಸ್, 2024ರ ಚುನಾವಣೆಯಲ್ಲಿ ಟ್ರಂಪ್ ಸ್ಪರ್ಧಿಸಿದಂತೆ ನಿರ್ಣಯಿಸುವ ಅವಕಾಶವನ್ನೂ ಪಡೆಯಲಿದ್ದಾರೆ.

ಆದರೆ ಇಲ್ಲಿ ಒಂದು ತೊಡಕಿದೆ. ಚುನಾವಣೆಯ ಸ್ಪರ್ಧೆಯಿಂದ ಅನರ್ಹತೆಗೊಳಿಸುವ ಮತದಾನಕ್ಕೂ ಮೊದಲು, ಶಿಕ್ಷಿಸಬೇಕು ಮತ್ತು ಪದವಿಯಿಂದ ಪದಚ್ಯುತಿಗೊಳಿಸಬೇಕೇ ಎಂಬ ವಿಷಯದ ಮೇಲೆ ಮತದಾನ ನಡೆಯಲಿದೆ. ಮೊದಲನೆಯದು ಯಶಸ್ವಿಯಾದರಷ್ಟೇ ಎರಡನೆ ಪ್ರಕ್ರಿಯೆ ನಡೆಯಲಿದೆ.

ಯುನಿವರ್ಸಿಟಿ ಆಫ್ ಕ್ಯಾಲಿರೋಡಾದ ಕಾನೂನು ಪ್ರೊಫೆಸರ್ ಪೌಲ್ ಕ್ಯಾಂಪೋಸ್, ‘ಸೆನೆಟ್‌ಗೆ ಭವಿಷ್ಯದ ಚುನಾವಣೆಯಲ್ಲಿ ಸ್ಪರ್ಧಿಸಲಾರದಂತೆ ಅನರ್ಹಗೊಳಿಸುವ ವೋಟಿಂಗ್ ಅಧಿಕಾರ ಮಾತ್ರವಿದೆ. ಜನೆವರಿ 20ರಂದು ಟ್ರಂಪ್ ನಿರ್ಗಮಿಸಲಿರುವ ದಿನದವರೆಗೂ ಇಂಪೀಚ್‌ಮೆಂಟ್ ವಿಚಾರಣೆ ಚಾಲ್ತಿಯಲ್ಲಿದ್ದರೆ ಈ ವಿದ್ಯಮಾನ ಸಂಭವಿಸಬಹುದು’ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ನಿರ್ಗಮನದ ನಂತರ ಇಂಪ್ರೀಚ್‌ಮೆಂಟ್ ಸಾಧ್ಯವೇ?

ಈ ಕುರಿತು ಯಾವ ನ್ಯಾಯಾಲಯವೂ ಸ್ಪಷ್ಟವಾಗಿ ತಿಳಿಸಿಲ್ಲವಾದರೂ, ತಜ್ಞರ ಪ್ರಕಾರ, ಟ್ರಂಪ್ ನಿರ್ಗಮನದ ನಂತರವೂ ಭವಿಷ್ಯದಲ್ಲಿ ಈ ಹುದ್ದೆಗೇರದಂತೆ ಅನರ್ಹಗೊಳಿಸುವ ವಿಷಯ ಜೀವಂತವಿರುತ್ತದೆ.

ಎರಡು ಸಲ ದೋಷಾರೋಪಣೆ

ಈ ಹಿಂದಿನ ಯಾವುದಾದರೂ ಅಮೆರಿಕ ಅಧ್ಯಕ್ಷ ಎರಡು ಬಾರಿ ಇಂಪೀಚ್‌ಮೆಂಟ್ ಎದುರಿಸಿದ್ದಾರೆಯೇ? ಇಲ್ಲಿವರೆಗೆ ಇದು ಸಂಭವಿಸಿಲ್ಲ. ಈ ಕುರಿತು ಕಾಂಗ್ರೆಸ್ ಅಷ್ಟೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯ.
2019ರಲ್ಲಿ ಟ್ರಂಪ್ ವಿರುದ್ಧ ಅಧಿಕಾರ ದುರ್ಬಳಕೆಯ ಕಾರಣದಲ್ಲಿ ಇಂಪೀಚ್‌ಮೆಂಟ್ ಮಾಡಲಾಗಿತ್ತು. ಆದರೆ ಮುಂದೆ ಫೆಬ್ರುವರಿ 2020ರಲ್ಲಿ ರಿಪಬ್ಲಿಕನ್‌ಗಳೇ ಹೆಚ್ಚಿದ್ದ ಸೆನೆಟ್ ಅವರನ್ನು ಆರೋಪಮುಕ್ತ ಮಾಡಿತ್ತು.
ಟ್ರಂಪ್ ಇಂಪೀಚ್‌ಮೆಂಟ್‌ಗೆ ಜೋ ಬೈಡೆನ್ ಅಷ್ಟಾಗಿ ಆಸಕ್ತಿ ಹೊಂದಿಲ್ಲ ಎನ್ನಲಾಗಿದೆ. ಆದರೆ ಸೋಮವಾರ ಕಾಂಗ್ರೆಸ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಷ್ಟೇ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ: ಅಮೆರಿಕ ಕ್ಯಾಪಿಟಲ್ ಗಲಭೆ: ತ್ರಿವರ್ಣ ಧ್ವಜ ಹಾರಿಸಿದವರ‌ ವಿರುದ್ಧ ದೆಹಲಿಯಲ್ಲಿ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...