Homeಅಂಕಣಗಳುಕಾರ್ಮಿಕ ಹಿತದ ಕಾನೂನುಗಳಿಗೆ ಎಳ್ಳು ನೀರು ಬಿಡಲು ಸರ್ಕಾರವೇ ಮುಂದಾಗಿರುವುದು ಜನದ್ರೋಹದ ಕೃತ್ಯ

ಕಾರ್ಮಿಕ ಹಿತದ ಕಾನೂನುಗಳಿಗೆ ಎಳ್ಳು ನೀರು ಬಿಡಲು ಸರ್ಕಾರವೇ ಮುಂದಾಗಿರುವುದು ಜನದ್ರೋಹದ ಕೃತ್ಯ

- Advertisement -
- Advertisement -

ಸಾಮಾಜಿಕ-ರಾಜಕೀಯ ವ್ಯಾಖ್ಯಾನಕಾರ ಪ್ರೊ.ಯೋಗೇಂದ್ರ ಯಾದವ್ ಅವರು ಈ ವ್ಯಥೆಯ ವಿದ್ಯಮಾನವನ್ನು ಸರ್ಕಾರಿ ಕೃಪಾಪೋಷಿತ ಒತ್ತೆಯಾಳು ಪ್ರಹಸನ ಎಂದು ಬಣ್ಣಿಸಿದ್ದಾರೆ. ಮಹಾನಗರಗಳ ಆರ್ಥಿಕ ಚಟುವಟಿಕೆಗಳ ದೈತ್ಯಚಕ್ರವನ್ನು ತಿರುಗಿಸಲೆಂದು ವಲಸೆ ಕಾರ್ಮಿಕರನ್ನು ಕೈಗಾರಿಕೋದ್ಯಮಗಳ ಒತ್ತೆಯಾಳುಗಳನ್ನಾಗಿ ಕೈವಶ ಮಾಡಿಕೊಳ್ಳಲಾಗುತ್ತಿದೆ. ಈ ಕ್ರೂರ ಮಸಲತ್ತಿನಲ್ಲಿ ಸರ್ಕಾರವೇ ಮುಖ್ಯ ಪಾತ್ರಧಾರಿ. ನೈತಿಕ ದಿಕ್ಸೂಚಿಯನ್ನೇ ಕಳೆದುಕೊಂಡಿರುವ ಸಮಾಜ, ಅಶ್ಲೀಲ ಹಂತ ತಲುಪಿರುವ ವರ್ಗ ಅಸಮಾನತೆಗಳು, ಪಾಶ್ರ್ವವಾಯುಪೀಡಿತ ರಾಜಕಾರಣ ಹಾಗೂ ನಂಜುಭರಿತ ಮೀಡಿಯಾ ಸರ್ಕಾರದೊಂದಿಗೆ ಪ್ರತ್ಯಕ್ಷ-ಪರೋಕ್ಷವಾಗಿ ಕೈ ಕಲೆಸಿರುವ ಅಪರಾಧಿಗಳು.

ಲಾಕ್ ಡೌನ್ ಕಾರಣ ನೇರವಾಗಿ ಉದ್ಯೋಗ ಕಳೆದುಕೊಂಡಿರುವವರ ಸಂಖ್ಯೆ 12 ಕೋಟಿಗೂ ಅಧಿಕ. ಈ ಪೈಕಿ ವಲಸೆ ಕಾರ್ಮಿಕರು ನಾಲ್ಕು ಕೋಟಿ ಮಂದಿ. ತ್ರಿಶಂಕುಗಳಾಗಿ ಸಿಕ್ಕಿ ಹಾಕಿಕೊಂಡಿರುವ ವಲಸೆ ಕಾರ್ಮಿಕರ ಸ್ಥಿತಿಗತಿಗಳ ಕುರಿತು SWAN (Stranded Workers Action Network) ನಡೆಸಿದ ಸಮೀಕ್ಷೆಯಲ್ಲಿ ಹೊರಬಿದ್ದಿರುವ ಅಂಶಗಳು ಸಮಾಜದ ಆತ್ಮಸಾಕ್ಷಿಯನ್ನೂ ಚುಚ್ಚಿಲ್ಲ, ಇತ್ತ ಸರ್ಕಾರದ ಕಣ್ಣನ್ನೂ ತೆರೆಸಿಲ್ಲ. ದೀನದಲಿತರ ಪಾಲಿಗೆ ಸರ್ಕಾರದ ಕಣ್ಣುಗಳು ಶಾಶ್ವತವಾಗಿ ಕುರುಡಾಗಿವೆ ಎಂಬ ಹಳೆಯ ಸತ್ಯವನ್ನು ಈ ಪ್ರಹಸನ ಮತ್ತೊಮ್ಮೆ ಬಯಲಿಗೆಳೆದಿದೆ.

SWAN ಸಮೀಕ್ಷೆಯ ಪ್ರಕಾರ ಶೇ.78ರಷ್ಟು ವಲಸೆ ಕಾರ್ಮಿಕರಿಗೆ ಲಾಕ್ ಡೌನ್ ಅವಧಿಯಲ್ಲಿ ಸಂಬಳ ಸಿಕ್ಕಿಲ್ಲ. ಶೇ.82ರಷ್ಟು ಮಂದಿಗೆ ಸರ್ಕಾರದಿಂದ ಯಾವುದೇ ಬಗೆಯ ದಿನಸಿ ದೊರೆತಿಲ್ಲ. ಶೇ.64ರಷ್ಟು ಕಾರ್ಮಿಕರ ಜೇಬುಗಳಲ್ಲಿ ಉಳಿದಿದ್ದ ಹಣ ನೂರು ರುಪಾಯಿಗೂ ಕಡಿಮೆ. ಯಾವ ಆಸರೆಯೂ ಇಲ್ಲದೆ ಹಸಿದು ಕಂಗೆಟ್ಟವರು ಸಾಯುವುದಿದ್ದರೂ ಅದು ಸ್ವಂತ ಊರಿನಲ್ಲೇ ಎಂದು ಹಂಬಲಿಸುವುದು ಅಪರಾಧವೇ? ಕೋಟಿ ಮಂದಿಗೂ ಹೆಚ್ಚು ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ನೋಂದಣಿ ಮಾಡಿಸಿಕೊಂಡಿದ್ದಾರೆ.

ತಾನು ಚಹಾ ಮಾರಿದ ಬಡವನೆಂದು ಹೇಳಿಕೊಳ್ಳುತ್ತಲೇ ಸುಖ ಸುಪ್ಪತ್ತಿಗೆಗಳಲ್ಲಿ ಓಲಾಡುವ ಪ್ರಧಾನಮಂತ್ರಿಯವರು ಬಡ ಕಾರ್ಮಿಕರನ್ನು ಲೆಕ್ಕಕ್ಕೇ ಇಡದಿರುವುದು ಅತ್ಯಂತ ಸೋಜಿಗದ ಮತ್ತು ಆಘಾತಕಾರಿ ಅಂಶ. ಈ ವಿಶಾಲ ದೇಶದಲ್ಲಿ ಕೋಟ್ಯಂತರ ವಲಸೆ ಕಾರ್ಮಿಕರು ನಾನಾ ರಾಜ್ಯಗಳಲ್ಲಿ ಹೊಟ್ಟೆಪಾಡಿಗಾಗಿ ಹರಡಿ ಹಬ್ಬಿದ್ದಾರೆ. ಆರ್ಥಿಕ ಚಟುವಟಿಕೆಯ ರಥಚಕ್ರಗಳನ್ನು ತಿರುಗಿಸುತ್ತಿದ್ದಾರೆ ಎಂಬ ಕಿಂಚಿತ್ ಅರಿವು ಅವರಿಗೆ ಇದ್ದಿದ್ದರೆ ಲಾಕ್ ಡೌನ್ ಅನ್ನು ಯೋಜಿಸಿಕೊಂಡು ಘೋಷಿಸುತ್ತಿದ್ದರು. ಟ್ರಂಪ್‍ಗೆ ರತ್ನಗಂಬಳಿ ಹಾಸಲೆಂದು, ಮಧ್ಯಪ್ರದೇಶದ ಸರ್ಕಾರ ಕೆಡವಲೆಂದು ಕರೋನಾ ಮಹಾಮಾರಿಯನ್ನು ನಿರ್ಲಕ್ಷಿಸಿದ್ದು ಸರ್ಕಾರದ ಅಪರಾಧ. ಇಲ್ಲವಾದರೆ ಲಾಕ್ ಡೌನನ್ನು ಮುಂಚಿತವಾಗಿಯೇ ಯೋಜಿಸಿ ವಲಸೆ ಕಾರ್ಮಿಕರು ಬಯಸಿದರೆ ಅವರ ರಾಜ್ಯಗಳು- ಊರುಗಳಿಗೆ ಮರಳಲು ವಾರದೊಪ್ಪತ್ತು ಅವಕಾಶ ಕಲ್ಪಿಸಬಹುದಿತ್ತು. ಸರ್ಕಾರದ ಈ ಬೇಜವಾಬ್ದಾರಿತನಕ್ಕೆ ಕೋಟ್ಯಂತರ ಕಾರ್ಮಿಕರು ಯಾಕೆ ಬೆಲೆ ತೆರಬೇಕಿತ್ತು? ಲಾಕ್ ಡೌನ್ ಘೋಷಣೆಗೆ ಮುನ್ನ ಮೋದಿಯವರು ನೀಡಿದ ಕಾಲಾವಕಾಶ ನಾಲ್ಕು ದಿನಗಳಲ್ಲ, ಬದಲಾಗಿ ಕೇವಲ ನಾಲ್ಕು ತಾಸುಗಳು!

ಈ ಬೇಜವಾಬ್ದಾರಿ ಘೋಷಣೆಯ ನಂತರ ಕಾರ್ಮಿಕರಿಗೊಂದು ಕನಿಷ್ಠ ಭದ್ರತೆ ಒದಗಿಸುವ ಕೆಲಸವನ್ನಾದರೂ ಮಾಡಬೇಕಿತ್ತು. ಆದರೆ ಈ ಕೋಟ್ಯಂತರ ಕಾರ್ಮಿಕರು ಅಸ್ತಿತ್ವದಲ್ಲೇ ಇಲ್ಲ ಎಂಬಂತೆ ನಡೆದುಕೊಂಡಿತು ಮೋದಿ ಸರ್ಕಾರ. ಅಂತಹ ಜೀವಿಗಳು ನಮ್ಮ ನಡುವೆ ಇದ್ದಾರೆಂದೂ, ಹಸಿವು ನಿದ್ರೆ ನೀರಡಿಕೆಗಳು ಅವರನ್ನೂ ಬಾಧಿಸುತ್ತವೆಂದೂ ಸರ್ಕಾರ ಮತ್ತು ಸಮಾಜ ಗಮನಿಸಿದ್ದು ಅವರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಹೆದ್ದಾರಿಗಳಿಗೆ ಇಳಿದಾಗಲೇ. ಆಗಲೂ ಅವರ ಘನತೆಯನ್ನು ಕಾಲಕಸವಾಗಿ ಕಾಣಲಾಯಿತು. ಅಂದು ಶುರುವಾದ ಪೊಲೀಸರ ಲಾಠಿ ಬೂಟುಗಳ ಹೊಡೆತಗಳು, ಅಮ್ಮ ಅಕ್ಕ ಪತ್ನಿಯ ಪ್ರಸ್ತಾಪಿಸಿ ಬೈಯ್ಯುವ ಕೆಟ್ಟ ಬೈಗಳು ಈಗಲೂ ನಿಂತಿಲ್ಲ. ಯಾವ ಅಪರಾಧಕ್ಕೆ ಅವರಿಗೆ ಇಂತಹ ಶಿಕ್ಷೆ?

ಆತ್ಮನಿರ್ಭರತೆ ಅಥವಾ ಸ್ವಾವಲಂಬನೆಯ ಪಾಠವನ್ನು ಪ್ರಧಾನಿ ಹೇಳಿದ್ದಾರೆ. ಆದರೆ ತಮ್ಮನ್ನು ಸದಾ ತುಳಿದು ಅಂಚಿಗೆ ಅಟ್ಟುತ್ತಿರುವ ಅಸಮಾನ ವ್ಯವಸ್ಥೆಯ ವಿರುದ್ಧ ನಿರ್ಗತಿಕ ಶ್ರಮಿಕ ವರ್ಗ ತನ್ನ ಅಸ್ತಿತ್ವಕ್ಕಾಗಿ ಸೆಣೆಸುತ್ತಲೇ ಬಂದಿದೆ. ಅದು ಆರಂಭದಿಂದಲೂ ಸ್ವಾವಲಂಬಿ. ಅಳಿದುಳಿದ ತನ್ನ ಪಾಪಪ್ರಜ್ಞೆಯನ್ನು ತೊಳೆದುಕೊಳ್ಳಲು ಈ ವರ್ಗಕ್ಕೆ ಭಿಕ್ಷೆಯ ಕಾಸು ಎಸೆಯುತ್ತ ಬಂದಿರಬಹುದು ಸರ್ಕಾರಗಳು.

ಈ ದೇಶದ ಬಂಡವಾಳಶಾಹಿ ಕಾರ್ಪೊರೇಟ್ ವಲಯಕ್ಕೆ ವರ್ಷ ವರ್ಷ ಬಜೆಟ್ಟಿನಲ್ಲಿ ಬಿಟ್ಟುಕೊಡಲಾಗುವ ಲಕ್ಷಾಂತರ ಕೋಟಿ ತೆರಿಗೆಗಳಿಗೆ ಹೋಲಿಸಿದರೆ ಶ್ರಮಿಕ ವರ್ಗಕ್ಕೆ ಸರ್ಕಾರ ನೀಡುವುದು ಬಿಡಿಗಾಸಲ್ಲದೆ ಇನ್ನೇನೂ ಅಲ್ಲ. ಮನೆಗಳಿಗೆ ಮರಳಲು ಈ ಜನವರ್ಗ ರೇಲುಗಾಡಿಯ ಟಿಕೆಟ್ ದರವನ್ನು ಕಾಸಿಗೆ ಕಾಸು ತೆತ್ತು ಭರಿಸಿದೆ ಎಂಬುದು ನೆನಪಿರಲಿ.

ಸಮಾನತೆಯ ಆಧಾರದ ಮೇಲೆ ಕಟ್ಟಲಾದ ಸಮಾಜಗಳಲ್ಲಿ ಬಂಡವಾಳದ ಹೆಗಲನ್ನು ಬೆವರು ಸವಾರಿ ಮಾಡಬೇಕು. ಆದರೆ ವಾಸ್ತವವಾಗಿ ಬೆವರಿನ ಬಡ ಹೆಗಲುಗಳು ಬಂಡವಾಳದ ಒಜ್ಜೆಯಡಿ ತತ್ತರಿಸಿವೆ.

ದೇಶದ 45 ಕೋಟಿ ಕಾರ್ಮಿಕರ ಪೈಕಿ ಸಂಘಟಿತ ವಲಯದ ಶ್ರಮಿಕರ ಸಂಖ್ಯೆ ಕೇವಲ 1.10 ಕೋಟಿ. ಉಳಿದವರಿಗೆ ಕಾಯಿದೆ ಕಾನೂನುಗಳ ರಕ್ಷಣೆ ಇಲ್ಲ. ಈಗ ಮಹಾಮಾರಿಯ ಹಿನ್ನೆಲೆಯಲ್ಲಿ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡಲು, ಸಂಘಟಿತ ವಲಯದ ಕಾರ್ಮಿಕರಿಗೂ ಕಾನೂನು ರಕ್ಷಣೆಯ ನೆರಳನ್ನು ಕಿತ್ತುಕೊಳ್ಳಲಾಗುತ್ತಿದೆ. ಕಾರ್ಮಿಕ ಕಾನೂನುಗಳನ್ನು ಕಾರ್ಮಿಕರ ಹಿತದ ವಿರುದ್ಧ ಬಗ್ಗಿಸಲಾಗುತ್ತಿದೆ. ಈಗಾಗಲೆ ಜರ್ಝರಿತಗೊಂಡಿರುವ ಶ್ರಮಿಕ ಶಕ್ತಿಯ ಹೊಟ್ಟೆ ಮತ್ತು ಬೆನ್ನುಗಳ ಮೇಲೆ ಬಾರಿಸಲಾಗುತ್ತಿದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯಿದೆ, ಜೀತದಾಳು ಪದ್ಧತಿ ರದ್ದು ಕಾಯಿದೆ ಹಾಗೂ ಸಕಾಲಕ್ಕೆ ಕೂಲಿ ಪಾವತಿ ಮಾಡುವ ಕಾನೂನನ್ನು ಹೊರತುಪಡಿಸಿ ಉಳಿದೆಲ್ಲ ಕಾರ್ಮಿಕ ರಕ್ಷಣಾ ಕಾಯಿದೆ ಕಾನೂನುಗಳನ್ನು ಉತ್ತರಪ್ರದೇಶ ಸರ್ಕಾರ ಮೂರು ವರ್ಷಗಳ ಕಾಲ ರದ್ದು ಮಾಡಿದೆ. ಗುಜರಾತ್ ಸರ್ಕಾರ 1,200 ದಿನಗಳ ಕಾಲ ಈ ಕಾಯಿದೆಗಳಿಂದ ಕೈಗಾರಿಕೆಗಳಿಗೆ ವಿನಾಯಿತಿ ಘೋಷಿಸಿದೆ. ಹಾಲಿ ಎಂಟು ತಾಸುಗಳ ದುಡಿಮೆ ಹನ್ನೆರಡು ತಾಸುಗಳಿಗೆ ಹೆಚ್ಚಲಿದೆ. ಮಧ್ಯಪ್ರದೇಶ ಸರ್ಕಾರ ಮುಂದಿನ ಸಾವಿರ ದಿನಗಳ ಅವಧಿಯಲ್ಲಿ ಅರಂಭಿಸುವ ಕೈಗಾರಿಕೆಗಳಿಗೆ ಎಲ್ಲ ಕಾರ್ಮಿಕ ಕಲ್ಯಾಣ ಕಾನೂನುಗಳಿಂದ ವಿನಾಯಿತಿ ನೀಡಿದೆ.

ರಾಜಸ್ತಾನ, ಪಂಜಾಬ್, ಮಧ್ಯಪ್ರದೇಶ, ಹರಿಯಾಣ ಇದೇ ಹಾದಿ ತುಳಿದಿವೆ. ಮುಂಬರುವ ದಿನಗಳಲ್ಲಿ ಕರ್ನಾಟಕವೂ ಸೇರಿದಂತೆ ಹೆಚ್ಚು ಹೆಚ್ಚು ರಾಜ್ಯಗಳು ಈ ಸಾಲನ್ನು ಸೇರಲಿವೆ.

ಬಡ ಕಾರ್ಮಿಕ ವರ್ಗವನ್ನು ಬಂಡವಾಳಕ್ಕೆ ಒತ್ತೆಯಾಳಾಗಿ ಇರಿಸಲು ಸರ್ಕಾರವೇ ಮುಂದಾಗಿರುವುದು ವಿಕಟ ವಿಡಂಬನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...