Homeಅಂಕಣಗಳುಕಾರ್ಮಿಕ ಹಿತದ ಕಾನೂನುಗಳಿಗೆ ಎಳ್ಳು ನೀರು ಬಿಡಲು ಸರ್ಕಾರವೇ ಮುಂದಾಗಿರುವುದು ಜನದ್ರೋಹದ ಕೃತ್ಯ

ಕಾರ್ಮಿಕ ಹಿತದ ಕಾನೂನುಗಳಿಗೆ ಎಳ್ಳು ನೀರು ಬಿಡಲು ಸರ್ಕಾರವೇ ಮುಂದಾಗಿರುವುದು ಜನದ್ರೋಹದ ಕೃತ್ಯ

- Advertisement -
- Advertisement -

ಸಾಮಾಜಿಕ-ರಾಜಕೀಯ ವ್ಯಾಖ್ಯಾನಕಾರ ಪ್ರೊ.ಯೋಗೇಂದ್ರ ಯಾದವ್ ಅವರು ಈ ವ್ಯಥೆಯ ವಿದ್ಯಮಾನವನ್ನು ಸರ್ಕಾರಿ ಕೃಪಾಪೋಷಿತ ಒತ್ತೆಯಾಳು ಪ್ರಹಸನ ಎಂದು ಬಣ್ಣಿಸಿದ್ದಾರೆ. ಮಹಾನಗರಗಳ ಆರ್ಥಿಕ ಚಟುವಟಿಕೆಗಳ ದೈತ್ಯಚಕ್ರವನ್ನು ತಿರುಗಿಸಲೆಂದು ವಲಸೆ ಕಾರ್ಮಿಕರನ್ನು ಕೈಗಾರಿಕೋದ್ಯಮಗಳ ಒತ್ತೆಯಾಳುಗಳನ್ನಾಗಿ ಕೈವಶ ಮಾಡಿಕೊಳ್ಳಲಾಗುತ್ತಿದೆ. ಈ ಕ್ರೂರ ಮಸಲತ್ತಿನಲ್ಲಿ ಸರ್ಕಾರವೇ ಮುಖ್ಯ ಪಾತ್ರಧಾರಿ. ನೈತಿಕ ದಿಕ್ಸೂಚಿಯನ್ನೇ ಕಳೆದುಕೊಂಡಿರುವ ಸಮಾಜ, ಅಶ್ಲೀಲ ಹಂತ ತಲುಪಿರುವ ವರ್ಗ ಅಸಮಾನತೆಗಳು, ಪಾಶ್ರ್ವವಾಯುಪೀಡಿತ ರಾಜಕಾರಣ ಹಾಗೂ ನಂಜುಭರಿತ ಮೀಡಿಯಾ ಸರ್ಕಾರದೊಂದಿಗೆ ಪ್ರತ್ಯಕ್ಷ-ಪರೋಕ್ಷವಾಗಿ ಕೈ ಕಲೆಸಿರುವ ಅಪರಾಧಿಗಳು.

ಲಾಕ್ ಡೌನ್ ಕಾರಣ ನೇರವಾಗಿ ಉದ್ಯೋಗ ಕಳೆದುಕೊಂಡಿರುವವರ ಸಂಖ್ಯೆ 12 ಕೋಟಿಗೂ ಅಧಿಕ. ಈ ಪೈಕಿ ವಲಸೆ ಕಾರ್ಮಿಕರು ನಾಲ್ಕು ಕೋಟಿ ಮಂದಿ. ತ್ರಿಶಂಕುಗಳಾಗಿ ಸಿಕ್ಕಿ ಹಾಕಿಕೊಂಡಿರುವ ವಲಸೆ ಕಾರ್ಮಿಕರ ಸ್ಥಿತಿಗತಿಗಳ ಕುರಿತು SWAN (Stranded Workers Action Network) ನಡೆಸಿದ ಸಮೀಕ್ಷೆಯಲ್ಲಿ ಹೊರಬಿದ್ದಿರುವ ಅಂಶಗಳು ಸಮಾಜದ ಆತ್ಮಸಾಕ್ಷಿಯನ್ನೂ ಚುಚ್ಚಿಲ್ಲ, ಇತ್ತ ಸರ್ಕಾರದ ಕಣ್ಣನ್ನೂ ತೆರೆಸಿಲ್ಲ. ದೀನದಲಿತರ ಪಾಲಿಗೆ ಸರ್ಕಾರದ ಕಣ್ಣುಗಳು ಶಾಶ್ವತವಾಗಿ ಕುರುಡಾಗಿವೆ ಎಂಬ ಹಳೆಯ ಸತ್ಯವನ್ನು ಈ ಪ್ರಹಸನ ಮತ್ತೊಮ್ಮೆ ಬಯಲಿಗೆಳೆದಿದೆ.

SWAN ಸಮೀಕ್ಷೆಯ ಪ್ರಕಾರ ಶೇ.78ರಷ್ಟು ವಲಸೆ ಕಾರ್ಮಿಕರಿಗೆ ಲಾಕ್ ಡೌನ್ ಅವಧಿಯಲ್ಲಿ ಸಂಬಳ ಸಿಕ್ಕಿಲ್ಲ. ಶೇ.82ರಷ್ಟು ಮಂದಿಗೆ ಸರ್ಕಾರದಿಂದ ಯಾವುದೇ ಬಗೆಯ ದಿನಸಿ ದೊರೆತಿಲ್ಲ. ಶೇ.64ರಷ್ಟು ಕಾರ್ಮಿಕರ ಜೇಬುಗಳಲ್ಲಿ ಉಳಿದಿದ್ದ ಹಣ ನೂರು ರುಪಾಯಿಗೂ ಕಡಿಮೆ. ಯಾವ ಆಸರೆಯೂ ಇಲ್ಲದೆ ಹಸಿದು ಕಂಗೆಟ್ಟವರು ಸಾಯುವುದಿದ್ದರೂ ಅದು ಸ್ವಂತ ಊರಿನಲ್ಲೇ ಎಂದು ಹಂಬಲಿಸುವುದು ಅಪರಾಧವೇ? ಕೋಟಿ ಮಂದಿಗೂ ಹೆಚ್ಚು ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ನೋಂದಣಿ ಮಾಡಿಸಿಕೊಂಡಿದ್ದಾರೆ.

ತಾನು ಚಹಾ ಮಾರಿದ ಬಡವನೆಂದು ಹೇಳಿಕೊಳ್ಳುತ್ತಲೇ ಸುಖ ಸುಪ್ಪತ್ತಿಗೆಗಳಲ್ಲಿ ಓಲಾಡುವ ಪ್ರಧಾನಮಂತ್ರಿಯವರು ಬಡ ಕಾರ್ಮಿಕರನ್ನು ಲೆಕ್ಕಕ್ಕೇ ಇಡದಿರುವುದು ಅತ್ಯಂತ ಸೋಜಿಗದ ಮತ್ತು ಆಘಾತಕಾರಿ ಅಂಶ. ಈ ವಿಶಾಲ ದೇಶದಲ್ಲಿ ಕೋಟ್ಯಂತರ ವಲಸೆ ಕಾರ್ಮಿಕರು ನಾನಾ ರಾಜ್ಯಗಳಲ್ಲಿ ಹೊಟ್ಟೆಪಾಡಿಗಾಗಿ ಹರಡಿ ಹಬ್ಬಿದ್ದಾರೆ. ಆರ್ಥಿಕ ಚಟುವಟಿಕೆಯ ರಥಚಕ್ರಗಳನ್ನು ತಿರುಗಿಸುತ್ತಿದ್ದಾರೆ ಎಂಬ ಕಿಂಚಿತ್ ಅರಿವು ಅವರಿಗೆ ಇದ್ದಿದ್ದರೆ ಲಾಕ್ ಡೌನ್ ಅನ್ನು ಯೋಜಿಸಿಕೊಂಡು ಘೋಷಿಸುತ್ತಿದ್ದರು. ಟ್ರಂಪ್‍ಗೆ ರತ್ನಗಂಬಳಿ ಹಾಸಲೆಂದು, ಮಧ್ಯಪ್ರದೇಶದ ಸರ್ಕಾರ ಕೆಡವಲೆಂದು ಕರೋನಾ ಮಹಾಮಾರಿಯನ್ನು ನಿರ್ಲಕ್ಷಿಸಿದ್ದು ಸರ್ಕಾರದ ಅಪರಾಧ. ಇಲ್ಲವಾದರೆ ಲಾಕ್ ಡೌನನ್ನು ಮುಂಚಿತವಾಗಿಯೇ ಯೋಜಿಸಿ ವಲಸೆ ಕಾರ್ಮಿಕರು ಬಯಸಿದರೆ ಅವರ ರಾಜ್ಯಗಳು- ಊರುಗಳಿಗೆ ಮರಳಲು ವಾರದೊಪ್ಪತ್ತು ಅವಕಾಶ ಕಲ್ಪಿಸಬಹುದಿತ್ತು. ಸರ್ಕಾರದ ಈ ಬೇಜವಾಬ್ದಾರಿತನಕ್ಕೆ ಕೋಟ್ಯಂತರ ಕಾರ್ಮಿಕರು ಯಾಕೆ ಬೆಲೆ ತೆರಬೇಕಿತ್ತು? ಲಾಕ್ ಡೌನ್ ಘೋಷಣೆಗೆ ಮುನ್ನ ಮೋದಿಯವರು ನೀಡಿದ ಕಾಲಾವಕಾಶ ನಾಲ್ಕು ದಿನಗಳಲ್ಲ, ಬದಲಾಗಿ ಕೇವಲ ನಾಲ್ಕು ತಾಸುಗಳು!

ಈ ಬೇಜವಾಬ್ದಾರಿ ಘೋಷಣೆಯ ನಂತರ ಕಾರ್ಮಿಕರಿಗೊಂದು ಕನಿಷ್ಠ ಭದ್ರತೆ ಒದಗಿಸುವ ಕೆಲಸವನ್ನಾದರೂ ಮಾಡಬೇಕಿತ್ತು. ಆದರೆ ಈ ಕೋಟ್ಯಂತರ ಕಾರ್ಮಿಕರು ಅಸ್ತಿತ್ವದಲ್ಲೇ ಇಲ್ಲ ಎಂಬಂತೆ ನಡೆದುಕೊಂಡಿತು ಮೋದಿ ಸರ್ಕಾರ. ಅಂತಹ ಜೀವಿಗಳು ನಮ್ಮ ನಡುವೆ ಇದ್ದಾರೆಂದೂ, ಹಸಿವು ನಿದ್ರೆ ನೀರಡಿಕೆಗಳು ಅವರನ್ನೂ ಬಾಧಿಸುತ್ತವೆಂದೂ ಸರ್ಕಾರ ಮತ್ತು ಸಮಾಜ ಗಮನಿಸಿದ್ದು ಅವರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಹೆದ್ದಾರಿಗಳಿಗೆ ಇಳಿದಾಗಲೇ. ಆಗಲೂ ಅವರ ಘನತೆಯನ್ನು ಕಾಲಕಸವಾಗಿ ಕಾಣಲಾಯಿತು. ಅಂದು ಶುರುವಾದ ಪೊಲೀಸರ ಲಾಠಿ ಬೂಟುಗಳ ಹೊಡೆತಗಳು, ಅಮ್ಮ ಅಕ್ಕ ಪತ್ನಿಯ ಪ್ರಸ್ತಾಪಿಸಿ ಬೈಯ್ಯುವ ಕೆಟ್ಟ ಬೈಗಳು ಈಗಲೂ ನಿಂತಿಲ್ಲ. ಯಾವ ಅಪರಾಧಕ್ಕೆ ಅವರಿಗೆ ಇಂತಹ ಶಿಕ್ಷೆ?

ಆತ್ಮನಿರ್ಭರತೆ ಅಥವಾ ಸ್ವಾವಲಂಬನೆಯ ಪಾಠವನ್ನು ಪ್ರಧಾನಿ ಹೇಳಿದ್ದಾರೆ. ಆದರೆ ತಮ್ಮನ್ನು ಸದಾ ತುಳಿದು ಅಂಚಿಗೆ ಅಟ್ಟುತ್ತಿರುವ ಅಸಮಾನ ವ್ಯವಸ್ಥೆಯ ವಿರುದ್ಧ ನಿರ್ಗತಿಕ ಶ್ರಮಿಕ ವರ್ಗ ತನ್ನ ಅಸ್ತಿತ್ವಕ್ಕಾಗಿ ಸೆಣೆಸುತ್ತಲೇ ಬಂದಿದೆ. ಅದು ಆರಂಭದಿಂದಲೂ ಸ್ವಾವಲಂಬಿ. ಅಳಿದುಳಿದ ತನ್ನ ಪಾಪಪ್ರಜ್ಞೆಯನ್ನು ತೊಳೆದುಕೊಳ್ಳಲು ಈ ವರ್ಗಕ್ಕೆ ಭಿಕ್ಷೆಯ ಕಾಸು ಎಸೆಯುತ್ತ ಬಂದಿರಬಹುದು ಸರ್ಕಾರಗಳು.

ಈ ದೇಶದ ಬಂಡವಾಳಶಾಹಿ ಕಾರ್ಪೊರೇಟ್ ವಲಯಕ್ಕೆ ವರ್ಷ ವರ್ಷ ಬಜೆಟ್ಟಿನಲ್ಲಿ ಬಿಟ್ಟುಕೊಡಲಾಗುವ ಲಕ್ಷಾಂತರ ಕೋಟಿ ತೆರಿಗೆಗಳಿಗೆ ಹೋಲಿಸಿದರೆ ಶ್ರಮಿಕ ವರ್ಗಕ್ಕೆ ಸರ್ಕಾರ ನೀಡುವುದು ಬಿಡಿಗಾಸಲ್ಲದೆ ಇನ್ನೇನೂ ಅಲ್ಲ. ಮನೆಗಳಿಗೆ ಮರಳಲು ಈ ಜನವರ್ಗ ರೇಲುಗಾಡಿಯ ಟಿಕೆಟ್ ದರವನ್ನು ಕಾಸಿಗೆ ಕಾಸು ತೆತ್ತು ಭರಿಸಿದೆ ಎಂಬುದು ನೆನಪಿರಲಿ.

ಸಮಾನತೆಯ ಆಧಾರದ ಮೇಲೆ ಕಟ್ಟಲಾದ ಸಮಾಜಗಳಲ್ಲಿ ಬಂಡವಾಳದ ಹೆಗಲನ್ನು ಬೆವರು ಸವಾರಿ ಮಾಡಬೇಕು. ಆದರೆ ವಾಸ್ತವವಾಗಿ ಬೆವರಿನ ಬಡ ಹೆಗಲುಗಳು ಬಂಡವಾಳದ ಒಜ್ಜೆಯಡಿ ತತ್ತರಿಸಿವೆ.

ದೇಶದ 45 ಕೋಟಿ ಕಾರ್ಮಿಕರ ಪೈಕಿ ಸಂಘಟಿತ ವಲಯದ ಶ್ರಮಿಕರ ಸಂಖ್ಯೆ ಕೇವಲ 1.10 ಕೋಟಿ. ಉಳಿದವರಿಗೆ ಕಾಯಿದೆ ಕಾನೂನುಗಳ ರಕ್ಷಣೆ ಇಲ್ಲ. ಈಗ ಮಹಾಮಾರಿಯ ಹಿನ್ನೆಲೆಯಲ್ಲಿ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡಲು, ಸಂಘಟಿತ ವಲಯದ ಕಾರ್ಮಿಕರಿಗೂ ಕಾನೂನು ರಕ್ಷಣೆಯ ನೆರಳನ್ನು ಕಿತ್ತುಕೊಳ್ಳಲಾಗುತ್ತಿದೆ. ಕಾರ್ಮಿಕ ಕಾನೂನುಗಳನ್ನು ಕಾರ್ಮಿಕರ ಹಿತದ ವಿರುದ್ಧ ಬಗ್ಗಿಸಲಾಗುತ್ತಿದೆ. ಈಗಾಗಲೆ ಜರ್ಝರಿತಗೊಂಡಿರುವ ಶ್ರಮಿಕ ಶಕ್ತಿಯ ಹೊಟ್ಟೆ ಮತ್ತು ಬೆನ್ನುಗಳ ಮೇಲೆ ಬಾರಿಸಲಾಗುತ್ತಿದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯಿದೆ, ಜೀತದಾಳು ಪದ್ಧತಿ ರದ್ದು ಕಾಯಿದೆ ಹಾಗೂ ಸಕಾಲಕ್ಕೆ ಕೂಲಿ ಪಾವತಿ ಮಾಡುವ ಕಾನೂನನ್ನು ಹೊರತುಪಡಿಸಿ ಉಳಿದೆಲ್ಲ ಕಾರ್ಮಿಕ ರಕ್ಷಣಾ ಕಾಯಿದೆ ಕಾನೂನುಗಳನ್ನು ಉತ್ತರಪ್ರದೇಶ ಸರ್ಕಾರ ಮೂರು ವರ್ಷಗಳ ಕಾಲ ರದ್ದು ಮಾಡಿದೆ. ಗುಜರಾತ್ ಸರ್ಕಾರ 1,200 ದಿನಗಳ ಕಾಲ ಈ ಕಾಯಿದೆಗಳಿಂದ ಕೈಗಾರಿಕೆಗಳಿಗೆ ವಿನಾಯಿತಿ ಘೋಷಿಸಿದೆ. ಹಾಲಿ ಎಂಟು ತಾಸುಗಳ ದುಡಿಮೆ ಹನ್ನೆರಡು ತಾಸುಗಳಿಗೆ ಹೆಚ್ಚಲಿದೆ. ಮಧ್ಯಪ್ರದೇಶ ಸರ್ಕಾರ ಮುಂದಿನ ಸಾವಿರ ದಿನಗಳ ಅವಧಿಯಲ್ಲಿ ಅರಂಭಿಸುವ ಕೈಗಾರಿಕೆಗಳಿಗೆ ಎಲ್ಲ ಕಾರ್ಮಿಕ ಕಲ್ಯಾಣ ಕಾನೂನುಗಳಿಂದ ವಿನಾಯಿತಿ ನೀಡಿದೆ.

ರಾಜಸ್ತಾನ, ಪಂಜಾಬ್, ಮಧ್ಯಪ್ರದೇಶ, ಹರಿಯಾಣ ಇದೇ ಹಾದಿ ತುಳಿದಿವೆ. ಮುಂಬರುವ ದಿನಗಳಲ್ಲಿ ಕರ್ನಾಟಕವೂ ಸೇರಿದಂತೆ ಹೆಚ್ಚು ಹೆಚ್ಚು ರಾಜ್ಯಗಳು ಈ ಸಾಲನ್ನು ಸೇರಲಿವೆ.

ಬಡ ಕಾರ್ಮಿಕ ವರ್ಗವನ್ನು ಬಂಡವಾಳಕ್ಕೆ ಒತ್ತೆಯಾಳಾಗಿ ಇರಿಸಲು ಸರ್ಕಾರವೇ ಮುಂದಾಗಿರುವುದು ವಿಕಟ ವಿಡಂಬನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...