Homeಅಂಕಣಗಳುಕಾರ್ಮಿಕ ಹಿತದ ಕಾನೂನುಗಳಿಗೆ ಎಳ್ಳು ನೀರು ಬಿಡಲು ಸರ್ಕಾರವೇ ಮುಂದಾಗಿರುವುದು ಜನದ್ರೋಹದ ಕೃತ್ಯ

ಕಾರ್ಮಿಕ ಹಿತದ ಕಾನೂನುಗಳಿಗೆ ಎಳ್ಳು ನೀರು ಬಿಡಲು ಸರ್ಕಾರವೇ ಮುಂದಾಗಿರುವುದು ಜನದ್ರೋಹದ ಕೃತ್ಯ

- Advertisement -
- Advertisement -

ಸಾಮಾಜಿಕ-ರಾಜಕೀಯ ವ್ಯಾಖ್ಯಾನಕಾರ ಪ್ರೊ.ಯೋಗೇಂದ್ರ ಯಾದವ್ ಅವರು ಈ ವ್ಯಥೆಯ ವಿದ್ಯಮಾನವನ್ನು ಸರ್ಕಾರಿ ಕೃಪಾಪೋಷಿತ ಒತ್ತೆಯಾಳು ಪ್ರಹಸನ ಎಂದು ಬಣ್ಣಿಸಿದ್ದಾರೆ. ಮಹಾನಗರಗಳ ಆರ್ಥಿಕ ಚಟುವಟಿಕೆಗಳ ದೈತ್ಯಚಕ್ರವನ್ನು ತಿರುಗಿಸಲೆಂದು ವಲಸೆ ಕಾರ್ಮಿಕರನ್ನು ಕೈಗಾರಿಕೋದ್ಯಮಗಳ ಒತ್ತೆಯಾಳುಗಳನ್ನಾಗಿ ಕೈವಶ ಮಾಡಿಕೊಳ್ಳಲಾಗುತ್ತಿದೆ. ಈ ಕ್ರೂರ ಮಸಲತ್ತಿನಲ್ಲಿ ಸರ್ಕಾರವೇ ಮುಖ್ಯ ಪಾತ್ರಧಾರಿ. ನೈತಿಕ ದಿಕ್ಸೂಚಿಯನ್ನೇ ಕಳೆದುಕೊಂಡಿರುವ ಸಮಾಜ, ಅಶ್ಲೀಲ ಹಂತ ತಲುಪಿರುವ ವರ್ಗ ಅಸಮಾನತೆಗಳು, ಪಾಶ್ರ್ವವಾಯುಪೀಡಿತ ರಾಜಕಾರಣ ಹಾಗೂ ನಂಜುಭರಿತ ಮೀಡಿಯಾ ಸರ್ಕಾರದೊಂದಿಗೆ ಪ್ರತ್ಯಕ್ಷ-ಪರೋಕ್ಷವಾಗಿ ಕೈ ಕಲೆಸಿರುವ ಅಪರಾಧಿಗಳು.

ಲಾಕ್ ಡೌನ್ ಕಾರಣ ನೇರವಾಗಿ ಉದ್ಯೋಗ ಕಳೆದುಕೊಂಡಿರುವವರ ಸಂಖ್ಯೆ 12 ಕೋಟಿಗೂ ಅಧಿಕ. ಈ ಪೈಕಿ ವಲಸೆ ಕಾರ್ಮಿಕರು ನಾಲ್ಕು ಕೋಟಿ ಮಂದಿ. ತ್ರಿಶಂಕುಗಳಾಗಿ ಸಿಕ್ಕಿ ಹಾಕಿಕೊಂಡಿರುವ ವಲಸೆ ಕಾರ್ಮಿಕರ ಸ್ಥಿತಿಗತಿಗಳ ಕುರಿತು SWAN (Stranded Workers Action Network) ನಡೆಸಿದ ಸಮೀಕ್ಷೆಯಲ್ಲಿ ಹೊರಬಿದ್ದಿರುವ ಅಂಶಗಳು ಸಮಾಜದ ಆತ್ಮಸಾಕ್ಷಿಯನ್ನೂ ಚುಚ್ಚಿಲ್ಲ, ಇತ್ತ ಸರ್ಕಾರದ ಕಣ್ಣನ್ನೂ ತೆರೆಸಿಲ್ಲ. ದೀನದಲಿತರ ಪಾಲಿಗೆ ಸರ್ಕಾರದ ಕಣ್ಣುಗಳು ಶಾಶ್ವತವಾಗಿ ಕುರುಡಾಗಿವೆ ಎಂಬ ಹಳೆಯ ಸತ್ಯವನ್ನು ಈ ಪ್ರಹಸನ ಮತ್ತೊಮ್ಮೆ ಬಯಲಿಗೆಳೆದಿದೆ.

SWAN ಸಮೀಕ್ಷೆಯ ಪ್ರಕಾರ ಶೇ.78ರಷ್ಟು ವಲಸೆ ಕಾರ್ಮಿಕರಿಗೆ ಲಾಕ್ ಡೌನ್ ಅವಧಿಯಲ್ಲಿ ಸಂಬಳ ಸಿಕ್ಕಿಲ್ಲ. ಶೇ.82ರಷ್ಟು ಮಂದಿಗೆ ಸರ್ಕಾರದಿಂದ ಯಾವುದೇ ಬಗೆಯ ದಿನಸಿ ದೊರೆತಿಲ್ಲ. ಶೇ.64ರಷ್ಟು ಕಾರ್ಮಿಕರ ಜೇಬುಗಳಲ್ಲಿ ಉಳಿದಿದ್ದ ಹಣ ನೂರು ರುಪಾಯಿಗೂ ಕಡಿಮೆ. ಯಾವ ಆಸರೆಯೂ ಇಲ್ಲದೆ ಹಸಿದು ಕಂಗೆಟ್ಟವರು ಸಾಯುವುದಿದ್ದರೂ ಅದು ಸ್ವಂತ ಊರಿನಲ್ಲೇ ಎಂದು ಹಂಬಲಿಸುವುದು ಅಪರಾಧವೇ? ಕೋಟಿ ಮಂದಿಗೂ ಹೆಚ್ಚು ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ನೋಂದಣಿ ಮಾಡಿಸಿಕೊಂಡಿದ್ದಾರೆ.

ತಾನು ಚಹಾ ಮಾರಿದ ಬಡವನೆಂದು ಹೇಳಿಕೊಳ್ಳುತ್ತಲೇ ಸುಖ ಸುಪ್ಪತ್ತಿಗೆಗಳಲ್ಲಿ ಓಲಾಡುವ ಪ್ರಧಾನಮಂತ್ರಿಯವರು ಬಡ ಕಾರ್ಮಿಕರನ್ನು ಲೆಕ್ಕಕ್ಕೇ ಇಡದಿರುವುದು ಅತ್ಯಂತ ಸೋಜಿಗದ ಮತ್ತು ಆಘಾತಕಾರಿ ಅಂಶ. ಈ ವಿಶಾಲ ದೇಶದಲ್ಲಿ ಕೋಟ್ಯಂತರ ವಲಸೆ ಕಾರ್ಮಿಕರು ನಾನಾ ರಾಜ್ಯಗಳಲ್ಲಿ ಹೊಟ್ಟೆಪಾಡಿಗಾಗಿ ಹರಡಿ ಹಬ್ಬಿದ್ದಾರೆ. ಆರ್ಥಿಕ ಚಟುವಟಿಕೆಯ ರಥಚಕ್ರಗಳನ್ನು ತಿರುಗಿಸುತ್ತಿದ್ದಾರೆ ಎಂಬ ಕಿಂಚಿತ್ ಅರಿವು ಅವರಿಗೆ ಇದ್ದಿದ್ದರೆ ಲಾಕ್ ಡೌನ್ ಅನ್ನು ಯೋಜಿಸಿಕೊಂಡು ಘೋಷಿಸುತ್ತಿದ್ದರು. ಟ್ರಂಪ್‍ಗೆ ರತ್ನಗಂಬಳಿ ಹಾಸಲೆಂದು, ಮಧ್ಯಪ್ರದೇಶದ ಸರ್ಕಾರ ಕೆಡವಲೆಂದು ಕರೋನಾ ಮಹಾಮಾರಿಯನ್ನು ನಿರ್ಲಕ್ಷಿಸಿದ್ದು ಸರ್ಕಾರದ ಅಪರಾಧ. ಇಲ್ಲವಾದರೆ ಲಾಕ್ ಡೌನನ್ನು ಮುಂಚಿತವಾಗಿಯೇ ಯೋಜಿಸಿ ವಲಸೆ ಕಾರ್ಮಿಕರು ಬಯಸಿದರೆ ಅವರ ರಾಜ್ಯಗಳು- ಊರುಗಳಿಗೆ ಮರಳಲು ವಾರದೊಪ್ಪತ್ತು ಅವಕಾಶ ಕಲ್ಪಿಸಬಹುದಿತ್ತು. ಸರ್ಕಾರದ ಈ ಬೇಜವಾಬ್ದಾರಿತನಕ್ಕೆ ಕೋಟ್ಯಂತರ ಕಾರ್ಮಿಕರು ಯಾಕೆ ಬೆಲೆ ತೆರಬೇಕಿತ್ತು? ಲಾಕ್ ಡೌನ್ ಘೋಷಣೆಗೆ ಮುನ್ನ ಮೋದಿಯವರು ನೀಡಿದ ಕಾಲಾವಕಾಶ ನಾಲ್ಕು ದಿನಗಳಲ್ಲ, ಬದಲಾಗಿ ಕೇವಲ ನಾಲ್ಕು ತಾಸುಗಳು!

ಈ ಬೇಜವಾಬ್ದಾರಿ ಘೋಷಣೆಯ ನಂತರ ಕಾರ್ಮಿಕರಿಗೊಂದು ಕನಿಷ್ಠ ಭದ್ರತೆ ಒದಗಿಸುವ ಕೆಲಸವನ್ನಾದರೂ ಮಾಡಬೇಕಿತ್ತು. ಆದರೆ ಈ ಕೋಟ್ಯಂತರ ಕಾರ್ಮಿಕರು ಅಸ್ತಿತ್ವದಲ್ಲೇ ಇಲ್ಲ ಎಂಬಂತೆ ನಡೆದುಕೊಂಡಿತು ಮೋದಿ ಸರ್ಕಾರ. ಅಂತಹ ಜೀವಿಗಳು ನಮ್ಮ ನಡುವೆ ಇದ್ದಾರೆಂದೂ, ಹಸಿವು ನಿದ್ರೆ ನೀರಡಿಕೆಗಳು ಅವರನ್ನೂ ಬಾಧಿಸುತ್ತವೆಂದೂ ಸರ್ಕಾರ ಮತ್ತು ಸಮಾಜ ಗಮನಿಸಿದ್ದು ಅವರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಹೆದ್ದಾರಿಗಳಿಗೆ ಇಳಿದಾಗಲೇ. ಆಗಲೂ ಅವರ ಘನತೆಯನ್ನು ಕಾಲಕಸವಾಗಿ ಕಾಣಲಾಯಿತು. ಅಂದು ಶುರುವಾದ ಪೊಲೀಸರ ಲಾಠಿ ಬೂಟುಗಳ ಹೊಡೆತಗಳು, ಅಮ್ಮ ಅಕ್ಕ ಪತ್ನಿಯ ಪ್ರಸ್ತಾಪಿಸಿ ಬೈಯ್ಯುವ ಕೆಟ್ಟ ಬೈಗಳು ಈಗಲೂ ನಿಂತಿಲ್ಲ. ಯಾವ ಅಪರಾಧಕ್ಕೆ ಅವರಿಗೆ ಇಂತಹ ಶಿಕ್ಷೆ?

ಆತ್ಮನಿರ್ಭರತೆ ಅಥವಾ ಸ್ವಾವಲಂಬನೆಯ ಪಾಠವನ್ನು ಪ್ರಧಾನಿ ಹೇಳಿದ್ದಾರೆ. ಆದರೆ ತಮ್ಮನ್ನು ಸದಾ ತುಳಿದು ಅಂಚಿಗೆ ಅಟ್ಟುತ್ತಿರುವ ಅಸಮಾನ ವ್ಯವಸ್ಥೆಯ ವಿರುದ್ಧ ನಿರ್ಗತಿಕ ಶ್ರಮಿಕ ವರ್ಗ ತನ್ನ ಅಸ್ತಿತ್ವಕ್ಕಾಗಿ ಸೆಣೆಸುತ್ತಲೇ ಬಂದಿದೆ. ಅದು ಆರಂಭದಿಂದಲೂ ಸ್ವಾವಲಂಬಿ. ಅಳಿದುಳಿದ ತನ್ನ ಪಾಪಪ್ರಜ್ಞೆಯನ್ನು ತೊಳೆದುಕೊಳ್ಳಲು ಈ ವರ್ಗಕ್ಕೆ ಭಿಕ್ಷೆಯ ಕಾಸು ಎಸೆಯುತ್ತ ಬಂದಿರಬಹುದು ಸರ್ಕಾರಗಳು.

ಈ ದೇಶದ ಬಂಡವಾಳಶಾಹಿ ಕಾರ್ಪೊರೇಟ್ ವಲಯಕ್ಕೆ ವರ್ಷ ವರ್ಷ ಬಜೆಟ್ಟಿನಲ್ಲಿ ಬಿಟ್ಟುಕೊಡಲಾಗುವ ಲಕ್ಷಾಂತರ ಕೋಟಿ ತೆರಿಗೆಗಳಿಗೆ ಹೋಲಿಸಿದರೆ ಶ್ರಮಿಕ ವರ್ಗಕ್ಕೆ ಸರ್ಕಾರ ನೀಡುವುದು ಬಿಡಿಗಾಸಲ್ಲದೆ ಇನ್ನೇನೂ ಅಲ್ಲ. ಮನೆಗಳಿಗೆ ಮರಳಲು ಈ ಜನವರ್ಗ ರೇಲುಗಾಡಿಯ ಟಿಕೆಟ್ ದರವನ್ನು ಕಾಸಿಗೆ ಕಾಸು ತೆತ್ತು ಭರಿಸಿದೆ ಎಂಬುದು ನೆನಪಿರಲಿ.

ಸಮಾನತೆಯ ಆಧಾರದ ಮೇಲೆ ಕಟ್ಟಲಾದ ಸಮಾಜಗಳಲ್ಲಿ ಬಂಡವಾಳದ ಹೆಗಲನ್ನು ಬೆವರು ಸವಾರಿ ಮಾಡಬೇಕು. ಆದರೆ ವಾಸ್ತವವಾಗಿ ಬೆವರಿನ ಬಡ ಹೆಗಲುಗಳು ಬಂಡವಾಳದ ಒಜ್ಜೆಯಡಿ ತತ್ತರಿಸಿವೆ.

ದೇಶದ 45 ಕೋಟಿ ಕಾರ್ಮಿಕರ ಪೈಕಿ ಸಂಘಟಿತ ವಲಯದ ಶ್ರಮಿಕರ ಸಂಖ್ಯೆ ಕೇವಲ 1.10 ಕೋಟಿ. ಉಳಿದವರಿಗೆ ಕಾಯಿದೆ ಕಾನೂನುಗಳ ರಕ್ಷಣೆ ಇಲ್ಲ. ಈಗ ಮಹಾಮಾರಿಯ ಹಿನ್ನೆಲೆಯಲ್ಲಿ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡಲು, ಸಂಘಟಿತ ವಲಯದ ಕಾರ್ಮಿಕರಿಗೂ ಕಾನೂನು ರಕ್ಷಣೆಯ ನೆರಳನ್ನು ಕಿತ್ತುಕೊಳ್ಳಲಾಗುತ್ತಿದೆ. ಕಾರ್ಮಿಕ ಕಾನೂನುಗಳನ್ನು ಕಾರ್ಮಿಕರ ಹಿತದ ವಿರುದ್ಧ ಬಗ್ಗಿಸಲಾಗುತ್ತಿದೆ. ಈಗಾಗಲೆ ಜರ್ಝರಿತಗೊಂಡಿರುವ ಶ್ರಮಿಕ ಶಕ್ತಿಯ ಹೊಟ್ಟೆ ಮತ್ತು ಬೆನ್ನುಗಳ ಮೇಲೆ ಬಾರಿಸಲಾಗುತ್ತಿದೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯಿದೆ, ಜೀತದಾಳು ಪದ್ಧತಿ ರದ್ದು ಕಾಯಿದೆ ಹಾಗೂ ಸಕಾಲಕ್ಕೆ ಕೂಲಿ ಪಾವತಿ ಮಾಡುವ ಕಾನೂನನ್ನು ಹೊರತುಪಡಿಸಿ ಉಳಿದೆಲ್ಲ ಕಾರ್ಮಿಕ ರಕ್ಷಣಾ ಕಾಯಿದೆ ಕಾನೂನುಗಳನ್ನು ಉತ್ತರಪ್ರದೇಶ ಸರ್ಕಾರ ಮೂರು ವರ್ಷಗಳ ಕಾಲ ರದ್ದು ಮಾಡಿದೆ. ಗುಜರಾತ್ ಸರ್ಕಾರ 1,200 ದಿನಗಳ ಕಾಲ ಈ ಕಾಯಿದೆಗಳಿಂದ ಕೈಗಾರಿಕೆಗಳಿಗೆ ವಿನಾಯಿತಿ ಘೋಷಿಸಿದೆ. ಹಾಲಿ ಎಂಟು ತಾಸುಗಳ ದುಡಿಮೆ ಹನ್ನೆರಡು ತಾಸುಗಳಿಗೆ ಹೆಚ್ಚಲಿದೆ. ಮಧ್ಯಪ್ರದೇಶ ಸರ್ಕಾರ ಮುಂದಿನ ಸಾವಿರ ದಿನಗಳ ಅವಧಿಯಲ್ಲಿ ಅರಂಭಿಸುವ ಕೈಗಾರಿಕೆಗಳಿಗೆ ಎಲ್ಲ ಕಾರ್ಮಿಕ ಕಲ್ಯಾಣ ಕಾನೂನುಗಳಿಂದ ವಿನಾಯಿತಿ ನೀಡಿದೆ.

ರಾಜಸ್ತಾನ, ಪಂಜಾಬ್, ಮಧ್ಯಪ್ರದೇಶ, ಹರಿಯಾಣ ಇದೇ ಹಾದಿ ತುಳಿದಿವೆ. ಮುಂಬರುವ ದಿನಗಳಲ್ಲಿ ಕರ್ನಾಟಕವೂ ಸೇರಿದಂತೆ ಹೆಚ್ಚು ಹೆಚ್ಚು ರಾಜ್ಯಗಳು ಈ ಸಾಲನ್ನು ಸೇರಲಿವೆ.

ಬಡ ಕಾರ್ಮಿಕ ವರ್ಗವನ್ನು ಬಂಡವಾಳಕ್ಕೆ ಒತ್ತೆಯಾಳಾಗಿ ಇರಿಸಲು ಸರ್ಕಾರವೇ ಮುಂದಾಗಿರುವುದು ವಿಕಟ ವಿಡಂಬನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...