Homeಮುಖಪುಟಸ್ಫೇನ್ ದಂಪತಿಯ ದತ್ತುಪುತ್ರಿ 20 ವರ್ಷದ ನಂತರ ಹೆತ್ತವರ ಹುಡುಕುತ್ತಾ ಒಡಿಶಾಗೆ.... 

ಸ್ಫೇನ್ ದಂಪತಿಯ ದತ್ತುಪುತ್ರಿ 20 ವರ್ಷದ ನಂತರ ಹೆತ್ತವರ ಹುಡುಕುತ್ತಾ ಒಡಿಶಾಗೆ…. 

- Advertisement -
- Advertisement -

ಭುವನೇಶ್ವರ: 20 ವರ್ಷಗಳ ಹಿಂದೆ ತನ್ನ ತಾಯಿಯಿಂದ ತೊರೆಯಲ್ಪಟ್ಟಿದ್ದ ಮತ್ತು ಸ್ಪ್ಯಾನಿಷ್ ದಂಪತಿಗಳಿಂದ ದತ್ತು ಪಡೆದಿರುವ ಭಾರತೀಯ ಮೂಲದ ಮಹಿಳೆಯೊಬ್ಬರು ತನ್ನ ಹೆತ್ತ ತಾಯಿಯನ್ನು ಹುಡುಕಲು ಒಡಿಶಾಗೆ ಬಂದಿದ್ದಾರೆ.

ಸ್ಪೇನ್‌ನಲ್ಲಿ ಮಕ್ಕಳ ಶಿಕ್ಷಣದ ಸಂಶೋಧಕಿ ಸ್ನೇಹಾ, ತನ್ನ ಮೂಲದ ಬಗ್ಗೆ ಸ್ವಲ್ಪ ಮಾಹಿತಿಯೊಂದಿಗೆ ತನ್ನ ಬೇರುಗಳನ್ನು ಪತ್ತೆಹಚ್ಚಲು ಭಾರತಕ್ಕೆ ಪ್ರಯಾಣ ಬೆಳೆಸಿದ್ದಾಳೆ. ಆಕೆಯ ಸ್ಪ್ಯಾನಿಷ್ ಪೋಷಕರಾದ ಗೆಮಾ ವಿಡಾಲ್ ಮತ್ತು ಜುವಾನ್ ಜೋಶ್ ಅವರು ಸ್ನೇಹಾ ಅವರ ಹುಡುಕಾಟವನ್ನು ಬೆಂಬಲಿಸಿ, ಪ್ರವಾಸದಲ್ಲಿ ಅವಳೊಂದಿಗೆ ಸಹ ಬಂದಿದ್ದಾರೆ.

ಅವರು ಭುವನೇಶ್ವರಕ್ಕೆ ಇದೀಗ ಬಂದಿದ್ದಾರೆ. ಅಲ್ಲಿ ಅವರು ಸ್ನೇಹಾ ಮತ್ತು ಅವರ ಸಹೋದರ ಸೋಮು ಅವರನ್ನು 2010ರಲ್ಲಿ ಅನಾಥಾಶ್ರಮದಿಂದ ದತ್ತು ಪಡೆದಿದ್ದರು. 2005ರಲ್ಲಿ ಸ್ನೇಹಾ ಕೇವಲ ಒಂದು ವರ್ಷದವಳಿದ್ದಾಗ ಅವರ ತಾಯಿ ಅವರನ್ನು ತೊರೆದ ನಂತರ ಈ ಒಡಹುಟ್ಟಿದವರು ಅನಾಥಾಶ್ರಮದಲ್ಲಿ ವಾಸಿಸುತ್ತಿದ್ದರು.

ಸ್ಪೇನ್‌ನಿಂದ ಭುವನೇಶ್ವರಕ್ಕೆ ನನ್ನ ಪ್ರಯಾಣದ ಉದ್ದೇಶ ನನ್ನ ಜೈವಿಕ ಪೋಷಕರನ್ನು, ವಿಶೇಷವಾಗಿ ನನ್ನ ತಾಯಿಯನ್ನು ಹುಡುಕುವುದಾಗಿದೆ. ನಾನು ಅವಳನ್ನು ಹುಡುಕಲು ಮತ್ತು ಭೇಟಿಯಾಗಲು ಬಯಸುತ್ತೇನೆ. ಕಷ್ಟವಾದರೂ ಪ್ರಯಾಣಕ್ಕೆ ನಾನು ಸಂಪೂರ್ಣವಾಗಿ ಸಿದ್ಧಳಾಗಿ ಬಂದಿದ್ದೇನೆ ಎಂದು ಸ್ನೇಹಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ತಾಯಿ ಸಿಕ್ಕರೆ ಏನು ಮಾಡುತ್ತೀರಿ ಎಂದು ಕೇಳಿದಾಗ, ಸ್ನೇಹಾ ತನ್ನ ಭಾವನೆಯನ್ನು ಬಹಿರಂಗಪಡಿಸದಿರಲು ನಿರ್ಧರಿಸಿದಳು. ಆದರೆ 21 ವರ್ಷದ ಯುವತಿ ತನ್ನ ಶೈಕ್ಷಣಿಕ ಬದ್ಧತೆಗಳಿಗಾಗಿ ಸೋಮವಾರ ಸ್ಪೇನ್‌ಗೆ ಹಿಂತಿರುಗಬೇಕಾಗಿರುವುದರಿಂದ ಈಗ ಸಮಯ ಮೀರುತ್ತಿದೆ.

“ಸ್ನೇಹಾ ತರಬೇತಿ ಕಾರ್ಯಕ್ರಮಕ್ಕೆ ಸೇರಿಕೊಂಡಿದ್ದರಿಂದ ನಾವು ಸ್ಪೇನ್‌ಗೆ ಹಿಂತಿರುಗಬೇಕಾಗಿದೆ, ಅದನ್ನು ನಿಲ್ಲಿಸಬಾರದು. ಮುಂದಿನ 24 ಗಂಟೆಗಳಲ್ಲಿ ನಮಗೆ ಅವಳ ತಾಯಿ ಸಿಗದಿದ್ದರೆ, ನಾವು ಮಾರ್ಚ್‌ನಲ್ಲಿ ಭುವನೇಶ್ವರಕ್ಕೆ ಮತ್ತೆ ಹಿಂತಿರುಗುತ್ತೇವೆ ಎಂದು ಅವರ ದತ್ತು ತಾಯಿ ಹೇಳಿದರು.

ಸ್ನೇಹಾಳ ತಾಯಿ ಬನಲತಾ ಅವರು 2005ರಲ್ಲಿ ಸ್ನೇಹ ಮತ್ತು ಸೋಮು ಅವರನ್ನು ಭುವನೇಶ್ವರದ ನಾಯಪಲ್ಲಿ ಪ್ರದೇಶದ ಬಾಡಿಗೆ ಮನೆಯಲ್ಲಿ ತೊರೆದಿದ್ದರು. ಖಾಸಗಿ ಸಂಸ್ಥೆಯೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಆಕೆಯ ಪತಿ ಸಂತೋಷ್ ಈ ಹಿಂದೆ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಒಳಗೊಂಡ ಕುಟುಂಬವನ್ನು ತೊರೆದಿದ್ದರು.

ಪತಿ ಮನೆ ತೊರೆದ ನಂತರ ಬಾನಲತಾ ಕೂಡ ಬಾಡಿಗೆ ಮನೆ ಬಿಟ್ಟು ತನ್ನ ಇಬ್ಬರು ಮಕ್ಕಳಾದ ಸ್ನೇಹಾ ಮತ್ತು ಸೋಮು ಅವರನ್ನು ಬಿಟ್ಟು ಹೋಗಿದ್ದರು. ನಂತರ ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರನ್ನು ಅನಾಥಾಶ್ರಮಕ್ಕೆ ಸ್ಥಳಾಂತರಿಸಲಾಗಿತ್ತು.

2010ರಲ್ಲಿ ಐದು ವರ್ಷಕ್ಕಿಂತ ಹೆಚ್ಚು ವಯಸ್ಸಿನ ಸ್ನೇಹಾ ಮತ್ತು ಸುಮಾರು ನಾಲ್ಕು ವರ್ಷದ ಸೋಮು ಅವರನ್ನು ಸ್ಪ್ಯಾನಿಷ್ ದಂಪತಿಗಳು ಕಾನೂನುಬದ್ಧವಾಗಿ ದತ್ತು ಪಡೆದರು. “ಸ್ನೇಹಾ ತುಂಬಾ ಜವಾಬ್ದಾರಿಯುತ ಮತ್ತು ವಿದ್ಯಾವಂತಳು, ಅವಳು ನಮ್ಮ ಮನೆಯ ಸಂತೋಷ, ಅವಳು ನಮ್ಮ ಜೀವನ” ಎಂದು ಜೆಮಾ ಹೇಳಿದ್ದಾರೆ.

ಒಡಿಶಾದಲ್ಲಿರುವ ಸ್ನೇಹ ಮತ್ತು ಸೋಮು ಅವರ ಮೂಲಬೇರುಗಳ ಬಗ್ಗೆ ತಿಳಿಸಿದ್ದೇನೆ ಮತ್ತು ಅವರನ್ನು ದತ್ತು ತೆಗೆದುಕೊಳ್ಳಲಾಗಿದೆ ಎಂಬುದನ್ನು ಹೇಳಿದ್ದೇನೆ. ಅವರು ಸುಶಿಕ್ಷಿತರು ಮತ್ತು ಸಂಶೋಧನೆ ನಡೆಸುತ್ತಿದ್ದಾರೆ, ಆದ್ದರಿಂದ ಅವರು ತಮ್ಮ ಹೆತ್ತ ತಾಯಿಯನ್ನು ಪತ್ತೆಹಚ್ಚಲು ನಿರ್ಧರಿಸಿದರು ಮತ್ತು ನಾನು ಅವಳೊಂದಿಗೆ ಈ ಸ್ಥಳಕ್ಕೆ ಬಂದೆ ಎಂದು ಗೆಮಾ ತಿಳಿಸಿದ್ದಾರೆ.

ಭುವನೇಶ್ವರದಲ್ಲಿ ತಮ್ಮ ಕ್ಲಿಷ್ಟಮಯ ಹುಡುಕಾಟದ ಸಮಯದಲ್ಲಿ, ಗೆಮಾ ಮತ್ತು ಸ್ನೇಹಾಯವರು  ರಮಾದೇವಿ ಮಹಿಳಾ ವಿಶ್ವವಿದ್ಯಾಲಯದ ನಿವೃತ್ತ ಶಿಕ್ಷಕಿ ಸುಧಾ ಮಿಶ್ರಾ ಅವರನ್ನು ಕಂಡರು, ಅವರು ಸ್ನೇಹರ ಪೋಷಕರ ಹೆಸರನ್ನು ಕಂಡುಹಿಡಿಯಲು ಸಹಾಯ ಮಾಡಿದರು. “ನಾಯಪಲ್ಲಿಯಲ್ಲಿರುವ ಮನೆ ಮಾಲೀಕರಿಂದ ಆಕೆಯ ಪೋಷಕರ ಹೆಸರುಗಳನ್ನು ನಾವು ಕಂಡುಕೊಂಡಿದ್ದೇವೆ ಮತ್ತು ನಂತರ ಪೊಲೀಸರು ಮತ್ತು ಅನಾಥಾಶ್ರಮದಲ್ಲಿ ಹೆಸರುಗಳನ್ನು ಪರಿಶೀಲಿಸಲಾಗಿದೆ” ಎಂದು ಮಿಶ್ರಾ ಹೇಳಿದ್ದಾರೆ.

ಒಡಿಶಾ ಪೊಲೀಸರು ಕೂಡ ಸ್ನೇಹಾಳ ತಾಯಿಯನ್ನು ಪತ್ತೆ ಹಚ್ಚಲು ಸಹಾಯ ಮಾಡಲು ಮುಂದಾಗಿದ್ದಾರೆ. “ಬನಲತಾ ದಾಸ್ ಮತ್ತು ಸಂತೋಷ್ ಕಟಕ್ ಜಿಲ್ಲೆಯ ಬದಂಬಾ-ನರಸಿಂಗ್‌ಪುರ ಪ್ರದೇಶದವರು ಎಂದು ನಾವು ಕಂಡುಕೊಂಡಿದ್ದೇವೆ. ನಾವು ಅವರನ್ನು ಪತ್ತೆ ಮಾಡಲು ಪೊಲೀಸರು ಮತ್ತು ಪಂಚಾಯತ್ ಕಾರ್ಯನಿರ್ವಾಹಕರನ್ನು ತೊಡಗಿಸಿಕೊಂಡಿದ್ದೇವೆ” ಎಂದು ಇನ್ಸ್‌ಪೆಕ್ಟರ್ ಅಂಜಲಿ ಛೋತ್ರೇ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಬಿಜೆಪಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತ ರಸ್ತೆ ನಿರ್ಮಾಣ ಎಂದ ಮಾಜಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...