Homeಮುಖಪುಟಸ್ಫೇನ್ ದಂಪತಿಯ ದತ್ತುಪುತ್ರಿ 20 ವರ್ಷದ ನಂತರ ಹೆತ್ತವರ ಹುಡುಕುತ್ತಾ ಒಡಿಶಾಗೆ.... 

ಸ್ಫೇನ್ ದಂಪತಿಯ ದತ್ತುಪುತ್ರಿ 20 ವರ್ಷದ ನಂತರ ಹೆತ್ತವರ ಹುಡುಕುತ್ತಾ ಒಡಿಶಾಗೆ…. 

- Advertisement -
- Advertisement -

ಭುವನೇಶ್ವರ: 20 ವರ್ಷಗಳ ಹಿಂದೆ ತನ್ನ ತಾಯಿಯಿಂದ ತೊರೆಯಲ್ಪಟ್ಟಿದ್ದ ಮತ್ತು ಸ್ಪ್ಯಾನಿಷ್ ದಂಪತಿಗಳಿಂದ ದತ್ತು ಪಡೆದಿರುವ ಭಾರತೀಯ ಮೂಲದ ಮಹಿಳೆಯೊಬ್ಬರು ತನ್ನ ಹೆತ್ತ ತಾಯಿಯನ್ನು ಹುಡುಕಲು ಒಡಿಶಾಗೆ ಬಂದಿದ್ದಾರೆ.

ಸ್ಪೇನ್‌ನಲ್ಲಿ ಮಕ್ಕಳ ಶಿಕ್ಷಣದ ಸಂಶೋಧಕಿ ಸ್ನೇಹಾ, ತನ್ನ ಮೂಲದ ಬಗ್ಗೆ ಸ್ವಲ್ಪ ಮಾಹಿತಿಯೊಂದಿಗೆ ತನ್ನ ಬೇರುಗಳನ್ನು ಪತ್ತೆಹಚ್ಚಲು ಭಾರತಕ್ಕೆ ಪ್ರಯಾಣ ಬೆಳೆಸಿದ್ದಾಳೆ. ಆಕೆಯ ಸ್ಪ್ಯಾನಿಷ್ ಪೋಷಕರಾದ ಗೆಮಾ ವಿಡಾಲ್ ಮತ್ತು ಜುವಾನ್ ಜೋಶ್ ಅವರು ಸ್ನೇಹಾ ಅವರ ಹುಡುಕಾಟವನ್ನು ಬೆಂಬಲಿಸಿ, ಪ್ರವಾಸದಲ್ಲಿ ಅವಳೊಂದಿಗೆ ಸಹ ಬಂದಿದ್ದಾರೆ.

ಅವರು ಭುವನೇಶ್ವರಕ್ಕೆ ಇದೀಗ ಬಂದಿದ್ದಾರೆ. ಅಲ್ಲಿ ಅವರು ಸ್ನೇಹಾ ಮತ್ತು ಅವರ ಸಹೋದರ ಸೋಮು ಅವರನ್ನು 2010ರಲ್ಲಿ ಅನಾಥಾಶ್ರಮದಿಂದ ದತ್ತು ಪಡೆದಿದ್ದರು. 2005ರಲ್ಲಿ ಸ್ನೇಹಾ ಕೇವಲ ಒಂದು ವರ್ಷದವಳಿದ್ದಾಗ ಅವರ ತಾಯಿ ಅವರನ್ನು ತೊರೆದ ನಂತರ ಈ ಒಡಹುಟ್ಟಿದವರು ಅನಾಥಾಶ್ರಮದಲ್ಲಿ ವಾಸಿಸುತ್ತಿದ್ದರು.

ಸ್ಪೇನ್‌ನಿಂದ ಭುವನೇಶ್ವರಕ್ಕೆ ನನ್ನ ಪ್ರಯಾಣದ ಉದ್ದೇಶ ನನ್ನ ಜೈವಿಕ ಪೋಷಕರನ್ನು, ವಿಶೇಷವಾಗಿ ನನ್ನ ತಾಯಿಯನ್ನು ಹುಡುಕುವುದಾಗಿದೆ. ನಾನು ಅವಳನ್ನು ಹುಡುಕಲು ಮತ್ತು ಭೇಟಿಯಾಗಲು ಬಯಸುತ್ತೇನೆ. ಕಷ್ಟವಾದರೂ ಪ್ರಯಾಣಕ್ಕೆ ನಾನು ಸಂಪೂರ್ಣವಾಗಿ ಸಿದ್ಧಳಾಗಿ ಬಂದಿದ್ದೇನೆ ಎಂದು ಸ್ನೇಹಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ತಾಯಿ ಸಿಕ್ಕರೆ ಏನು ಮಾಡುತ್ತೀರಿ ಎಂದು ಕೇಳಿದಾಗ, ಸ್ನೇಹಾ ತನ್ನ ಭಾವನೆಯನ್ನು ಬಹಿರಂಗಪಡಿಸದಿರಲು ನಿರ್ಧರಿಸಿದಳು. ಆದರೆ 21 ವರ್ಷದ ಯುವತಿ ತನ್ನ ಶೈಕ್ಷಣಿಕ ಬದ್ಧತೆಗಳಿಗಾಗಿ ಸೋಮವಾರ ಸ್ಪೇನ್‌ಗೆ ಹಿಂತಿರುಗಬೇಕಾಗಿರುವುದರಿಂದ ಈಗ ಸಮಯ ಮೀರುತ್ತಿದೆ.

“ಸ್ನೇಹಾ ತರಬೇತಿ ಕಾರ್ಯಕ್ರಮಕ್ಕೆ ಸೇರಿಕೊಂಡಿದ್ದರಿಂದ ನಾವು ಸ್ಪೇನ್‌ಗೆ ಹಿಂತಿರುಗಬೇಕಾಗಿದೆ, ಅದನ್ನು ನಿಲ್ಲಿಸಬಾರದು. ಮುಂದಿನ 24 ಗಂಟೆಗಳಲ್ಲಿ ನಮಗೆ ಅವಳ ತಾಯಿ ಸಿಗದಿದ್ದರೆ, ನಾವು ಮಾರ್ಚ್‌ನಲ್ಲಿ ಭುವನೇಶ್ವರಕ್ಕೆ ಮತ್ತೆ ಹಿಂತಿರುಗುತ್ತೇವೆ ಎಂದು ಅವರ ದತ್ತು ತಾಯಿ ಹೇಳಿದರು.

ಸ್ನೇಹಾಳ ತಾಯಿ ಬನಲತಾ ಅವರು 2005ರಲ್ಲಿ ಸ್ನೇಹ ಮತ್ತು ಸೋಮು ಅವರನ್ನು ಭುವನೇಶ್ವರದ ನಾಯಪಲ್ಲಿ ಪ್ರದೇಶದ ಬಾಡಿಗೆ ಮನೆಯಲ್ಲಿ ತೊರೆದಿದ್ದರು. ಖಾಸಗಿ ಸಂಸ್ಥೆಯೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಆಕೆಯ ಪತಿ ಸಂತೋಷ್ ಈ ಹಿಂದೆ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಒಳಗೊಂಡ ಕುಟುಂಬವನ್ನು ತೊರೆದಿದ್ದರು.

ಪತಿ ಮನೆ ತೊರೆದ ನಂತರ ಬಾನಲತಾ ಕೂಡ ಬಾಡಿಗೆ ಮನೆ ಬಿಟ್ಟು ತನ್ನ ಇಬ್ಬರು ಮಕ್ಕಳಾದ ಸ್ನೇಹಾ ಮತ್ತು ಸೋಮು ಅವರನ್ನು ಬಿಟ್ಟು ಹೋಗಿದ್ದರು. ನಂತರ ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರನ್ನು ಅನಾಥಾಶ್ರಮಕ್ಕೆ ಸ್ಥಳಾಂತರಿಸಲಾಗಿತ್ತು.

2010ರಲ್ಲಿ ಐದು ವರ್ಷಕ್ಕಿಂತ ಹೆಚ್ಚು ವಯಸ್ಸಿನ ಸ್ನೇಹಾ ಮತ್ತು ಸುಮಾರು ನಾಲ್ಕು ವರ್ಷದ ಸೋಮು ಅವರನ್ನು ಸ್ಪ್ಯಾನಿಷ್ ದಂಪತಿಗಳು ಕಾನೂನುಬದ್ಧವಾಗಿ ದತ್ತು ಪಡೆದರು. “ಸ್ನೇಹಾ ತುಂಬಾ ಜವಾಬ್ದಾರಿಯುತ ಮತ್ತು ವಿದ್ಯಾವಂತಳು, ಅವಳು ನಮ್ಮ ಮನೆಯ ಸಂತೋಷ, ಅವಳು ನಮ್ಮ ಜೀವನ” ಎಂದು ಜೆಮಾ ಹೇಳಿದ್ದಾರೆ.

ಒಡಿಶಾದಲ್ಲಿರುವ ಸ್ನೇಹ ಮತ್ತು ಸೋಮು ಅವರ ಮೂಲಬೇರುಗಳ ಬಗ್ಗೆ ತಿಳಿಸಿದ್ದೇನೆ ಮತ್ತು ಅವರನ್ನು ದತ್ತು ತೆಗೆದುಕೊಳ್ಳಲಾಗಿದೆ ಎಂಬುದನ್ನು ಹೇಳಿದ್ದೇನೆ. ಅವರು ಸುಶಿಕ್ಷಿತರು ಮತ್ತು ಸಂಶೋಧನೆ ನಡೆಸುತ್ತಿದ್ದಾರೆ, ಆದ್ದರಿಂದ ಅವರು ತಮ್ಮ ಹೆತ್ತ ತಾಯಿಯನ್ನು ಪತ್ತೆಹಚ್ಚಲು ನಿರ್ಧರಿಸಿದರು ಮತ್ತು ನಾನು ಅವಳೊಂದಿಗೆ ಈ ಸ್ಥಳಕ್ಕೆ ಬಂದೆ ಎಂದು ಗೆಮಾ ತಿಳಿಸಿದ್ದಾರೆ.

ಭುವನೇಶ್ವರದಲ್ಲಿ ತಮ್ಮ ಕ್ಲಿಷ್ಟಮಯ ಹುಡುಕಾಟದ ಸಮಯದಲ್ಲಿ, ಗೆಮಾ ಮತ್ತು ಸ್ನೇಹಾಯವರು  ರಮಾದೇವಿ ಮಹಿಳಾ ವಿಶ್ವವಿದ್ಯಾಲಯದ ನಿವೃತ್ತ ಶಿಕ್ಷಕಿ ಸುಧಾ ಮಿಶ್ರಾ ಅವರನ್ನು ಕಂಡರು, ಅವರು ಸ್ನೇಹರ ಪೋಷಕರ ಹೆಸರನ್ನು ಕಂಡುಹಿಡಿಯಲು ಸಹಾಯ ಮಾಡಿದರು. “ನಾಯಪಲ್ಲಿಯಲ್ಲಿರುವ ಮನೆ ಮಾಲೀಕರಿಂದ ಆಕೆಯ ಪೋಷಕರ ಹೆಸರುಗಳನ್ನು ನಾವು ಕಂಡುಕೊಂಡಿದ್ದೇವೆ ಮತ್ತು ನಂತರ ಪೊಲೀಸರು ಮತ್ತು ಅನಾಥಾಶ್ರಮದಲ್ಲಿ ಹೆಸರುಗಳನ್ನು ಪರಿಶೀಲಿಸಲಾಗಿದೆ” ಎಂದು ಮಿಶ್ರಾ ಹೇಳಿದ್ದಾರೆ.

ಒಡಿಶಾ ಪೊಲೀಸರು ಕೂಡ ಸ್ನೇಹಾಳ ತಾಯಿಯನ್ನು ಪತ್ತೆ ಹಚ್ಚಲು ಸಹಾಯ ಮಾಡಲು ಮುಂದಾಗಿದ್ದಾರೆ. “ಬನಲತಾ ದಾಸ್ ಮತ್ತು ಸಂತೋಷ್ ಕಟಕ್ ಜಿಲ್ಲೆಯ ಬದಂಬಾ-ನರಸಿಂಗ್‌ಪುರ ಪ್ರದೇಶದವರು ಎಂದು ನಾವು ಕಂಡುಕೊಂಡಿದ್ದೇವೆ. ನಾವು ಅವರನ್ನು ಪತ್ತೆ ಮಾಡಲು ಪೊಲೀಸರು ಮತ್ತು ಪಂಚಾಯತ್ ಕಾರ್ಯನಿರ್ವಾಹಕರನ್ನು ತೊಡಗಿಸಿಕೊಂಡಿದ್ದೇವೆ” ಎಂದು ಇನ್ಸ್‌ಪೆಕ್ಟರ್ ಅಂಜಲಿ ಛೋತ್ರೇ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಬಿಜೆಪಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತ ರಸ್ತೆ ನಿರ್ಮಾಣ ಎಂದ ಮಾಜಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...