Homeಮುಖಪುಟಸ್ಫೇನ್ ದಂಪತಿಯ ದತ್ತುಪುತ್ರಿ 20 ವರ್ಷದ ನಂತರ ಹೆತ್ತವರ ಹುಡುಕುತ್ತಾ ಒಡಿಶಾಗೆ.... 

ಸ್ಫೇನ್ ದಂಪತಿಯ ದತ್ತುಪುತ್ರಿ 20 ವರ್ಷದ ನಂತರ ಹೆತ್ತವರ ಹುಡುಕುತ್ತಾ ಒಡಿಶಾಗೆ…. 

- Advertisement -
- Advertisement -

ಭುವನೇಶ್ವರ: 20 ವರ್ಷಗಳ ಹಿಂದೆ ತನ್ನ ತಾಯಿಯಿಂದ ತೊರೆಯಲ್ಪಟ್ಟಿದ್ದ ಮತ್ತು ಸ್ಪ್ಯಾನಿಷ್ ದಂಪತಿಗಳಿಂದ ದತ್ತು ಪಡೆದಿರುವ ಭಾರತೀಯ ಮೂಲದ ಮಹಿಳೆಯೊಬ್ಬರು ತನ್ನ ಹೆತ್ತ ತಾಯಿಯನ್ನು ಹುಡುಕಲು ಒಡಿಶಾಗೆ ಬಂದಿದ್ದಾರೆ.

ಸ್ಪೇನ್‌ನಲ್ಲಿ ಮಕ್ಕಳ ಶಿಕ್ಷಣದ ಸಂಶೋಧಕಿ ಸ್ನೇಹಾ, ತನ್ನ ಮೂಲದ ಬಗ್ಗೆ ಸ್ವಲ್ಪ ಮಾಹಿತಿಯೊಂದಿಗೆ ತನ್ನ ಬೇರುಗಳನ್ನು ಪತ್ತೆಹಚ್ಚಲು ಭಾರತಕ್ಕೆ ಪ್ರಯಾಣ ಬೆಳೆಸಿದ್ದಾಳೆ. ಆಕೆಯ ಸ್ಪ್ಯಾನಿಷ್ ಪೋಷಕರಾದ ಗೆಮಾ ವಿಡಾಲ್ ಮತ್ತು ಜುವಾನ್ ಜೋಶ್ ಅವರು ಸ್ನೇಹಾ ಅವರ ಹುಡುಕಾಟವನ್ನು ಬೆಂಬಲಿಸಿ, ಪ್ರವಾಸದಲ್ಲಿ ಅವಳೊಂದಿಗೆ ಸಹ ಬಂದಿದ್ದಾರೆ.

ಅವರು ಭುವನೇಶ್ವರಕ್ಕೆ ಇದೀಗ ಬಂದಿದ್ದಾರೆ. ಅಲ್ಲಿ ಅವರು ಸ್ನೇಹಾ ಮತ್ತು ಅವರ ಸಹೋದರ ಸೋಮು ಅವರನ್ನು 2010ರಲ್ಲಿ ಅನಾಥಾಶ್ರಮದಿಂದ ದತ್ತು ಪಡೆದಿದ್ದರು. 2005ರಲ್ಲಿ ಸ್ನೇಹಾ ಕೇವಲ ಒಂದು ವರ್ಷದವಳಿದ್ದಾಗ ಅವರ ತಾಯಿ ಅವರನ್ನು ತೊರೆದ ನಂತರ ಈ ಒಡಹುಟ್ಟಿದವರು ಅನಾಥಾಶ್ರಮದಲ್ಲಿ ವಾಸಿಸುತ್ತಿದ್ದರು.

ಸ್ಪೇನ್‌ನಿಂದ ಭುವನೇಶ್ವರಕ್ಕೆ ನನ್ನ ಪ್ರಯಾಣದ ಉದ್ದೇಶ ನನ್ನ ಜೈವಿಕ ಪೋಷಕರನ್ನು, ವಿಶೇಷವಾಗಿ ನನ್ನ ತಾಯಿಯನ್ನು ಹುಡುಕುವುದಾಗಿದೆ. ನಾನು ಅವಳನ್ನು ಹುಡುಕಲು ಮತ್ತು ಭೇಟಿಯಾಗಲು ಬಯಸುತ್ತೇನೆ. ಕಷ್ಟವಾದರೂ ಪ್ರಯಾಣಕ್ಕೆ ನಾನು ಸಂಪೂರ್ಣವಾಗಿ ಸಿದ್ಧಳಾಗಿ ಬಂದಿದ್ದೇನೆ ಎಂದು ಸ್ನೇಹಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ತಾಯಿ ಸಿಕ್ಕರೆ ಏನು ಮಾಡುತ್ತೀರಿ ಎಂದು ಕೇಳಿದಾಗ, ಸ್ನೇಹಾ ತನ್ನ ಭಾವನೆಯನ್ನು ಬಹಿರಂಗಪಡಿಸದಿರಲು ನಿರ್ಧರಿಸಿದಳು. ಆದರೆ 21 ವರ್ಷದ ಯುವತಿ ತನ್ನ ಶೈಕ್ಷಣಿಕ ಬದ್ಧತೆಗಳಿಗಾಗಿ ಸೋಮವಾರ ಸ್ಪೇನ್‌ಗೆ ಹಿಂತಿರುಗಬೇಕಾಗಿರುವುದರಿಂದ ಈಗ ಸಮಯ ಮೀರುತ್ತಿದೆ.

“ಸ್ನೇಹಾ ತರಬೇತಿ ಕಾರ್ಯಕ್ರಮಕ್ಕೆ ಸೇರಿಕೊಂಡಿದ್ದರಿಂದ ನಾವು ಸ್ಪೇನ್‌ಗೆ ಹಿಂತಿರುಗಬೇಕಾಗಿದೆ, ಅದನ್ನು ನಿಲ್ಲಿಸಬಾರದು. ಮುಂದಿನ 24 ಗಂಟೆಗಳಲ್ಲಿ ನಮಗೆ ಅವಳ ತಾಯಿ ಸಿಗದಿದ್ದರೆ, ನಾವು ಮಾರ್ಚ್‌ನಲ್ಲಿ ಭುವನೇಶ್ವರಕ್ಕೆ ಮತ್ತೆ ಹಿಂತಿರುಗುತ್ತೇವೆ ಎಂದು ಅವರ ದತ್ತು ತಾಯಿ ಹೇಳಿದರು.

ಸ್ನೇಹಾಳ ತಾಯಿ ಬನಲತಾ ಅವರು 2005ರಲ್ಲಿ ಸ್ನೇಹ ಮತ್ತು ಸೋಮು ಅವರನ್ನು ಭುವನೇಶ್ವರದ ನಾಯಪಲ್ಲಿ ಪ್ರದೇಶದ ಬಾಡಿಗೆ ಮನೆಯಲ್ಲಿ ತೊರೆದಿದ್ದರು. ಖಾಸಗಿ ಸಂಸ್ಥೆಯೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಆಕೆಯ ಪತಿ ಸಂತೋಷ್ ಈ ಹಿಂದೆ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಒಳಗೊಂಡ ಕುಟುಂಬವನ್ನು ತೊರೆದಿದ್ದರು.

ಪತಿ ಮನೆ ತೊರೆದ ನಂತರ ಬಾನಲತಾ ಕೂಡ ಬಾಡಿಗೆ ಮನೆ ಬಿಟ್ಟು ತನ್ನ ಇಬ್ಬರು ಮಕ್ಕಳಾದ ಸ್ನೇಹಾ ಮತ್ತು ಸೋಮು ಅವರನ್ನು ಬಿಟ್ಟು ಹೋಗಿದ್ದರು. ನಂತರ ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರನ್ನು ಅನಾಥಾಶ್ರಮಕ್ಕೆ ಸ್ಥಳಾಂತರಿಸಲಾಗಿತ್ತು.

2010ರಲ್ಲಿ ಐದು ವರ್ಷಕ್ಕಿಂತ ಹೆಚ್ಚು ವಯಸ್ಸಿನ ಸ್ನೇಹಾ ಮತ್ತು ಸುಮಾರು ನಾಲ್ಕು ವರ್ಷದ ಸೋಮು ಅವರನ್ನು ಸ್ಪ್ಯಾನಿಷ್ ದಂಪತಿಗಳು ಕಾನೂನುಬದ್ಧವಾಗಿ ದತ್ತು ಪಡೆದರು. “ಸ್ನೇಹಾ ತುಂಬಾ ಜವಾಬ್ದಾರಿಯುತ ಮತ್ತು ವಿದ್ಯಾವಂತಳು, ಅವಳು ನಮ್ಮ ಮನೆಯ ಸಂತೋಷ, ಅವಳು ನಮ್ಮ ಜೀವನ” ಎಂದು ಜೆಮಾ ಹೇಳಿದ್ದಾರೆ.

ಒಡಿಶಾದಲ್ಲಿರುವ ಸ್ನೇಹ ಮತ್ತು ಸೋಮು ಅವರ ಮೂಲಬೇರುಗಳ ಬಗ್ಗೆ ತಿಳಿಸಿದ್ದೇನೆ ಮತ್ತು ಅವರನ್ನು ದತ್ತು ತೆಗೆದುಕೊಳ್ಳಲಾಗಿದೆ ಎಂಬುದನ್ನು ಹೇಳಿದ್ದೇನೆ. ಅವರು ಸುಶಿಕ್ಷಿತರು ಮತ್ತು ಸಂಶೋಧನೆ ನಡೆಸುತ್ತಿದ್ದಾರೆ, ಆದ್ದರಿಂದ ಅವರು ತಮ್ಮ ಹೆತ್ತ ತಾಯಿಯನ್ನು ಪತ್ತೆಹಚ್ಚಲು ನಿರ್ಧರಿಸಿದರು ಮತ್ತು ನಾನು ಅವಳೊಂದಿಗೆ ಈ ಸ್ಥಳಕ್ಕೆ ಬಂದೆ ಎಂದು ಗೆಮಾ ತಿಳಿಸಿದ್ದಾರೆ.

ಭುವನೇಶ್ವರದಲ್ಲಿ ತಮ್ಮ ಕ್ಲಿಷ್ಟಮಯ ಹುಡುಕಾಟದ ಸಮಯದಲ್ಲಿ, ಗೆಮಾ ಮತ್ತು ಸ್ನೇಹಾಯವರು  ರಮಾದೇವಿ ಮಹಿಳಾ ವಿಶ್ವವಿದ್ಯಾಲಯದ ನಿವೃತ್ತ ಶಿಕ್ಷಕಿ ಸುಧಾ ಮಿಶ್ರಾ ಅವರನ್ನು ಕಂಡರು, ಅವರು ಸ್ನೇಹರ ಪೋಷಕರ ಹೆಸರನ್ನು ಕಂಡುಹಿಡಿಯಲು ಸಹಾಯ ಮಾಡಿದರು. “ನಾಯಪಲ್ಲಿಯಲ್ಲಿರುವ ಮನೆ ಮಾಲೀಕರಿಂದ ಆಕೆಯ ಪೋಷಕರ ಹೆಸರುಗಳನ್ನು ನಾವು ಕಂಡುಕೊಂಡಿದ್ದೇವೆ ಮತ್ತು ನಂತರ ಪೊಲೀಸರು ಮತ್ತು ಅನಾಥಾಶ್ರಮದಲ್ಲಿ ಹೆಸರುಗಳನ್ನು ಪರಿಶೀಲಿಸಲಾಗಿದೆ” ಎಂದು ಮಿಶ್ರಾ ಹೇಳಿದ್ದಾರೆ.

ಒಡಿಶಾ ಪೊಲೀಸರು ಕೂಡ ಸ್ನೇಹಾಳ ತಾಯಿಯನ್ನು ಪತ್ತೆ ಹಚ್ಚಲು ಸಹಾಯ ಮಾಡಲು ಮುಂದಾಗಿದ್ದಾರೆ. “ಬನಲತಾ ದಾಸ್ ಮತ್ತು ಸಂತೋಷ್ ಕಟಕ್ ಜಿಲ್ಲೆಯ ಬದಂಬಾ-ನರಸಿಂಗ್‌ಪುರ ಪ್ರದೇಶದವರು ಎಂದು ನಾವು ಕಂಡುಕೊಂಡಿದ್ದೇವೆ. ನಾವು ಅವರನ್ನು ಪತ್ತೆ ಮಾಡಲು ಪೊಲೀಸರು ಮತ್ತು ಪಂಚಾಯತ್ ಕಾರ್ಯನಿರ್ವಾಹಕರನ್ನು ತೊಡಗಿಸಿಕೊಂಡಿದ್ದೇವೆ” ಎಂದು ಇನ್ಸ್‌ಪೆಕ್ಟರ್ ಅಂಜಲಿ ಛೋತ್ರೇ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಬಿಜೆಪಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತ ರಸ್ತೆ ನಿರ್ಮಾಣ ಎಂದ ಮಾಜಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...