Homeಕರ್ನಾಟಕದಲಿತರನ್ನು ಒಡೆಯುವುದೇ ಕೋಮುವಾದಿಗಳ ಅಜೆಂಡಾ: ಮಾವಳ್ಳಿ ಶಂಕರ್

ದಲಿತರನ್ನು ಒಡೆಯುವುದೇ ಕೋಮುವಾದಿಗಳ ಅಜೆಂಡಾ: ಮಾವಳ್ಳಿ ಶಂಕರ್

- Advertisement -
- Advertisement -

“ಮೊದಲಿಂದಲೂ ಪರಿಶಿಷ್ಟ ಜಾತಿಗಳ ವಿಭಜನೆಗೆ ಪ್ರಯತ್ನ ನಡೆಯುತ್ತಲೇ ಇದೆ; ಈಗಲೂ ನಡೆಯುತ್ತಿದೆ. ದಲಿತರನ್ನು ಒಡೆಯುವುದೇ ಕೋಮುವಾದಿಗಳು ಹಾಗೂ ಆರ್‌ಎಸ್‌ಎಸ್‌ ಅಜೆಂಡಾ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು. ಅನೇಕ ದಲಿತರೂ ಕೂಡ ತಮ್ಮನ್ನು ತಾವು ಬೌದ್ಧರು ಎಂದು ಹೇಳಿಕೊಳ್ಳುತ್ತೇವೆ. 1991 ರಲ್ಲಿ ಅಂದಿನ ಕೇಂದ್ರ ಸರ್ಕಾರ, ‘ಬೌದ್ಧ ಧರ್ಮಕ್ಕೆ ಮತಾಂತರ ಆದವರಿಗೂ ಮೀಸಲಾತಿ ಮುಂದುವರಿಯಲಿದೆ’ ಎಂದು ಹೇಳಿದೆ. ಈ ಬಗ್ಗೆ ಹಲವರಿಗೆ ಗೊಂದಲ ಹಾಗೂ ಭಯ ಇದೆ. ಸರ್ಕಾರ ಹಾಗೂ ನಾಗಮೋಹನ್‌ ದಾಸ್ ಆಯೋಗ ಜನರ ಅನುಮಾನಗಳಿಗೆ ತೆರೆ ಎಳೆಯಬೇಕು” ಎಂದು ಮನವಿ ಮಾಡಿದರು.

“ಸಿಖ್ ಧರ್ಮಕ್ಕೆ ಮತಾಂತರ ಆದ ದಲಿತರಿಗೆ ಮೀಸಲಾತಿ ಮುಂದುವರೆದಿದೆ. ಒಳ ಮೀಸಲಾತಿಯಲ್ಲಿ ಕೂಡ ಧರ್ಮಾಂತರಗೊಂಡ ಪರಿಶಿಷ್ಟ ಜಾತಿ ಜನರಿಗೆ ಮೀಸಲಾತಿ ಮುಂದುವರಿಯಬೇಕು. ಈ ಬಗ್ಗೆ ಚಾಲ್ತಿಯಲ್ಲಿರುವ ಗೊಂದಲ ನಿವಾರಣೆ ಮಾಡಬೇಕು ಎಂಬುದು ನಮ್ಮ ಮನವಿ” ಎಂದರು.

ಒಳ ಮೀಸಲಾತಿ ಹೋರಾಟ ವಿಚಾರದಲ್ಲಿ ರಾಜ್ಯದ ದಲಿತರನ್ನು ಒಡೆಯುವ ಹುನ್ನಾರ ನಡೆಯುತ್ತಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಮೊದಲಿಂದಲೂ ಪರಿಶಿಷ್ಟ ಜಾತಿಗಳ ವಿಭಜನೆಗೆ ಪ್ರಯತ್ನ ನಡೆಯುತ್ತಲೇ ಇದೆ; ಈಗಲೂ ನಡೆಯುತ್ತಿದೆ. ದಲಿತರನ್ನು ಒಡೆಯುವುದೇ ಕೋಮುವಾದಿಗಳು ಹಾಗೂ ಆರ್‌ಎಸ್‌ಎಸ್‌ ಅಜೆಂಡಾ ಆಗಿದೆ. ದಲಿತ ಚಳವಳಿಯನ್ನು ಛಿದ್ರ ಮಾಡಲು ಸಾಧ್ಯವಾಗದ ಕಾರಣಕ್ಕೆ, ಜಾತಿಗಳ ವಿಭಜನೆಗೆ ಮುಂದಾಗಿದ್ದಾರೆ. ಆದರೆ, ರಾಜ್ಯದಲ್ಲಿ ದಲಿತ ಚಳವಳಿ ಇಂದಿಗೂ ಪರಿಶಿಷ್ಟರ ನಡುವೆ ಐಕ್ಯತೆ ಉಳಿಸಿಕೊಂಡಿದೆ. ದಲಿತ ಚಳವಳಿಯ ಬಗ್ಗೆ ಇತ್ತೀಚಿಗೆ ಕೆಲವರು ಮಾಡುತ್ತಿರುವ ಆಪಾದನೆಯನ್ನು ನಾವು ಗಂಭೀರವಾಗಿ ಪರಿಗಣಿಸಿಲ್ಲ. ಏಕೆಂದರೆ, ಇದು ಆರ್‌ಎಸ್‌ಎಸ್‌ ಹುನ್ನಾರ. ಬ್ರಾಹ್ಮಣ್ಯವಾದ ಬೇಕಾ ಅಥವಾ ಸಂವಿಧಾನ ವಾದ ಬೇಕಾ ಎಂಬುದನ್ನು ಸಮುದಾಯ ನಿರ್ಧಾರ ಮಾಡಬೇಕು” ಎಂದರು.

ದಸಂಸ ಒಕ್ಕೂಟದ ವಿ.ನಾಗರಾಜ್, ಇಂದೂಧರ ಹೊನ್ನಾಪುರ, ಗುರುಪ್ರಸಾದ್ ಕೆರಗೋಡು ಹಾಗೂ ಮಾವಳ್ಳಿ ಶಂಕರ್

ಯಾವುದೇ ತೊಂದರೆ ಆಗದಂತೆ ಒಳ ಮೀಸಲಾತಿ ಜಾರಿಯಾಗಲಿ: ಗುರುಪ್ರಸಾದ್ ಕೆರಗೋಡು

“ಜಸ್ಟೀಸ್ ನಾಗಮೋಹನ್ ದಾಸ್ ಏಕ ಸದಸ್ಯ ಸಮಿತಿ ಮಧ್ಯಂತರ ವರದಿ ನೀಡಿದ್ದು, ಹೊಸ ಸಮೀಕ್ಷೆ ನಡೆಸುವ ಮೂಲಕ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಹೇಳಿರುವುದನ್ನು ಸ್ವಾಗತಿಸುತ್ತೇನೆ. ಅದನ್ನು ಸರ್ಕಾರ ಕೂಡ ಒಪ್ಪಿಕೊಂಡು, ಹೊಸ ಸಮೀಕ್ಷೆಗೆ ಸಮರೋಪಾದಿಯಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಕಾಲಮಿತಿಯೊಳಗೆ ಒಳ ಮೀಸಲಾತಿ ಜಾರಿ ಮಾಡಬೇಕು. ಏಕೆಂದರೆ, ಪರಸ್ಪರ ಗುಮಾನಿ, ದ್ವೇಷ ಹಾಗೂ ಅಸೂಯೆಯಿಂದ ಪರಿಶಿಷ್ಟ ಜಾತಿಯೊಳಗಿನ ಉಪ ಪಂಗಡಗಳ ನಡುವೆ ಸಂಬಂಧ ಹದಗೆಡುತ್ತಿದೆ. ಹೆಚ್ಚಿನ ಅನಾಹುತಗಳಿಗೆ ಸರ್ಕಾರ ಆಸ್ಪದ ನೀಡಬಾರದು. ಒಳ ಮೀಸಲಾತಿ ಜಾರಿಗೆ ಯಾರೊಬ್ಬರೂ ಈವರೆಗೆ ವಿರೋಧ ಮಾಡಿಲ್ಲ. ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ವೈಜ್ಞಾನಿಕ ಅಂಕಿ-ಅಂಶಗಳ ಆಧಾರದಲ್ಲಿ ಒಳ ಮೀಸಲಾತಿ ಜಾರಿ ಆಗಲಿ ಎಂದು ಮನವಿ ಮಾಡುತ್ತಿದ್ದಾರೆ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೆರಗೋಡು ಹೇಳಿದರು.

“ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು; ಕೂಡಲೇ ಸಂಪುಟ ಉಪ ಸಮಿತಿಯೊಂದನ್ನು ರಚಿಸಬೇಕು. ಇತರೆ ಸಮುದಾಯಗಳೂ ಸಮೀಕ್ಷೆಯಲ್ಲಿ ಒಳಗೊಳ್ಳುವಂತೆ ನೋಡಿಕೊಳ್ಳಬೇಕು. ಸಮೀಕ್ಷಾ ತಂಡದಿಂದ ಮಾತ್ರ ದಲಿತರನ್ನು ಹುಡುಕಿ ಮಾತನಾಡಿಸಲು ಸಾಧ್ಯವಿಲ್ಲ. ಹಳ್ಳಿಗಳಲ್ಲಿ ಪ್ರತ್ಯೇಕವಾಗಿ ವಾಸಿಸುವದರಿಂದ ಅವರನ್ನು ಪತ್ತೆಹಚ್ಚುವುದು ಸುಲಭ. ಆದರೆ, ನಗರಸಭೆ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಶಿಷ್ಟರನ್ನು ಪತ್ತೆಹಚ್ಚುವುದು ಸ್ವಲ್ಪ ಕಷ್ಟವಾಗುತ್ತದೆ. ಆದ್ದರಿಂದ, ದಲಿತೇತರ ಸಮುದಾಯಗಳು ಒಳಗೊಳ್ಳಬೇಕು. ಹಾಗೆ ಮಾಡದಿದ್ದರೆ, ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ ಎಂದು ಅಪಸ್ವರ ಬಂದಂತೆ, ಈ ಸಮೀಕ್ಷೆಗೂ ಬರುವ ಸಾಧ್ಯತೆ ಇದೆ. ಉಪ ಸಮಿತಿ ಮಾಡಿ, ಅದರಲ್ಲಿ ಎಲ್ಲ ಸಮುದಾಯಗಳ ಮಂತ್ರಿಗಳನ್ನೂ ಸದಸ್ಯರನ್ನಾಗಿ ನೇಮಿಸಬೇಕು; ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಒಳ ಮೀಸಲಾತಿ ಜಾರಿ ಮಾಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಒಳ ಮೀಸಲಾತಿ ಸಮೀಕ್ಷೆಯಲ್ಲಿ ಅಲೆಮಾರಿ ಸಮುದಾಯಕ್ಕೆ ನ್ಯಾಯ ಸಿಗುವಂತೆ ಎಚ್ಚರಿಕೆ ವಹಿಸಬೇಕು: ಇಂದೂಧರ ಹೊನ್ನಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...