Homeಕರ್ನಾಟಕದಲಿತರನ್ನು ಒಡೆಯುವುದೇ ಕೋಮುವಾದಿಗಳ ಅಜೆಂಡಾ: ಮಾವಳ್ಳಿ ಶಂಕರ್

ದಲಿತರನ್ನು ಒಡೆಯುವುದೇ ಕೋಮುವಾದಿಗಳ ಅಜೆಂಡಾ: ಮಾವಳ್ಳಿ ಶಂಕರ್

- Advertisement -
- Advertisement -

“ಮೊದಲಿಂದಲೂ ಪರಿಶಿಷ್ಟ ಜಾತಿಗಳ ವಿಭಜನೆಗೆ ಪ್ರಯತ್ನ ನಡೆಯುತ್ತಲೇ ಇದೆ; ಈಗಲೂ ನಡೆಯುತ್ತಿದೆ. ದಲಿತರನ್ನು ಒಡೆಯುವುದೇ ಕೋಮುವಾದಿಗಳು ಹಾಗೂ ಆರ್‌ಎಸ್‌ಎಸ್‌ ಅಜೆಂಡಾ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು. ಅನೇಕ ದಲಿತರೂ ಕೂಡ ತಮ್ಮನ್ನು ತಾವು ಬೌದ್ಧರು ಎಂದು ಹೇಳಿಕೊಳ್ಳುತ್ತೇವೆ. 1991 ರಲ್ಲಿ ಅಂದಿನ ಕೇಂದ್ರ ಸರ್ಕಾರ, ‘ಬೌದ್ಧ ಧರ್ಮಕ್ಕೆ ಮತಾಂತರ ಆದವರಿಗೂ ಮೀಸಲಾತಿ ಮುಂದುವರಿಯಲಿದೆ’ ಎಂದು ಹೇಳಿದೆ. ಈ ಬಗ್ಗೆ ಹಲವರಿಗೆ ಗೊಂದಲ ಹಾಗೂ ಭಯ ಇದೆ. ಸರ್ಕಾರ ಹಾಗೂ ನಾಗಮೋಹನ್‌ ದಾಸ್ ಆಯೋಗ ಜನರ ಅನುಮಾನಗಳಿಗೆ ತೆರೆ ಎಳೆಯಬೇಕು” ಎಂದು ಮನವಿ ಮಾಡಿದರು.

“ಸಿಖ್ ಧರ್ಮಕ್ಕೆ ಮತಾಂತರ ಆದ ದಲಿತರಿಗೆ ಮೀಸಲಾತಿ ಮುಂದುವರೆದಿದೆ. ಒಳ ಮೀಸಲಾತಿಯಲ್ಲಿ ಕೂಡ ಧರ್ಮಾಂತರಗೊಂಡ ಪರಿಶಿಷ್ಟ ಜಾತಿ ಜನರಿಗೆ ಮೀಸಲಾತಿ ಮುಂದುವರಿಯಬೇಕು. ಈ ಬಗ್ಗೆ ಚಾಲ್ತಿಯಲ್ಲಿರುವ ಗೊಂದಲ ನಿವಾರಣೆ ಮಾಡಬೇಕು ಎಂಬುದು ನಮ್ಮ ಮನವಿ” ಎಂದರು.

ಒಳ ಮೀಸಲಾತಿ ಹೋರಾಟ ವಿಚಾರದಲ್ಲಿ ರಾಜ್ಯದ ದಲಿತರನ್ನು ಒಡೆಯುವ ಹುನ್ನಾರ ನಡೆಯುತ್ತಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಮೊದಲಿಂದಲೂ ಪರಿಶಿಷ್ಟ ಜಾತಿಗಳ ವಿಭಜನೆಗೆ ಪ್ರಯತ್ನ ನಡೆಯುತ್ತಲೇ ಇದೆ; ಈಗಲೂ ನಡೆಯುತ್ತಿದೆ. ದಲಿತರನ್ನು ಒಡೆಯುವುದೇ ಕೋಮುವಾದಿಗಳು ಹಾಗೂ ಆರ್‌ಎಸ್‌ಎಸ್‌ ಅಜೆಂಡಾ ಆಗಿದೆ. ದಲಿತ ಚಳವಳಿಯನ್ನು ಛಿದ್ರ ಮಾಡಲು ಸಾಧ್ಯವಾಗದ ಕಾರಣಕ್ಕೆ, ಜಾತಿಗಳ ವಿಭಜನೆಗೆ ಮುಂದಾಗಿದ್ದಾರೆ. ಆದರೆ, ರಾಜ್ಯದಲ್ಲಿ ದಲಿತ ಚಳವಳಿ ಇಂದಿಗೂ ಪರಿಶಿಷ್ಟರ ನಡುವೆ ಐಕ್ಯತೆ ಉಳಿಸಿಕೊಂಡಿದೆ. ದಲಿತ ಚಳವಳಿಯ ಬಗ್ಗೆ ಇತ್ತೀಚಿಗೆ ಕೆಲವರು ಮಾಡುತ್ತಿರುವ ಆಪಾದನೆಯನ್ನು ನಾವು ಗಂಭೀರವಾಗಿ ಪರಿಗಣಿಸಿಲ್ಲ. ಏಕೆಂದರೆ, ಇದು ಆರ್‌ಎಸ್‌ಎಸ್‌ ಹುನ್ನಾರ. ಬ್ರಾಹ್ಮಣ್ಯವಾದ ಬೇಕಾ ಅಥವಾ ಸಂವಿಧಾನ ವಾದ ಬೇಕಾ ಎಂಬುದನ್ನು ಸಮುದಾಯ ನಿರ್ಧಾರ ಮಾಡಬೇಕು” ಎಂದರು.

ದಸಂಸ ಒಕ್ಕೂಟದ ವಿ.ನಾಗರಾಜ್, ಇಂದೂಧರ ಹೊನ್ನಾಪುರ, ಗುರುಪ್ರಸಾದ್ ಕೆರಗೋಡು ಹಾಗೂ ಮಾವಳ್ಳಿ ಶಂಕರ್

ಯಾವುದೇ ತೊಂದರೆ ಆಗದಂತೆ ಒಳ ಮೀಸಲಾತಿ ಜಾರಿಯಾಗಲಿ: ಗುರುಪ್ರಸಾದ್ ಕೆರಗೋಡು

“ಜಸ್ಟೀಸ್ ನಾಗಮೋಹನ್ ದಾಸ್ ಏಕ ಸದಸ್ಯ ಸಮಿತಿ ಮಧ್ಯಂತರ ವರದಿ ನೀಡಿದ್ದು, ಹೊಸ ಸಮೀಕ್ಷೆ ನಡೆಸುವ ಮೂಲಕ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಹೇಳಿರುವುದನ್ನು ಸ್ವಾಗತಿಸುತ್ತೇನೆ. ಅದನ್ನು ಸರ್ಕಾರ ಕೂಡ ಒಪ್ಪಿಕೊಂಡು, ಹೊಸ ಸಮೀಕ್ಷೆಗೆ ಸಮರೋಪಾದಿಯಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಕಾಲಮಿತಿಯೊಳಗೆ ಒಳ ಮೀಸಲಾತಿ ಜಾರಿ ಮಾಡಬೇಕು. ಏಕೆಂದರೆ, ಪರಸ್ಪರ ಗುಮಾನಿ, ದ್ವೇಷ ಹಾಗೂ ಅಸೂಯೆಯಿಂದ ಪರಿಶಿಷ್ಟ ಜಾತಿಯೊಳಗಿನ ಉಪ ಪಂಗಡಗಳ ನಡುವೆ ಸಂಬಂಧ ಹದಗೆಡುತ್ತಿದೆ. ಹೆಚ್ಚಿನ ಅನಾಹುತಗಳಿಗೆ ಸರ್ಕಾರ ಆಸ್ಪದ ನೀಡಬಾರದು. ಒಳ ಮೀಸಲಾತಿ ಜಾರಿಗೆ ಯಾರೊಬ್ಬರೂ ಈವರೆಗೆ ವಿರೋಧ ಮಾಡಿಲ್ಲ. ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ವೈಜ್ಞಾನಿಕ ಅಂಕಿ-ಅಂಶಗಳ ಆಧಾರದಲ್ಲಿ ಒಳ ಮೀಸಲಾತಿ ಜಾರಿ ಆಗಲಿ ಎಂದು ಮನವಿ ಮಾಡುತ್ತಿದ್ದಾರೆ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೆರಗೋಡು ಹೇಳಿದರು.

“ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು; ಕೂಡಲೇ ಸಂಪುಟ ಉಪ ಸಮಿತಿಯೊಂದನ್ನು ರಚಿಸಬೇಕು. ಇತರೆ ಸಮುದಾಯಗಳೂ ಸಮೀಕ್ಷೆಯಲ್ಲಿ ಒಳಗೊಳ್ಳುವಂತೆ ನೋಡಿಕೊಳ್ಳಬೇಕು. ಸಮೀಕ್ಷಾ ತಂಡದಿಂದ ಮಾತ್ರ ದಲಿತರನ್ನು ಹುಡುಕಿ ಮಾತನಾಡಿಸಲು ಸಾಧ್ಯವಿಲ್ಲ. ಹಳ್ಳಿಗಳಲ್ಲಿ ಪ್ರತ್ಯೇಕವಾಗಿ ವಾಸಿಸುವದರಿಂದ ಅವರನ್ನು ಪತ್ತೆಹಚ್ಚುವುದು ಸುಲಭ. ಆದರೆ, ನಗರಸಭೆ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಶಿಷ್ಟರನ್ನು ಪತ್ತೆಹಚ್ಚುವುದು ಸ್ವಲ್ಪ ಕಷ್ಟವಾಗುತ್ತದೆ. ಆದ್ದರಿಂದ, ದಲಿತೇತರ ಸಮುದಾಯಗಳು ಒಳಗೊಳ್ಳಬೇಕು. ಹಾಗೆ ಮಾಡದಿದ್ದರೆ, ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ ಎಂದು ಅಪಸ್ವರ ಬಂದಂತೆ, ಈ ಸಮೀಕ್ಷೆಗೂ ಬರುವ ಸಾಧ್ಯತೆ ಇದೆ. ಉಪ ಸಮಿತಿ ಮಾಡಿ, ಅದರಲ್ಲಿ ಎಲ್ಲ ಸಮುದಾಯಗಳ ಮಂತ್ರಿಗಳನ್ನೂ ಸದಸ್ಯರನ್ನಾಗಿ ನೇಮಿಸಬೇಕು; ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಒಳ ಮೀಸಲಾತಿ ಜಾರಿ ಮಾಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಒಳ ಮೀಸಲಾತಿ ಸಮೀಕ್ಷೆಯಲ್ಲಿ ಅಲೆಮಾರಿ ಸಮುದಾಯಕ್ಕೆ ನ್ಯಾಯ ಸಿಗುವಂತೆ ಎಚ್ಚರಿಕೆ ವಹಿಸಬೇಕು: ಇಂದೂಧರ ಹೊನ್ನಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...