Homeಕರ್ನಾಟಕದಲಿತರನ್ನು ಒಡೆಯುವುದೇ ಕೋಮುವಾದಿಗಳ ಅಜೆಂಡಾ: ಮಾವಳ್ಳಿ ಶಂಕರ್

ದಲಿತರನ್ನು ಒಡೆಯುವುದೇ ಕೋಮುವಾದಿಗಳ ಅಜೆಂಡಾ: ಮಾವಳ್ಳಿ ಶಂಕರ್

- Advertisement -
- Advertisement -

“ಮೊದಲಿಂದಲೂ ಪರಿಶಿಷ್ಟ ಜಾತಿಗಳ ವಿಭಜನೆಗೆ ಪ್ರಯತ್ನ ನಡೆಯುತ್ತಲೇ ಇದೆ; ಈಗಲೂ ನಡೆಯುತ್ತಿದೆ. ದಲಿತರನ್ನು ಒಡೆಯುವುದೇ ಕೋಮುವಾದಿಗಳು ಹಾಗೂ ಆರ್‌ಎಸ್‌ಎಸ್‌ ಅಜೆಂಡಾ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು. ಅನೇಕ ದಲಿತರೂ ಕೂಡ ತಮ್ಮನ್ನು ತಾವು ಬೌದ್ಧರು ಎಂದು ಹೇಳಿಕೊಳ್ಳುತ್ತೇವೆ. 1991 ರಲ್ಲಿ ಅಂದಿನ ಕೇಂದ್ರ ಸರ್ಕಾರ, ‘ಬೌದ್ಧ ಧರ್ಮಕ್ಕೆ ಮತಾಂತರ ಆದವರಿಗೂ ಮೀಸಲಾತಿ ಮುಂದುವರಿಯಲಿದೆ’ ಎಂದು ಹೇಳಿದೆ. ಈ ಬಗ್ಗೆ ಹಲವರಿಗೆ ಗೊಂದಲ ಹಾಗೂ ಭಯ ಇದೆ. ಸರ್ಕಾರ ಹಾಗೂ ನಾಗಮೋಹನ್‌ ದಾಸ್ ಆಯೋಗ ಜನರ ಅನುಮಾನಗಳಿಗೆ ತೆರೆ ಎಳೆಯಬೇಕು” ಎಂದು ಮನವಿ ಮಾಡಿದರು.

“ಸಿಖ್ ಧರ್ಮಕ್ಕೆ ಮತಾಂತರ ಆದ ದಲಿತರಿಗೆ ಮೀಸಲಾತಿ ಮುಂದುವರೆದಿದೆ. ಒಳ ಮೀಸಲಾತಿಯಲ್ಲಿ ಕೂಡ ಧರ್ಮಾಂತರಗೊಂಡ ಪರಿಶಿಷ್ಟ ಜಾತಿ ಜನರಿಗೆ ಮೀಸಲಾತಿ ಮುಂದುವರಿಯಬೇಕು. ಈ ಬಗ್ಗೆ ಚಾಲ್ತಿಯಲ್ಲಿರುವ ಗೊಂದಲ ನಿವಾರಣೆ ಮಾಡಬೇಕು ಎಂಬುದು ನಮ್ಮ ಮನವಿ” ಎಂದರು.

ಒಳ ಮೀಸಲಾತಿ ಹೋರಾಟ ವಿಚಾರದಲ್ಲಿ ರಾಜ್ಯದ ದಲಿತರನ್ನು ಒಡೆಯುವ ಹುನ್ನಾರ ನಡೆಯುತ್ತಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಮೊದಲಿಂದಲೂ ಪರಿಶಿಷ್ಟ ಜಾತಿಗಳ ವಿಭಜನೆಗೆ ಪ್ರಯತ್ನ ನಡೆಯುತ್ತಲೇ ಇದೆ; ಈಗಲೂ ನಡೆಯುತ್ತಿದೆ. ದಲಿತರನ್ನು ಒಡೆಯುವುದೇ ಕೋಮುವಾದಿಗಳು ಹಾಗೂ ಆರ್‌ಎಸ್‌ಎಸ್‌ ಅಜೆಂಡಾ ಆಗಿದೆ. ದಲಿತ ಚಳವಳಿಯನ್ನು ಛಿದ್ರ ಮಾಡಲು ಸಾಧ್ಯವಾಗದ ಕಾರಣಕ್ಕೆ, ಜಾತಿಗಳ ವಿಭಜನೆಗೆ ಮುಂದಾಗಿದ್ದಾರೆ. ಆದರೆ, ರಾಜ್ಯದಲ್ಲಿ ದಲಿತ ಚಳವಳಿ ಇಂದಿಗೂ ಪರಿಶಿಷ್ಟರ ನಡುವೆ ಐಕ್ಯತೆ ಉಳಿಸಿಕೊಂಡಿದೆ. ದಲಿತ ಚಳವಳಿಯ ಬಗ್ಗೆ ಇತ್ತೀಚಿಗೆ ಕೆಲವರು ಮಾಡುತ್ತಿರುವ ಆಪಾದನೆಯನ್ನು ನಾವು ಗಂಭೀರವಾಗಿ ಪರಿಗಣಿಸಿಲ್ಲ. ಏಕೆಂದರೆ, ಇದು ಆರ್‌ಎಸ್‌ಎಸ್‌ ಹುನ್ನಾರ. ಬ್ರಾಹ್ಮಣ್ಯವಾದ ಬೇಕಾ ಅಥವಾ ಸಂವಿಧಾನ ವಾದ ಬೇಕಾ ಎಂಬುದನ್ನು ಸಮುದಾಯ ನಿರ್ಧಾರ ಮಾಡಬೇಕು” ಎಂದರು.

ದಸಂಸ ಒಕ್ಕೂಟದ ವಿ.ನಾಗರಾಜ್, ಇಂದೂಧರ ಹೊನ್ನಾಪುರ, ಗುರುಪ್ರಸಾದ್ ಕೆರಗೋಡು ಹಾಗೂ ಮಾವಳ್ಳಿ ಶಂಕರ್

ಯಾವುದೇ ತೊಂದರೆ ಆಗದಂತೆ ಒಳ ಮೀಸಲಾತಿ ಜಾರಿಯಾಗಲಿ: ಗುರುಪ್ರಸಾದ್ ಕೆರಗೋಡು

“ಜಸ್ಟೀಸ್ ನಾಗಮೋಹನ್ ದಾಸ್ ಏಕ ಸದಸ್ಯ ಸಮಿತಿ ಮಧ್ಯಂತರ ವರದಿ ನೀಡಿದ್ದು, ಹೊಸ ಸಮೀಕ್ಷೆ ನಡೆಸುವ ಮೂಲಕ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಹೇಳಿರುವುದನ್ನು ಸ್ವಾಗತಿಸುತ್ತೇನೆ. ಅದನ್ನು ಸರ್ಕಾರ ಕೂಡ ಒಪ್ಪಿಕೊಂಡು, ಹೊಸ ಸಮೀಕ್ಷೆಗೆ ಸಮರೋಪಾದಿಯಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಕಾಲಮಿತಿಯೊಳಗೆ ಒಳ ಮೀಸಲಾತಿ ಜಾರಿ ಮಾಡಬೇಕು. ಏಕೆಂದರೆ, ಪರಸ್ಪರ ಗುಮಾನಿ, ದ್ವೇಷ ಹಾಗೂ ಅಸೂಯೆಯಿಂದ ಪರಿಶಿಷ್ಟ ಜಾತಿಯೊಳಗಿನ ಉಪ ಪಂಗಡಗಳ ನಡುವೆ ಸಂಬಂಧ ಹದಗೆಡುತ್ತಿದೆ. ಹೆಚ್ಚಿನ ಅನಾಹುತಗಳಿಗೆ ಸರ್ಕಾರ ಆಸ್ಪದ ನೀಡಬಾರದು. ಒಳ ಮೀಸಲಾತಿ ಜಾರಿಗೆ ಯಾರೊಬ್ಬರೂ ಈವರೆಗೆ ವಿರೋಧ ಮಾಡಿಲ್ಲ. ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ವೈಜ್ಞಾನಿಕ ಅಂಕಿ-ಅಂಶಗಳ ಆಧಾರದಲ್ಲಿ ಒಳ ಮೀಸಲಾತಿ ಜಾರಿ ಆಗಲಿ ಎಂದು ಮನವಿ ಮಾಡುತ್ತಿದ್ದಾರೆ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೆರಗೋಡು ಹೇಳಿದರು.

“ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು; ಕೂಡಲೇ ಸಂಪುಟ ಉಪ ಸಮಿತಿಯೊಂದನ್ನು ರಚಿಸಬೇಕು. ಇತರೆ ಸಮುದಾಯಗಳೂ ಸಮೀಕ್ಷೆಯಲ್ಲಿ ಒಳಗೊಳ್ಳುವಂತೆ ನೋಡಿಕೊಳ್ಳಬೇಕು. ಸಮೀಕ್ಷಾ ತಂಡದಿಂದ ಮಾತ್ರ ದಲಿತರನ್ನು ಹುಡುಕಿ ಮಾತನಾಡಿಸಲು ಸಾಧ್ಯವಿಲ್ಲ. ಹಳ್ಳಿಗಳಲ್ಲಿ ಪ್ರತ್ಯೇಕವಾಗಿ ವಾಸಿಸುವದರಿಂದ ಅವರನ್ನು ಪತ್ತೆಹಚ್ಚುವುದು ಸುಲಭ. ಆದರೆ, ನಗರಸಭೆ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಶಿಷ್ಟರನ್ನು ಪತ್ತೆಹಚ್ಚುವುದು ಸ್ವಲ್ಪ ಕಷ್ಟವಾಗುತ್ತದೆ. ಆದ್ದರಿಂದ, ದಲಿತೇತರ ಸಮುದಾಯಗಳು ಒಳಗೊಳ್ಳಬೇಕು. ಹಾಗೆ ಮಾಡದಿದ್ದರೆ, ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ ಎಂದು ಅಪಸ್ವರ ಬಂದಂತೆ, ಈ ಸಮೀಕ್ಷೆಗೂ ಬರುವ ಸಾಧ್ಯತೆ ಇದೆ. ಉಪ ಸಮಿತಿ ಮಾಡಿ, ಅದರಲ್ಲಿ ಎಲ್ಲ ಸಮುದಾಯಗಳ ಮಂತ್ರಿಗಳನ್ನೂ ಸದಸ್ಯರನ್ನಾಗಿ ನೇಮಿಸಬೇಕು; ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಒಳ ಮೀಸಲಾತಿ ಜಾರಿ ಮಾಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಒಳ ಮೀಸಲಾತಿ ಸಮೀಕ್ಷೆಯಲ್ಲಿ ಅಲೆಮಾರಿ ಸಮುದಾಯಕ್ಕೆ ನ್ಯಾಯ ಸಿಗುವಂತೆ ಎಚ್ಚರಿಕೆ ವಹಿಸಬೇಕು: ಇಂದೂಧರ ಹೊನ್ನಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...