Homeಕರ್ನಾಟಕದಲಿತರನ್ನು ಒಡೆಯುವುದೇ ಕೋಮುವಾದಿಗಳ ಅಜೆಂಡಾ: ಮಾವಳ್ಳಿ ಶಂಕರ್

ದಲಿತರನ್ನು ಒಡೆಯುವುದೇ ಕೋಮುವಾದಿಗಳ ಅಜೆಂಡಾ: ಮಾವಳ್ಳಿ ಶಂಕರ್

- Advertisement -
- Advertisement -

“ಮೊದಲಿಂದಲೂ ಪರಿಶಿಷ್ಟ ಜಾತಿಗಳ ವಿಭಜನೆಗೆ ಪ್ರಯತ್ನ ನಡೆಯುತ್ತಲೇ ಇದೆ; ಈಗಲೂ ನಡೆಯುತ್ತಿದೆ. ದಲಿತರನ್ನು ಒಡೆಯುವುದೇ ಕೋಮುವಾದಿಗಳು ಹಾಗೂ ಆರ್‌ಎಸ್‌ಎಸ್‌ ಅಜೆಂಡಾ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು. ಅನೇಕ ದಲಿತರೂ ಕೂಡ ತಮ್ಮನ್ನು ತಾವು ಬೌದ್ಧರು ಎಂದು ಹೇಳಿಕೊಳ್ಳುತ್ತೇವೆ. 1991 ರಲ್ಲಿ ಅಂದಿನ ಕೇಂದ್ರ ಸರ್ಕಾರ, ‘ಬೌದ್ಧ ಧರ್ಮಕ್ಕೆ ಮತಾಂತರ ಆದವರಿಗೂ ಮೀಸಲಾತಿ ಮುಂದುವರಿಯಲಿದೆ’ ಎಂದು ಹೇಳಿದೆ. ಈ ಬಗ್ಗೆ ಹಲವರಿಗೆ ಗೊಂದಲ ಹಾಗೂ ಭಯ ಇದೆ. ಸರ್ಕಾರ ಹಾಗೂ ನಾಗಮೋಹನ್‌ ದಾಸ್ ಆಯೋಗ ಜನರ ಅನುಮಾನಗಳಿಗೆ ತೆರೆ ಎಳೆಯಬೇಕು” ಎಂದು ಮನವಿ ಮಾಡಿದರು.

“ಸಿಖ್ ಧರ್ಮಕ್ಕೆ ಮತಾಂತರ ಆದ ದಲಿತರಿಗೆ ಮೀಸಲಾತಿ ಮುಂದುವರೆದಿದೆ. ಒಳ ಮೀಸಲಾತಿಯಲ್ಲಿ ಕೂಡ ಧರ್ಮಾಂತರಗೊಂಡ ಪರಿಶಿಷ್ಟ ಜಾತಿ ಜನರಿಗೆ ಮೀಸಲಾತಿ ಮುಂದುವರಿಯಬೇಕು. ಈ ಬಗ್ಗೆ ಚಾಲ್ತಿಯಲ್ಲಿರುವ ಗೊಂದಲ ನಿವಾರಣೆ ಮಾಡಬೇಕು ಎಂಬುದು ನಮ್ಮ ಮನವಿ” ಎಂದರು.

ಒಳ ಮೀಸಲಾತಿ ಹೋರಾಟ ವಿಚಾರದಲ್ಲಿ ರಾಜ್ಯದ ದಲಿತರನ್ನು ಒಡೆಯುವ ಹುನ್ನಾರ ನಡೆಯುತ್ತಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಮೊದಲಿಂದಲೂ ಪರಿಶಿಷ್ಟ ಜಾತಿಗಳ ವಿಭಜನೆಗೆ ಪ್ರಯತ್ನ ನಡೆಯುತ್ತಲೇ ಇದೆ; ಈಗಲೂ ನಡೆಯುತ್ತಿದೆ. ದಲಿತರನ್ನು ಒಡೆಯುವುದೇ ಕೋಮುವಾದಿಗಳು ಹಾಗೂ ಆರ್‌ಎಸ್‌ಎಸ್‌ ಅಜೆಂಡಾ ಆಗಿದೆ. ದಲಿತ ಚಳವಳಿಯನ್ನು ಛಿದ್ರ ಮಾಡಲು ಸಾಧ್ಯವಾಗದ ಕಾರಣಕ್ಕೆ, ಜಾತಿಗಳ ವಿಭಜನೆಗೆ ಮುಂದಾಗಿದ್ದಾರೆ. ಆದರೆ, ರಾಜ್ಯದಲ್ಲಿ ದಲಿತ ಚಳವಳಿ ಇಂದಿಗೂ ಪರಿಶಿಷ್ಟರ ನಡುವೆ ಐಕ್ಯತೆ ಉಳಿಸಿಕೊಂಡಿದೆ. ದಲಿತ ಚಳವಳಿಯ ಬಗ್ಗೆ ಇತ್ತೀಚಿಗೆ ಕೆಲವರು ಮಾಡುತ್ತಿರುವ ಆಪಾದನೆಯನ್ನು ನಾವು ಗಂಭೀರವಾಗಿ ಪರಿಗಣಿಸಿಲ್ಲ. ಏಕೆಂದರೆ, ಇದು ಆರ್‌ಎಸ್‌ಎಸ್‌ ಹುನ್ನಾರ. ಬ್ರಾಹ್ಮಣ್ಯವಾದ ಬೇಕಾ ಅಥವಾ ಸಂವಿಧಾನ ವಾದ ಬೇಕಾ ಎಂಬುದನ್ನು ಸಮುದಾಯ ನಿರ್ಧಾರ ಮಾಡಬೇಕು” ಎಂದರು.

ದಸಂಸ ಒಕ್ಕೂಟದ ವಿ.ನಾಗರಾಜ್, ಇಂದೂಧರ ಹೊನ್ನಾಪುರ, ಗುರುಪ್ರಸಾದ್ ಕೆರಗೋಡು ಹಾಗೂ ಮಾವಳ್ಳಿ ಶಂಕರ್

ಯಾವುದೇ ತೊಂದರೆ ಆಗದಂತೆ ಒಳ ಮೀಸಲಾತಿ ಜಾರಿಯಾಗಲಿ: ಗುರುಪ್ರಸಾದ್ ಕೆರಗೋಡು

“ಜಸ್ಟೀಸ್ ನಾಗಮೋಹನ್ ದಾಸ್ ಏಕ ಸದಸ್ಯ ಸಮಿತಿ ಮಧ್ಯಂತರ ವರದಿ ನೀಡಿದ್ದು, ಹೊಸ ಸಮೀಕ್ಷೆ ನಡೆಸುವ ಮೂಲಕ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಹೇಳಿರುವುದನ್ನು ಸ್ವಾಗತಿಸುತ್ತೇನೆ. ಅದನ್ನು ಸರ್ಕಾರ ಕೂಡ ಒಪ್ಪಿಕೊಂಡು, ಹೊಸ ಸಮೀಕ್ಷೆಗೆ ಸಮರೋಪಾದಿಯಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಕಾಲಮಿತಿಯೊಳಗೆ ಒಳ ಮೀಸಲಾತಿ ಜಾರಿ ಮಾಡಬೇಕು. ಏಕೆಂದರೆ, ಪರಸ್ಪರ ಗುಮಾನಿ, ದ್ವೇಷ ಹಾಗೂ ಅಸೂಯೆಯಿಂದ ಪರಿಶಿಷ್ಟ ಜಾತಿಯೊಳಗಿನ ಉಪ ಪಂಗಡಗಳ ನಡುವೆ ಸಂಬಂಧ ಹದಗೆಡುತ್ತಿದೆ. ಹೆಚ್ಚಿನ ಅನಾಹುತಗಳಿಗೆ ಸರ್ಕಾರ ಆಸ್ಪದ ನೀಡಬಾರದು. ಒಳ ಮೀಸಲಾತಿ ಜಾರಿಗೆ ಯಾರೊಬ್ಬರೂ ಈವರೆಗೆ ವಿರೋಧ ಮಾಡಿಲ್ಲ. ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ವೈಜ್ಞಾನಿಕ ಅಂಕಿ-ಅಂಶಗಳ ಆಧಾರದಲ್ಲಿ ಒಳ ಮೀಸಲಾತಿ ಜಾರಿ ಆಗಲಿ ಎಂದು ಮನವಿ ಮಾಡುತ್ತಿದ್ದಾರೆ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೆರಗೋಡು ಹೇಳಿದರು.

“ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು; ಕೂಡಲೇ ಸಂಪುಟ ಉಪ ಸಮಿತಿಯೊಂದನ್ನು ರಚಿಸಬೇಕು. ಇತರೆ ಸಮುದಾಯಗಳೂ ಸಮೀಕ್ಷೆಯಲ್ಲಿ ಒಳಗೊಳ್ಳುವಂತೆ ನೋಡಿಕೊಳ್ಳಬೇಕು. ಸಮೀಕ್ಷಾ ತಂಡದಿಂದ ಮಾತ್ರ ದಲಿತರನ್ನು ಹುಡುಕಿ ಮಾತನಾಡಿಸಲು ಸಾಧ್ಯವಿಲ್ಲ. ಹಳ್ಳಿಗಳಲ್ಲಿ ಪ್ರತ್ಯೇಕವಾಗಿ ವಾಸಿಸುವದರಿಂದ ಅವರನ್ನು ಪತ್ತೆಹಚ್ಚುವುದು ಸುಲಭ. ಆದರೆ, ನಗರಸಭೆ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಶಿಷ್ಟರನ್ನು ಪತ್ತೆಹಚ್ಚುವುದು ಸ್ವಲ್ಪ ಕಷ್ಟವಾಗುತ್ತದೆ. ಆದ್ದರಿಂದ, ದಲಿತೇತರ ಸಮುದಾಯಗಳು ಒಳಗೊಳ್ಳಬೇಕು. ಹಾಗೆ ಮಾಡದಿದ್ದರೆ, ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ ಎಂದು ಅಪಸ್ವರ ಬಂದಂತೆ, ಈ ಸಮೀಕ್ಷೆಗೂ ಬರುವ ಸಾಧ್ಯತೆ ಇದೆ. ಉಪ ಸಮಿತಿ ಮಾಡಿ, ಅದರಲ್ಲಿ ಎಲ್ಲ ಸಮುದಾಯಗಳ ಮಂತ್ರಿಗಳನ್ನೂ ಸದಸ್ಯರನ್ನಾಗಿ ನೇಮಿಸಬೇಕು; ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಒಳ ಮೀಸಲಾತಿ ಜಾರಿ ಮಾಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಒಳ ಮೀಸಲಾತಿ ಸಮೀಕ್ಷೆಯಲ್ಲಿ ಅಲೆಮಾರಿ ಸಮುದಾಯಕ್ಕೆ ನ್ಯಾಯ ಸಿಗುವಂತೆ ಎಚ್ಚರಿಕೆ ವಹಿಸಬೇಕು: ಇಂದೂಧರ ಹೊನ್ನಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...