Homeಕರ್ನಾಟಕದಲಿತರನ್ನು ಒಡೆಯುವುದೇ ಕೋಮುವಾದಿಗಳ ಅಜೆಂಡಾ: ಮಾವಳ್ಳಿ ಶಂಕರ್

ದಲಿತರನ್ನು ಒಡೆಯುವುದೇ ಕೋಮುವಾದಿಗಳ ಅಜೆಂಡಾ: ಮಾವಳ್ಳಿ ಶಂಕರ್

- Advertisement -
- Advertisement -

“ಮೊದಲಿಂದಲೂ ಪರಿಶಿಷ್ಟ ಜಾತಿಗಳ ವಿಭಜನೆಗೆ ಪ್ರಯತ್ನ ನಡೆಯುತ್ತಲೇ ಇದೆ; ಈಗಲೂ ನಡೆಯುತ್ತಿದೆ. ದಲಿತರನ್ನು ಒಡೆಯುವುದೇ ಕೋಮುವಾದಿಗಳು ಹಾಗೂ ಆರ್‌ಎಸ್‌ಎಸ್‌ ಅಜೆಂಡಾ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕಾರ ಮಾಡಿದ್ದರು. ಅನೇಕ ದಲಿತರೂ ಕೂಡ ತಮ್ಮನ್ನು ತಾವು ಬೌದ್ಧರು ಎಂದು ಹೇಳಿಕೊಳ್ಳುತ್ತೇವೆ. 1991 ರಲ್ಲಿ ಅಂದಿನ ಕೇಂದ್ರ ಸರ್ಕಾರ, ‘ಬೌದ್ಧ ಧರ್ಮಕ್ಕೆ ಮತಾಂತರ ಆದವರಿಗೂ ಮೀಸಲಾತಿ ಮುಂದುವರಿಯಲಿದೆ’ ಎಂದು ಹೇಳಿದೆ. ಈ ಬಗ್ಗೆ ಹಲವರಿಗೆ ಗೊಂದಲ ಹಾಗೂ ಭಯ ಇದೆ. ಸರ್ಕಾರ ಹಾಗೂ ನಾಗಮೋಹನ್‌ ದಾಸ್ ಆಯೋಗ ಜನರ ಅನುಮಾನಗಳಿಗೆ ತೆರೆ ಎಳೆಯಬೇಕು” ಎಂದು ಮನವಿ ಮಾಡಿದರು.

“ಸಿಖ್ ಧರ್ಮಕ್ಕೆ ಮತಾಂತರ ಆದ ದಲಿತರಿಗೆ ಮೀಸಲಾತಿ ಮುಂದುವರೆದಿದೆ. ಒಳ ಮೀಸಲಾತಿಯಲ್ಲಿ ಕೂಡ ಧರ್ಮಾಂತರಗೊಂಡ ಪರಿಶಿಷ್ಟ ಜಾತಿ ಜನರಿಗೆ ಮೀಸಲಾತಿ ಮುಂದುವರಿಯಬೇಕು. ಈ ಬಗ್ಗೆ ಚಾಲ್ತಿಯಲ್ಲಿರುವ ಗೊಂದಲ ನಿವಾರಣೆ ಮಾಡಬೇಕು ಎಂಬುದು ನಮ್ಮ ಮನವಿ” ಎಂದರು.

ಒಳ ಮೀಸಲಾತಿ ಹೋರಾಟ ವಿಚಾರದಲ್ಲಿ ರಾಜ್ಯದ ದಲಿತರನ್ನು ಒಡೆಯುವ ಹುನ್ನಾರ ನಡೆಯುತ್ತಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಮೊದಲಿಂದಲೂ ಪರಿಶಿಷ್ಟ ಜಾತಿಗಳ ವಿಭಜನೆಗೆ ಪ್ರಯತ್ನ ನಡೆಯುತ್ತಲೇ ಇದೆ; ಈಗಲೂ ನಡೆಯುತ್ತಿದೆ. ದಲಿತರನ್ನು ಒಡೆಯುವುದೇ ಕೋಮುವಾದಿಗಳು ಹಾಗೂ ಆರ್‌ಎಸ್‌ಎಸ್‌ ಅಜೆಂಡಾ ಆಗಿದೆ. ದಲಿತ ಚಳವಳಿಯನ್ನು ಛಿದ್ರ ಮಾಡಲು ಸಾಧ್ಯವಾಗದ ಕಾರಣಕ್ಕೆ, ಜಾತಿಗಳ ವಿಭಜನೆಗೆ ಮುಂದಾಗಿದ್ದಾರೆ. ಆದರೆ, ರಾಜ್ಯದಲ್ಲಿ ದಲಿತ ಚಳವಳಿ ಇಂದಿಗೂ ಪರಿಶಿಷ್ಟರ ನಡುವೆ ಐಕ್ಯತೆ ಉಳಿಸಿಕೊಂಡಿದೆ. ದಲಿತ ಚಳವಳಿಯ ಬಗ್ಗೆ ಇತ್ತೀಚಿಗೆ ಕೆಲವರು ಮಾಡುತ್ತಿರುವ ಆಪಾದನೆಯನ್ನು ನಾವು ಗಂಭೀರವಾಗಿ ಪರಿಗಣಿಸಿಲ್ಲ. ಏಕೆಂದರೆ, ಇದು ಆರ್‌ಎಸ್‌ಎಸ್‌ ಹುನ್ನಾರ. ಬ್ರಾಹ್ಮಣ್ಯವಾದ ಬೇಕಾ ಅಥವಾ ಸಂವಿಧಾನ ವಾದ ಬೇಕಾ ಎಂಬುದನ್ನು ಸಮುದಾಯ ನಿರ್ಧಾರ ಮಾಡಬೇಕು” ಎಂದರು.

ದಸಂಸ ಒಕ್ಕೂಟದ ವಿ.ನಾಗರಾಜ್, ಇಂದೂಧರ ಹೊನ್ನಾಪುರ, ಗುರುಪ್ರಸಾದ್ ಕೆರಗೋಡು ಹಾಗೂ ಮಾವಳ್ಳಿ ಶಂಕರ್

ಯಾವುದೇ ತೊಂದರೆ ಆಗದಂತೆ ಒಳ ಮೀಸಲಾತಿ ಜಾರಿಯಾಗಲಿ: ಗುರುಪ್ರಸಾದ್ ಕೆರಗೋಡು

“ಜಸ್ಟೀಸ್ ನಾಗಮೋಹನ್ ದಾಸ್ ಏಕ ಸದಸ್ಯ ಸಮಿತಿ ಮಧ್ಯಂತರ ವರದಿ ನೀಡಿದ್ದು, ಹೊಸ ಸಮೀಕ್ಷೆ ನಡೆಸುವ ಮೂಲಕ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಹೇಳಿರುವುದನ್ನು ಸ್ವಾಗತಿಸುತ್ತೇನೆ. ಅದನ್ನು ಸರ್ಕಾರ ಕೂಡ ಒಪ್ಪಿಕೊಂಡು, ಹೊಸ ಸಮೀಕ್ಷೆಗೆ ಸಮರೋಪಾದಿಯಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಕಾಲಮಿತಿಯೊಳಗೆ ಒಳ ಮೀಸಲಾತಿ ಜಾರಿ ಮಾಡಬೇಕು. ಏಕೆಂದರೆ, ಪರಸ್ಪರ ಗುಮಾನಿ, ದ್ವೇಷ ಹಾಗೂ ಅಸೂಯೆಯಿಂದ ಪರಿಶಿಷ್ಟ ಜಾತಿಯೊಳಗಿನ ಉಪ ಪಂಗಡಗಳ ನಡುವೆ ಸಂಬಂಧ ಹದಗೆಡುತ್ತಿದೆ. ಹೆಚ್ಚಿನ ಅನಾಹುತಗಳಿಗೆ ಸರ್ಕಾರ ಆಸ್ಪದ ನೀಡಬಾರದು. ಒಳ ಮೀಸಲಾತಿ ಜಾರಿಗೆ ಯಾರೊಬ್ಬರೂ ಈವರೆಗೆ ವಿರೋಧ ಮಾಡಿಲ್ಲ. ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ವೈಜ್ಞಾನಿಕ ಅಂಕಿ-ಅಂಶಗಳ ಆಧಾರದಲ್ಲಿ ಒಳ ಮೀಸಲಾತಿ ಜಾರಿ ಆಗಲಿ ಎಂದು ಮನವಿ ಮಾಡುತ್ತಿದ್ದಾರೆ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೆರಗೋಡು ಹೇಳಿದರು.

“ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು; ಕೂಡಲೇ ಸಂಪುಟ ಉಪ ಸಮಿತಿಯೊಂದನ್ನು ರಚಿಸಬೇಕು. ಇತರೆ ಸಮುದಾಯಗಳೂ ಸಮೀಕ್ಷೆಯಲ್ಲಿ ಒಳಗೊಳ್ಳುವಂತೆ ನೋಡಿಕೊಳ್ಳಬೇಕು. ಸಮೀಕ್ಷಾ ತಂಡದಿಂದ ಮಾತ್ರ ದಲಿತರನ್ನು ಹುಡುಕಿ ಮಾತನಾಡಿಸಲು ಸಾಧ್ಯವಿಲ್ಲ. ಹಳ್ಳಿಗಳಲ್ಲಿ ಪ್ರತ್ಯೇಕವಾಗಿ ವಾಸಿಸುವದರಿಂದ ಅವರನ್ನು ಪತ್ತೆಹಚ್ಚುವುದು ಸುಲಭ. ಆದರೆ, ನಗರಸಭೆ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಶಿಷ್ಟರನ್ನು ಪತ್ತೆಹಚ್ಚುವುದು ಸ್ವಲ್ಪ ಕಷ್ಟವಾಗುತ್ತದೆ. ಆದ್ದರಿಂದ, ದಲಿತೇತರ ಸಮುದಾಯಗಳು ಒಳಗೊಳ್ಳಬೇಕು. ಹಾಗೆ ಮಾಡದಿದ್ದರೆ, ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ ಎಂದು ಅಪಸ್ವರ ಬಂದಂತೆ, ಈ ಸಮೀಕ್ಷೆಗೂ ಬರುವ ಸಾಧ್ಯತೆ ಇದೆ. ಉಪ ಸಮಿತಿ ಮಾಡಿ, ಅದರಲ್ಲಿ ಎಲ್ಲ ಸಮುದಾಯಗಳ ಮಂತ್ರಿಗಳನ್ನೂ ಸದಸ್ಯರನ್ನಾಗಿ ನೇಮಿಸಬೇಕು; ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಒಳ ಮೀಸಲಾತಿ ಜಾರಿ ಮಾಡಬೇಕು” ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಒಳ ಮೀಸಲಾತಿ ಸಮೀಕ್ಷೆಯಲ್ಲಿ ಅಲೆಮಾರಿ ಸಮುದಾಯಕ್ಕೆ ನ್ಯಾಯ ಸಿಗುವಂತೆ ಎಚ್ಚರಿಕೆ ವಹಿಸಬೇಕು: ಇಂದೂಧರ ಹೊನ್ನಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...