Homeಕರ್ನಾಟಕಆರೆಸ್ಸೆಸ್ಸಿನಲ್ಲಿ ದಲಿತರ ಸ್ಥಾನ ಏನು ಎಂಬುವುದಕ್ಕೆ ಛಲವಾದಿ ನಾರಾಯಣ ಸ್ವಾಮಿ ಉತ್ತರ: ಸಿದ್ದರಾಮಯ್ಯ

ಆರೆಸ್ಸೆಸ್ಸಿನಲ್ಲಿ ದಲಿತರ ಸ್ಥಾನ ಏನು ಎಂಬುವುದಕ್ಕೆ ಛಲವಾದಿ ನಾರಾಯಣ ಸ್ವಾಮಿ ಉತ್ತರ: ಸಿದ್ದರಾಮಯ್ಯ

- Advertisement -
- Advertisement -

ಆರೆಸ್ಸೆಸ್ಸಿನ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ ಜಾತಿಗಳು ಯಾಕೆ ಇಲ್ಲ ಎಂಬುವುದಕ್ಕೆ ಸಂಘವು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯು ಅವರು, ‘ಒಳವಸ್ತ್ರಗಳ ಕಟ್ಟನ್ನು’ ಹೊತ್ತುಕೊಂಡಿರುವ ನಾರಾಯಣ ಸ್ವಾಮಿ ಅವರ ಚಿತ್ರವನ್ನು ಉಲ್ಲೇಖಿಸಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಇತ್ತೀಚೆಗೆ ಆರೆಸ್ಸೆಸ್‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದು, ಅದರ ಉನ್ನತ ನಾಯಕರಲ್ಲಿ ದಲಿತರು ಮತ್ತು ಹಿಂದುಳಿದ ಜಾತಿಗಳ ಜನರು ಯಾಕೆ ಇಲ್ಲ ಎಂದು ಪ್ರಶ್ನಿಸಿದ್ದರು. ಜೊತೆಗೆ ಕಾಂಗ್ರೆಸ್‌ ಕಾರ್ಯಕರ್ತರು ಪಠ್ಯಪುಸ್ತಕದ ಕೇಸರೀಕರಣವನ್ನು ವಿರೋಧಿಸಿ ಆರೆಸ್ಸೆಸ್ಸಿನ ಚಡ್ಡಿಗಳನ್ನು ಸುಟ್ಟಿದ್ದರು. ಇದರ ವಿರುದ್ಧ ಬಿಜೆಪಿ ಒಳವಸ್ತ್ರವನ್ನು ಸಂಗ್ರಹಿಸಿ ಕಾಂಗ್ರೆಸ್ ಕಚೇರಿಗೆ ಕಳುಹಿಸುವ ಅಭಿಯಾನ ಪ್ರಾರಂಭಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಅಭಿಯಾನವನ್ನು ರಾಜ್ಯದ ಎಸ್ಸಿ ಮೋರ್ಚಾದ ಅಧ್ಯಕ್ಷರಾಗಿರುವ ನಾರಾಯಣ ಸ್ವಾಮಿ ಅವರು ವಹಿಸಿಕೊಂಡಿದ್ದು, ಅವರು ಒಳವಸ್ತ್ರಗಳನ್ನು ಹೊತ್ತುಕೊಂಡಿರುವ ಚಿತ್ರ ವೈರಲ್ ಆಗಿದೆ.

ಇದನ್ನೂ ಓದಿ: ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿರುವ ಸಿದ್ದರಾಮಯ್ಯ ಅವರು,“ನಿಮ್ಮ ‘ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ‌ ಜಾತಿಗಳು ಯಾಕೆ ಇಲ್ಲ’ ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್‌ನವರು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಈ‌ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ಆರ್.ಎಸ್.ಎಸ್‌ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ. ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌‌ ಮನಸ್ಸಿಗೆ ನೋವಾಯಿತು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ನಿಮ್ಮನ್ನು ‘ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆ’ಯಂತಹ ಸ್ಥಾನದಲ್ಲಿ‌‌ ಕಾಣುವ ಆಸೆ ನನಗೆ. ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:  ಪ್ರವಾದಿ ನಿಂದನೆ ವಿವಾದ ಹಿನ್ನಲೆ: ಪಕ್ಷದ ಪರವಾಗಿ ಚರ್ಚೆಗಳಲ್ಲಿ ಭಾಗವಹಿಸುವವರಿಗೆ ಹೊಸ ನಿಯಮ ಹೇರಿದ ಬಿಜೆಪಿ

“ಸ್ವಾಭಿಮಾನವನ್ನು‌ ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ. ಸ್ವಾಭಿಮಾನದ ಪಾಠ ಕಲಿಯಬೇಕು” ಎಂದು ಸಿದ್ದರಾಮಯ್ಯ ಅವರು ನಾರಾಯಣ ಸ್ವಾಮಿ ಅವರಿಗೆ ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Siddu excellent,
    Chalwadi Narayanaswami is an opportunitist. People like Chalwadi Narayanaswami required for RSS to carry such things. ಚಲುವಾದಿ ನಾರಾಯಣಸ್ವಾಮಿ ಗೆ ದಿಕ್ಕಾರ ವಿರಲಿ

  2. RSS never be given any higher post to the SC/ST members…. They only using such members for sweeping, carrying, … etc… That means untouchablity works…. SC/ST people please understand such partiality activities inside the RSS……My appeal to my community….don’t loose your SWABHIMAANA.

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...