Homeಕರ್ನಾಟಕಆರೆಸ್ಸೆಸ್ಸಿನಲ್ಲಿ ದಲಿತರ ಸ್ಥಾನ ಏನು ಎಂಬುವುದಕ್ಕೆ ಛಲವಾದಿ ನಾರಾಯಣ ಸ್ವಾಮಿ ಉತ್ತರ: ಸಿದ್ದರಾಮಯ್ಯ

ಆರೆಸ್ಸೆಸ್ಸಿನಲ್ಲಿ ದಲಿತರ ಸ್ಥಾನ ಏನು ಎಂಬುವುದಕ್ಕೆ ಛಲವಾದಿ ನಾರಾಯಣ ಸ್ವಾಮಿ ಉತ್ತರ: ಸಿದ್ದರಾಮಯ್ಯ

- Advertisement -
- Advertisement -

ಆರೆಸ್ಸೆಸ್ಸಿನ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ ಜಾತಿಗಳು ಯಾಕೆ ಇಲ್ಲ ಎಂಬುವುದಕ್ಕೆ ಸಂಘವು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯು ಅವರು, ‘ಒಳವಸ್ತ್ರಗಳ ಕಟ್ಟನ್ನು’ ಹೊತ್ತುಕೊಂಡಿರುವ ನಾರಾಯಣ ಸ್ವಾಮಿ ಅವರ ಚಿತ್ರವನ್ನು ಉಲ್ಲೇಖಿಸಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಇತ್ತೀಚೆಗೆ ಆರೆಸ್ಸೆಸ್‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದು, ಅದರ ಉನ್ನತ ನಾಯಕರಲ್ಲಿ ದಲಿತರು ಮತ್ತು ಹಿಂದುಳಿದ ಜಾತಿಗಳ ಜನರು ಯಾಕೆ ಇಲ್ಲ ಎಂದು ಪ್ರಶ್ನಿಸಿದ್ದರು. ಜೊತೆಗೆ ಕಾಂಗ್ರೆಸ್‌ ಕಾರ್ಯಕರ್ತರು ಪಠ್ಯಪುಸ್ತಕದ ಕೇಸರೀಕರಣವನ್ನು ವಿರೋಧಿಸಿ ಆರೆಸ್ಸೆಸ್ಸಿನ ಚಡ್ಡಿಗಳನ್ನು ಸುಟ್ಟಿದ್ದರು. ಇದರ ವಿರುದ್ಧ ಬಿಜೆಪಿ ಒಳವಸ್ತ್ರವನ್ನು ಸಂಗ್ರಹಿಸಿ ಕಾಂಗ್ರೆಸ್ ಕಚೇರಿಗೆ ಕಳುಹಿಸುವ ಅಭಿಯಾನ ಪ್ರಾರಂಭಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಅಭಿಯಾನವನ್ನು ರಾಜ್ಯದ ಎಸ್ಸಿ ಮೋರ್ಚಾದ ಅಧ್ಯಕ್ಷರಾಗಿರುವ ನಾರಾಯಣ ಸ್ವಾಮಿ ಅವರು ವಹಿಸಿಕೊಂಡಿದ್ದು, ಅವರು ಒಳವಸ್ತ್ರಗಳನ್ನು ಹೊತ್ತುಕೊಂಡಿರುವ ಚಿತ್ರ ವೈರಲ್ ಆಗಿದೆ.

ಇದನ್ನೂ ಓದಿ: ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿರುವ ಸಿದ್ದರಾಮಯ್ಯ ಅವರು,“ನಿಮ್ಮ ‘ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ‌ ಜಾತಿಗಳು ಯಾಕೆ ಇಲ್ಲ’ ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್‌ನವರು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಈ‌ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ಆರ್.ಎಸ್.ಎಸ್‌ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ. ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌‌ ಮನಸ್ಸಿಗೆ ನೋವಾಯಿತು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ನಿಮ್ಮನ್ನು ‘ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆ’ಯಂತಹ ಸ್ಥಾನದಲ್ಲಿ‌‌ ಕಾಣುವ ಆಸೆ ನನಗೆ. ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:  ಪ್ರವಾದಿ ನಿಂದನೆ ವಿವಾದ ಹಿನ್ನಲೆ: ಪಕ್ಷದ ಪರವಾಗಿ ಚರ್ಚೆಗಳಲ್ಲಿ ಭಾಗವಹಿಸುವವರಿಗೆ ಹೊಸ ನಿಯಮ ಹೇರಿದ ಬಿಜೆಪಿ

“ಸ್ವಾಭಿಮಾನವನ್ನು‌ ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ. ಸ್ವಾಭಿಮಾನದ ಪಾಠ ಕಲಿಯಬೇಕು” ಎಂದು ಸಿದ್ದರಾಮಯ್ಯ ಅವರು ನಾರಾಯಣ ಸ್ವಾಮಿ ಅವರಿಗೆ ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Siddu excellent,
    Chalwadi Narayanaswami is an opportunitist. People like Chalwadi Narayanaswami required for RSS to carry such things. ಚಲುವಾದಿ ನಾರಾಯಣಸ್ವಾಮಿ ಗೆ ದಿಕ್ಕಾರ ವಿರಲಿ

  2. RSS never be given any higher post to the SC/ST members…. They only using such members for sweeping, carrying, … etc… That means untouchablity works…. SC/ST people please understand such partiality activities inside the RSS……My appeal to my community….don’t loose your SWABHIMAANA.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...