Homeಫ್ಯಾಕ್ಟ್‌ಚೆಕ್ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ...

ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

- Advertisement -
- Advertisement -

ಪ್ರಸ್ತುತ ಕೊರೊನಾ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ಆ್ಯಂಟಿ ವೈರಲ್ ಔಷಧಿಗೆ ‘ರೆಮ್‌ಡೆಸಿವಿರ್‌‌’(Remdesivir) ಎಂಬ ಹೆಸರನ್ನು ತಮಿಳುನಾಡು ಮೂಲದ ಭಾರತೀಯ ವಿಜ್ಞಾನಿಯಾದ ‘ರಮೇಶ್ ಇ.ಎಂ. ದೇಸಿಗನ್’ (Ramesh EM Desigan) ಅವರ ಗೌರವಾರ್ಥವಾಗಿ ಇಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಸಂದೇಶವೊಂದು ಹರಿದಾಡುತ್ತಿದೆ. ಆಯ

ಆದರೆ ರೆಮ್‌ಡೆಸಿವಿರ್‌ ಮೂಲ ಕಂಪನಿಯಾದ ‘ಗಿಲ್ಯಾಡ್‌ ಸೈನ್ಸಸ್’ ಅವರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪ್ರತಿಪಾದನೆ ನಿಜವಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

  • ರೆಮ್ಡೆಸಿವಿರ್ ಅನ್ನು ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸ್ ಅಭಿವೃದ್ಧಿಪಡಿಸಿದೆ. ಅಲ್ಲಿನ ಜೆಕ್ ವಿಜ್ಞಾನಿ ಥೋಮಸ್ ಸಿಹ್ಲರ್ ನೇತೃತ್ವದ ತಂಡವು ಎಬೋಲಾ ಚಿಕಿತ್ಸೆಗಾಗಿ ಈ ಔಷಧವನ್ನು ಕಂಡುಹಿಡಿದಿದೆ.
  • ಆ್ಯಂಟಿ ವೈರಲ್‌ ಔಷಧಕ್ಕೆ ಮೊದಲು ಎಬ್ಪಾಂಟುವಿರ್ (Ebpantuvir) ಎಂದು ಹೆಸರು ಇದ್ದು, ನಂತರ ಸಿಹ್ಲಾರ್ ತಂಡದ ಪ್ರಮುಖ ವಿಜ್ಞಾನಿ ‘ರಮೇಶ್ ಇ.ಎಂ. ದೇಸಿಗನ್’ ಅವರ ಗೌರವಾರ್ಥವಾಗಿ ‘ರೆಮ್‌ಡೆಸಿವಿರ್‌’ ಎಂದು ನಾಮಕರಣ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

  • ರಮೇಶ್ ತಮಿಳುನಾಡಿನ ರಾಸಿಪುರಂ ಮೂಲದವರಾಗಿದ್ದು, ಗಿಲ್ಯಾಡ್‌‌ನಲ್ಲಿ ಕೆಲಸ ಮಾಡಲು 2002 ರಲ್ಲಿ ಕ್ಯಾಲಿಫೋರ್ನಿಯಾಗೆ ತೆರಳಿದರು.
  • ರಮೇಶ್ ಇ.ಎಂ. ದೇಸಿಗನ್ ಅವರ ಗೌರವಾರ್ಥವಾಗಿ ತಮಿಳುನಾಡಿನಲ್ಲಿ ಅವರ ಕಲಿತ ಪ್ರಾಥಮಿಕ ಶಾಲೆ, ರಾಶಿ ಇಂಟರ್ನ್ಯಾಷನಲ್ ಸ್ಕೂಲ್‌ಗೆ ಗಿಲ್ಯಾಡ್‌ 2 ಮಿಲಿಯನ್ ದೇಣಿಗೆ ನೀಡಿದೆ.
ಅದರ ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಸಂದೇಶವು ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಸತ್ಯವೇನು?

ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸಸ್ ‘ರೆಮ್‌ಡೆಸಿವಿರ್‌’ ಔಷಧಿಯ ಮೂಲ ಕಂಪೆನಿಯಾಗಿದೆ ಎಂಬುದು ನಿಜವಾಗಿದೆ. ಗಿಲ್ಯಾಡ್‌ನ ವೆಬ್‌ಸೈಟ್‌ನಲ್ಲಿ ಈ ಔಷಧದ ಬೆಳವಣಿಗೆಯನ್ನು ವಿವರಿಸುವ ಡಾಕ್ಯುಮೆಂಟ್ ಅನ್ನು ಕೆಳಗೆ ನೋಡಬಹುದುದಾಗಿದೆ.

ಇದನ್ನೂ ಓದಿ: ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

2009 ರಲ್ಲಿ ಹೆಪಟೈಟಿಸ್ ಸಿ (ಎಚ್‌ಸಿವಿ) ಮತ್ತು ಉಸಿರಾಟದ ಸಿನ್ಸಿಟಿಯಲ್ ವೈರಸ್ (ಆರ್‌ಎಸ್‌ವಿ) ನ ಸಂಶೋಧನಾ ಕಾರ್ಯಕ್ರಮಗಳು ನಡೆಯುತ್ತಿದ್ದಾಗ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಸಂಶೋಧನೆಯು  ಪ್ರಾರಂಭವಾಯಿತು ಎಂದು ಡಾಕ್ಯುಮೆಂಟ್ ಉಲ್ಲೇಖಿಸುತ್ತದೆ. ತರುವಾಯ 2014 ರಲ್ಲಿ ಎಬೋಲಾ ಮತ್ತು ಇತ್ತೀಚೆಗೆ ಕೊರೊನಾ ವೈರಸ್ಗಾಗಿ ಈ ಔಷಧವನ್ನು ಪರೀಕ್ಷಿಸಲಾಯಿತು.

ಕಂಪನಿಯ ವೆಬ್‌ಸೈಟ್‌ನಲ್ಲಿ ‘Four Questions with Tomas Cihlar: The Field of Emerging Viruses’ ಎಂಬ ಶೀರ್ಷಿಕೆಯ ಮತ್ತೊಂದು ಲೇಖನದಲ್ಲಿ, ಥಾಮಸ್‌ ಸಿಹ್ಲರ್ ಅವರು ಗಿಲ್ಯಾಡ್‌ನ ಆಂಟಿವೈರಲ್ ಔಷಧದ ಸಂಶೋಧನೆಗೆ ಕಾರಣಕರ್ತರಾಗಿದ್ದು, ವೈರಾಲಜಿಯ ಉಪಾಧ್ಯಕ್ಷರಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ರೆಮ್‌ಡೆಸಿವಿರ್‌ ಔಷಧದ ಅಭಿವೃದ್ಧಿಗೆ ಅವರು ನೇತೃತ್ವ ವಹಿಸಿದ್ದಾರೆ.

ಆದರೆ ವೆಬ್‌ಸೈಟ್‌ನ ಲೇಖನದಲ್ಲಿ ‘ರಮೇಶ್ ಇಎಂ ದೇಸಿಗನ್’ ಬಗ್ಗೆ ಯಾವುದೇ ಉಲ್ಲೇಖ ಕಂಡುಬಂದಿಲ್ಲ. ಜೊತೆಗೆ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಮತ್ತು ಪ್ರಯೋಗಗಳಿಗೆ ಸಂಬಂಧಿಸಿದ ತಂಡದಲ್ಲಿ ‘ರಮೇಶ್ ಇಎಂ ದೇಶಿಗನ್’ ಎಂಬ ವ್ಯಕ್ತಿ ಇಲ್ಲ ಎಂದು ಕಂಪೆನಿಯು ದೃಡಪಡಿಸಿದೆ ಎಂದು ‘ದಿಕ್ವಿಂಟ್’ ವರದಿ ಮಾಡಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ಗಿಲ್ಯಾಡ್ ಸೈನ್ಸಸ್‌ನ ಸಾರ್ವಜನಿಕ ವ್ಯವಹಾರಗಳ ಹಿರಿಯ ನಿರ್ದೇಶಕ, ಬಹಾರ್ ತುರ್ಕೊಗ್ಲು, ‘‘ರೆಮ್‌ಡೆಸಿವಿರ್‌ನೊಂದಿಗೆ ರಮೇಶ್ ಇಎಂ ದೇಶಿಗನ್ ಎಂಬ ವ್ಯಕ್ತಿಗೆ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಅಲ್ಲದೆ ವೈರಲ್ ಸಂದೇಶದಲ್ಲಿ ಇರುವ ತಮಿಳುನಾಡಿನ ರಾಶಿ ಇಂಟರ್‌ನ್ಯಾಷನಲ್‌ ಶಾಲೆಗೆ ಗಿಲ್ಯಾಡ್ ಯಾವುದೆ ದೇಣಿಗೆ ನೀಡಿಲ್ಲ, ವೈರಲ್ ಸಂದೇಶವು ಸಂಪೂರ್ಣವಾಗಿ ಸುಳ್ಳು ಎಂದು ಶಾಲೆಯ ಪ್ರಾಂಶುಪಾಲ ಡಾ. ಡಿ ವಿದ್ಯಾಸಾಗರ್ ಹೇಳಿದ್ದಾರೆ.

ಅಲ್ಲದೆ ರಾಶಿ ಇಂಟರ್‌ನ್ಯಾಷನಲ್ ಶಾಲೆಯನ್ನು 2008 ರಲ್ಲಿ ಸ್ಥಾಪಿಸಲಾಗಿದೆ. ವೈರಲ್ ಪೋಸ್ಟ್‌ನಲ್ಲಿ ರಮೇಶ್‌ ಗಿಲ್ಯಾಡ್‌ ಸಂಸ್ಥೆಯನ್ನು 2002 ರಲ್ಲಿ ಸೇರಿದರು ಎಂದು ಉಲ್ಲೇಖಿಸಲಾಗಿದೆ.

ಸ್ಪಷ್ಟವಾಗಿ ಹೇಳಬಹುದಾದರೆ, ಆಂಟಿವೈರಲ್ ಔಷಧಿಯಾದ ‘ರೆಮ್ಡೆಸಿವಿರ್’ ಸುತ್ತಲೂ ಹಬ್ಬುತ್ತಿರುವ ಈ ಸುದ್ದಿಗಳು ಸುಳ್ಳಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...