Homeಫ್ಯಾಕ್ಟ್‌ಚೆಕ್ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ...

ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

- Advertisement -
- Advertisement -

ಪ್ರಸ್ತುತ ಕೊರೊನಾ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ಆ್ಯಂಟಿ ವೈರಲ್ ಔಷಧಿಗೆ ‘ರೆಮ್‌ಡೆಸಿವಿರ್‌‌’(Remdesivir) ಎಂಬ ಹೆಸರನ್ನು ತಮಿಳುನಾಡು ಮೂಲದ ಭಾರತೀಯ ವಿಜ್ಞಾನಿಯಾದ ‘ರಮೇಶ್ ಇ.ಎಂ. ದೇಸಿಗನ್’ (Ramesh EM Desigan) ಅವರ ಗೌರವಾರ್ಥವಾಗಿ ಇಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಸಂದೇಶವೊಂದು ಹರಿದಾಡುತ್ತಿದೆ. ಆಯ

ಆದರೆ ರೆಮ್‌ಡೆಸಿವಿರ್‌ ಮೂಲ ಕಂಪನಿಯಾದ ‘ಗಿಲ್ಯಾಡ್‌ ಸೈನ್ಸಸ್’ ಅವರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪ್ರತಿಪಾದನೆ ನಿಜವಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

  • ರೆಮ್ಡೆಸಿವಿರ್ ಅನ್ನು ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸ್ ಅಭಿವೃದ್ಧಿಪಡಿಸಿದೆ. ಅಲ್ಲಿನ ಜೆಕ್ ವಿಜ್ಞಾನಿ ಥೋಮಸ್ ಸಿಹ್ಲರ್ ನೇತೃತ್ವದ ತಂಡವು ಎಬೋಲಾ ಚಿಕಿತ್ಸೆಗಾಗಿ ಈ ಔಷಧವನ್ನು ಕಂಡುಹಿಡಿದಿದೆ.
  • ಆ್ಯಂಟಿ ವೈರಲ್‌ ಔಷಧಕ್ಕೆ ಮೊದಲು ಎಬ್ಪಾಂಟುವಿರ್ (Ebpantuvir) ಎಂದು ಹೆಸರು ಇದ್ದು, ನಂತರ ಸಿಹ್ಲಾರ್ ತಂಡದ ಪ್ರಮುಖ ವಿಜ್ಞಾನಿ ‘ರಮೇಶ್ ಇ.ಎಂ. ದೇಸಿಗನ್’ ಅವರ ಗೌರವಾರ್ಥವಾಗಿ ‘ರೆಮ್‌ಡೆಸಿವಿರ್‌’ ಎಂದು ನಾಮಕರಣ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

  • ರಮೇಶ್ ತಮಿಳುನಾಡಿನ ರಾಸಿಪುರಂ ಮೂಲದವರಾಗಿದ್ದು, ಗಿಲ್ಯಾಡ್‌‌ನಲ್ಲಿ ಕೆಲಸ ಮಾಡಲು 2002 ರಲ್ಲಿ ಕ್ಯಾಲಿಫೋರ್ನಿಯಾಗೆ ತೆರಳಿದರು.
  • ರಮೇಶ್ ಇ.ಎಂ. ದೇಸಿಗನ್ ಅವರ ಗೌರವಾರ್ಥವಾಗಿ ತಮಿಳುನಾಡಿನಲ್ಲಿ ಅವರ ಕಲಿತ ಪ್ರಾಥಮಿಕ ಶಾಲೆ, ರಾಶಿ ಇಂಟರ್ನ್ಯಾಷನಲ್ ಸ್ಕೂಲ್‌ಗೆ ಗಿಲ್ಯಾಡ್‌ 2 ಮಿಲಿಯನ್ ದೇಣಿಗೆ ನೀಡಿದೆ.
ಅದರ ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಸಂದೇಶವು ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಸತ್ಯವೇನು?

ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸಸ್ ‘ರೆಮ್‌ಡೆಸಿವಿರ್‌’ ಔಷಧಿಯ ಮೂಲ ಕಂಪೆನಿಯಾಗಿದೆ ಎಂಬುದು ನಿಜವಾಗಿದೆ. ಗಿಲ್ಯಾಡ್‌ನ ವೆಬ್‌ಸೈಟ್‌ನಲ್ಲಿ ಈ ಔಷಧದ ಬೆಳವಣಿಗೆಯನ್ನು ವಿವರಿಸುವ ಡಾಕ್ಯುಮೆಂಟ್ ಅನ್ನು ಕೆಳಗೆ ನೋಡಬಹುದುದಾಗಿದೆ.

ಇದನ್ನೂ ಓದಿ: ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

2009 ರಲ್ಲಿ ಹೆಪಟೈಟಿಸ್ ಸಿ (ಎಚ್‌ಸಿವಿ) ಮತ್ತು ಉಸಿರಾಟದ ಸಿನ್ಸಿಟಿಯಲ್ ವೈರಸ್ (ಆರ್‌ಎಸ್‌ವಿ) ನ ಸಂಶೋಧನಾ ಕಾರ್ಯಕ್ರಮಗಳು ನಡೆಯುತ್ತಿದ್ದಾಗ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಸಂಶೋಧನೆಯು  ಪ್ರಾರಂಭವಾಯಿತು ಎಂದು ಡಾಕ್ಯುಮೆಂಟ್ ಉಲ್ಲೇಖಿಸುತ್ತದೆ. ತರುವಾಯ 2014 ರಲ್ಲಿ ಎಬೋಲಾ ಮತ್ತು ಇತ್ತೀಚೆಗೆ ಕೊರೊನಾ ವೈರಸ್ಗಾಗಿ ಈ ಔಷಧವನ್ನು ಪರೀಕ್ಷಿಸಲಾಯಿತು.

ಕಂಪನಿಯ ವೆಬ್‌ಸೈಟ್‌ನಲ್ಲಿ ‘Four Questions with Tomas Cihlar: The Field of Emerging Viruses’ ಎಂಬ ಶೀರ್ಷಿಕೆಯ ಮತ್ತೊಂದು ಲೇಖನದಲ್ಲಿ, ಥಾಮಸ್‌ ಸಿಹ್ಲರ್ ಅವರು ಗಿಲ್ಯಾಡ್‌ನ ಆಂಟಿವೈರಲ್ ಔಷಧದ ಸಂಶೋಧನೆಗೆ ಕಾರಣಕರ್ತರಾಗಿದ್ದು, ವೈರಾಲಜಿಯ ಉಪಾಧ್ಯಕ್ಷರಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ರೆಮ್‌ಡೆಸಿವಿರ್‌ ಔಷಧದ ಅಭಿವೃದ್ಧಿಗೆ ಅವರು ನೇತೃತ್ವ ವಹಿಸಿದ್ದಾರೆ.

ಆದರೆ ವೆಬ್‌ಸೈಟ್‌ನ ಲೇಖನದಲ್ಲಿ ‘ರಮೇಶ್ ಇಎಂ ದೇಸಿಗನ್’ ಬಗ್ಗೆ ಯಾವುದೇ ಉಲ್ಲೇಖ ಕಂಡುಬಂದಿಲ್ಲ. ಜೊತೆಗೆ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಮತ್ತು ಪ್ರಯೋಗಗಳಿಗೆ ಸಂಬಂಧಿಸಿದ ತಂಡದಲ್ಲಿ ‘ರಮೇಶ್ ಇಎಂ ದೇಶಿಗನ್’ ಎಂಬ ವ್ಯಕ್ತಿ ಇಲ್ಲ ಎಂದು ಕಂಪೆನಿಯು ದೃಡಪಡಿಸಿದೆ ಎಂದು ‘ದಿಕ್ವಿಂಟ್’ ವರದಿ ಮಾಡಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ಗಿಲ್ಯಾಡ್ ಸೈನ್ಸಸ್‌ನ ಸಾರ್ವಜನಿಕ ವ್ಯವಹಾರಗಳ ಹಿರಿಯ ನಿರ್ದೇಶಕ, ಬಹಾರ್ ತುರ್ಕೊಗ್ಲು, ‘‘ರೆಮ್‌ಡೆಸಿವಿರ್‌ನೊಂದಿಗೆ ರಮೇಶ್ ಇಎಂ ದೇಶಿಗನ್ ಎಂಬ ವ್ಯಕ್ತಿಗೆ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಅಲ್ಲದೆ ವೈರಲ್ ಸಂದೇಶದಲ್ಲಿ ಇರುವ ತಮಿಳುನಾಡಿನ ರಾಶಿ ಇಂಟರ್‌ನ್ಯಾಷನಲ್‌ ಶಾಲೆಗೆ ಗಿಲ್ಯಾಡ್ ಯಾವುದೆ ದೇಣಿಗೆ ನೀಡಿಲ್ಲ, ವೈರಲ್ ಸಂದೇಶವು ಸಂಪೂರ್ಣವಾಗಿ ಸುಳ್ಳು ಎಂದು ಶಾಲೆಯ ಪ್ರಾಂಶುಪಾಲ ಡಾ. ಡಿ ವಿದ್ಯಾಸಾಗರ್ ಹೇಳಿದ್ದಾರೆ.

ಅಲ್ಲದೆ ರಾಶಿ ಇಂಟರ್‌ನ್ಯಾಷನಲ್ ಶಾಲೆಯನ್ನು 2008 ರಲ್ಲಿ ಸ್ಥಾಪಿಸಲಾಗಿದೆ. ವೈರಲ್ ಪೋಸ್ಟ್‌ನಲ್ಲಿ ರಮೇಶ್‌ ಗಿಲ್ಯಾಡ್‌ ಸಂಸ್ಥೆಯನ್ನು 2002 ರಲ್ಲಿ ಸೇರಿದರು ಎಂದು ಉಲ್ಲೇಖಿಸಲಾಗಿದೆ.

ಸ್ಪಷ್ಟವಾಗಿ ಹೇಳಬಹುದಾದರೆ, ಆಂಟಿವೈರಲ್ ಔಷಧಿಯಾದ ‘ರೆಮ್ಡೆಸಿವಿರ್’ ಸುತ್ತಲೂ ಹಬ್ಬುತ್ತಿರುವ ಈ ಸುದ್ದಿಗಳು ಸುಳ್ಳಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...