Homeಫ್ಯಾಕ್ಟ್‌ಚೆಕ್ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ...

ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

- Advertisement -
- Advertisement -

ಪ್ರಸ್ತುತ ಕೊರೊನಾ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ಆ್ಯಂಟಿ ವೈರಲ್ ಔಷಧಿಗೆ ‘ರೆಮ್‌ಡೆಸಿವಿರ್‌‌’(Remdesivir) ಎಂಬ ಹೆಸರನ್ನು ತಮಿಳುನಾಡು ಮೂಲದ ಭಾರತೀಯ ವಿಜ್ಞಾನಿಯಾದ ‘ರಮೇಶ್ ಇ.ಎಂ. ದೇಸಿಗನ್’ (Ramesh EM Desigan) ಅವರ ಗೌರವಾರ್ಥವಾಗಿ ಇಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಸಂದೇಶವೊಂದು ಹರಿದಾಡುತ್ತಿದೆ. ಆಯ

ಆದರೆ ರೆಮ್‌ಡೆಸಿವಿರ್‌ ಮೂಲ ಕಂಪನಿಯಾದ ‘ಗಿಲ್ಯಾಡ್‌ ಸೈನ್ಸಸ್’ ಅವರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪ್ರತಿಪಾದನೆ ನಿಜವಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

  • ರೆಮ್ಡೆಸಿವಿರ್ ಅನ್ನು ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸ್ ಅಭಿವೃದ್ಧಿಪಡಿಸಿದೆ. ಅಲ್ಲಿನ ಜೆಕ್ ವಿಜ್ಞಾನಿ ಥೋಮಸ್ ಸಿಹ್ಲರ್ ನೇತೃತ್ವದ ತಂಡವು ಎಬೋಲಾ ಚಿಕಿತ್ಸೆಗಾಗಿ ಈ ಔಷಧವನ್ನು ಕಂಡುಹಿಡಿದಿದೆ.
  • ಆ್ಯಂಟಿ ವೈರಲ್‌ ಔಷಧಕ್ಕೆ ಮೊದಲು ಎಬ್ಪಾಂಟುವಿರ್ (Ebpantuvir) ಎಂದು ಹೆಸರು ಇದ್ದು, ನಂತರ ಸಿಹ್ಲಾರ್ ತಂಡದ ಪ್ರಮುಖ ವಿಜ್ಞಾನಿ ‘ರಮೇಶ್ ಇ.ಎಂ. ದೇಸಿಗನ್’ ಅವರ ಗೌರವಾರ್ಥವಾಗಿ ‘ರೆಮ್‌ಡೆಸಿವಿರ್‌’ ಎಂದು ನಾಮಕರಣ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

  • ರಮೇಶ್ ತಮಿಳುನಾಡಿನ ರಾಸಿಪುರಂ ಮೂಲದವರಾಗಿದ್ದು, ಗಿಲ್ಯಾಡ್‌‌ನಲ್ಲಿ ಕೆಲಸ ಮಾಡಲು 2002 ರಲ್ಲಿ ಕ್ಯಾಲಿಫೋರ್ನಿಯಾಗೆ ತೆರಳಿದರು.
  • ರಮೇಶ್ ಇ.ಎಂ. ದೇಸಿಗನ್ ಅವರ ಗೌರವಾರ್ಥವಾಗಿ ತಮಿಳುನಾಡಿನಲ್ಲಿ ಅವರ ಕಲಿತ ಪ್ರಾಥಮಿಕ ಶಾಲೆ, ರಾಶಿ ಇಂಟರ್ನ್ಯಾಷನಲ್ ಸ್ಕೂಲ್‌ಗೆ ಗಿಲ್ಯಾಡ್‌ 2 ಮಿಲಿಯನ್ ದೇಣಿಗೆ ನೀಡಿದೆ.
ಅದರ ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಸಂದೇಶವು ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಸತ್ಯವೇನು?

ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸಸ್ ‘ರೆಮ್‌ಡೆಸಿವಿರ್‌’ ಔಷಧಿಯ ಮೂಲ ಕಂಪೆನಿಯಾಗಿದೆ ಎಂಬುದು ನಿಜವಾಗಿದೆ. ಗಿಲ್ಯಾಡ್‌ನ ವೆಬ್‌ಸೈಟ್‌ನಲ್ಲಿ ಈ ಔಷಧದ ಬೆಳವಣಿಗೆಯನ್ನು ವಿವರಿಸುವ ಡಾಕ್ಯುಮೆಂಟ್ ಅನ್ನು ಕೆಳಗೆ ನೋಡಬಹುದುದಾಗಿದೆ.

ಇದನ್ನೂ ಓದಿ: ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

2009 ರಲ್ಲಿ ಹೆಪಟೈಟಿಸ್ ಸಿ (ಎಚ್‌ಸಿವಿ) ಮತ್ತು ಉಸಿರಾಟದ ಸಿನ್ಸಿಟಿಯಲ್ ವೈರಸ್ (ಆರ್‌ಎಸ್‌ವಿ) ನ ಸಂಶೋಧನಾ ಕಾರ್ಯಕ್ರಮಗಳು ನಡೆಯುತ್ತಿದ್ದಾಗ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಸಂಶೋಧನೆಯು  ಪ್ರಾರಂಭವಾಯಿತು ಎಂದು ಡಾಕ್ಯುಮೆಂಟ್ ಉಲ್ಲೇಖಿಸುತ್ತದೆ. ತರುವಾಯ 2014 ರಲ್ಲಿ ಎಬೋಲಾ ಮತ್ತು ಇತ್ತೀಚೆಗೆ ಕೊರೊನಾ ವೈರಸ್ಗಾಗಿ ಈ ಔಷಧವನ್ನು ಪರೀಕ್ಷಿಸಲಾಯಿತು.

ಕಂಪನಿಯ ವೆಬ್‌ಸೈಟ್‌ನಲ್ಲಿ ‘Four Questions with Tomas Cihlar: The Field of Emerging Viruses’ ಎಂಬ ಶೀರ್ಷಿಕೆಯ ಮತ್ತೊಂದು ಲೇಖನದಲ್ಲಿ, ಥಾಮಸ್‌ ಸಿಹ್ಲರ್ ಅವರು ಗಿಲ್ಯಾಡ್‌ನ ಆಂಟಿವೈರಲ್ ಔಷಧದ ಸಂಶೋಧನೆಗೆ ಕಾರಣಕರ್ತರಾಗಿದ್ದು, ವೈರಾಲಜಿಯ ಉಪಾಧ್ಯಕ್ಷರಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ರೆಮ್‌ಡೆಸಿವಿರ್‌ ಔಷಧದ ಅಭಿವೃದ್ಧಿಗೆ ಅವರು ನೇತೃತ್ವ ವಹಿಸಿದ್ದಾರೆ.

ಆದರೆ ವೆಬ್‌ಸೈಟ್‌ನ ಲೇಖನದಲ್ಲಿ ‘ರಮೇಶ್ ಇಎಂ ದೇಸಿಗನ್’ ಬಗ್ಗೆ ಯಾವುದೇ ಉಲ್ಲೇಖ ಕಂಡುಬಂದಿಲ್ಲ. ಜೊತೆಗೆ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಮತ್ತು ಪ್ರಯೋಗಗಳಿಗೆ ಸಂಬಂಧಿಸಿದ ತಂಡದಲ್ಲಿ ‘ರಮೇಶ್ ಇಎಂ ದೇಶಿಗನ್’ ಎಂಬ ವ್ಯಕ್ತಿ ಇಲ್ಲ ಎಂದು ಕಂಪೆನಿಯು ದೃಡಪಡಿಸಿದೆ ಎಂದು ‘ದಿಕ್ವಿಂಟ್’ ವರದಿ ಮಾಡಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ಗಿಲ್ಯಾಡ್ ಸೈನ್ಸಸ್‌ನ ಸಾರ್ವಜನಿಕ ವ್ಯವಹಾರಗಳ ಹಿರಿಯ ನಿರ್ದೇಶಕ, ಬಹಾರ್ ತುರ್ಕೊಗ್ಲು, ‘‘ರೆಮ್‌ಡೆಸಿವಿರ್‌ನೊಂದಿಗೆ ರಮೇಶ್ ಇಎಂ ದೇಶಿಗನ್ ಎಂಬ ವ್ಯಕ್ತಿಗೆ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಅಲ್ಲದೆ ವೈರಲ್ ಸಂದೇಶದಲ್ಲಿ ಇರುವ ತಮಿಳುನಾಡಿನ ರಾಶಿ ಇಂಟರ್‌ನ್ಯಾಷನಲ್‌ ಶಾಲೆಗೆ ಗಿಲ್ಯಾಡ್ ಯಾವುದೆ ದೇಣಿಗೆ ನೀಡಿಲ್ಲ, ವೈರಲ್ ಸಂದೇಶವು ಸಂಪೂರ್ಣವಾಗಿ ಸುಳ್ಳು ಎಂದು ಶಾಲೆಯ ಪ್ರಾಂಶುಪಾಲ ಡಾ. ಡಿ ವಿದ್ಯಾಸಾಗರ್ ಹೇಳಿದ್ದಾರೆ.

ಅಲ್ಲದೆ ರಾಶಿ ಇಂಟರ್‌ನ್ಯಾಷನಲ್ ಶಾಲೆಯನ್ನು 2008 ರಲ್ಲಿ ಸ್ಥಾಪಿಸಲಾಗಿದೆ. ವೈರಲ್ ಪೋಸ್ಟ್‌ನಲ್ಲಿ ರಮೇಶ್‌ ಗಿಲ್ಯಾಡ್‌ ಸಂಸ್ಥೆಯನ್ನು 2002 ರಲ್ಲಿ ಸೇರಿದರು ಎಂದು ಉಲ್ಲೇಖಿಸಲಾಗಿದೆ.

ಸ್ಪಷ್ಟವಾಗಿ ಹೇಳಬಹುದಾದರೆ, ಆಂಟಿವೈರಲ್ ಔಷಧಿಯಾದ ‘ರೆಮ್ಡೆಸಿವಿರ್’ ಸುತ್ತಲೂ ಹಬ್ಬುತ್ತಿರುವ ಈ ಸುದ್ದಿಗಳು ಸುಳ್ಳಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...