Homeಫ್ಯಾಕ್ಟ್‌ಚೆಕ್ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ...

ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

- Advertisement -
- Advertisement -

ಪ್ರಸ್ತುತ ಕೊರೊನಾ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ಆ್ಯಂಟಿ ವೈರಲ್ ಔಷಧಿಗೆ ‘ರೆಮ್‌ಡೆಸಿವಿರ್‌‌’(Remdesivir) ಎಂಬ ಹೆಸರನ್ನು ತಮಿಳುನಾಡು ಮೂಲದ ಭಾರತೀಯ ವಿಜ್ಞಾನಿಯಾದ ‘ರಮೇಶ್ ಇ.ಎಂ. ದೇಸಿಗನ್’ (Ramesh EM Desigan) ಅವರ ಗೌರವಾರ್ಥವಾಗಿ ಇಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಸಂದೇಶವೊಂದು ಹರಿದಾಡುತ್ತಿದೆ. ಆಯ

ಆದರೆ ರೆಮ್‌ಡೆಸಿವಿರ್‌ ಮೂಲ ಕಂಪನಿಯಾದ ‘ಗಿಲ್ಯಾಡ್‌ ಸೈನ್ಸಸ್’ ಅವರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪ್ರತಿಪಾದನೆ ನಿಜವಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

  • ರೆಮ್ಡೆಸಿವಿರ್ ಅನ್ನು ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸ್ ಅಭಿವೃದ್ಧಿಪಡಿಸಿದೆ. ಅಲ್ಲಿನ ಜೆಕ್ ವಿಜ್ಞಾನಿ ಥೋಮಸ್ ಸಿಹ್ಲರ್ ನೇತೃತ್ವದ ತಂಡವು ಎಬೋಲಾ ಚಿಕಿತ್ಸೆಗಾಗಿ ಈ ಔಷಧವನ್ನು ಕಂಡುಹಿಡಿದಿದೆ.
  • ಆ್ಯಂಟಿ ವೈರಲ್‌ ಔಷಧಕ್ಕೆ ಮೊದಲು ಎಬ್ಪಾಂಟುವಿರ್ (Ebpantuvir) ಎಂದು ಹೆಸರು ಇದ್ದು, ನಂತರ ಸಿಹ್ಲಾರ್ ತಂಡದ ಪ್ರಮುಖ ವಿಜ್ಞಾನಿ ‘ರಮೇಶ್ ಇ.ಎಂ. ದೇಸಿಗನ್’ ಅವರ ಗೌರವಾರ್ಥವಾಗಿ ‘ರೆಮ್‌ಡೆಸಿವಿರ್‌’ ಎಂದು ನಾಮಕರಣ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

  • ರಮೇಶ್ ತಮಿಳುನಾಡಿನ ರಾಸಿಪುರಂ ಮೂಲದವರಾಗಿದ್ದು, ಗಿಲ್ಯಾಡ್‌‌ನಲ್ಲಿ ಕೆಲಸ ಮಾಡಲು 2002 ರಲ್ಲಿ ಕ್ಯಾಲಿಫೋರ್ನಿಯಾಗೆ ತೆರಳಿದರು.
  • ರಮೇಶ್ ಇ.ಎಂ. ದೇಸಿಗನ್ ಅವರ ಗೌರವಾರ್ಥವಾಗಿ ತಮಿಳುನಾಡಿನಲ್ಲಿ ಅವರ ಕಲಿತ ಪ್ರಾಥಮಿಕ ಶಾಲೆ, ರಾಶಿ ಇಂಟರ್ನ್ಯಾಷನಲ್ ಸ್ಕೂಲ್‌ಗೆ ಗಿಲ್ಯಾಡ್‌ 2 ಮಿಲಿಯನ್ ದೇಣಿಗೆ ನೀಡಿದೆ.
ಅದರ ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಸಂದೇಶವು ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಸತ್ಯವೇನು?

ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸಸ್ ‘ರೆಮ್‌ಡೆಸಿವಿರ್‌’ ಔಷಧಿಯ ಮೂಲ ಕಂಪೆನಿಯಾಗಿದೆ ಎಂಬುದು ನಿಜವಾಗಿದೆ. ಗಿಲ್ಯಾಡ್‌ನ ವೆಬ್‌ಸೈಟ್‌ನಲ್ಲಿ ಈ ಔಷಧದ ಬೆಳವಣಿಗೆಯನ್ನು ವಿವರಿಸುವ ಡಾಕ್ಯುಮೆಂಟ್ ಅನ್ನು ಕೆಳಗೆ ನೋಡಬಹುದುದಾಗಿದೆ.

ಇದನ್ನೂ ಓದಿ: ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

2009 ರಲ್ಲಿ ಹೆಪಟೈಟಿಸ್ ಸಿ (ಎಚ್‌ಸಿವಿ) ಮತ್ತು ಉಸಿರಾಟದ ಸಿನ್ಸಿಟಿಯಲ್ ವೈರಸ್ (ಆರ್‌ಎಸ್‌ವಿ) ನ ಸಂಶೋಧನಾ ಕಾರ್ಯಕ್ರಮಗಳು ನಡೆಯುತ್ತಿದ್ದಾಗ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಸಂಶೋಧನೆಯು  ಪ್ರಾರಂಭವಾಯಿತು ಎಂದು ಡಾಕ್ಯುಮೆಂಟ್ ಉಲ್ಲೇಖಿಸುತ್ತದೆ. ತರುವಾಯ 2014 ರಲ್ಲಿ ಎಬೋಲಾ ಮತ್ತು ಇತ್ತೀಚೆಗೆ ಕೊರೊನಾ ವೈರಸ್ಗಾಗಿ ಈ ಔಷಧವನ್ನು ಪರೀಕ್ಷಿಸಲಾಯಿತು.

ಕಂಪನಿಯ ವೆಬ್‌ಸೈಟ್‌ನಲ್ಲಿ ‘Four Questions with Tomas Cihlar: The Field of Emerging Viruses’ ಎಂಬ ಶೀರ್ಷಿಕೆಯ ಮತ್ತೊಂದು ಲೇಖನದಲ್ಲಿ, ಥಾಮಸ್‌ ಸಿಹ್ಲರ್ ಅವರು ಗಿಲ್ಯಾಡ್‌ನ ಆಂಟಿವೈರಲ್ ಔಷಧದ ಸಂಶೋಧನೆಗೆ ಕಾರಣಕರ್ತರಾಗಿದ್ದು, ವೈರಾಲಜಿಯ ಉಪಾಧ್ಯಕ್ಷರಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ರೆಮ್‌ಡೆಸಿವಿರ್‌ ಔಷಧದ ಅಭಿವೃದ್ಧಿಗೆ ಅವರು ನೇತೃತ್ವ ವಹಿಸಿದ್ದಾರೆ.

ಆದರೆ ವೆಬ್‌ಸೈಟ್‌ನ ಲೇಖನದಲ್ಲಿ ‘ರಮೇಶ್ ಇಎಂ ದೇಸಿಗನ್’ ಬಗ್ಗೆ ಯಾವುದೇ ಉಲ್ಲೇಖ ಕಂಡುಬಂದಿಲ್ಲ. ಜೊತೆಗೆ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಮತ್ತು ಪ್ರಯೋಗಗಳಿಗೆ ಸಂಬಂಧಿಸಿದ ತಂಡದಲ್ಲಿ ‘ರಮೇಶ್ ಇಎಂ ದೇಶಿಗನ್’ ಎಂಬ ವ್ಯಕ್ತಿ ಇಲ್ಲ ಎಂದು ಕಂಪೆನಿಯು ದೃಡಪಡಿಸಿದೆ ಎಂದು ‘ದಿಕ್ವಿಂಟ್’ ವರದಿ ಮಾಡಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ಗಿಲ್ಯಾಡ್ ಸೈನ್ಸಸ್‌ನ ಸಾರ್ವಜನಿಕ ವ್ಯವಹಾರಗಳ ಹಿರಿಯ ನಿರ್ದೇಶಕ, ಬಹಾರ್ ತುರ್ಕೊಗ್ಲು, ‘‘ರೆಮ್‌ಡೆಸಿವಿರ್‌ನೊಂದಿಗೆ ರಮೇಶ್ ಇಎಂ ದೇಶಿಗನ್ ಎಂಬ ವ್ಯಕ್ತಿಗೆ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಅಲ್ಲದೆ ವೈರಲ್ ಸಂದೇಶದಲ್ಲಿ ಇರುವ ತಮಿಳುನಾಡಿನ ರಾಶಿ ಇಂಟರ್‌ನ್ಯಾಷನಲ್‌ ಶಾಲೆಗೆ ಗಿಲ್ಯಾಡ್ ಯಾವುದೆ ದೇಣಿಗೆ ನೀಡಿಲ್ಲ, ವೈರಲ್ ಸಂದೇಶವು ಸಂಪೂರ್ಣವಾಗಿ ಸುಳ್ಳು ಎಂದು ಶಾಲೆಯ ಪ್ರಾಂಶುಪಾಲ ಡಾ. ಡಿ ವಿದ್ಯಾಸಾಗರ್ ಹೇಳಿದ್ದಾರೆ.

ಅಲ್ಲದೆ ರಾಶಿ ಇಂಟರ್‌ನ್ಯಾಷನಲ್ ಶಾಲೆಯನ್ನು 2008 ರಲ್ಲಿ ಸ್ಥಾಪಿಸಲಾಗಿದೆ. ವೈರಲ್ ಪೋಸ್ಟ್‌ನಲ್ಲಿ ರಮೇಶ್‌ ಗಿಲ್ಯಾಡ್‌ ಸಂಸ್ಥೆಯನ್ನು 2002 ರಲ್ಲಿ ಸೇರಿದರು ಎಂದು ಉಲ್ಲೇಖಿಸಲಾಗಿದೆ.

ಸ್ಪಷ್ಟವಾಗಿ ಹೇಳಬಹುದಾದರೆ, ಆಂಟಿವೈರಲ್ ಔಷಧಿಯಾದ ‘ರೆಮ್ಡೆಸಿವಿರ್’ ಸುತ್ತಲೂ ಹಬ್ಬುತ್ತಿರುವ ಈ ಸುದ್ದಿಗಳು ಸುಳ್ಳಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...