Homeಫ್ಯಾಕ್ಟ್‌ಚೆಕ್ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ...

ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

- Advertisement -
- Advertisement -

ಪ್ರಸ್ತುತ ಕೊರೊನಾ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ಆ್ಯಂಟಿ ವೈರಲ್ ಔಷಧಿಗೆ ‘ರೆಮ್‌ಡೆಸಿವಿರ್‌‌’(Remdesivir) ಎಂಬ ಹೆಸರನ್ನು ತಮಿಳುನಾಡು ಮೂಲದ ಭಾರತೀಯ ವಿಜ್ಞಾನಿಯಾದ ‘ರಮೇಶ್ ಇ.ಎಂ. ದೇಸಿಗನ್’ (Ramesh EM Desigan) ಅವರ ಗೌರವಾರ್ಥವಾಗಿ ಇಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಸಂದೇಶವೊಂದು ಹರಿದಾಡುತ್ತಿದೆ. ಆಯ

ಆದರೆ ರೆಮ್‌ಡೆಸಿವಿರ್‌ ಮೂಲ ಕಂಪನಿಯಾದ ‘ಗಿಲ್ಯಾಡ್‌ ಸೈನ್ಸಸ್’ ಅವರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪ್ರತಿಪಾದನೆ ನಿಜವಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

  • ರೆಮ್ಡೆಸಿವಿರ್ ಅನ್ನು ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸ್ ಅಭಿವೃದ್ಧಿಪಡಿಸಿದೆ. ಅಲ್ಲಿನ ಜೆಕ್ ವಿಜ್ಞಾನಿ ಥೋಮಸ್ ಸಿಹ್ಲರ್ ನೇತೃತ್ವದ ತಂಡವು ಎಬೋಲಾ ಚಿಕಿತ್ಸೆಗಾಗಿ ಈ ಔಷಧವನ್ನು ಕಂಡುಹಿಡಿದಿದೆ.
  • ಆ್ಯಂಟಿ ವೈರಲ್‌ ಔಷಧಕ್ಕೆ ಮೊದಲು ಎಬ್ಪಾಂಟುವಿರ್ (Ebpantuvir) ಎಂದು ಹೆಸರು ಇದ್ದು, ನಂತರ ಸಿಹ್ಲಾರ್ ತಂಡದ ಪ್ರಮುಖ ವಿಜ್ಞಾನಿ ‘ರಮೇಶ್ ಇ.ಎಂ. ದೇಸಿಗನ್’ ಅವರ ಗೌರವಾರ್ಥವಾಗಿ ‘ರೆಮ್‌ಡೆಸಿವಿರ್‌’ ಎಂದು ನಾಮಕರಣ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

  • ರಮೇಶ್ ತಮಿಳುನಾಡಿನ ರಾಸಿಪುರಂ ಮೂಲದವರಾಗಿದ್ದು, ಗಿಲ್ಯಾಡ್‌‌ನಲ್ಲಿ ಕೆಲಸ ಮಾಡಲು 2002 ರಲ್ಲಿ ಕ್ಯಾಲಿಫೋರ್ನಿಯಾಗೆ ತೆರಳಿದರು.
  • ರಮೇಶ್ ಇ.ಎಂ. ದೇಸಿಗನ್ ಅವರ ಗೌರವಾರ್ಥವಾಗಿ ತಮಿಳುನಾಡಿನಲ್ಲಿ ಅವರ ಕಲಿತ ಪ್ರಾಥಮಿಕ ಶಾಲೆ, ರಾಶಿ ಇಂಟರ್ನ್ಯಾಷನಲ್ ಸ್ಕೂಲ್‌ಗೆ ಗಿಲ್ಯಾಡ್‌ 2 ಮಿಲಿಯನ್ ದೇಣಿಗೆ ನೀಡಿದೆ.
ಅದರ ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಸಂದೇಶವು ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಸತ್ಯವೇನು?

ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸಸ್ ‘ರೆಮ್‌ಡೆಸಿವಿರ್‌’ ಔಷಧಿಯ ಮೂಲ ಕಂಪೆನಿಯಾಗಿದೆ ಎಂಬುದು ನಿಜವಾಗಿದೆ. ಗಿಲ್ಯಾಡ್‌ನ ವೆಬ್‌ಸೈಟ್‌ನಲ್ಲಿ ಈ ಔಷಧದ ಬೆಳವಣಿಗೆಯನ್ನು ವಿವರಿಸುವ ಡಾಕ್ಯುಮೆಂಟ್ ಅನ್ನು ಕೆಳಗೆ ನೋಡಬಹುದುದಾಗಿದೆ.

ಇದನ್ನೂ ಓದಿ: ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

2009 ರಲ್ಲಿ ಹೆಪಟೈಟಿಸ್ ಸಿ (ಎಚ್‌ಸಿವಿ) ಮತ್ತು ಉಸಿರಾಟದ ಸಿನ್ಸಿಟಿಯಲ್ ವೈರಸ್ (ಆರ್‌ಎಸ್‌ವಿ) ನ ಸಂಶೋಧನಾ ಕಾರ್ಯಕ್ರಮಗಳು ನಡೆಯುತ್ತಿದ್ದಾಗ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಸಂಶೋಧನೆಯು  ಪ್ರಾರಂಭವಾಯಿತು ಎಂದು ಡಾಕ್ಯುಮೆಂಟ್ ಉಲ್ಲೇಖಿಸುತ್ತದೆ. ತರುವಾಯ 2014 ರಲ್ಲಿ ಎಬೋಲಾ ಮತ್ತು ಇತ್ತೀಚೆಗೆ ಕೊರೊನಾ ವೈರಸ್ಗಾಗಿ ಈ ಔಷಧವನ್ನು ಪರೀಕ್ಷಿಸಲಾಯಿತು.

ಕಂಪನಿಯ ವೆಬ್‌ಸೈಟ್‌ನಲ್ಲಿ ‘Four Questions with Tomas Cihlar: The Field of Emerging Viruses’ ಎಂಬ ಶೀರ್ಷಿಕೆಯ ಮತ್ತೊಂದು ಲೇಖನದಲ್ಲಿ, ಥಾಮಸ್‌ ಸಿಹ್ಲರ್ ಅವರು ಗಿಲ್ಯಾಡ್‌ನ ಆಂಟಿವೈರಲ್ ಔಷಧದ ಸಂಶೋಧನೆಗೆ ಕಾರಣಕರ್ತರಾಗಿದ್ದು, ವೈರಾಲಜಿಯ ಉಪಾಧ್ಯಕ್ಷರಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ರೆಮ್‌ಡೆಸಿವಿರ್‌ ಔಷಧದ ಅಭಿವೃದ್ಧಿಗೆ ಅವರು ನೇತೃತ್ವ ವಹಿಸಿದ್ದಾರೆ.

ಆದರೆ ವೆಬ್‌ಸೈಟ್‌ನ ಲೇಖನದಲ್ಲಿ ‘ರಮೇಶ್ ಇಎಂ ದೇಸಿಗನ್’ ಬಗ್ಗೆ ಯಾವುದೇ ಉಲ್ಲೇಖ ಕಂಡುಬಂದಿಲ್ಲ. ಜೊತೆಗೆ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಮತ್ತು ಪ್ರಯೋಗಗಳಿಗೆ ಸಂಬಂಧಿಸಿದ ತಂಡದಲ್ಲಿ ‘ರಮೇಶ್ ಇಎಂ ದೇಶಿಗನ್’ ಎಂಬ ವ್ಯಕ್ತಿ ಇಲ್ಲ ಎಂದು ಕಂಪೆನಿಯು ದೃಡಪಡಿಸಿದೆ ಎಂದು ‘ದಿಕ್ವಿಂಟ್’ ವರದಿ ಮಾಡಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ಗಿಲ್ಯಾಡ್ ಸೈನ್ಸಸ್‌ನ ಸಾರ್ವಜನಿಕ ವ್ಯವಹಾರಗಳ ಹಿರಿಯ ನಿರ್ದೇಶಕ, ಬಹಾರ್ ತುರ್ಕೊಗ್ಲು, ‘‘ರೆಮ್‌ಡೆಸಿವಿರ್‌ನೊಂದಿಗೆ ರಮೇಶ್ ಇಎಂ ದೇಶಿಗನ್ ಎಂಬ ವ್ಯಕ್ತಿಗೆ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಅಲ್ಲದೆ ವೈರಲ್ ಸಂದೇಶದಲ್ಲಿ ಇರುವ ತಮಿಳುನಾಡಿನ ರಾಶಿ ಇಂಟರ್‌ನ್ಯಾಷನಲ್‌ ಶಾಲೆಗೆ ಗಿಲ್ಯಾಡ್ ಯಾವುದೆ ದೇಣಿಗೆ ನೀಡಿಲ್ಲ, ವೈರಲ್ ಸಂದೇಶವು ಸಂಪೂರ್ಣವಾಗಿ ಸುಳ್ಳು ಎಂದು ಶಾಲೆಯ ಪ್ರಾಂಶುಪಾಲ ಡಾ. ಡಿ ವಿದ್ಯಾಸಾಗರ್ ಹೇಳಿದ್ದಾರೆ.

ಅಲ್ಲದೆ ರಾಶಿ ಇಂಟರ್‌ನ್ಯಾಷನಲ್ ಶಾಲೆಯನ್ನು 2008 ರಲ್ಲಿ ಸ್ಥಾಪಿಸಲಾಗಿದೆ. ವೈರಲ್ ಪೋಸ್ಟ್‌ನಲ್ಲಿ ರಮೇಶ್‌ ಗಿಲ್ಯಾಡ್‌ ಸಂಸ್ಥೆಯನ್ನು 2002 ರಲ್ಲಿ ಸೇರಿದರು ಎಂದು ಉಲ್ಲೇಖಿಸಲಾಗಿದೆ.

ಸ್ಪಷ್ಟವಾಗಿ ಹೇಳಬಹುದಾದರೆ, ಆಂಟಿವೈರಲ್ ಔಷಧಿಯಾದ ‘ರೆಮ್ಡೆಸಿವಿರ್’ ಸುತ್ತಲೂ ಹಬ್ಬುತ್ತಿರುವ ಈ ಸುದ್ದಿಗಳು ಸುಳ್ಳಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...