Homeಫ್ಯಾಕ್ಟ್‌ಚೆಕ್ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ...

ಭಾರತೀಯ ವಿಜ್ಞಾನಿ ‘Ramesh EM Desigan’ ಗೌರವಾರ್ಥ ಆ್ಯಂಟಿ ವೈರಲ್‌ ಲಸಿಕೆಗೆ ‘Remdesivir’ ಎಂದು ನಾಮಕರಣ ಮಾಡಲಾಯಿತೆ?

- Advertisement -
- Advertisement -

ಪ್ರಸ್ತುತ ಕೊರೊನಾ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ಆ್ಯಂಟಿ ವೈರಲ್ ಔಷಧಿಗೆ ‘ರೆಮ್‌ಡೆಸಿವಿರ್‌‌’(Remdesivir) ಎಂಬ ಹೆಸರನ್ನು ತಮಿಳುನಾಡು ಮೂಲದ ಭಾರತೀಯ ವಿಜ್ಞಾನಿಯಾದ ‘ರಮೇಶ್ ಇ.ಎಂ. ದೇಸಿಗನ್’ (Ramesh EM Desigan) ಅವರ ಗೌರವಾರ್ಥವಾಗಿ ಇಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಸಂದೇಶವೊಂದು ಹರಿದಾಡುತ್ತಿದೆ. ಆಯ

ಆದರೆ ರೆಮ್‌ಡೆಸಿವಿರ್‌ ಮೂಲ ಕಂಪನಿಯಾದ ‘ಗಿಲ್ಯಾಡ್‌ ಸೈನ್ಸಸ್’ ಅವರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪ್ರತಿಪಾದನೆ ನಿಜವಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

  • ರೆಮ್ಡೆಸಿವಿರ್ ಅನ್ನು ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸ್ ಅಭಿವೃದ್ಧಿಪಡಿಸಿದೆ. ಅಲ್ಲಿನ ಜೆಕ್ ವಿಜ್ಞಾನಿ ಥೋಮಸ್ ಸಿಹ್ಲರ್ ನೇತೃತ್ವದ ತಂಡವು ಎಬೋಲಾ ಚಿಕಿತ್ಸೆಗಾಗಿ ಈ ಔಷಧವನ್ನು ಕಂಡುಹಿಡಿದಿದೆ.
  • ಆ್ಯಂಟಿ ವೈರಲ್‌ ಔಷಧಕ್ಕೆ ಮೊದಲು ಎಬ್ಪಾಂಟುವಿರ್ (Ebpantuvir) ಎಂದು ಹೆಸರು ಇದ್ದು, ನಂತರ ಸಿಹ್ಲಾರ್ ತಂಡದ ಪ್ರಮುಖ ವಿಜ್ಞಾನಿ ‘ರಮೇಶ್ ಇ.ಎಂ. ದೇಸಿಗನ್’ ಅವರ ಗೌರವಾರ್ಥವಾಗಿ ‘ರೆಮ್‌ಡೆಸಿವಿರ್‌’ ಎಂದು ನಾಮಕರಣ ಮಾಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

  • ರಮೇಶ್ ತಮಿಳುನಾಡಿನ ರಾಸಿಪುರಂ ಮೂಲದವರಾಗಿದ್ದು, ಗಿಲ್ಯಾಡ್‌‌ನಲ್ಲಿ ಕೆಲಸ ಮಾಡಲು 2002 ರಲ್ಲಿ ಕ್ಯಾಲಿಫೋರ್ನಿಯಾಗೆ ತೆರಳಿದರು.
  • ರಮೇಶ್ ಇ.ಎಂ. ದೇಸಿಗನ್ ಅವರ ಗೌರವಾರ್ಥವಾಗಿ ತಮಿಳುನಾಡಿನಲ್ಲಿ ಅವರ ಕಲಿತ ಪ್ರಾಥಮಿಕ ಶಾಲೆ, ರಾಶಿ ಇಂಟರ್ನ್ಯಾಷನಲ್ ಸ್ಕೂಲ್‌ಗೆ ಗಿಲ್ಯಾಡ್‌ 2 ಮಿಲಿಯನ್ ದೇಣಿಗೆ ನೀಡಿದೆ.
ಅದರ ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಸಂದೇಶವು ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಸತ್ಯವೇನು?

ಕ್ಯಾಲಿಫೋರ್ನಿಯಾ ಮೂಲದ ಗಿಲ್ಯಾಡ್ ಸೈನ್ಸಸ್ ‘ರೆಮ್‌ಡೆಸಿವಿರ್‌’ ಔಷಧಿಯ ಮೂಲ ಕಂಪೆನಿಯಾಗಿದೆ ಎಂಬುದು ನಿಜವಾಗಿದೆ. ಗಿಲ್ಯಾಡ್‌ನ ವೆಬ್‌ಸೈಟ್‌ನಲ್ಲಿ ಈ ಔಷಧದ ಬೆಳವಣಿಗೆಯನ್ನು ವಿವರಿಸುವ ಡಾಕ್ಯುಮೆಂಟ್ ಅನ್ನು ಕೆಳಗೆ ನೋಡಬಹುದುದಾಗಿದೆ.

ಇದನ್ನೂ ಓದಿ: ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

2009 ರಲ್ಲಿ ಹೆಪಟೈಟಿಸ್ ಸಿ (ಎಚ್‌ಸಿವಿ) ಮತ್ತು ಉಸಿರಾಟದ ಸಿನ್ಸಿಟಿಯಲ್ ವೈರಸ್ (ಆರ್‌ಎಸ್‌ವಿ) ನ ಸಂಶೋಧನಾ ಕಾರ್ಯಕ್ರಮಗಳು ನಡೆಯುತ್ತಿದ್ದಾಗ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಸಂಶೋಧನೆಯು  ಪ್ರಾರಂಭವಾಯಿತು ಎಂದು ಡಾಕ್ಯುಮೆಂಟ್ ಉಲ್ಲೇಖಿಸುತ್ತದೆ. ತರುವಾಯ 2014 ರಲ್ಲಿ ಎಬೋಲಾ ಮತ್ತು ಇತ್ತೀಚೆಗೆ ಕೊರೊನಾ ವೈರಸ್ಗಾಗಿ ಈ ಔಷಧವನ್ನು ಪರೀಕ್ಷಿಸಲಾಯಿತು.

ಕಂಪನಿಯ ವೆಬ್‌ಸೈಟ್‌ನಲ್ಲಿ ‘Four Questions with Tomas Cihlar: The Field of Emerging Viruses’ ಎಂಬ ಶೀರ್ಷಿಕೆಯ ಮತ್ತೊಂದು ಲೇಖನದಲ್ಲಿ, ಥಾಮಸ್‌ ಸಿಹ್ಲರ್ ಅವರು ಗಿಲ್ಯಾಡ್‌ನ ಆಂಟಿವೈರಲ್ ಔಷಧದ ಸಂಶೋಧನೆಗೆ ಕಾರಣಕರ್ತರಾಗಿದ್ದು, ವೈರಾಲಜಿಯ ಉಪಾಧ್ಯಕ್ಷರಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ರೆಮ್‌ಡೆಸಿವಿರ್‌ ಔಷಧದ ಅಭಿವೃದ್ಧಿಗೆ ಅವರು ನೇತೃತ್ವ ವಹಿಸಿದ್ದಾರೆ.

ಆದರೆ ವೆಬ್‌ಸೈಟ್‌ನ ಲೇಖನದಲ್ಲಿ ‘ರಮೇಶ್ ಇಎಂ ದೇಸಿಗನ್’ ಬಗ್ಗೆ ಯಾವುದೇ ಉಲ್ಲೇಖ ಕಂಡುಬಂದಿಲ್ಲ. ಜೊತೆಗೆ ರೆಮ್‌ಡೆಸಿವಿರ್‌‌ನ ಅಭಿವೃದ್ದಿ ಮತ್ತು ಪ್ರಯೋಗಗಳಿಗೆ ಸಂಬಂಧಿಸಿದ ತಂಡದಲ್ಲಿ ‘ರಮೇಶ್ ಇಎಂ ದೇಶಿಗನ್’ ಎಂಬ ವ್ಯಕ್ತಿ ಇಲ್ಲ ಎಂದು ಕಂಪೆನಿಯು ದೃಡಪಡಿಸಿದೆ ಎಂದು ‘ದಿಕ್ವಿಂಟ್’ ವರದಿ ಮಾಡಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ಗಿಲ್ಯಾಡ್ ಸೈನ್ಸಸ್‌ನ ಸಾರ್ವಜನಿಕ ವ್ಯವಹಾರಗಳ ಹಿರಿಯ ನಿರ್ದೇಶಕ, ಬಹಾರ್ ತುರ್ಕೊಗ್ಲು, ‘‘ರೆಮ್‌ಡೆಸಿವಿರ್‌ನೊಂದಿಗೆ ರಮೇಶ್ ಇಎಂ ದೇಶಿಗನ್ ಎಂಬ ವ್ಯಕ್ತಿಗೆ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಅಲ್ಲದೆ ವೈರಲ್ ಸಂದೇಶದಲ್ಲಿ ಇರುವ ತಮಿಳುನಾಡಿನ ರಾಶಿ ಇಂಟರ್‌ನ್ಯಾಷನಲ್‌ ಶಾಲೆಗೆ ಗಿಲ್ಯಾಡ್ ಯಾವುದೆ ದೇಣಿಗೆ ನೀಡಿಲ್ಲ, ವೈರಲ್ ಸಂದೇಶವು ಸಂಪೂರ್ಣವಾಗಿ ಸುಳ್ಳು ಎಂದು ಶಾಲೆಯ ಪ್ರಾಂಶುಪಾಲ ಡಾ. ಡಿ ವಿದ್ಯಾಸಾಗರ್ ಹೇಳಿದ್ದಾರೆ.

ಅಲ್ಲದೆ ರಾಶಿ ಇಂಟರ್‌ನ್ಯಾಷನಲ್ ಶಾಲೆಯನ್ನು 2008 ರಲ್ಲಿ ಸ್ಥಾಪಿಸಲಾಗಿದೆ. ವೈರಲ್ ಪೋಸ್ಟ್‌ನಲ್ಲಿ ರಮೇಶ್‌ ಗಿಲ್ಯಾಡ್‌ ಸಂಸ್ಥೆಯನ್ನು 2002 ರಲ್ಲಿ ಸೇರಿದರು ಎಂದು ಉಲ್ಲೇಖಿಸಲಾಗಿದೆ.

ಸ್ಪಷ್ಟವಾಗಿ ಹೇಳಬಹುದಾದರೆ, ಆಂಟಿವೈರಲ್ ಔಷಧಿಯಾದ ‘ರೆಮ್ಡೆಸಿವಿರ್’ ಸುತ್ತಲೂ ಹಬ್ಬುತ್ತಿರುವ ಈ ಸುದ್ದಿಗಳು ಸುಳ್ಳಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...