Homeಮುಖಪುಟಜಾಹೀರಾತಿಗೆ ಸ್ಪಷ್ಟನೆ ನೀಡಿ ತನ್ನ ನಿಲುವನ್ನು ತಾನೇ ಉಲ್ಲಂಘಿಸಿತೆ ‘ಎಕ್ಸ್‌ಪ್ರೆಸ್‌’?

ಜಾಹೀರಾತಿಗೆ ಸ್ಪಷ್ಟನೆ ನೀಡಿ ತನ್ನ ನಿಲುವನ್ನು ತಾನೇ ಉಲ್ಲಂಘಿಸಿತೆ ‘ಎಕ್ಸ್‌ಪ್ರೆಸ್‌’?

ಜಾಹೀರಾತಿಗೂ ಹಾಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು 2019ರಲ್ಲಿ ಘೋಷಿಸಿಕೊಂಡಿದ್ದ "ಇಂಡಿಯನ್ ಎಕ್ಸ್‌ಪ್ರೆಸ್‌"- ದಿ ವೈರ್ ಜಾಲತಾಣದ ವರದಿಯಲ್ಲಿ ಉಲ್ಲೇಖ

- Advertisement -
- Advertisement -

ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಭಾನುವಾರದ ಆವೃತ್ತಿಯಾದ ‘ದಿ ಸಂಡೇ ಎಕ್ಸ್‌ಪ್ರೆಸ್‌’ನಲ್ಲಿ ಪ್ರಕಟವಾಗಿರುವ ಉತ್ತರ ಪ್ರದೇಶ ಸರ್ಕಾರದ ಜಾಹೀರಾತಿನಲ್ಲಿ ಕೊಲ್ಕತ್ತ ಎಂಎಎ ಮೇಲ್ಸೇತುವೆ ಚಿತ್ರ ಬಳಸಿರುವ ಸಂಬಂಧ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಪತ್ರಿಕೆ ಸ್ಪಷ್ಟನೆಯನ್ನೂ ನೀಡಿದೆ. ಆಗಿರುವ ಪ್ರಮಾದಕ್ಕೆ ವಿಷಾದಿಸಿರುವ ಎಕ್ಸ್‌ಪ್ರೆಸ್‌, “ಇದು ಪತ್ರಿಕೆಯ ಮಾರುಕಟ್ಟೆ ವಿಭಾಗದಿಂದ ಆಗಿರುವ ತಪ್ಪು” ಎಂದು ಹೇಳಿದೆ.

ಪತ್ರಿಕೋದ್ಯಮದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಗೆ ಮಹತ್ವದ ಸ್ಥಾನವಿದೆ. ಅಂತೆಯೇ ಅದು ತನ್ನ ಜಾಹೀರಾತು ನಿಲುವನ್ನೂ ಈ ಹಿಂದೆಯೇ ಸ್ಪಷ್ಟಪಡಿಸಿದೆ. ಇಂಡಿಯನ್ ಎಕ್ಸ್‌ಪ್ರೆಸ್‌ ನೀಡಿರುವ ಸ್ಪಷ್ಟನೆಯನ್ನು ಉಲ್ಲೇಖಿಸಿ ವರದಿ ಮಾಡಿರುವ ‘ದಿ ವೈರ್‌’ ಸುದ್ದಿ ಜಾಲತಾಣವು, “ತನ್ನ ನಿಲುವಿಗೇ ವಿರುದ್ಧವಾಗಿ ಎಕ್ಸ್‌ಪ್ರೆಸ್‌ ಸ್ಪಷ್ಟನೆ ನೀಡಿದೆ” ಎಂಬ ಅಭಿಪ್ರಾಯ ತಾಳಿದೆ. 2019ರಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್, “ಪತ್ರಿಕೆಯಲ್ಲಿ ಪ್ರಕಟವಾಗುವ ಯಾವುದೇ ಜಾಹೀರಾತಿಗೆ ಪತ್ರಿಕೆ ಜವಾಬ್ದಾರರಾಗಿವುದಿಲ್ಲ” ಎಂದು ಘೋಷಿಸಿಕೊಂಡಿರುವುನ್ನು  ದಿ ವೈರ್‌ ನೆನಪಿಸಿದೆ.

ಎಕ್ಸ್‌ಪ್ರೆಸ್ ಪ್ರಕಟಿಸಿರುವ “2019ರ ರೇಟ್ ಕಾರ್ಡ್ (ಪುಟ 10)ರಲ್ಲಿ “ಯಾವುದೇ ಜಾಹೀರಾತಿಗೆ ಹಾಗೂ ಅದರಲ್ಲಿನ ಸಂಗತಿಗೆ ಯಾವುದೇ ರೀತಿಯಲ್ಲೂ ನಾವು (ಎಕ್ಸ್‌ಪ್ರೆಸ್) ಜವಾಬ್ದಾರರಾಗಿರುವುದಿಲ್ಲ” ಎಂದು ಘೋಷಿಸಿಕೊಳ್ಳಲಾಗಿದೆ.

“ಜಾಹೀರಾತಿನಲ್ಲಿನ ವಿಷಯ ಸರಿಯಾಗಿದೆ, ಪ್ರಚಲಿವಾಗಿದೆ, ಸಂಪೂರ್ಣವಾಗಿದೆ, ಯಾವುದೇ ಸುಳ್ಳನ್ನು ಹೊಂದಿರುವುದಿಲ್ಲ ಎಂಬುದಕ್ಕೆ ಜಾಹೀರಾತುದಾರರು ಪ್ರತಿನಿಧಿಗಳಾಗಿರುತ್ತಾರೆ. ಜಾಹೀರಾತಿನಲ್ಲಿ ಬಳಸಿರುವ ಚಿತ್ರ, ಲೋಗೋ, ಬರಹ ಇತ್ಯಾದಿಗಳ್ಯಾವುವು ಮೂರನೇ ವ್ಯಕ್ತಿಯದ್ದಾಗಿರುವುದಿಲ್ಲ ಹಾಗೂ ಬೌದ್ಧಿಕ ಆಸ್ತಿಯನ್ನು ಉಲ್ಲಂಘಿಸಿರುವುದಿಲ್ಲ. ಅಸಭ್ಯ, ಅಶ್ಲೀಲ ಅಥವಾ ಅವಹೇಳನಕಾರಿಯಾಗಿ ಇರುವುದಿಲ್ಲ. ನಾವು ಯಾವುದೇ ರೀತಿಯಲ್ಲಿ ಜಾಹೀರಾತು ಅಥವಾ ಅದರ ವಿಷಯಕ್ಕೆ ಜವಾಬ್ದಾರರಾಗಿರುವುದಿಲ್ಲ” ಎಂದು ಎಕ್ಸ್‌‌ಪ್ರೆಸ್‌ ಹೇಳಿಕೊಂಡಿದೆ.

ತನ್ನ ನಿಲುವಿಗೆ ವಿರುದ್ಧವಾದ ಸ್ಪಷ್ಟನೆಯನ್ನು ಭಾನುವಾರ ಪ್ರಕಟವಾಗಿರುವ ಜಾಹೀರಾತಿನ ಸಂಬಂಧ ಎಕ್ಸ್‌ಪ್ರೆಸ್ ನೀಡಿದೆಯೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...