Homeಮುಖಪುಟಜಾಹೀರಾತಿಗೆ ಸ್ಪಷ್ಟನೆ ನೀಡಿ ತನ್ನ ನಿಲುವನ್ನು ತಾನೇ ಉಲ್ಲಂಘಿಸಿತೆ ‘ಎಕ್ಸ್‌ಪ್ರೆಸ್‌’?

ಜಾಹೀರಾತಿಗೆ ಸ್ಪಷ್ಟನೆ ನೀಡಿ ತನ್ನ ನಿಲುವನ್ನು ತಾನೇ ಉಲ್ಲಂಘಿಸಿತೆ ‘ಎಕ್ಸ್‌ಪ್ರೆಸ್‌’?

ಜಾಹೀರಾತಿಗೂ ಹಾಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು 2019ರಲ್ಲಿ ಘೋಷಿಸಿಕೊಂಡಿದ್ದ "ಇಂಡಿಯನ್ ಎಕ್ಸ್‌ಪ್ರೆಸ್‌"- ದಿ ವೈರ್ ಜಾಲತಾಣದ ವರದಿಯಲ್ಲಿ ಉಲ್ಲೇಖ

- Advertisement -
- Advertisement -

ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಭಾನುವಾರದ ಆವೃತ್ತಿಯಾದ ‘ದಿ ಸಂಡೇ ಎಕ್ಸ್‌ಪ್ರೆಸ್‌’ನಲ್ಲಿ ಪ್ರಕಟವಾಗಿರುವ ಉತ್ತರ ಪ್ರದೇಶ ಸರ್ಕಾರದ ಜಾಹೀರಾತಿನಲ್ಲಿ ಕೊಲ್ಕತ್ತ ಎಂಎಎ ಮೇಲ್ಸೇತುವೆ ಚಿತ್ರ ಬಳಸಿರುವ ಸಂಬಂಧ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಪತ್ರಿಕೆ ಸ್ಪಷ್ಟನೆಯನ್ನೂ ನೀಡಿದೆ. ಆಗಿರುವ ಪ್ರಮಾದಕ್ಕೆ ವಿಷಾದಿಸಿರುವ ಎಕ್ಸ್‌ಪ್ರೆಸ್‌, “ಇದು ಪತ್ರಿಕೆಯ ಮಾರುಕಟ್ಟೆ ವಿಭಾಗದಿಂದ ಆಗಿರುವ ತಪ್ಪು” ಎಂದು ಹೇಳಿದೆ.

ಪತ್ರಿಕೋದ್ಯಮದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಗೆ ಮಹತ್ವದ ಸ್ಥಾನವಿದೆ. ಅಂತೆಯೇ ಅದು ತನ್ನ ಜಾಹೀರಾತು ನಿಲುವನ್ನೂ ಈ ಹಿಂದೆಯೇ ಸ್ಪಷ್ಟಪಡಿಸಿದೆ. ಇಂಡಿಯನ್ ಎಕ್ಸ್‌ಪ್ರೆಸ್‌ ನೀಡಿರುವ ಸ್ಪಷ್ಟನೆಯನ್ನು ಉಲ್ಲೇಖಿಸಿ ವರದಿ ಮಾಡಿರುವ ‘ದಿ ವೈರ್‌’ ಸುದ್ದಿ ಜಾಲತಾಣವು, “ತನ್ನ ನಿಲುವಿಗೇ ವಿರುದ್ಧವಾಗಿ ಎಕ್ಸ್‌ಪ್ರೆಸ್‌ ಸ್ಪಷ್ಟನೆ ನೀಡಿದೆ” ಎಂಬ ಅಭಿಪ್ರಾಯ ತಾಳಿದೆ. 2019ರಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್, “ಪತ್ರಿಕೆಯಲ್ಲಿ ಪ್ರಕಟವಾಗುವ ಯಾವುದೇ ಜಾಹೀರಾತಿಗೆ ಪತ್ರಿಕೆ ಜವಾಬ್ದಾರರಾಗಿವುದಿಲ್ಲ” ಎಂದು ಘೋಷಿಸಿಕೊಂಡಿರುವುನ್ನು  ದಿ ವೈರ್‌ ನೆನಪಿಸಿದೆ.

ಎಕ್ಸ್‌ಪ್ರೆಸ್ ಪ್ರಕಟಿಸಿರುವ “2019ರ ರೇಟ್ ಕಾರ್ಡ್ (ಪುಟ 10)ರಲ್ಲಿ “ಯಾವುದೇ ಜಾಹೀರಾತಿಗೆ ಹಾಗೂ ಅದರಲ್ಲಿನ ಸಂಗತಿಗೆ ಯಾವುದೇ ರೀತಿಯಲ್ಲೂ ನಾವು (ಎಕ್ಸ್‌ಪ್ರೆಸ್) ಜವಾಬ್ದಾರರಾಗಿರುವುದಿಲ್ಲ” ಎಂದು ಘೋಷಿಸಿಕೊಳ್ಳಲಾಗಿದೆ.

“ಜಾಹೀರಾತಿನಲ್ಲಿನ ವಿಷಯ ಸರಿಯಾಗಿದೆ, ಪ್ರಚಲಿವಾಗಿದೆ, ಸಂಪೂರ್ಣವಾಗಿದೆ, ಯಾವುದೇ ಸುಳ್ಳನ್ನು ಹೊಂದಿರುವುದಿಲ್ಲ ಎಂಬುದಕ್ಕೆ ಜಾಹೀರಾತುದಾರರು ಪ್ರತಿನಿಧಿಗಳಾಗಿರುತ್ತಾರೆ. ಜಾಹೀರಾತಿನಲ್ಲಿ ಬಳಸಿರುವ ಚಿತ್ರ, ಲೋಗೋ, ಬರಹ ಇತ್ಯಾದಿಗಳ್ಯಾವುವು ಮೂರನೇ ವ್ಯಕ್ತಿಯದ್ದಾಗಿರುವುದಿಲ್ಲ ಹಾಗೂ ಬೌದ್ಧಿಕ ಆಸ್ತಿಯನ್ನು ಉಲ್ಲಂಘಿಸಿರುವುದಿಲ್ಲ. ಅಸಭ್ಯ, ಅಶ್ಲೀಲ ಅಥವಾ ಅವಹೇಳನಕಾರಿಯಾಗಿ ಇರುವುದಿಲ್ಲ. ನಾವು ಯಾವುದೇ ರೀತಿಯಲ್ಲಿ ಜಾಹೀರಾತು ಅಥವಾ ಅದರ ವಿಷಯಕ್ಕೆ ಜವಾಬ್ದಾರರಾಗಿರುವುದಿಲ್ಲ” ಎಂದು ಎಕ್ಸ್‌‌ಪ್ರೆಸ್‌ ಹೇಳಿಕೊಂಡಿದೆ.

ತನ್ನ ನಿಲುವಿಗೆ ವಿರುದ್ಧವಾದ ಸ್ಪಷ್ಟನೆಯನ್ನು ಭಾನುವಾರ ಪ್ರಕಟವಾಗಿರುವ ಜಾಹೀರಾತಿನ ಸಂಬಂಧ ಎಕ್ಸ್‌ಪ್ರೆಸ್ ನೀಡಿದೆಯೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...