Homeರಾಷ್ಟ್ರೀಯವಿವಾದದ ನಡುವೆ ತಾಜ್‌ಮಹಲ್ ಭೂಗತ ಕೋಣೆಯ ಚಿತ್ರಗಳನ್ನು ಬಿಡುಗಡೆ ಮಾಡಿದ್ದ ಪುರಾತತ್ವ ಇಲಾಖೆ

ವಿವಾದದ ನಡುವೆ ತಾಜ್‌ಮಹಲ್ ಭೂಗತ ಕೋಣೆಯ ಚಿತ್ರಗಳನ್ನು ಬಿಡುಗಡೆ ಮಾಡಿದ್ದ ಪುರಾತತ್ವ ಇಲಾಖೆ

- Advertisement -
- Advertisement -

ವಿಶ್ವವಿಖ್ಯಾತ ತಾಜ್‌ಮಹಲ್‌ನ 22 ಬೀಗ ಹಾಕಿದ ಕೊಠಡಿಗಳ ಒಳಗೆ ಹಿಂದೂ ವಿಗ್ರಹಗಳು ಅಥವಾ ಧರ್ಮಗ್ರಂಥಗಳ ಇದೆ ಎಂದು ಆರೋಪಿಸಿ ಅದನ್ನು ಪರಿಶೀಲಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯ ಮೂರು ದಿನಗಳ ಮೊದಲು, ಮೇ 9 ರಂದು ತಾಜ್ ಮಹಲ್‌ನಲ್ಲಿನ ಭೂಗತ ಕೊಠಡಿಯಲ್ಲಿನ ಚಿತ್ರಗಳನ್ನು ಭಾರತೀಯ ಪುರಾತತ್ವ ಇಲಾಖೆ ಬಿಡುಗಡೆ ಮಾಡಿತ್ತು.

ಮೇ 12 ರಂದು, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಅಯೋಧ್ಯೆಯಲ್ಲಿನ ಬಿಜೆಪಿಯ ಮಾಧ್ಯಮ ಘಟಕದ ಉಸ್ತುವಾರಿ ರಜನೀಶ್ ಸಿಂಗ್ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿತ್ತು. ತಾಜ್ ಮಹಲ್ ಶಿವನ ಹಳೆಯ ದೇವಾಲಯವಾಗಿದ್ದು, ಅದನ್ನು ತೇಜೋ ಮಹಾಲಯ ಎಂದು ಕರೆಯಲಾಗುತ್ತದೆ ಎಂದು ಸಿಂಗ್ ವಾದಿಸಿದ್ದರು. ಸ್ಮಾರಕದ “ನೈಜ ಇತಿಹಾಸ”ವನ್ನು ಅಧ್ಯಯನ ಮಾಡಲು ಕೊಠಡಿಗಳನ್ನು ತೆರೆದು ಸತ್ಯಶೋಧನಾ ಸಮಿತಿಯನ್ನು ರಚಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣೆಗೆ ನಿರ್ದೇಶನಗಳನ್ನು ನೀಡಬೇಕು ಎಂದು ಅವರು ಕೋರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ, ನ್ಯಾಯಾಲಯವು ರಜನೀಶ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡು, ಅಂತಹ ವಿಷಯಗಳನ್ನು ಇತಿಹಾಸಕಾರರು, ಶಿಕ್ಷಣ ತಜ್ಞರು ಮತ್ತು ವಿದ್ವಾಂಸರು ಚರ್ಚಿಸಬೇಕು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: ತಾಜ್‌ಮಹಲ್‌ನ 22 ಬಾಗಿಲುಗಳನ್ನು ತೆರೆಯಬೇಕೆಂಬ ಬಿಜೆಪಿ ಮುಖಂಡನ ಅರ್ಜಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಆದರೆ ಈ ವಿಚಾರಣೆಗೂ ಮೊದಲು ಮೇ 9 ರಂದು ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಟ್ವಿಟರ್‌ನಲ್ಲಿ ಜನವರಿ 2022 ರ ತನ್ನ ವರದಿಯನ್ನು ಹಂಚಿಕೊಂಡಿದೆ. ಕೊಠಡಿಗಳ ಬಗ್ಗೆ ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಸಂಸ್ಥೆಯು ಈ ಚಿತ್ರಗಳನ್ನು ಟ್ವೀಟ್ ಮಾಡಿದೆ ಎಂದು ಪ್ರವಾಸೋದ್ಯಮ ಉದ್ಯಮದ ಅಧಿಕಾರಿಗಳು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

“ನದಿ ಭಾಗದ ಭೂಗತ ಕೋಣೆಗಳ ನಿರ್ವಹಣೆಯ ಕೆಲಸವನ್ನು ಮಾಡಲಾಗಿದೆ” ಎಂದು ಈ ವರದಿಯು ಎರಡು ಚಿತ್ರಗಳನ್ನು ಪ್ರಕಟಿಸಿದೆ. ಜೊತೆಗೆ ನಿರ್ವಹಣೆಗೆ ಮೊದಲು ಮತ್ತು ನಂತರ ಹೇಗಿದೆ ಎಂದು ಕೂಡಾ ಅದು ಚಿತ್ರದಲ್ಲಿ ಪ್ರಕಟಿಸಿದೆ.

“ಹಾಳಾಗಿರುವ ಸುಣ್ಣದ ಮೇಲ್ಪದರವನ್ನು ತೆಗೆದು, ಅದಕ್ಕೆ ಮತ್ತೆ ಸಾಂಪ್ರದಾಯಿಕ ಸುಣ್ಣದ ಸಂಸ್ಕರಣೆಯನ್ನು ಹಾಕುವ ಮೂಲಕ ಸುಣ್ಣವನ್ನು ಬಳಿಯಲಾಯಿತು” ಎಂದು ಅದು ಹೇಳಿದೆ.

ತಾಜ್ ಮಹಲ್‌ನ ಭೂಗತ ಕೊಠಡಿಗಳಲ್ಲಿ ಕೈಗೊಂಡಿರುವ ನಿರ್ವಹಣಾ ಕಾರ್ಯಗಳ ಚಿತ್ರಗಳು.(ನಿರ್ವಹಣೆಗೂ ಮೊದಲು ಮತ್ತು ನಂತರ)

ಮೊಘಲ್ ರಾಜ ಷಹಜಹಾನ್ 1632 ರಲ್ಲಿ ತಾಜ್ ಮಹಲ್ ನಿರ್ಮಾಣವನ್ನು ನಿಯೋಜಿಸಿದನು. ಯೋಜನೆಯು 1653 ರಲ್ಲಿ ಪೂರ್ಣಗೊಂಡಿತು. ಆದರೆ ಕೆಲವು ಹಿಂದುತ್ವದ ಹುಸಿ ಇತಿಹಾಸಕಾರರು ಸ್ಮಾರಕವು ಷಹಜಹಾನ್‌‌ಗಿಂತ ಮೊದಲೇ ಅದರಲ್ಲೂ ಭಾರತದಲ್ಲಿ ಮುಸ್ಲಿಂ ಆಳ್ವಿಕೆಯು ಪ್ರಾರಂಭವಾಗುವ ಮೊದಲೇ ನಿರ್ಮಿಸಲಾಗಿತ್ತು ಎಂದು ಸುಳ್ಳೇ ಸುಳ್ಳು ಪ್ರತಿಪಾದಿಸುತ್ತಿದ್ದಾರೆ.

ಇದನ್ನೂ ಓದಿ: ತಾಜ್‌ಮಹಲ್ ಆವರಣದಲ್ಲಿ ಶಿವಪೂಜೆ: ಹಿಂದೂ ಮಹಾಸಭಾ ಕಾರ್ಯಕರ್ತರ ಬಂಧನ

ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ಆಗ್ರಾ ಸರ್ಕಲ್ ಘಟಕದ ಅಧಿಕಾರಿಯೊಬ್ಬರು, “ವರದಿಯಲ್ಲಿ ಪ್ರಕಟವಾದ ಚಿತ್ರಗಳು ಕಳೆದ ಡಿಸೆಂಬರ್‌ ತಿಂಗಳದ್ದಾಗಿದೆ. ಅದರ ನಂತರವೂ ಅಲ್ಲಿ ಕೆಲಸಗಳು ನಡೆದಿದೆ. ಮತ್ತು ಅದರ ಚಿತ್ರಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ. ಅದರೆ ಸಂಸ್ಥೆಯು ತನ್ನ ಮುಂದಿನ ವರದಿಯಲ್ಲಿ ಅದನ್ನು ಪ್ರಕಟಿಸುತ್ತಾರೆಯೆ ಎಂದು ಸಂಪಾದಕೀಯ ನಿರ್ಧಾರಿಸುತ್ತದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...