Homeರಾಷ್ಟ್ರೀಯವಿವಾದದ ನಡುವೆ ತಾಜ್‌ಮಹಲ್ ಭೂಗತ ಕೋಣೆಯ ಚಿತ್ರಗಳನ್ನು ಬಿಡುಗಡೆ ಮಾಡಿದ್ದ ಪುರಾತತ್ವ ಇಲಾಖೆ

ವಿವಾದದ ನಡುವೆ ತಾಜ್‌ಮಹಲ್ ಭೂಗತ ಕೋಣೆಯ ಚಿತ್ರಗಳನ್ನು ಬಿಡುಗಡೆ ಮಾಡಿದ್ದ ಪುರಾತತ್ವ ಇಲಾಖೆ

- Advertisement -
- Advertisement -

ವಿಶ್ವವಿಖ್ಯಾತ ತಾಜ್‌ಮಹಲ್‌ನ 22 ಬೀಗ ಹಾಕಿದ ಕೊಠಡಿಗಳ ಒಳಗೆ ಹಿಂದೂ ವಿಗ್ರಹಗಳು ಅಥವಾ ಧರ್ಮಗ್ರಂಥಗಳ ಇದೆ ಎಂದು ಆರೋಪಿಸಿ ಅದನ್ನು ಪರಿಶೀಲಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯ ಮೂರು ದಿನಗಳ ಮೊದಲು, ಮೇ 9 ರಂದು ತಾಜ್ ಮಹಲ್‌ನಲ್ಲಿನ ಭೂಗತ ಕೊಠಡಿಯಲ್ಲಿನ ಚಿತ್ರಗಳನ್ನು ಭಾರತೀಯ ಪುರಾತತ್ವ ಇಲಾಖೆ ಬಿಡುಗಡೆ ಮಾಡಿತ್ತು.

ಮೇ 12 ರಂದು, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಅಯೋಧ್ಯೆಯಲ್ಲಿನ ಬಿಜೆಪಿಯ ಮಾಧ್ಯಮ ಘಟಕದ ಉಸ್ತುವಾರಿ ರಜನೀಶ್ ಸಿಂಗ್ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿತ್ತು. ತಾಜ್ ಮಹಲ್ ಶಿವನ ಹಳೆಯ ದೇವಾಲಯವಾಗಿದ್ದು, ಅದನ್ನು ತೇಜೋ ಮಹಾಲಯ ಎಂದು ಕರೆಯಲಾಗುತ್ತದೆ ಎಂದು ಸಿಂಗ್ ವಾದಿಸಿದ್ದರು. ಸ್ಮಾರಕದ “ನೈಜ ಇತಿಹಾಸ”ವನ್ನು ಅಧ್ಯಯನ ಮಾಡಲು ಕೊಠಡಿಗಳನ್ನು ತೆರೆದು ಸತ್ಯಶೋಧನಾ ಸಮಿತಿಯನ್ನು ರಚಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣೆಗೆ ನಿರ್ದೇಶನಗಳನ್ನು ನೀಡಬೇಕು ಎಂದು ಅವರು ಕೋರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ, ನ್ಯಾಯಾಲಯವು ರಜನೀಶ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡು, ಅಂತಹ ವಿಷಯಗಳನ್ನು ಇತಿಹಾಸಕಾರರು, ಶಿಕ್ಷಣ ತಜ್ಞರು ಮತ್ತು ವಿದ್ವಾಂಸರು ಚರ್ಚಿಸಬೇಕು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: ತಾಜ್‌ಮಹಲ್‌ನ 22 ಬಾಗಿಲುಗಳನ್ನು ತೆರೆಯಬೇಕೆಂಬ ಬಿಜೆಪಿ ಮುಖಂಡನ ಅರ್ಜಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಆದರೆ ಈ ವಿಚಾರಣೆಗೂ ಮೊದಲು ಮೇ 9 ರಂದು ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಟ್ವಿಟರ್‌ನಲ್ಲಿ ಜನವರಿ 2022 ರ ತನ್ನ ವರದಿಯನ್ನು ಹಂಚಿಕೊಂಡಿದೆ. ಕೊಠಡಿಗಳ ಬಗ್ಗೆ ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಸಂಸ್ಥೆಯು ಈ ಚಿತ್ರಗಳನ್ನು ಟ್ವೀಟ್ ಮಾಡಿದೆ ಎಂದು ಪ್ರವಾಸೋದ್ಯಮ ಉದ್ಯಮದ ಅಧಿಕಾರಿಗಳು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

“ನದಿ ಭಾಗದ ಭೂಗತ ಕೋಣೆಗಳ ನಿರ್ವಹಣೆಯ ಕೆಲಸವನ್ನು ಮಾಡಲಾಗಿದೆ” ಎಂದು ಈ ವರದಿಯು ಎರಡು ಚಿತ್ರಗಳನ್ನು ಪ್ರಕಟಿಸಿದೆ. ಜೊತೆಗೆ ನಿರ್ವಹಣೆಗೆ ಮೊದಲು ಮತ್ತು ನಂತರ ಹೇಗಿದೆ ಎಂದು ಕೂಡಾ ಅದು ಚಿತ್ರದಲ್ಲಿ ಪ್ರಕಟಿಸಿದೆ.

“ಹಾಳಾಗಿರುವ ಸುಣ್ಣದ ಮೇಲ್ಪದರವನ್ನು ತೆಗೆದು, ಅದಕ್ಕೆ ಮತ್ತೆ ಸಾಂಪ್ರದಾಯಿಕ ಸುಣ್ಣದ ಸಂಸ್ಕರಣೆಯನ್ನು ಹಾಕುವ ಮೂಲಕ ಸುಣ್ಣವನ್ನು ಬಳಿಯಲಾಯಿತು” ಎಂದು ಅದು ಹೇಳಿದೆ.

ತಾಜ್ ಮಹಲ್‌ನ ಭೂಗತ ಕೊಠಡಿಗಳಲ್ಲಿ ಕೈಗೊಂಡಿರುವ ನಿರ್ವಹಣಾ ಕಾರ್ಯಗಳ ಚಿತ್ರಗಳು.(ನಿರ್ವಹಣೆಗೂ ಮೊದಲು ಮತ್ತು ನಂತರ)

ಮೊಘಲ್ ರಾಜ ಷಹಜಹಾನ್ 1632 ರಲ್ಲಿ ತಾಜ್ ಮಹಲ್ ನಿರ್ಮಾಣವನ್ನು ನಿಯೋಜಿಸಿದನು. ಯೋಜನೆಯು 1653 ರಲ್ಲಿ ಪೂರ್ಣಗೊಂಡಿತು. ಆದರೆ ಕೆಲವು ಹಿಂದುತ್ವದ ಹುಸಿ ಇತಿಹಾಸಕಾರರು ಸ್ಮಾರಕವು ಷಹಜಹಾನ್‌‌ಗಿಂತ ಮೊದಲೇ ಅದರಲ್ಲೂ ಭಾರತದಲ್ಲಿ ಮುಸ್ಲಿಂ ಆಳ್ವಿಕೆಯು ಪ್ರಾರಂಭವಾಗುವ ಮೊದಲೇ ನಿರ್ಮಿಸಲಾಗಿತ್ತು ಎಂದು ಸುಳ್ಳೇ ಸುಳ್ಳು ಪ್ರತಿಪಾದಿಸುತ್ತಿದ್ದಾರೆ.

ಇದನ್ನೂ ಓದಿ: ತಾಜ್‌ಮಹಲ್ ಆವರಣದಲ್ಲಿ ಶಿವಪೂಜೆ: ಹಿಂದೂ ಮಹಾಸಭಾ ಕಾರ್ಯಕರ್ತರ ಬಂಧನ

ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ಆಗ್ರಾ ಸರ್ಕಲ್ ಘಟಕದ ಅಧಿಕಾರಿಯೊಬ್ಬರು, “ವರದಿಯಲ್ಲಿ ಪ್ರಕಟವಾದ ಚಿತ್ರಗಳು ಕಳೆದ ಡಿಸೆಂಬರ್‌ ತಿಂಗಳದ್ದಾಗಿದೆ. ಅದರ ನಂತರವೂ ಅಲ್ಲಿ ಕೆಲಸಗಳು ನಡೆದಿದೆ. ಮತ್ತು ಅದರ ಚಿತ್ರಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ. ಅದರೆ ಸಂಸ್ಥೆಯು ತನ್ನ ಮುಂದಿನ ವರದಿಯಲ್ಲಿ ಅದನ್ನು ಪ್ರಕಟಿಸುತ್ತಾರೆಯೆ ಎಂದು ಸಂಪಾದಕೀಯ ನಿರ್ಧಾರಿಸುತ್ತದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...